AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA 2nd ODI Weather: 2ನೇ ಏಕದಿನ ಪಂದ್ಯಕ್ಕೂ ಮಳೆ ಕಾಟ; ಧವನ್ ಪಡೆಗೆ ಹೆಚ್ಚಾಯ್ತು ಟೆನ್ಷನ್

IND vs SA 2nd ODI Weather: ರಾಂಚಿಯ ಪ್ರಾದೇಶಿಕ ಹವಾಮಾನ ಇಲಾಖೆಯ ವಿಜ್ಞಾನಿ ಅಭಿಷೇಕ್ ಆನಂದ್ ಟಿವಿ9 ಹಿಂದಿಯೊಂದಿಗೆ ಮಾತನಾಡುತ್ತಾ, 9 ರಂದು ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಪಂದ್ಯವಿದ್ದು, ರಾಂಚಿಯಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ ಎಂದಿದ್ದಾರೆ.

IND vs SA 2nd ODI Weather: 2ನೇ ಏಕದಿನ ಪಂದ್ಯಕ್ಕೂ ಮಳೆ ಕಾಟ; ಧವನ್ ಪಡೆಗೆ ಹೆಚ್ಚಾಯ್ತು ಟೆನ್ಷನ್
ರಾಂಚಿ ಸ್ಟೇಡಿಯಂ
TV9 Web
| Edited By: |

Updated on:Oct 08, 2022 | 6:50 PM

Share

ಭಾರತ ಮತ್ತು ದಕ್ಷಿಣ ಆಫ್ರಿಕಾ (India and South Africa) ನಡುವಿನ ಏಕದಿನ ಸರಣಿಗೆ ಹವಾಮಾನದ ನಿರಂತರವಾಗಿ ಕಾಟ ಕೊಡುತ್ತಲೆ ಬಂದಿದೆ. ಈ ಮುಂಚೆ ಲಕ್ನೋದಲ್ಲಿ ನಡೆದ ಸರಣಿಯ ಮೊದಲ ಪಂದ್ಯದಲ್ಲಿ ಮಳೆಯಿಂದಾಗಿ ಪಂದ್ಯವನ್ನು ತಡವಾಗಿ ಆರಂಭಿಸಲಾಗಿತ್ತು. ಇದೀಗ ರಾಂಚಿಯಲ್ಲಿ ನಡೆಯಲಿರುವ ಎರಡನೇ ಪಂದ್ಯಕ್ಕೂ ವರುಣ ಅಡ್ಡಿಪಡಿಸುವ ಎಲ್ಲಾ ಸಾಧ್ಯತೆಗಳಿವೆ. ಸರಣಿಯ ಎರಡನೇ ಪಂದ್ಯವು ಭಾನುವಾರ, ಅಕ್ಟೋಬರ್ 9 ರಂದು ರಾಂಚಿಯಲ್ಲಿ ನಡೆಯಲಿದೆ. ಆದರೆ ಅದಕ್ಕೂ ಒಂದು ದಿನ ಮೊದಲು ಅಂದರೆ ಶನಿವಾರ, ರಾಂಚಿಯಲ್ಲಿ ಮಳೆಯಾಗುತ್ತಿದೆ. ಅಷ್ಟೇ ಅಲ್ಲ, ಭಾನುವಾರವೂ ಮಳೆಯಾಗುವ ಮುನ್ಸೂಚನೆ ಇದೆ.

ಭಾನುವಾರ ರಾಂಚಿಯ ಜೆಎಸ್‌ಸಿಎ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಭಾರತ ತಂಡ 2ನೇ ಏಕದಿನ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಸಲಬಲ ಸಾಧಿಸಲು ಪ್ರಯತ್ನಿಸುತ್ತಿದೆ. ಶಿಖರ್ ಧವನ್ ನಾಯಕತ್ವದಲ್ಲಿ ಟೀಂ ಇಂಡಿಯಾ ಮೊದಲ ಪಂದ್ಯದ ನಿಕಟ ಸೋಲಿನಿಂದ ಚೇತರಿಸಿಕೊಳ್ಳುವ ಭರವಸೆ ಹೊಂದಿದೆ. ಈಗ ಭಾರತ ತಂಡದ ಈ ಪ್ರಯತ್ನ ಯಶಸ್ವಿಯಾಗುತ್ತದೋ ಇಲ್ಲವೋ ಎಂಬುದು ತಂಡದ ಪ್ರದರ್ಶನದ ಜತೆಗೆ ಹವಾಮಾನದ ಮೇಲೂ ನಿಂತಿದೆ.

ಲಕ್ನೋ ನಂತರ ರಾಂಚಿಯಲ್ಲೂ ಮಳೆ

ಲಕ್ನೋದಲ್ಲಿ ನಡೆದ ಮೊದಲ ಪಂದ್ಯದಲ್ಲೂ ಮಳೆಯಿಂದಾಗಿ ಪೂರ್ಣ 50 ಓವರ್‌ಗಳನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ಅಕ್ಟೋಬರ್ 6 ರಂದು ನಡೆದ ಈ ಪಂದ್ಯದಲ್ಲಿ ಸುಮಾರು ಎರಡೂವರೆ ಗಂಟೆಗಳ ವಿಳಂಬದ ನಂತರ ಪಂದ್ಯ ಆರಂಭಗೊಂಡು ಕೇವಲ 40 ಓವರ್​ಗಳ ಪಂದ್ಯ ಮಾತ್ರ ನಡೆಯಿತು. ಈಗ 2ನೇ ಪಂದ್ಯಕ್ಕೆ ಮಳೆ ಅಡ್ಡಿಯಾಗುತ್ತಿದ್ದು, ಭಾನುವಾರವೂ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆದರೆ, ಜಾರ್ಖಂಡ್ ಕ್ರಿಕೆಟ್ ಸಂಸ್ಥೆ ಉತ್ತಮ ಸಿದ್ಧತೆ ನಡೆಸಿರುವುದರಿಂದ ಪಂದ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರುವುದಿಲ್ಲ ಎಂದು ಊಹಿಸಲಾಗಿದೆ. ರಾಂಚಿಯ ಪ್ರಾದೇಶಿಕ ಹವಾಮಾನ ಇಲಾಖೆಯ ವಿಜ್ಞಾನಿ ಅಭಿಷೇಕ್ ಆನಂದ್ ಟಿವಿ9 ಹಿಂದಿಯೊಂದಿಗೆ ಮಾತನಾಡುತ್ತಾ, 9 ರಂದು ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಪಂದ್ಯವಿದ್ದು, ರಾಂಚಿಯಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ. ಆದರೆ ಇದಕ್ಕಾಗಿ ಜೆಸಿಎ ಉತ್ತಮ ವ್ಯವಸ್ಥೆ ಮಾಡಿರುವುದರಿಂದ ಮಳೆಯಿಂದ ಪಂದ್ಯಕ್ಕೆ ಹೆಚ್ಚಿನ ತೊಂದರೆಯಾಗದು ಎಂಬ ನಿರೀಕ್ಷೆ ಇದೆ ಎಂದಿದ್ದಾರೆ.

ಗಾಯದ ಕಾರಣ ಚಹರ್ ಔಟ್

ಇನ್ನು ಸರಣಿಯ ಬಗ್ಗೆ ಮಾತನಾಡುವುದಾದರೆ ಟೀಂ ಇಂಡಿಯಾಗೆ ದೊಡ್ಡ ಹಿನ್ನಡೆಯಾಗಿದೆ. ವೇಗದ ಬೌಲರ್ ದೀಪಕ್ ಚಹರ್ ಇಂಜುರಿಯಿಂದಾಗಿ ಈ ಸರಣಿಯ ಉಳಿದ ಎರಡೂ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಈ ಸಮಸ್ಯೆಯಿಂದಾಗಿ ಲಕ್ನೋದಲ್ಲಿ ನಡೆದ ಮೊದಲ ಪಂದ್ಯದಲ್ಲೂ ಚಹರ್​ಗೆ ಆಡಲಾಗಲಿಲ್ಲ. ಚಹರ್ ಅಲಭ್ಯತೆಯ ಬಗ್ಗೆ ಶನಿವಾರ ಮಾಹಿತಿ ನೀಡಿದ್ದ ಬಿಸಿಸಿಐ, ಉಳೆದೆರಡು ಪಂದ್ಯಗಳಿಂದ ಚಹರ್ ಹೊರಗುಳಿದಿದ್ದು, ಅವರ ಸ್ಥಾನಕ್ಕೆ ಆಯ್ಕೆಗಾರರು ಸ್ಪಿನ್ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದ್ದಾರೆ ಎಂದು ಹೇಳಿತ್ತು.

Published On - 6:50 pm, Sat, 8 October 22

ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು