AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಬೃಹತ್ ಮೊತ್ತ ಪೇರಿಸಿ ಸೌತ್ ಆಫ್ರಿಕಾ ಆಲೌಟ್

India vs South Africa: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ನಲ್ಲಿ ಆಫ್ರಿಕಾ ಪಡೆ ಜಯ ಸಾಧಿಸಿದೆ. ಹೀಗಾಗಿ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಅಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ಭಾರತ ತಂಡವು ಸರಣಿ ಸೋಲನ್ನು ತಪ್ಪಿಸಿಕೊಳ್ಳಬಹುದು

IND vs SA: ಬೃಹತ್ ಮೊತ್ತ ಪೇರಿಸಿ ಸೌತ್ ಆಫ್ರಿಕಾ ಆಲೌಟ್
Ind Vs Sa
ಝಾಹಿರ್ ಯೂಸುಫ್
|

Updated on:Nov 23, 2025 | 8:25 PM

Share

ಭಾರತದ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸೌತ್ ಆಫ್ರಿಕಾ ತಂಡ 489 ರನ್​ಗಳಿಸಿ ಆಲೌಟ್ ಆಗಿದೆ.  ಗುವಾಹಟಿಯ ಬರ್ಸಪಾರ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಉತ್ತಮ ಆರಂಭ ಪಡೆದುಕೊಂಡಿತ್ತು. ಆರಂಭಿಕರಾಗಿ ಕಣಕ್ಕಿಳಿದ ರಯಾನ್ ರಿಕೆಲ್ಟನ್ (35) ಹಾಗೂ ಐಡೆನ್ ಮಾರ್ಕ್ರಾಮ್ (38) ಮೊದಲ ವಿಕೆಟ್​ಗೆ 82 ರನ್ ಪೇರಿಸಿ ಉತ್ತಮ ಆರಂಭ ಒದಗಿಸಿದ್ದರು.

ಇದಾದ ಬಳಿಕ ಬಂದ ಟ್ರಿಸ್ಟನ್ ಸ್ಟಬ್ಸ್ 49 ರನ್ ಬಾರಿಸಿದರೆ, ಟೆಂಬಾ ಬವುಮಾ 41 ರನ್​ಗಳ ಕೊಡುಗೆ ನೀಡಿದರು. ಇನ್ನು ಟೋನಿ ಡಿ ಝೋರ್ಝಿ 28 ರನ್ ಬಾರಿಸಿ ಮೊಹಮ್ಮದ್ ಸಿರಾಜ್​ಗೆ ವಿಕೆಟ್ ಒಪ್ಪಿಸಿದರು. ಈ ಮೂಲಕ ಸೌತ್ ಆಫ್ರಿಕಾ ತಂಡವು ಮೊದಲ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 247 ರನ್​ಗಳಿಸಿತ್ತು.

ದ್ವಿತೀಯ ದಿನದಾಟದಲ್ಲಿ ಬ್ಯಾಟಿಂಗ್ ಮುಂದುವರೆಸಿದ ಸೆನುರಾನ್ ಮುತ್ತುಸಾಮಿ ಭರ್ಜರಿ ಶತಕ ಸಿಡಿಸುವ ಮೂಲಕ ತಂಡದ ಮೊತ್ತವನ್ನು 400ರ ಗಡಿದಾಟಿಸಿದರು. ಅಂತಿಮವಾಗಿ 206 ಎಸೆತಗಳನ್ನು ಎದುರಿಸಿದ ಮುತ್ತುಸಾಮಿ 2 ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ 109 ರನ್​ ಬಾರಿಸಿ ಔಟಾದರು.

ಮತ್ತೊಂದೆಡೆ ಉತ್ತಮ ಸಾಥ್ ನೀಡಿದ ಮಾರ್ಕೊ ಯಾನ್ಸೆನ್ 93 ರನ್​ಗಳಿಸಿ ಕೇವಲ 7 ರನ್​​ಗಳಿಂದ ಶತಕ ವಂಚಿತರಾದರು. ಈ ಮೂಲಕ ಸೌತ್ ಆಫ್ರಿಕಾ ತಂಡವು 489 ರನ್​​ಗಳಿಸಿ ಆಲೌಟ್ ಆಗಿದೆ.

ಟೀಮ್ ಇಂಡಿಯಾ ಪರ ಕುಲ್ದೀಪ್ ಯಾದವ್ 4 ವಿಕೆಟ್ ಪಡೆದರೆ, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ ತಲಾ 2 ವಿಕೆಟ್ ಕಬಳಿಸಿ ಮಿಂಚಿದರು.

ಇನ್ನು 2ನೇ ದಿನದಾಟದ ಅಂತ್ಯದ ವೇಳೆ ಪ್ರಥಮ ಇನಿಂಗ್ಸ್ ಆರಂಭಿಸಿರುವ ಟೀಮ್ ಇಂಡಿಯಾ ಯಾವುದೇ ವಿಕೆಟ್ ನಷ್ಟವಿಲ್ಲದೆ 9 ರನ್ ಕಲೆಹಾಕಿದೆ. ಅಲ್ಲದೆ ಮೂರನೇ ದಿನದಾಟದಲ್ಲಿ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್ ಮುಂದುವರೆಸಲಿದ್ದಾರೆ.

ಸೌತ್ ಆಫ್ರಿಕಾ ಪ್ಲೇಯಿಂಗ್ 11: ಐಡೆನ್ ಮಾರ್ಕ್ರಾಮ್, ರಯಾನ್ ರಿಕೆಲ್ಟನ್, ವಿಯಾನ್ ಮುಲ್ಡರ್, ಟೆಂಬಾ ಬವುಮಾ (ನಾಯಕ), ಟೋನಿ ಡಿ ಝೋರ್ಝಿ, ಟ್ರಿಸ್ಟನ್ ಸ್ಟಬ್ಸ್, ಕೈಲ್ ವೆರ್ರೆನ್ (ವಿಕೆಟ್ ಕೀಪರ್), ಮಾರ್ಕೊ ಯಾನ್ಸೆನ್, ಸೆನುರಾನ್ ಮುತ್ತುಸಾಮಿ, ಸೈಮನ್ ಹಾರ್ಮರ್, ಕೇಶವ್ ಮಹಾರಾಜ್.

ಇದನ್ನೂ ಓದಿ: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಟ್ರಾವಿಸ್ ಹೆಡ್

ಭಾರತ ಪ್ಲೇಯಿಂಗ್ 11: ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ಧ್ರುವ ಜುರೆಲ್, ರಿಷಭ್ ಪಂತ್ (ನಾಯಕ), ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

Published On - 3:20 pm, Sun, 23 November 25

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ