AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಪಂತ್​ಗೆ ಬೌಲರ್​ಗಳನ್ನು ಹೇಗೆ ಬಳಸಿಕೊಳ್ಳಬೇಕು ಎಂಬುದು ಗೊತ್ತಿಲ್ಲ; ಐಪಿಎಲ್ ಚಾಂಪಿಯನ್ ಕೋಚ್

IND vs SA: ಪಂತ್ ಅವರ ನಾಯಕತ್ವವನ್ನು ಪ್ರಶ್ನಿಸಿರುವ ಭಾರತದ ಮಾಜಿ ಬೌಲರ್ ಆಶಿಶ್ ನೆಹ್ರಾ ಅವರು ಯುಜ್ವೇಂದ್ರ ಚಹಾಲ್ ಅವರಿಂದ ಕೇವಲ 2.1 ಓವರ್ ಪಡೆಯುವ ಪಂತ್ ಅವರ ತಂತ್ರದಿಂದ ನನಗೆ ಆಶ್ಚರ್ಯವಾಗಿದೆ ಎಂದು ಹೇಳಿದ್ದಾರೆ

IND vs SA: ಪಂತ್​ಗೆ ಬೌಲರ್​ಗಳನ್ನು ಹೇಗೆ ಬಳಸಿಕೊಳ್ಳಬೇಕು ಎಂಬುದು ಗೊತ್ತಿಲ್ಲ; ಐಪಿಎಲ್ ಚಾಂಪಿಯನ್ ಕೋಚ್
ಪಂತ್
TV9 Web
| Edited By: |

Updated on: Jun 10, 2022 | 8:25 PM

Share

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಸೋಲನುಭವಿಸಬೇಕಾಯಿತು. ರಿಷಭ್ ಪಂತ್ (Rishabh Pant) ನೇತೃತ್ವದ ಭಾರತ ತಂಡ ಸರಣಿಯ ಮೊದಲ ಪಂದ್ಯದಲ್ಲಿ 7 ವಿಕೆಟ್‌ಗಳಿಂದ ಸೋಲನುಭವಿಸಿತ್ತು. ಈ ಸೋಲಿನ ನಂತರ ಪಂತ್ ನಾಯಕತ್ವದ ಬಗ್ಗೆ ಪ್ರಶ್ನೆಗಳು ಎದ್ದಿವೆ. ಪಂತ್ ಅವರ ನಾಯಕತ್ವವನ್ನು ಪ್ರಶ್ನಿಸಿರುವ ಭಾರತದ ಮಾಜಿ ಬೌಲರ್ ಆಶಿಶ್ ನೆಹ್ರಾ (Ashish Nehra) ಅವರು ಯುಜ್ವೇಂದ್ರ ಚಹಾಲ್ (Yuzvendra Chahal) ಅವರಿಂದ ಕೇವಲ 2.1 ಓವರ್ ಪಡೆಯುವ ಪಂತ್ ಅವರ ತಂತ್ರದಿಂದ ನನಗೆ ಆಶ್ಚರ್ಯವಾಗಿದೆ ಎಂದು ಹೇಳಿದ್ದಾರೆ. IPL 2022 ಪರ್ಪಲ್ ಕ್ಯಾಪ್ ವಿಜೇತ ಚಹಾಲ್ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ T20 ಪಂದ್ಯದಲ್ಲಿ ಕೇವಲ 13 ಎಸೆತಗಳನ್ನು ಬೌಲ್ ಮಾಡಿದರು, 26 ರನ್ಗಳನ್ನು ನೀಡಿದರು. ಐಪಿಎಲ್ 2022 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನಾಯಕತ್ವದಲ್ಲಿ, ಪಂತ್ ಕುಲದೀಪ್ ಯಾದವ್ ಅವರಿಂದ ಪೂರ್ಣ ಓವರ್‌ಗಳನ್ನು ಹಲವು ಬಾರಿ ಹಾಕಿಸಲಿಲ್ಲ. ಕುಲದೀಪ್ ಐಪಿಎಲ್ 2022 ರಲ್ಲಿ ದೆಹಲಿ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದರು. ರಾಸಿ ವ್ಯಾನ್ ಡೆರ್ ದುಸೇನ್ ಮತ್ತು ಡೇವಿಡ್ ಮಿಲ್ಲರ್ ಜೋಡಿಯನ್ನು ಮುರಿಯಲು ಚಹಾಲ್ ಬೌಲಿಂಗ್ ಮಾಡಬೇಕಿತ್ತು ಎಂದು ನೆಹ್ರಾ ಹೇಳಿದ್ದಾರೆ.

ರಕ್ಷಣಾತ್ಮಕ ಬೌಲಿಂಗ್ ಕೆಲಸ ಮಾಡುವುದಿಲ್ಲ

ಮೊದಲ ಪಂದ್ಯದಲ್ಲಿ ಕಳಪೆ ಬೌಲಿಂಗ್ ಜತೆಗೆ ಭಾರತದ ಫೀಲ್ಡಿಂಗ್ ಕೂಡ ತೀರಾ ಕಳಪೆಯಾಗಿತ್ತು. ಭಾರತ ಹಲವು ಪ್ರಮುಖ ಕ್ಯಾಚ್‌ಗಳನ್ನು ಕೈಬಿಟ್ಟಿತು. ಕ್ರಿಕ್‌ಬಜ್‌ನೊಂದಿಗೆ ಮಾತನಾಡಿದ ನೆಹ್ರಾ, ಪಂತ್ ಯುವ ನಾಯಕ, ಅವರು ಈಗ ಕಲಿಯುತ್ತಿದ್ದಾನೆ ಮತ್ತು ಅದನ್ನು ಆಶಾದಾಯಕವಾಗಿ ಉತ್ತಮವಾಗಿ ಮಾಡುತ್ತಾನೆ. ಆದರೆ ಚಹಾಲ್ ಕೇವಲ 2.1 ಓವರ್ ಬೌಲ್ ಮಾಡಿದರು. ಕೆಲವೊಮ್ಮೆ ತಂಡಗಳು ಎಡಗೈ ಬ್ಯಾಟರ್​ಗಳು ಬ್ಯಾಟಿಂಗ್‌ ಮಾಡುವಾಗ ಲೆಗ್ ಸ್ಪಿನ್ನರ್‌ಗಳ ಕೈಲಿ ಬೌಲಿಂಗ್ ಹಾಕಿಸುವುದಿಲ್ಲ. ಮಧ್ಯಮ ಓವರ್‌ಗಳಲ್ಲಿ ವಿಕೆಟ್ ಪಡೆಯುವ ಆಯ್ಕೆಯನ್ನು ಹೊಂದಿರುವುದು ಮುಖ್ಯ. ಆದರೆ ನೀವು ಒಬ್ಬ ಶ್ರೇಷ್ಠ ಬ್ಯಾಟ್ಸ್‌ಮನ್ ಆರ್ಭಟ ನಿಲ್ಲಿಸಬೇಕಾದರೆ, ನೀವು ಅವರ ವಿಕೆಟನ್ನು ಬೇಗ ತೆಗೆದುಕೊಳ್ಳಬೇಕು. ರಕ್ಷಣಾತ್ಮಕ ಬೌಲಿಂಗ್ ಕೆಲಸ ಮಾಡುವುದಿಲ್ಲ ಎಂದು ನೆಹ್ರಾ ಹೇಳಿದರು.

ಇದನ್ನೂ ಓದಿ
Image
IND vs SA: ಆಗ ಕೊಹ್ಲಿ.. ಈಗ ಪಂತ್; ಸೋಲಿನಲ್ಲಿ ಕಾಕತಾಳೀಯ ಇರಬೇಕು.. ಆದರೆ ಇಷ್ಟೊಂದಾ?
Image
IPL Media Rights: ಮುಖೇಶ್ ಅಂಬಾನಿ ಬಾಯಿಗೆ ಬಿತ್ತು ಲಡ್ಡು! ಮಾಧ್ಯಮ ಹಕ್ಕು ಹರಾಜಿನಿಂದ ಅಮೆಜಾನ್ ಔಟ್?
Image
IND vs SA: ತವರಿನಲ್ಲೇ ಟೀಂ ಇಂಡಿಯಾವನ್ನು ಮಣಿಸಿ ವಿಭಿನ್ನ ದಾಖಲೆ ಬರೆದ ಆಫ್ರಿಕನ್ನರು..!

ಸುಲಭವಾಗಿ ಗುರಿ ಮುಟ್ಟಿದ ದಕ್ಷಿಣ ಆಫ್ರಿಕಾ

ಪಂದ್ಯದ ಕುರಿತು ಮಾತನಾಡುವುದಾದರೆ, ಮೊದಲು ಬ್ಯಾಟಿಂಗ್ ಮಾಡಿದ ಭಾರತವು ದಕ್ಷಿಣ ಆಫ್ರಿಕಾಕ್ಕೆ 212 ರನ್‌ಗಳ ಗುರಿಯನ್ನು ನೀಡಿತು. ಉತ್ತರವಾಗಿ ದಕ್ಷಿಣ ಆಫ್ರಿಕಾ 5 ಎಸೆತಗಳ ಮೊದಲು ಗುರಿಯನ್ನು ಸಾಧಿಸಿ 7 ವಿಕೆಟ್‌ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಮಿಲ್ಲರ್ ಮತ್ತು ದುಸೇನ್ ಶತಕದ ಜೊತೆಯಾಟ ನೀಡುವ ಮೂಲಕ ದಕ್ಷಿಣ ಆಫ್ರಿಕಾದ ಅದ್ಭುತ ಗೆಲುವಿಗೆ ದೊಡ್ಡ ಕೊಡುಗೆ ನೀಡಿದರು. ಇಶಾನ್ ಕಿಶನ್ ಭಾರತದ ಪರ ಗರಿಷ್ಠ 76 ರನ್ ಗಳಿಸಿದರು. ಅದೇ ಸಮಯದಲ್ಲಿ ನಾಯಕ ಪಂತ್ 29 ರನ್‌ಗಳ ಇನಿಂಗ್ಸ್ ಆಡಿದರು. ಹಾರ್ದಿಕ್ ಪಾಂಡ್ಯ 12 ಎಸೆತಗಳಲ್ಲಿ 31 ರನ್ ಗಳಿಸಿದರು. ಆದಾಗ್ಯೂ, ದುಸೇನ್ ಮತ್ತು ಮಿಲ್ಲರ್ ಅವರ ಇನ್ನಿಂಗ್ಸ್ ಅವರ ಇನ್ನಿಂಗ್ಸ್ ಅನ್ನು ಮರೆಮಾಡಿತು. ಆದರೆ ಈ ಮ್ಯಾಚ್​ನಲ್ಲಿ ಕೇವಲ 2 ಓವರ್ ಬೌಲ್ ಮಾಡಿದ ಚಹಲ್ ಐಪಿಎಲ್ 2022 ರಲ್ಲಿ 17 ಪಂದ್ಯಗಳಲ್ಲಿ 27 ವಿಕೆಟ್ ಪಡೆದಿದ್ದಾರೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ