AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಭಾರತ-ಸೌತ್ ಆಫ್ರಿಕಾ ಮೊದಲ ಏಕದಿನ ಪಂದ್ಯಕ್ಕೆ ಮಳೆ ಭೀತಿ..!

India vs South Africa, 1st ODI: ಡರ್ಬನ್​ನಲ್ಲಿ ನಡೆದ ಟಿ20 ಸರಣಿಯ ಮೊದಲ ಪಂದ್ಯವು ಮಳೆಯ ಕಾರಣ ರದ್ದಾಗಿತ್ತು. ಇನ್ನು ಗೆಬ್ಬೆಗಾದಲ್ಲಿ ನಡೆದ 2ನೇ ಟಿ20 ಪಂದ್ಯದ ವೇಳೆ ಮಳೆ ಅಡ್ಡಿಪಡಿಸಿದ ಕಾರಣ ಓವರ್​ಗಳ ಕಡಿತದೊಂದಿಗೆ ಮ್ಯಾಚ್​ ಅನ್ನು ಪೂರ್ಣಗೊಳಿಸಲಾಗಿತ್ತು. ಇದೀಗ ಏಕದಿನ ಸರಣಿಯ ಮೊದಲ ಪಂದ್ಯಕ್ಕೂ ಮಳೆ ಭೀತಿ ಎದುರಾಗಿದೆ.

IND vs SA: ಭಾರತ-ಸೌತ್ ಆಫ್ರಿಕಾ ಮೊದಲ ಏಕದಿನ ಪಂದ್ಯಕ್ಕೆ ಮಳೆ ಭೀತಿ..!
India vs South Africa
TV9 Web
| Edited By: |

Updated on: Dec 17, 2023 | 7:22 AM

Share

ಭಾರತ-ಸೌತ್ ಆಫ್ರಿಕಾ (India vs South Africa) ನಡುವಣ ಏಕದಿನ ಸರಣಿಯು ಇಂದಿನಿಂದ (ಡಿ.17) ಶುರುವಾಗಲಿದೆ. ಜೋಹಾನ್ಸ್​​ಬರ್ಗ್​ನಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ಹವಾಮಾನ ವರದಿ ಪ್ರಕಾರ, ಭಾನುವಾರ ಜೋಹಾನ್ಸ್​ಬರ್ಗ್​ನ ಸುತ್ತ ಮುತ್ತ ಮಳೆಯಾಗಲಿದೆ. ಹೀಗಾಗಿ ಮೊದಲ ಏಕದಿನ ಪಂದ್ಯಕ್ಕೆ ಅಡಚಣೆಯುಂಟಾಗಬಹುದು.

ಜೋಹಾನ್ಸ್‌ಬರ್ಗ್‌ನಲ್ಲಿ ಬೆಳಿಗ್ಗೆ ಗುಡುಗು ಸಹಿತ ಬಿರುಗಾಳಿ ಇರಲಿದೆ. ಅಲ್ಲದೆ ಸ್ಥಳೀಯ ಸಮಯ ಬೆಳಿಗ್ಗೆ 6 ಗಂಟೆಯಿಂದ 8 ಗಂಟೆ ನಡುವೆ 51 ಪ್ರತಿಶತದಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಆದರೆ ಮಧ್ಯಾಹ್ನದ ಹೊತ್ತಿಗೆ ಪರಿಸ್ಥಿತಿ ತಿಳಿಗೊಳ್ಳಲಿದ್ದು, 27 ಡಿಗ್ರಿ ಸೆಲ್ಸಿಯಸ್ ತಾಪಮಾನ ಏರಿಕೆಯಾಗಲಿದೆ. ಹೀಗಾಗಿ ಪಂದ್ಯಕ್ಕೆ ಮಳೆ ಅಡಚಣೆ ಉಂಟು ಮಾಡಿದರೂ ಮ್ಯಾಚ್ ನಡೆಯುವುದು ಖಚಿತ ಎನ್ನಬಹುದು.

ಒಂದು ವೇಳೆ ಮಳೆಯಿಂದಾಗಿ ಪಂದ್ಯ ಆರಂಭವಾಗಲು ವಿಳಂಬವಾದರೆ ಓವರ್​ಗಳ ಕಡಿತದೊಂದಿಗೆ ಮ್ಯಾಚ್ ನಡೆಯಲಿದೆ. ಅಂದರೆ ಫಲಿತಾಂಶ ನಿರ್ಧರಿಸಲು ತಲಾ ಕನಿಷ್ಠ 20 ಓವರ್​ಗಳ ಪಂದ್ಯವನ್ನು ನಿರೀಕ್ಷಿಸಬಹುದು.

ಇದಕ್ಕೂ ಮುನ್ನ ಡರ್ಬನ್​ನಲ್ಲಿ ನಡೆದ ಟಿ20 ಸರಣಿಯ ಮೊದಲ ಪಂದ್ಯವು ಮಳೆಯ ಕಾರಣ ರದ್ದಾಗಿತ್ತು. ಇನ್ನು ಗೆಬ್ಬೆಗಾದಲ್ಲಿ ನಡೆದ 2ನೇ ಟಿ20 ಪಂದ್ಯದ ವೇಳೆ ಮಳೆ ಅಡ್ಡಿಪಡಿಸಿದ ಕಾರಣ ಓವರ್​ಗಳ ಕಡಿತದೊಂದಿಗೆ ಮ್ಯಾಚ್​ ಅನ್ನು ಪೂರ್ಣಗೊಳಿಸಲಾಗಿತ್ತು.

ಇದೀಗ ಏಕದಿನ ಸರಣಿಯ ಮೊದಲ ಪಂದ್ಯ ಕೂಡ ಜೋಹಾನ್ಸ್​ಬರ್ಗ್​ನಲ್ಲಿ ನಡೆಯುತ್ತಿದ್ದು, ಈ ಪಂದ್ಯಕ್ಕೂ ಮಳೆಯ ಭೀತಿ ಎದುರಾಗಿದೆ. ಇದಾಗ್ಯೂ ಪಂದ್ಯ ಆಯೋಜನೆಗೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

ಸೌತ್ ಆಫ್ರಿಕಾ ತಂಡ: ರೀಝ ಹೆಂಡ್ರಿಕ್ಸ್, ಟೋನಿ ಡಿ ಜೊರ್ಜಿ, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಆಂಡಿಲ್ ಫೆಹ್ಲುಕ್ವಾಯೊ, ಕೇಶವ್ ಮಹಾರಾಜ್ , ನಾಂದ್ರೆ ಬರ್ಗರ್, ತಬ್ರೇಝ್ ಶಮ್ಸಿ, ಲಿಝಾಡ್ ವಿಲಿಯಮ್ಸ್, ವಿಯಾನ್ ಮುಲ್ಡರ್, ಒಟ್ನಿಯೆಲ್ ಬಾರ್ಟ್‌ಮ್ಯಾನ್, ಮಿಹ್ಲಾಲಿ ಎಂಪೊಂಗ್ವಾನಾ, ಕೈಲ್ ವೆರ್ರೆನ್ನೆ.

ಇದನ್ನೂ ಓದಿ: IPL 2024: ಈ ಬಾರಿಯ ಐಪಿಎಲ್​ನೊಂದಿಗೆ 3 ಆಟಗಾರರು ವಿದಾಯ..!

ಭಾರತ ತಂಡ: ರಜತ್ ಪಾಟಿದಾರ್, ಸಾಯಿ ಸುದರ್ಶನ್, ಸಂಜು ಸ್ಯಾಮ್ಸನ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ), ರಿಂಕು ಸಿಂಗ್, ಅಕ್ಷರ್ ಪಟೇಲ್, ಅವೇಶ್ ಖಾನ್, ಕುಲ್ದೀಪ್ ಯಾದವ್, ಮುಕೇಶ್ ಕುಮಾರ್, ಯುಜ್ವೇಂದ್ರ ಚಹಲ್, ತಿಲಕ್ ವರ್ಮಾ, ರುತುರಾಜ್ ಗಾಯಕ್ವಾಡ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಆಕಾಶ್ ದೀಪ್.

ಏಕದಿನ ಸರಣಿ ವೇಳಾಪಟ್ಟಿ:

  • ಡಿಸೆಂಬರ್ 17- ಮೊದಲ ಏಕದಿನ ಪಂದ್ಯ (ಜೋಹಾನ್ಸ್​ಬರ್ಗ್​)
  • ಡಿಸೆಂಬರ್ 19- ಎರಡನೇ ಏಕದಿನ ಪಂದ್ಯ (ಗೆಬ್ಬೆಗಾ)
  • ಡಿಸೆಂಬರ್ 21- ಮೂರನೇ ಏಕದಿನ ಪಂದ್ಯ (ಪಾರ್ಲ್​)
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
2026 ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷ; ವಾರ್ಷಿಕ ಭವಿಷ್ಯ ಇಲ್ಲಿದೆ
2026 ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷ; ವಾರ್ಷಿಕ ಭವಿಷ್ಯ ಇಲ್ಲಿದೆ