AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

South Africa vs India: ಇಂದಿನಿಂದ ಭಾರತ- ದಕ್ಷಿಣ ಆಫ್ರಿಕಾ ಮೂರನೇ ಟೆಸ್ಟ್: ಇತಿಹಾಸ ಸೃಷ್ಟಿಸುವ ಕನಸಲ್ಲಿ ಕೊಹ್ಲಿ ಪಡೆ

IND vs SA 3rd Test: ಅನೇಕ ಕಾರಣಗಳಿಂದಾಗಿ ಭಾರತ- ದಕ್ಷಿಣ ಆಫ್ರಿಕಾ 3ನೇ ಟೆಸ್ಟ್ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದೆ. ಈ ಪಂದ್ಯದಲ್ಲಿ ಗೆದ್ದರೆ ಆಫ್ರಿಕಾದಲ್ಲಿ ಭಾರತಕ್ಕೆ ಮೊದಲ ಸರಣಿ ಜಯ ತಂದುಕೊಟ್ಟ ಶ್ರೇಯಸ್ಸು ಕೊಹ್ಲಿ ಪಡೆಗೆ ಸಿಗಲಿದೆ. ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ.

South Africa vs India: ಇಂದಿನಿಂದ ಭಾರತ- ದಕ್ಷಿಣ ಆಫ್ರಿಕಾ ಮೂರನೇ ಟೆಸ್ಟ್: ಇತಿಹಾಸ ಸೃಷ್ಟಿಸುವ ಕನಸಲ್ಲಿ ಕೊಹ್ಲಿ ಪಡೆ
India vs South Africa 3rd Test
TV9 Web
| Edited By: |

Updated on: Jan 11, 2022 | 7:28 AM

Share

ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವಣ ಅಂತಿಮ ಮೂರನೇ ಟೆಸ್ಟ್ ಪಂದ್ಯ ಇಂದಿನಿಂದ ಕೇಪ್ ಟೌನ್​ನ (Cape Town) ನ್ಯೂಲ್ಯಾಂಡ್ಸ್ ಮೈದಾನದಲ್ಲಿ ಆರಂಭವಾಗಲಿದೆ. ಈಗಾಗಲೇ ಉಭಯ ತಂಡಗಳು ತಲಾ ಒಂದೊಂದು ಪಂದ್ಯ ಗೆದ್ದಿರುವ ಕಾರಣ ಇದು ನಿರ್ಣಾಯಕ ಕದನವಾಗಿರಲಿದೆ. ಸೆಂಚೂರಿಯನ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) 113 ರನ್​ಗಳ ಜಯ ಸಾಧಿಸಿ ಐತಿಹಾಸಿಕ ಸಾಧನೆ ಮಾಡಿದರೆ, ಜೋಹಾನ್ಸ್​ಬರ್ಗ್​​ನಲ್ಲಿ ನಡೆದ ಎರಡನೇ ಟೆಸ್ಟ್​ ಪಂದ್ಯದಲ್ಲಿ ಸೌತ್ ಆಫ್ರಿಕಾ 7 ವಿಕೆಟ್​ಗಳ ಗೆಲುವು ಕಂಡಿತು. ಹೀಗಾಗಿ ಉಭಯ ತಂಡಗಳು ಸರಣಿಯಲ್ಲಿ 1-1 ಅಂತರದ ಸಮಬಲ ಸಾಧಿಸಿದೆ. ಸದ್ಯ ಮೂರನೇ ಟೆಸ್ಟ್​ ಪಂದ್ಯದ ಮೇಲೆ ಸರಣಿ ಗೆಲುವಿನ ಲೆಕ್ಕಾಚಾರ ನಿಂತಿದೆ. ವಿರಾಟ್ ಕೊಹ್ಲಿ (Virat Kohli) ಪಡೆ ಈ ಟೆಸ್ಟ್ ಗೆದ್ದರೆ ಹರಿಣಗಳ ನಾಡಿನಲ್ಲಿ ಇದೇ ಮೊದಲ ಬಾರಿಗೆ ಟೆಸ್ಟ್ ಸರಣಿ ಗೆದ್ದು ಇತಿಹಾಸ ಸೃಷ್ಟಿಸಿದಂತಾಗುತ್ತದೆ.

ಗಾಯಕ್ಕೆ ತುತ್ತಾಗಿದ್ದ ವಿರಾಟ್ ಕೊಹ್ಲಿ ಕಮ್​ಬ್ಯಾಕ್ ಮಾಡಿರುವುದು ಟೀಮ್ ಇಂಡಿಯಾ ಬ್ಯಾಟಿಂಗ್ ಬಲವನ್ನು ಮತ್ತಷ್ಟು ಹೆಚ್ಚಿಸಿದೆ. ನಿನ್ನೆ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೊಹ್ಲಿ, ತಾನು ದಕ್ಷಿಣ ಆಫ್ರಿಕಾ ವಿರುದ್ಧದ ತೃತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದು, ಮೊಹಮ್ಮದ್ ಸಿರಾಜ್ ಅಲಭ್ಯರಾಗಲಿದ್ದಾರೆ ಎಂಬ ವಿಷಯವನ್ನು ತಿಳಿಸಿದರು.

ಇನ್ನು ಕೊಹ್ಲಿ ತೃತೀಯ ಟೆಸ್ಟ್ ಪಂದ್ಯದ ಮೂಲಕ ತಂಡಕ್ಕೆ ಮರಳುತ್ತಿರುವ ಹಿನ್ನೆಲೆಯಲ್ಲಿ ಹನುಮ ವಿಹಾರಿ ಆಡುವ ಬಳಗದಿಂದ ಹೊರಗುಳಿಯಬೇಕಾಗುತ್ತದೆ. ಮೊಹಮ್ಮದ್ ಸಿರಾಜ್ ಬದಲು ಉಮೇಶ್ವ ಯಾದವ್ ಅಥವಾ ಇಶಾಂತ್ ಶರ್ಮಾ ಕಣಕ್ಕಿಳಿಯಲಿದ್ದಾರೆ. ಹಿರಿಯ ಅನುಭವಿ ಬ್ಯಾಟರ್​ಗಳಾದ ಚೇತೇಶ್ವರ್ ಪೂಜಾರ ಮತ್ತು ಅಜಿಂಕ್ಯಾ ರಹಾನೆ ಈ ಪಂದ್ಯದಲ್ಲೂ ಸ್ಥಾನ ಪಡೆಯುವುದು ಖಚಿತ.

ಚೆಂಡು ಬೌನ್ಸ್‌ ಆಗುವ ನ್ಯೂಲ್ಯಾಂಡ್ಸ್ ಪಿಚ್‌ನಲ್ಲಿ ಕಗಿಸೊ ರಬಾಡ, ಲುಂಗಿ ಗಿಡಿ, ಡ್ವಾನೆ ಒಲಿವಿಯರ್‌ ಹಾಗೂ ಮಾರ್ಕೊ ಜ್ಯಾನ್ಸೆನ್ ಅವರ ಎಸೆತಗಳನ್ನು ಎದುರಿಸಲು ಭಾರತದ ಬ್ಯಾಟರ್‌ಗಳು ಯಾವ ತಂತ್ರ ಬಳಸುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ. ಕೆ.ಎಲ್‌.ರಾಹುಲ್ ಮತ್ತು ಮಯಂಕ್‌ ಅಗರವಾಲ್ ತಂಡಕ್ಕೆ ಉತ್ತಮ ಆರಂಭ ಒದಗಿಸುವರೇ ಎಂಬುದು ಕೂಡ ಕೂತೂಹ ಕೆರಳಿಸಿರುವ ಮತ್ತೊಂದು ಪ್ರಶ್ನೆ. ಹೀಗಾಗಿ ಭಾರತ ಬ್ಯಾಟಿಂಗ್​ನಲ್ಲಿ ಎಚ್ಚರಿಕೆಯಿಂದ ಆಡಬೇಕಿದೆ.

ಕೇಪ್‌ ಟೌನ್‌ ನ್ಯೂಲ್ಯಾಂಡ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಭಾರತ ಒಮ್ಮೆಯೂ ಸೋಲಿಸಿಲ್ಲ. ಎರಡು ಪಂದ್ಯಗಳಲ್ಲಿ ಗೆಲುವಿನ ಸನಿಹಕ್ಕೆ ಬಂದಿದ್ದ ಭಾರತ ತಂಡ ಅಂತಿಮವಾಗಿ ಡ್ರಾಗೆ ತೃಪ್ತಿಪಟ್ಟುಕೊಂಡಿತ್ತು ಹಾಗೂ ಇನ್ನುಳಿದ ಮೂರು ಪಂದ್ಯಗಳಲ್ಲಿ ಸೋಲುಂಡಿತ್ತು. ಈ ಅಂಗಣದಲ್ಲಿ ದಕ್ಷಿಣ ಆಫ್ರಿಕಾ ವೇಗಿ ಕಗಿಸೊ ರಬಾಡ 6 ಪಂದ್ಯಗಳಿಂದ 35 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಬಾಡ ವಿರುದ್ದ ಭಾರತ ಎಚ್ಚರಿಕೆಯಿಂದ ಬ್ಯಾಟ್‌ ಮಾಡಬೇಕಾದ ಅಗತ್ಯವಿದೆ. ಆಫ್ರಿಕಾ ನಾಯಕ ಡೀನ್‌ ಎಲ್ಗರ್‌ ಕೂಡ ಭಾರತದ ಬೌಲರ್‌ಗಳಿಗೆ ಸವಾಲಾಗಿದ್ದಾರೆ. ಈ ಅಂಗಣದಲ್ಲಿ ಅವರು ಆಡಿರುವ 10 ಪಂದ್ಯಗಳಿಂದ ಎರಡು ಶತಕ ಹಾಗೂ ಮೂರು ಅರ್ಧಶತಕಗಳೊಂದಿಗೆ ಒಟ್ಟು 708 ರನ್‌ ಗಳಿಸಿದ್ದಾರೆ.

ಒಟ್ಟಾರೆ ಅನೇಕ ಕಾರಣಗಳಿಂದಾಗಿ ಈ ಮೂರನೇ ಟೆಸ್ಟ್ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದೆ. ಈ ಪಂದ್ಯದಲ್ಲಿ ಗೆದ್ದರೆ ದಕ್ಷಿಣ ಆಫ್ರಿಕಾದಲ್ಲಿ ಭಾರತಕ್ಕೆ ಮೊದಲ ಸರಣಿ ಜಯ ತಂದುಕೊಟ್ಟ ಶ್ರೇಯಸ್ಸು ವಿರಾಟ್ ಕೊಹ್ಲಿ ಪಡೆಗೆ ಸಿಗಲಿದೆ. ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ.

India vs South Africa, 3rd Test: ಕಿಂಗ್ ಕೊಹ್ಲಿ ಕಂಬ್ಯಾಕ್, ಸಿರಾಜ್ ಔಟ್: ಯಾರಿಗೆ ಸಿಗಲಿದೆ ಚಾನ್ಸ್​?

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ