AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಕಾರ್ತಿಕ್- ಹಾರ್ದಿಕ್ ಅಬ್ಬರ.. ಅವೇಶ್- ಹರ್ಷಲ್ ಮಾರಕ ದಾಳಿ; ಭಾರತಕ್ಕೆ 82 ರನ್ ಜಯ

India vs South Africa 4th T20 Match Report: ದಿನೇಶ್ ಕಾರ್ತಿಕ್ ಮತ್ತು ಹಾರ್ದಿಕ್ ಪಾಂಡ್ಯ ಅವರ ಅದ್ಭುತ ಬ್ಯಾಟಿಂಗ್‌, ಹಾಗೂ ಬೌಲರ್‌ಗಳ ಬಲದಿಂದ ಭಾರತವು ನಾಲ್ಕನೇ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 82 ರನ್‌ಗಳಿಂದ ಸೋಲಿಸಿತು.

IND vs SA: ಕಾರ್ತಿಕ್- ಹಾರ್ದಿಕ್ ಅಬ್ಬರ.. ಅವೇಶ್- ಹರ್ಷಲ್ ಮಾರಕ ದಾಳಿ; ಭಾರತಕ್ಕೆ 82 ರನ್ ಜಯ
ಅಜಯ್ ಜಡೇಜಾ, ನೀವು ಆಕ್ರಮಣಕಾರಿ ಕ್ರಿಕೆಟ್ ಆಡಲು ಬಯಸಿದರೆ ನಿಮ್ಮ ಆಲೋಚನೆಯೂ ವಿಭಿನ್ನವಾಗಿರಬೇಕು. ಆದರೆ ನಾನು ದಿನೇಶ್ ಕಾರ್ತಿಕ್ ಅವರನ್ನು ತಂಡದಲ್ಲಿ ನೋಡಲು ಬಯಸುವುದಿಲ್ಲ. ಬದಲಿಗೆ ಅವರು ನನ್ನ ಪಕ್ಕದ ಕಾಮೆಂಟರಿ ಸೀಟಿನಲ್ಲಿ ಕುಳಿತು ಕಾಮೆಂಟರಿ ಮಾಡುವುದೇ ಸೂಕ್ತ. ಏಕೆಂದರೆ ದಿನೇಶ್ ಉತ್ತಮ ಕಾಮೆಂಟೇಟರ್ ಎಂದು ಹೇಳಿಕೊಂಡಿದ್ದಾರೆ.
TV9 Web
| Updated By: ಪೃಥ್ವಿಶಂಕರ|

Updated on:Jun 17, 2022 | 10:33 PM

Share

ದಿನೇಶ್ ಕಾರ್ತಿಕ್ ಮತ್ತು ಹಾರ್ದಿಕ್ ಪಾಂಡ್ಯ ಅವರ ಅದ್ಭುತ ಬ್ಯಾಟಿಂಗ್‌, ಹಾಗೂ ಬೌಲರ್‌ಗಳ ಬಲದಿಂದ ಭಾರತವು ನಾಲ್ಕನೇ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 82 ರನ್‌ಗಳಿಂದ ಸೋಲಿಸಿತು. ಇದರೊಂದಿಗೆ 5 ಪಂದ್ಯಗಳ ಸರಣಿಯಲ್ಲಿ ಭಾರತ 2-2ರಲ್ಲಿ ಸಮಬಲ ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ರಿಷಬ್ ಪಂತ್ ನೇತೃತ್ವದ ಟೀಂ ಇಂಡಿಯಾ ನಿಗದಿತ ಓವರ್‌ನಲ್ಲಿ 6 ವಿಕೆಟ್‌ಗೆ 169 ರನ್ ಗಳಿಸಿತು. ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ ತಂಡ 87 ರನ್‌ಗಳಿಗೆ ಕುಸಿಯಿತು. 170 ರನ್​ಗಳ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡ ಭಾರತದ ಬೌಲರ್​ಗಳ ಎದುರು ನಿಲ್ಲಲು ಸಾಧ್ಯವಾಗಲಿಲ್ಲ. ಅವೇಶ್ ಖಾನ್ ದಕ್ಷಿಣ ಆಫ್ರಿಕಾ ತಂಡದ ಬ್ಯಾಟರ್​ಗಳಿಗೆ ಸಿಂಹಸ್ವಪ್ನರಾದರು.

ತೆಂಬಾ ಬವುಮಾ ಗಾಯ

ಕ್ವಿಂಟನ್ ಡಿ ಕಾಕ್ ಮತ್ತು ನಾಯಕ ಟೆಂಬಾ ಬವುಮಾ ತಂಡಕ್ಕೆ ಉತ್ತಮ ಆರಂಭವನ್ನು ನೀಡಲು ಪ್ರಯತ್ನಿಸಿದರು. ಆದರೆ ಬವುಮಾ 20 ರನ್ ಗಳಿಸಿ ಗಾಯಗೊಂಡು ನಿವೃತ್ತರಾದರು. ಬವುಮಾ ನಿರ್ಗಮನದ ನಂತರ, ದಕ್ಷಿಣ ಆಫ್ರಿಕಾ ತಂಡವು ತತ್ತರಿಸಿತು. ಕ್ವಿಂಟನ್ ಡಿ ಕಾಕ್ ಮತ್ತು ಡ್ವೇನ್ ಪ್ರಿಟೋರಿಯಸ್ ರೂಪದಲ್ಲಿ ತಂಡ 26 ರನ್​ಗಳಿಗೆ 2 ವಿಕೆಟ್ ಕಳೆದುಕೊಂಡಿತು. ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ರಾಸಿ ವ್ಯಾನ್ ಡಸ್ಸೆನ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಎನ್ರಿಕ್ ನೋಕಿಯಾ ಕೂಡ ಒಬ್ಬರ ಹಿಂದೆ ಒಬ್ಬರಂತೆ ಪೆವಿಲಿಯನ್​ಗೆ ಮರಳಿದರು. ದುಸೇನ್ ಮಾತ್ರ ಗರಿಷ್ಠ 20 ರನ್ ಗಳಿಸಿದರು.

ಕಾರ್ತಿಕ್ ಮತ್ತು ಪಾಂಡ್ಯ ಅಬ್ಬರದ ಇನ್ನಿಂಗ್ಸ್

ಇದಕ್ಕೂ ಮೊದಲು ಭಾರತ ಅತ್ಯಂತ ಕಳಪೆ ಆರಂಭವನ್ನು ಹೊಂದಿತ್ತು. ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ ಮತ್ತು ನಾಯಕ ಪಂತ್ ಅವರ ರೂಪದಲ್ಲಿ ಭಾರತ 81 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡಿತು. ಇದಾದ ಬಳಿಕ ಪಾಂಡ್ಯ ಮತ್ತು ಕಾರ್ತಿಕ್ ಅದ್ಭುತ ಜೊತೆಯಾಟ ನಡೆಸಿದರು. ಇವರಿಬ್ಬರ ನಡುವೆ 33 ಎಸೆತಗಳಲ್ಲಿ 65 ರನ್‌ಗಳ ಜೊತೆಯಾಟವಿತ್ತು. ಪಾಂಡ್ಯ ಮತ್ತು ಕಾರ್ತಿಕ್ ಆಧಾರದ ಮೇಲೆ ಭಾರತದ ಸ್ಕೋರ್ 81 ರಿಂದ 146 ಕ್ಕೆ ತಲುಪಿತು. ಪಾಂಡ್ಯ ರೂಪದಲ್ಲಿ ಟೀಂ ಇಂಡಿಯಾಕ್ಕೆ ಐದನೇ ಹೊಡೆತ ಬಿದ್ದಿತು. ಪಾಂಡ್ಯ ತಮ್ಮ ಮೊದಲ T20 ಅರ್ಧಶತಕವನ್ನು ಕೇವಲ 4 ರನ್‌ಗಳಿಂದ ಕಳೆದುಕೊಂಡರು. ಅವರು 31 ರನ್‌ಗಳಿಗೆ 46 ರನ್‌ಗಳ ಇನಿಂಗ್ಸ್‌ ಆಡಿದರು. ಇದರಲ್ಲಿ 3 ಬೌಂಡರಿ ಮತ್ತು 3 ಸಿಕ್ಸರ್‌ಗಳು ಸೇರಿವೆ. ಕಾರ್ತಿಕ್ ಕೂಡ ಕೊನೆಯ ಓವರ್‌ನ ಎರಡನೇ ಎಸೆತದಲ್ಲಿ 55 ರನ್ ಗಳಿಸಿ ಔಟಾದರು. ಅವರು 27 ಎಸೆತಗಳಲ್ಲಿ 9 ಬೌಂಡರಿ ಹಾಗೂ 2 ಸಿಕ್ಸರ್‌ಗಳ ನೆರವಿನಿಂದ 55 ರನ್ ಗಳಿಸಿದರು.

Published On - 10:32 pm, Fri, 17 June 22

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್