AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾಗೆ ಫಾಲೋಆನ್​ ಹೇರದ ಸೌತ್ ಆಫ್ರಿಕಾ

India vs South Africa, 2nd Test: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ನಲ್ಲಿ ಆಫ್ರಿಕಾ ಪಡೆ ಜಯ ಸಾಧಿಸಿದೆ. ಹೀಗಾಗಿ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಅಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ಭಾರತ ತಂಡವು ಸರಣಿ ಸೋಲನ್ನು ತಪ್ಪಿಸಿಕೊಳ್ಳಬಹುದು

ಟೀಮ್ ಇಂಡಿಯಾಗೆ ಫಾಲೋಆನ್​ ಹೇರದ ಸೌತ್ ಆಫ್ರಿಕಾ
Ind Vs Sa
ಝಾಹಿರ್ ಯೂಸುಫ್
|

Updated on:Nov 24, 2025 | 3:17 PM

Share

ಗುವಾಹಟಿಯಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 201 ರನ್​​ಗಳಿಸಿ ಟೀಮ್ ಇಂಡಿಯಾ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಪ್ರಥಮ ಇನಿಂಗ್ಸ್​ನಲ್ಲಿ ಬರೋಬ್ಬರಿ 489 ರನ್​ ಕಲೆಹಾಕಿದ್ದರು.

ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಶುರು ಮಾಡಿದ ಟೀಮ್ ಇಂಡಿಯಾಗೆ ಯಶಸ್ವಿ ಜೈಸ್ವಾಲ್ (58) ಹಾಗೂ ಕೆಎಲ್ ರಾಹುಲ್ (22) ಉತ್ತಮ ಆರಂಭ ಒದಗಿಸಿದ್ದರು. ಆದರೆ ಆ ಬಳಿಕ ಬಂದ ಬ್ಯಾಟರ್​ಗಳ ಪೆವಿಲಿಯನ್ ಪರೇಡ್ ನಡೆಸಿದ್ದಾರೆ.

ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸಾಯಿ ಸುದರ್ಶನ್ 15 ರನ್​ಗಳಿಸಿದರೆ, ಧ್ರುವ್ ಜುರೆಲ್ (0) ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಇನ್ನು ನಾಯಕ ರಿಷಭ್ ಪಂತ್ ಕಲೆಹಾಕಿದ್ದು ಕೇವಲ 7 ರನ್​ಗಳು ಮಾತ್ರ.

ಆರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರವೀಂದ್ರ ಜಡೇಜಾ 6 ರನ್​ಗಳಿಸಿದರೆ, ನಿತೀಶ್ ಕುಮಾರ್ ರೆಡ್ಡಿ 10 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಜೊತೆಗೂಡಿದ ವಾಷಿಂಗ್ಟನ್ ಸುಂದರ್ ಹಾಗೂ ಕುಲ್ದೀಪ್ ಯಾದವ್ 72 ರನ್​ಗಳ ಜೊತೆಯಾಟವಾಡಿದರು.

ಆದರೆ ಮೂರನೇ ದಿನದಾಟದ ಭೋಜನಾ ವಿರಾಮದ ಬಳಿಕ ವಾಷಿಂಗ್ಟನ್ ಸುಂದರ್ (45) ವಿಕೆಟ್ ಪಡೆಯುವಲ್ಲಿ ಸೈಮ್ ಹರ್ಮರ್ ಯಶಸ್ವಿಯಾದರು. ಇದರ ಬೆನ್ನಲ್ಲೇ ಕುಲ್ದೀಪ್ ಯಾದವ್ (19) ಕೂಡ ಔಟಾದರು. ಇನ್ನು ಜಸ್​ಪ್ರೀತ್ ಬುಮ್ರಾ (5) ಕ್ಯಾಚ್ ನೀಡುವುದರೊಂದಿಗೆ ಟೀಮ್ ಇಂಡಿಯಾ 201 ರನ್​ಗಳಿಸಿ ಆಲೌಟ್ ಆಯಿತು. ಸೌತ್ ಆಫ್ರಿಕಾ ಪರ  19.5 ಓವರ್​ಗಳನ್ನು ಎಸೆದ ಮಾರ್ಕೊ ಯಾನ್ಸೆನ್ 48 ರನ್ ನೀಡಿ 6 ವಿಕೆಟ್ ಕಬಳಿಸಿ ಮಿಂಚಿದರು.

ಫಾಲೋಆನ್​ ಹೇರದ ಸೌತ್ ಆಫ್ರಿಕಾ:

ಭಾರತ ತಂಡವು ಮೊದಲ ಇನಿಂಗ್ಸ್​ನಲ್ಲಿ 288 ರನ್​ಗಳ ಹಿನ್ನಡೆ ಅನುಭವಿಸಿದ್ದರೂ ಸೌತ್ ಆಫ್ರಿಕಾ ತಂಡ ಫಾಲೋಆನ್ ಹೇರದೇ ಅಚ್ಚರಿ ಮೂಡಿಸಿದ್ದಾರೆ. ಅಂದರೆ ಎದುರಾಳಿ ತಂಡವು ಮೊದಲ ಇನಿಂಗ್ಸ್​ನಲ್ಲಿ 200 ರನ್​ಗಳ ಹಿನ್ನಡೆ ಅನುಭವಿಸಿದರೆ, ಆ ತಂಡವನ್ನು ಮೊದಲು ದ್ವಿತೀಯ ಇನಿಂಗ್ಸ್ ಆಡಲು ಆಹ್ವಾನಿಸಬಹುದು. ಆದರೆ ಟೆಂಬಾ ಬವುಮಾ ಫಾಲೋಆನ್ ಹೇರದೆ ಮತ್ತೆ ಬ್ಯಾಟಿಂಗ್ ನಡೆಸಲು ನಿರ್ಧರಿಸಿದ್ದಾರೆ.  ಅದರಂತೆ 288 ರನ್​ಗಳ ಮುನ್ನಡೆಯೊಂದಿಗೆ ಸೌತ್ ಆಫ್ರಿಕಾ ದ್ವಿತೀಯ ಇನಿಂಗ್ಸ್ ಆರಂಭಿಸಲಿದೆ.

ಸೌತ್ ಆಫ್ರಿಕಾ ಪ್ಲೇಯಿಂಗ್ 11: ಐಡೆನ್ ಮಾರ್ಕ್ರಾಮ್, ರಯಾನ್ ರಿಕೆಲ್ಟನ್, ವಿಯಾನ್ ಮುಲ್ಡರ್, ಟೆಂಬಾ ಬವುಮಾ (ನಾಯಕ), ಟೋನಿ ಡಿ ಝೋರ್ಝಿ, ಟ್ರಿಸ್ಟನ್ ಸ್ಟಬ್ಸ್, ಕೈಲ್ ವೆರ್ರೆನ್ (ವಿಕೆಟ್ ಕೀಪರ್), ಮಾರ್ಕೊ ಯಾನ್ಸೆನ್, ಸೆನುರಾನ್ ಮುತ್ತುಸಾಮಿ, ಸೈಮನ್ ಹಾರ್ಮರ್, ಕೇಶವ್ ಮಹಾರಾಜ್.

ಇದನ್ನೂ ಓದಿ: ಟ್ರಾವಿಸ್ ಹೆಡ್ ಸಿಡಿಲಬ್ಬರದಿಂದ ಆಸ್ಟ್ರೇಲಿಯಾಗೆ 17 ಕೋಟಿ ರೂ. ನಷ್ಟ!

ಭಾರತ ಪ್ಲೇಯಿಂಗ್ 11: ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ಧ್ರುವ ಜುರೆಲ್, ರಿಷಭ್ ಪಂತ್ (ನಾಯಕ), ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

Published On - 3:13 pm, Mon, 24 November 25

Follow Us
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಡಿಕೆ ಶಿವಕುಮಾರ್
ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಡಿಕೆ ಶಿವಕುಮಾರ್
ಅಕ್ರಮವಾಗಿ ಸ್ಫೋಟಕಗಳ ಸಾಗಾಟ: 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ
ಅಕ್ರಮವಾಗಿ ಸ್ಫೋಟಕಗಳ ಸಾಗಾಟ: 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ
ಭಾರಿ ಮಳೆಯಿಂದ ದೆಹಲಿ ವಿಮಾನ ನಿಲ್ದಾಣ ಜಲಾವೃತ; ಪ್ರಯಾಣಿಕರ ಪರದಾಟ
ಭಾರಿ ಮಳೆಯಿಂದ ದೆಹಲಿ ವಿಮಾನ ನಿಲ್ದಾಣ ಜಲಾವೃತ; ಪ್ರಯಾಣಿಕರ ಪರದಾಟ
ಬೆಂಗಳೂರಿಗರೇ ಎಚ್ಚರ: ನಗರದಲ್ಲಿ ಟೋಯಿಂಗ್ ಕಾರ್ಯಾಚರಣೆ ಪುನರಾರಂಭ!
ಬೆಂಗಳೂರಿಗರೇ ಎಚ್ಚರ: ನಗರದಲ್ಲಿ ಟೋಯಿಂಗ್ ಕಾರ್ಯಾಚರಣೆ ಪುನರಾರಂಭ!