AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ vs ಸೌತ್ ಆಫ್ರಿಕಾ 3ನೇ ಟಿ20 ಪಂದ್ಯ ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ

India vs South africa: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟೆಸ್ಟ್ ಹಾಗೂ ಏಕದಿನ ಸರಣಿಗಳು ಮುಗಿದಿವೆ. ಟೆಸ್ಟ್ ಸರಣಿಯನ್ನು ಸೌತ್ ಆಫ್ರಿಕಾ ತಂಡ 2-0 ಅಂತರದಿಂದ ಗೆದ್ದುಕೊಂಡರೆ, ಏಕದಿನ ಸರಣಿಯನ್ನು ಟೀಮ್ ಇಂಡಿಯಾ 2-1 ಅಂತರದಿಂದ ವಶಪಡಿಸಿಕೊಂಡಿದೆ. ಇದೀಗ ಉಭಯ ತಂಡಗಳ ನಡುವೆ ಟಿ20 ಸರಣಿ ನಡೆಯುತ್ತಿದೆ.

ಭಾರತ vs ಸೌತ್ ಆಫ್ರಿಕಾ 3ನೇ ಟಿ20 ಪಂದ್ಯ ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ
IND vs SA
ಝಾಹಿರ್ ಯೂಸುಫ್
|

Updated on:Dec 13, 2025 | 12:57 PM

Share

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 5 ಪಂದ್ಯಗಳ ಟಿ20 ಸರಣಿಯ ಎರಡು ಪಂದ್ಯಗಳು ಮುಗಿದಿವೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು ಹೀನಾಯವಾಗಿ ಸೋಲಿಸುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ. ಇನ್ನು ದ್ವಿತೀಯ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಭರ್ಜರಿ ಜಯ ಸಾಧಿಸಿದೆ. ಇದೀಗ ಉಭಯ ತಂಡಗಳು ಮೂರನೇ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಈ ಪಂದ್ಯ ಯಾವಾಗ? ಎಲ್ಲಿ ನಡೆಯಲಿದೆ? ಎಷ್ಟು ಗಂಟೆಗೆ ಶುರು? ಎಂಬಿತ್ಯಾದಿ ಮಾಹಿತಿಗಳು ಈ ಕೆಳಗಿನಂತಿದೆ…

ಭಾರತ vs ಸೌತ್ ಆಫ್ರಿಕಾ 3ನೇ ಟಿ20 ಪಂದ್ಯ ಯಾವಾಗ?

ಐದು ಪಂದ್ಯಗಳ ಸರಣಿಯ ದ್ವಿತೀಯ ಮ್ಯಾಚ್ ಡಿಸೆಂಬರ್ 14 ರಂದು ನಡೆಯಲಿದೆ. ಅಂದರೆ ಭಾನುವಾರ ಉಭಯ ತಂಡಗಳು ಮತ್ತೆ ಮುಖಾಮುಖಿಯಾಗಲಿದೆ.

ಮೂರನೇ ಪಂದ್ಯ ನಡೆಯುವುದು ಎಲ್ಲಿ?

ಭಾರತ vs ಸೌತ್ ಆಫ್ರಿಕಾ ನಡುವಣ 3ನೇ ಟಿ20 ಪಂದ್ಯವು ಹಿಮಾಚಲ ಪ್ರದೇಶದಲ್ಲಿ ಜರುಗಲಿದೆ. ಈ ಪಂದ್ಯಕ್ಕೆ ಧರ್ಮಶಾಲಾದಲ್ಲಿರುವ ಹೆಚ್​ಪಿಸಿ  ಪಿಸಿಎ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಭಾರತ-ಸೌತ್ ಆಫ್ರಿಕಾ ನಡುವಣ ಪಂದ್ಯಗಳು ಎಷ್ಟು ಗಂಟೆಗೆ ಶುರು?

ಈ ಸರಣಿಯ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 7 ಗಂಟೆಗೆ ಶುರುವಾಗಲಿದೆ. ಇನ್ನು ಟಾಸ್ ಪ್ರಕ್ರಿಯೆಯು 6.30 ಕ್ಕೆ ನಡೆಯಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟಿ20 ಸರಣಿಯ ಎಲ್ಲಾ ಪಂದ್ಯಗಳು ಸ್ಟಾರ್ ಸ್ಪೋರ್ಟ್ಸ್​ ಚಾನೆಲ್​ಗಳಲ್ಲಿ ನೇರ ಪ್ರಸಾರ ಇರಲಿದೆ. ಇದರ ಜೊತೆಗೆ ಜಿಯೋ ಹಾಟ್​ ಸ್ಟಾರ್​ ವೆಬ್​ಸೈಟ್ ಹಾಗೂ ಆ್ಯಪ್​ನಲ್ಲಿ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.

ಉಭಯ ತಂಡಗಳು:

ಸೌತ್ ಆಫ್ರಿಕಾ ಟಿ20 ತಂಡ: ಐಡನ್ ಮಾರ್ಕ್ರಾಮ್ (ನಾಯಕ), ಓಟ್ನಿಲ್ ಬಾರ್ಟ್‌ಮನ್, ಕಾರ್ಬಿನ್ ಬಾಷ್, ಡೆವಾಲ್ಡ್ ಬ್ರೆವಿಸ್, ಕ್ವಿಂಟನ್ ಡಿ ಕಾಕ್ (ವಿಕೆಟ್‌ಕೀಪರ್), ಡೊನೊವನ್ ಫೆರೇರಾ, ರೀಝ ಹೆಂಡ್ರಿಕ್ಸ್, ಮಾರ್ಕೋ ಯಾನ್ಸೆನ್, ಕೇಶವ್ ಮಹಾರಾಜ್, ಡೇವಿಡ್ ಮಿಲ್ಲರ್, ಜಾರ್ಜ್ ಲಿಂಡೆ, ಲುಂಗಿ ಎನ್‌ಗಿಡಿ, ಅನ್ರಿಕ್ ನೋಕಿಯ, ಲುಥೋ ಸಿಪಮ್ಲಾ, ಟ್ರಿಸ್ಟನ್ ಸ್ಟಬ್ಸ್.

ಇದನ್ನೂ ಓದಿ: ಕೇವಲ ೧ ರನ್​ನಿಂದ ವಿಶ್ವ ದಾಖಲೆ ತಪ್ಪಿಸಿಕೊಂಡ ಟೀಮ್ ಇಂಡಿಯಾ

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್.

Published On - 12:55 pm, Sat, 13 December 25

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?