AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

500 ರನ್​ಗಳ ಮುನ್ನಡೆ… ಸರಣಿ ಸೋಲಿನತ್ತ ಟೀಮ್ ಇಂಡಿಯಾ

India vs South Africa 2nd Test: ಗುವಾಹಟಿಯ ಬರ್ಸಪಾರ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸೌತ್ ಆಫ್ರಿಕಾ ತಂಡವು 489 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ ಕೇವಲ 201 ರನ್​ಗಳಿಸಿ ಆಲೌಟ್ ಆಗಿದೆ. ಇದೀಗ 288 ರನ್​ಗಳ ಮುನ್ನಡೆಯೊಂದಿಗೆ ಸೌತ್ ಆಫ್ರಿಕಾ ತಂಡ ದ್ವಿತೀಯ ಇನಿಂಗ್ಸ್ ಮುಂದುವರೆಸಿದೆ.

500 ರನ್​ಗಳ ಮುನ್ನಡೆ... ಸರಣಿ ಸೋಲಿನತ್ತ ಟೀಮ್ ಇಂಡಿಯಾ
Team India
ಝಾಹಿರ್ ಯೂಸುಫ್
|

Updated on: Nov 25, 2025 | 1:24 PM

Share

ಗುವಾಹಟಿಯಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಸೌತ್ ಆಫ್ರಿಕಾ ತಂಡ ಒಟ್ಟು 508 ರನ್​ಗಳ ಮುನ್ನಡೆ ಸಾಧಿಸಿದೆ. ಈ ಮೂಲಕ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಪ್ರವಾಸಿ ತಂಡವು ಮೊದಲ ಇನಿಂಗ್ಸ್​ನಲ್ಲಿ 489 ರನ್ ಕಲೆಹಾಕಿತ್ತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಟೀಮ್ ಇಂಡಿಯಾ 201 ರನ್​ಗಳಿಸಲಷ್ಟೇ ಶಕ್ತರಾಗಿದ್ದರು.

ಅದರಂತೆ 288 ರನ್​ಗಳ ಮೊದಲ ಇನಿಂಗ್ಸ್​ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಸೌತ್ ಆಫ್ರಿಕಾ ತಂಡವು 4ನೇ ದಿನದಾಟದ ಬೋಜನಾ ವಿರಾಮದ ವೇಳೆಗೆ 4 ವಿಕೆಟ್ ಕಳೆದುಕೊಂಡು 220 ರನ್​ ಕಲೆಹಾಕಿದೆ. ಈ ಮೂಲಕ ಒಟ್ಟು 508 ರನ್​ಗಳ ಮುನ್ನಡೆ ಸಾಧಿಸಿದೆ.

ಸರಣಿ ಸೋಲಿನತ್ತ ಟೀಮ್ ಇಂಡಿಯಾ:

ಸೌತ್ ಆಫ್ರಿಕಾ ತಂಡವು 500 ರನ್​ಗಳ ಮುನ್ನಡೆ ಸಾಧಿಸುತ್ತಿದ್ದಂತೆ ಟೀಮ್ ಇಂಡಿಯಾಗೆ ಸರಣಿ ಸೋಲು ಖಚಿತವಾಗಿದೆ. ಏಕೆಂದರೆ ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ಭಾರತ ತಂಡವು ಸರಣಿಯನ್ನು 1-1 ಅಂತರದಿಂದ ಸಮಗೊಳಿಸಬಹುದು.

ಆದರೆ ಅತ್ತ ಮೊದಲ ಪಂದ್ಯದಲ್ಲಿ ಗೆಲುವು ದಾಖಲಿಸಿರುವ ಸೌತ್ ಆಫ್ರಿಕಾ ತಂಡವು ಈ ಪಂದ್ಯವನ್ನು ಡ್ರಾಗೊಳಿಸಿದರೂ 1-0 ಅಂತರದಿಂದ ಸರಣಿ ಜಯಿಸಬಹುದು. ಹೀಗಾಗಿಯೇ ಸೌತ್ ಆಫ್ರಿಕಾ ತಂಡದ 500 ರನ್​ಗಳ ಮುನ್ನಡೆ ಟೀಮ್ ಇಂಡಿಯಾವನ್ನು ಸರಣಿ ಸೋಲಿನತ್ತ ಕೊಂಡೊಯ್ಯಲಿದೆ.

ಏಕೆಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಕೊನೆಯ ಇನಿಂಗ್ಸ್​ನಲ್ಲಿ 500+ ಸ್ಕೋರ್ ಬೆನ್ನತ್ತಿರುವುದು ಕೇವಲ ಒಂದು ಬಾರಿ ಮಾತ್ರ. ಅದು ಕೂಡ 1939 ರಲ್ಲಿ. ಅಂದು ಸೌತ್ ಆಫ್ರಿಕಾ ನೀಡಿದ 696 ರನ್​​ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ 656 ರನ್​ಗಳಿಸಿ ಪಂದ್ಯವನ್ನು ಡ್ರಾಗೊಳಿಸಲಷ್ಟೇ ಶಕ್ತರಾಗಿದ್ದರು.

ಇದಾದ ಬಳಿಕ ಯಾವುದೇ ತಂಡ ನಾಲ್ಕನೇ ಇನಿಂಗ್ಸ್​ನಲ್ಲಿ 500 ರನ್​ಗಳನ್ನು ಕಲೆಹಾಕಿದ ಇತಿಹಾಸವಿಲ್ಲ. ಇದೀಗ ಸೌತ್ ಆಫ್ರಿಕಾ ತಂಡವು ಟೀಮ್ ಇಂಡಿಯಾಗೆ 508+ ರನ್​​ಗಳ ಗುರಿ ನೀಡುವುದು ಖಚಿತವಾಗಿದೆ. ಹೀಗಾಗಿ ಈ ಪಂದ್ಯವನ್ನು ಭಾರತ ತಂಡ ಡ್ರಾನಲ್ಲಿ ಅಂತ್ಯಗೊಳಿಸಬಹುದಷ್ಟೇ.

ಅತ್ತ ಪಂದ್ಯ ಡ್ರಾನಲ್ಲಿ ಅಂತ್ಯವಾದರೆ ಸೌತ್ ಆಫ್ರಿಕಾ ತಂಡವು 1-0 ಅಂತರದಿಂದ ಸರಣಿಯನ್ನು ಗೆಲ್ಲಲಿದೆ. ಈ ಮೂಲಕ ದೀರ್ಘಾಕಾಲದ ಬಳಿಕ ಭಾರತದಲ್ಲಿ ಸರಣಿ ಗೆದ್ದ ಐತಿಹಾಸಿಕ ಸಾಧನೆ ಮಾಡಲಿದೆ.

ಸೌತ್ ಆಫ್ರಿಕಾ ಪ್ಲೇಯಿಂಗ್ 11: ಐಡೆನ್ ಮಾರ್ಕ್ರಾಮ್, ರಯಾನ್ ರಿಕೆಲ್ಟನ್, ವಿಯಾನ್ ಮುಲ್ಡರ್, ಟೆಂಬಾ ಬವುಮಾ (ನಾಯಕ), ಟೋನಿ ಡಿ ಝೋರ್ಝಿ, ಟ್ರಿಸ್ಟನ್ ಸ್ಟಬ್ಸ್, ಕೈಲ್ ವೆರ್ರೆನ್ (ವಿಕೆಟ್ ಕೀಪರ್), ಮಾರ್ಕೊ ಯಾನ್ಸೆನ್, ಸೆನುರಾನ್ ಮುತ್ತುಸಾಮಿ, ಸೈಮನ್ ಹಾರ್ಮರ್, ಕೇಶವ್ ಮಹಾರಾಜ್.

ಇದನ್ನೂ ಓದಿ: ಟ್ರಾವಿಸ್ ಹೆಡ್ ಸಿಡಿಲಬ್ಬರದಿಂದ ಆಸ್ಟ್ರೇಲಿಯಾಗೆ 17 ಕೋಟಿ ರೂ. ನಷ್ಟ!

ಭಾರತ ಪ್ಲೇಯಿಂಗ್ 11: ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ಧ್ರುವ ಜುರೆಲ್, ರಿಷಭ್ ಪಂತ್ (ನಾಯಕ), ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಸೂರಜ್‌ಕುಂಡ್ ಜಾತ್ರೆ ದುರಂತ; ಸುನಾಮಿ ಉಯ್ಯಾಲೆ ತುಂಡಾಗಿ ಪೊಲೀಸ್ ಸಾವು
ಸೂರಜ್‌ಕುಂಡ್ ಜಾತ್ರೆ ದುರಂತ; ಸುನಾಮಿ ಉಯ್ಯಾಲೆ ತುಂಡಾಗಿ ಪೊಲೀಸ್ ಸಾವು
‘ಕಾವು, ಕಾವು’ ಎಂದವರಿಗೆ ಟಾಂಗ್ ಕೊಟ್ಟ ಗಿಲ್ಲಿ: ವಿಡಿಯೋ
‘ಕಾವು, ಕಾವು’ ಎಂದವರಿಗೆ ಟಾಂಗ್ ಕೊಟ್ಟ ಗಿಲ್ಲಿ: ವಿಡಿಯೋ
ಮಲೇಷ್ಯಾದ 800 ಕಲಾವಿದರಿಂದ ಪ್ರಧಾನಿ ಮೋದಿಗೆ ಶಾಸ್ತ್ರೀಯ ನೃತ್ಯದ ಸ್ವಾಗತ
ಮಲೇಷ್ಯಾದ 800 ಕಲಾವಿದರಿಂದ ಪ್ರಧಾನಿ ಮೋದಿಗೆ ಶಾಸ್ತ್ರೀಯ ನೃತ್ಯದ ಸ್ವಾಗತ
ನಿಂದಿಸಿದ ಶ್ರೀನಿವಾಸ್​​ಗೆ ಪ್ರತ್ಯುತ್ತರ ಕೊಟ್ಟ ನಿರ್ದೇಶಕ ಎಪಿ ಅರ್ಜುನ್
ನಿಂದಿಸಿದ ಶ್ರೀನಿವಾಸ್​​ಗೆ ಪ್ರತ್ಯುತ್ತರ ಕೊಟ್ಟ ನಿರ್ದೇಶಕ ಎಪಿ ಅರ್ಜುನ್
ಎಲೆಕ್ಟ್ರಾನಿಕ್ಸ್ ಘಟಕ ನಿರ್ಮಾಣಕ್ಕೆ ಕರ್ನಾಟಕಕ್ಕೆ 10,000 ಕೋಟಿ ಅನುದಾನ
ಎಲೆಕ್ಟ್ರಾನಿಕ್ಸ್ ಘಟಕ ನಿರ್ಮಾಣಕ್ಕೆ ಕರ್ನಾಟಕಕ್ಕೆ 10,000 ಕೋಟಿ ಅನುದಾನ
ಯುವತಿ ತಲೆ ಮೇಲೆ ಹರಿದ BMTC ಎಲೆಕ್ಟ್ರಿಕ್ ಬಸ್
ಯುವತಿ ತಲೆ ಮೇಲೆ ಹರಿದ BMTC ಎಲೆಕ್ಟ್ರಿಕ್ ಬಸ್
ಮಲೇಷ್ಯಾಗೆ ತೆರಳಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ಮಲೇಷ್ಯಾಗೆ ತೆರಳಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆಶಿ
ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆಶಿ
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ