AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಹರಿಣಗಳ ನಾಡಲ್ಲಿ ಹುಲಿಗಳ ಅಬ್ಬರ; ಗೆಲುವಿನ ಬಳಿಕ ಕಿಂಗ್ ಕೊಹ್ಲಿ ಹೇಳಿದ್ದೇನು ಗೊತ್ತಾ?

IND vs SA: ಸೆಂಚುರಿಯನ್ ಟೆಸ್ಟ್​ನಲ್ಲಿ 8 ವಿಕೆಟ್ ಪಡೆದ ಮೊಹಮ್ಮದ್ ಶಮಿಯನ್ನು ವಿರಾಟ್ ಕೊಹ್ಲಿ ಹೊಗಳಿದ್ದಾರೆ. ಶಮಿ ವಿಶ್ವ ದರ್ಜೆಯ ಬೌಲರ್ ಆಗಿದ್ದು, ಅವರು ವಿಶ್ವದ ಟಾಪ್ 3 ವೇಗದ ಬೌಲರ್‌ಗಳಲ್ಲಿ ಒಬ್ಬರು ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

IND vs SA: ಹರಿಣಗಳ ನಾಡಲ್ಲಿ ಹುಲಿಗಳ ಅಬ್ಬರ; ಗೆಲುವಿನ ಬಳಿಕ ಕಿಂಗ್ ಕೊಹ್ಲಿ ಹೇಳಿದ್ದೇನು ಗೊತ್ತಾ?
ವಿರಾಟ್ ಕೊಹ್ಲಿ
TV9 Web
| Updated By: shivaprasad.hs|

Updated on: Dec 31, 2021 | 8:27 AM

Share

ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 113 ರನ್‌ಗಳಿಂದ ಸೋಲಿಸಿತು. ಈ ಗೆಲುವಿಗೆ ತಂಡದ ನಾಯಕ ವಿರಾಟ್ ಕೊಹ್ಲಿ ತಂಡದ ಅತ್ಯುತ್ತಮ ಸಿದ್ಧತೆಗೆ ಸಂಪೂರ್ಣ ಕ್ರೆಡಿಟ್ ನೀಡಿದರು. ಗೆಲುವಿನ ಬಳಿಕ ಮಾತನಾಡಿದ ವಿರಾಟ್ ಕೊಹ್ಲಿ, ದಕ್ಷಿಣ ಆಫ್ರಿಕಾ ಪ್ರವಾಸ ಕಷ್ಟ ಆದರೆ ಟೀಂ ಇಂಡಿಯಾದ ಸಿದ್ಧತೆಗಳು ಅದಕ್ಕೆ ತಯಾರಾಗಿದ್ದೇವೆ ಎನ್ನುವುದನ್ನು ತೋರಿಸುತ್ತದೆ ಎಂದಿದ್ದಾರೆ. 305 ರನ್‌ಗಳ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಐದನೇ ದಿನದ ಎರಡನೇ ಸೆಷನ್‌ನ ಎರಡನೇ ದಿನದಂತ್ಯಕ್ಕೆ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ 191 ರನ್‌ಗಳಿಗೆ ಆಲೌಟಾಯಿತು. ಭಾರತ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 327 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 174 ರನ್ ಗಳಿಸಿತು. ದಕ್ಷಿಣ ಆಫ್ರಿಕಾ ಮೊದಲ ಇನ್ನಿಂಗ್ಸ್‌ನಲ್ಲಿ 197 ರನ್ ಗಳಿಸಲಷ್ಟೇ ಶಕ್ತವಾಗಿತ್ತು.

ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದ ಬಳಿಕ ಪಂದ್ಯದ ಬಳಿಕ ಮಾತನಾಡಿದ ಕೊಹ್ಲಿ, ‘ನಾವು ಬಯಸಿದ ರೀತಿಯಲ್ಲಿ ಆರಂಭಿಸಲು ಸಾಧ್ಯವಾಯಿತು. ನಾಲ್ಕು ದಿನಗಳ ಫಲಿತಾಂಶಗಳು ನಾವು ಎಷ್ಟು ಚೆನ್ನಾಗಿ ಆಡಿದ್ದೇವೆ ಎಂಬುದನ್ನು ತೋರಿಸುತ್ತದೆ. ದಕ್ಷಿಣ ಆಫ್ರಿಕಾ ಯಾವಾಗಲೂ ನಮಗೆ ಕಷ್ಟಕರ ಸ್ಥಳವಾಗಿದೆ. ಆದರೆ, ನಾವು ಬ್ಯಾಟ್ ಮತ್ತು ಬಾಲ್ ಮೂಲಕ ಮೈದಾನದಲ್ಲಿ ಉತ್ತಮ ಪ್ರದರ್ಶನ ನೀಡಿದ್ದೇವೆ. ಪಂದ್ಯದ ಎರಡನೇ ದಿನ ಮಳೆಯಿಂದಾಗಿ ಸಂಪೂರ್ಣ ರದ್ದಾಯಿತು. ಇದಾದ ಬಳಿಕವೂ ಐದನೇ ದಿನದಾಟದಲ್ಲಿ ಭಾರತ ತಂಡ ಎರಡು ಪಂದ್ಯಗಳು ಬಾಕಿ ಇರುವಾಗಲೇ ಗೆಲುವು ದಾಖಲಿಸಲು ಶಕ್ತವಾಯಿತು. ಭಾರತವು ಮೂರೂವರೆ ದಿನಗಳಲ್ಲಿ ಈ ಜಯವನ್ನು ಪರಿಣಾಮಕಾರಿಯಾಗಿ ದಾಖಲಿಸಿತು ಎಂದಿದ್ದಾರೆ.

ರಾಹುಲ್-ಮಯಾಂಕ್ ಗೆಲುವಿನ ಅಡಿಪಾಯ ಹಾಕಿದರು- ವಿರಾಟ್ ಕೊಹ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಆರಂಭಿಕ ಜೋಡಿಯಾದ ಲೋಕೇಶ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಅವರ ಶತಕದ ಜೊತೆಯಾಟಕ್ಕೆ ಕೊಹ್ಲಿ ಈ ಗೆಲುವಿನ ಮನ್ನಣೆ ನೀಡಿದರು. ಪಂದ್ಯ ಶ್ರೇಷ್ಠ ರಾಹುಲ್ ಮೊದಲ ಇನ್ನಿಂಗ್ಸ್‌ನಲ್ಲಿ 123 ರನ್ ಗಳಿಸಿದರೆ, ಮಯಾಂಕ್ 60 ರನ್ ಕೊಡುಗೆ ನೀಡಿದರು. ಇಬ್ಬರೂ 117 ರನ್‌ಗಳ ಜೊತೆಯಾಟವಾಡಿದರು. ಮಯಾಂಕ್ ಮತ್ತು ರಾಹುಲ್ ಅವರ ಜೊತೆಯಾಟಕ್ಕೆ ಹೆಚ್ಚಿನ ಶ್ರೇಯಸ್ಸು ಸಲ್ಲುತ್ತದೆ, ಮೊದಲ ದಿನದ ನಂತರ ನಾವು ಮೂರು ವಿಕೆಟ್‌ಗೆ 270 (272) ಗಳಿಸಿದ ನಂತರ ಉತ್ತಮ ಸ್ಥಿತಿಯಲ್ಲಿದ್ದೆವು ಎಂದು ಕೊಹ್ಲಿ ಹೇಳಿದರು.

ಜಸ್ಪ್ರೀತ್ ಬುಮ್ರಾ ನೇತೃತ್ವದ ವೇಗದ ಬೌಲರ್‌ಗಳ ಪ್ರದರ್ಶನವನ್ನು ಅವರು ಶ್ಲಾಘಿಸಿದರು. ನಮ್ಮ ಬೌಲರ್‌ಗಳು ತಮ್ಮ ಕೆಲಸವನ್ನು ಮಾಡುತ್ತಾರೆ ಎಂಬ ಸಂಪೂರ್ಣ ನಂಬಿಕೆ ನಮಗಿತ್ತು. ಬುಮ್ರಾ ಮೊದಲ ಇನ್ನಿಂಗ್ಸ್‌ನಲ್ಲಿ ಹೆಚ್ಚು ಬೌಲಿಂಗ್ ಮಾಡಲು ಸಾಧ್ಯವಾಗಲಿಲ್ಲ, ಆದ್ದರಿಂದ ದಕ್ಷಿಣ ಆಫ್ರಿಕಾ 30-40 ರನ್ ಗಳಿಸಿತು ಎಂದಿದ್ದಾರೆ ಕೊಹ್ಲಿ.

ಶಮಿ ವಿಶ್ವದ ಅಗ್ರ 3 ಬೌಲರ್‌ಗಳಲ್ಲಿ ಒಬ್ಬರು – ವಿರಾಟ್ ಸೆಂಚುರಿಯನ್ ಟೆಸ್ಟ್​ನಲ್ಲಿ 8 ವಿಕೆಟ್ ಪಡೆದ ಮೊಹಮ್ಮದ್ ಶಮಿಯನ್ನು ವಿರಾಟ್ ಕೊಹ್ಲಿ ಹೊಗಳಿದ್ದಾರೆ. ಶಮಿ ವಿಶ್ವ ದರ್ಜೆಯ ಬೌಲರ್ ಆಗಿದ್ದು, ಅವರು ವಿಶ್ವದ ಟಾಪ್ 3 ವೇಗದ ಬೌಲರ್‌ಗಳಲ್ಲಿ ಒಬ್ಬರು ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ. 200 ಟೆಸ್ಟ್ ವಿಕೆಟ್‌ಗಳನ್ನು ಪೂರೈಸಿದ ಶಮಿಯನ್ನು ವಿರಾಟ್ ಕೊಹ್ಲಿ ಕೂಡ ಅಭಿನಂದಿಸಿದ್ದಾರೆ.

ಇದನ್ನೂ ಓದಿ:

Pro Kabaddi League: ಪವನ್ ಪವರ್: ಹರ್ಯಾಣಕ್ಕೆ ಮಣ್ಣು ಮುಕ್ಕಿಸಿದ ಬೆಂಗಳೂರು ಬುಲ್ಸ್​ಗೆ ಹ್ಯಾಟ್ರಿಕ್ ಜಯ

ಕೊಹ್ಲಿಯನ್ನು ಬಿಸಿಸಿಐ ಅವಹೇಳನಕಾರಿಯಾಗಿ ನಡೆಸಿಕೊಂಡಿದ್ದು 2021ರಲ್ಲಿ ಭಾರತೀಯ ಕ್ರಿಕೆಟ್​ನ ಕೆಟ್ಟ ಅಧ್ಯಾಯ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ