AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಟೀಮ್ ಇಂಡಿಯಾ ಭರ್ಜರಿ ಬೌಲಿಂಗ್: ಎರಡಂಕಿ ಮೊತ್ತಕ್ಕೆ ಸೌತ್ ಆಫ್ರಿಕಾ ಆಲೌಟ್

India vs South Africa 3rd ODI: ಮೂರನೇ ಓವರ್​ನಲ್ಲಿ ಡಿಕಾಕ್ (7) ವಿಕೆಟ್ ಪಡೆಯುವ ಮೂಲಕ ವಾಷಿಂಗ್ಟನ್ ಸುಂದರ್ ಯಶಸ್ಸಿನ ಖಾತೆ ತೆರೆದರು. ಇದರ ಬೆನ್ನಲ್ಲೇ ಜಾನ್ನೆಮನ್ ಮಲನ್ ವಿಕೆಟ್ ಕಬಳಿಸಿ ಸಿರಾಜ್ ಮತ್ತೊಂದು ಯಶಸ್ಸು ತಂದುಕೊಟ್ಟರು.

IND vs SA: ಟೀಮ್ ಇಂಡಿಯಾ ಭರ್ಜರಿ ಬೌಲಿಂಗ್: ಎರಡಂಕಿ ಮೊತ್ತಕ್ಕೆ ಸೌತ್ ಆಫ್ರಿಕಾ ಆಲೌಟ್
Team India
TV9 Web
| Edited By: |

Updated on:Oct 11, 2022 | 4:44 PM

Share

India vs South Africa 3rd Odi:  ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಟೀಮ್ ಇಂಡಿಯಾ (Team India) ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವು ಅತೀ ಕಡಿಮೆ ಮೊತ್ತಕ್ಕೆ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶಿಖರ್ ಧವನ್ ಬೌಲಿಂಗ್ ಆಯ್ದುಕೊಂಡಿದ್ದರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ದಾಳಿ ಸಂಘಟಿಸಿದ ಟೀಮ್ ಇಂಡಿಯಾ ಬೌಲರ್​ಗಳು ಆರಂಭದಲ್ಲೇ ಯಶಸ್ಸು ಸಾಧಿಸಿದರು.

ಮೂರನೇ ಓವರ್​ನಲ್ಲಿ ಡಿಕಾಕ್ (7) ವಿಕೆಟ್ ಪಡೆಯುವ ಮೂಲಕ ವಾಷಿಂಗ್ಟನ್ ಸುಂದರ್ ಯಶಸ್ಸಿನ ಖಾತೆ ತೆರೆದರು. ಇದರ ಬೆನ್ನಲ್ಲೇ ಜಾನ್ನೆಮನ್ ಮಲನ್ (15) ವಿಕೆಟ್ ಕಬಳಿಸಿ ಸಿರಾಜ್ ಮತ್ತೊಂದು ಯಶಸ್ಸು ತಂದುಕೊಟ್ಟರು. ಇನ್ನು 3 ರನ್​ಗಳಿಸಿದ್ದ ರೀಝಾ ಹೆಂಡ್ರಿಕ್ಸ್​ಗೆ ಸಿರಾಜ್ ಪೆವಿಲಿಯನ್ ಹಾದಿ ತೋರಿಸಿದರು. ಇದರ ಬೆನ್ನಲ್ಲೇ ಐಡನ್ ಮಾರ್ಕ್ರಾಮ್ ವಿಕೆಟ್ ಉರುಳಿಸುವ ಮೂಲಕ ಶಹಬಾಜ್ ಅಹ್ಮದ್ ಕೂಡ ವಿಕೆಟ್ ಬೇಟೆ ಆರಂಭಿಸಿದ್ದರು.

ಇದನ್ನೂ ಓದಿ
Image
Anna Rajan: ಸಿಮ್ ಖರೀದಿಸಲು ಹೋದ ನಟಿಯನ್ನು ಶೋ ರೂಮ್​ನಲ್ಲಿ ಕೂಡಿ ಹಾಕಿದ ಸಿಬ್ಬಂದಿ..!
Image
David Miller: ಕಿಲ್ಲರ್ ಮಿಲ್ಲರ್ ಆರ್ಭಟಕ್ಕೆ ಧೋನಿ ದಾಖಲೆ ಧೂಳೀಪಟ
Image
Dinesh Karthik: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಹೊಸ ವಿಶ್ವ ದಾಖಲೆ ಬರೆದ DK
Image
Virat Kohli: ಸ್ಪೋಟಕ ಬ್ಯಾಟಿಂಗ್ ಮೂಲಕ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ

ಅಲ್ಲಿಗೆ ಸೌತ್ ಆಫ್ರಿಕಾ ತಂಡವು 15.3 ಓವರ್​ಗಳಲ್ಲಿ ಕೇವಲ 43 ರನ್​ಗಳಿಗೆ 4 ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಮತ್ತೆ ದಾಳಿಗಿಳಿದ ವಾಷಿಂಗ್ಟನ್ ಸುಂದರ್ ಡೇವಿಡ್ ಮಿಲ್ಲರ್ (7) ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು.

ಇದಾದ ಬಳಿಕ ಸೌತ್ ಆಫ್ರಿಕಾದ ಯಾವುದೇ ಬ್ಯಾಟ್ಸ್​ಮನ್​ಗಳನ್ನು ಕ್ರೀಸ್ ಕಚ್ಚಿ ನಿಲ್ಲಲು ಚೈನಾಮನ್ ಸ್ಪಿನ್ನರ್ ಕುಲ್ದೀಪ್ ಯಾದವ್ ಬಿಡಲಿಲ್ಲ. ನಾಲ್ಕು ಓವರ್​ಗಳಲ್ಲಿ 4 ವಿಕೆಟ್ ಉರುಳಿಸುವ ಮೂಲಕ ಕುಲ್ದೀಪ್ ಸೌತ್ ಆಫ್ರಿಕಾ ತಂಡಕ್ಕೆ ಆಘಾತ ನೀಡಿದರು.  ಪರಿಣಾಮ 27.1 ಓವರ್​ಗಳಲ್ಲಿ ದಕ್ಷಿಣ ಆಫ್ರಿಕಾ ತಂಡವು ಕೇವಲ 99 ರನ್​ಗಳಿಗೆ ಆಲೌಟ್ ಆಯಿತು.

ಟೀಮ್ ಇಂಡಿಯಾ ಪರ ವಾಷಿಂಗ್ಟನ್ ಸುಂದರ್, ಸಿರಾಜ್, ಶಹಬಾಜ್ ಅಹ್ಮದ್ ತಲಾ 2 ವಿಕೆಟ್ ಪಡೆದರೆ, ಕುಲ್ದೀಪ್ ಯಾದವ್ 4 ಓವರ್​ಗಳಲ್ಲಿ 18 ರನ್ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದರು.

ಭಾರತ ಪ್ಲೇಯಿಂಗ್ 11: ಶಿಖರ್ ಧವನ್ (ನಾಯಕ) , ಶುಭಮನ್ ಗಿಲ್ , ಇಶಾನ್ ಕಿಶನ್ , ಶ್ರೇಯಸ್ ಅಯ್ಯರ್ , ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) , ವಾಷಿಂಗ್ಟನ್ ಸುಂದರ್ , ಶಹಬಾಜ್ ಅಹ್ಮದ್ , ಶಾರ್ದೂಲ್ ಠಾಕೂರ್ , ಕುಲದೀಪ್ ಯಾದವ್ , ಮೊಹಮ್ಮದ್ ಸಿರಾಜ್ , ಅವೇಶ್ ಖಾನ್

ದಕ್ಷಿಣ ಆಫ್ರಿಕಾ ಪ್ಲೇಯಿಂಗ್ 11: ಕ್ವಿಂಟನ್ ಡಿ ಕಾಕ್ , ಜಾನ್ನೆಮನ್ ಮಲನ್ , ರೀಜಾ ಹೆಂಡ್ರಿಕ್ಸ್ , ಐಡೆನ್ ಮಾರ್ಕ್ರಾಮ್ , ಹೆನ್ರಿಕ್ ಕ್ಲಾಸೆನ್ , ಡೇವಿಡ್ ಮಿಲ್ಲರ್ (ನಾಯಕ) , ಮಾರ್ಕೊ ಯಾನ್ಸೆನ್ , ಆಂಡಿಲ್ ಫೆಹ್ಲುಕ್ವಾಯೊ , ಜೋರ್ನ್ ಫೋರ್ಚುಯಿನ್ , ಲುಂಗಿ ಎನ್ಗಿಡಿ , ಅನ್ರಿಕ್ ನೋಕಿಯಾ.

Published On - 4:43 pm, Tue, 11 October 22

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು