AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಷಲ್ ಪಟೇಲ್​ಗಿಂತ ಕಡಿಮೆ ವಿಕೆಟ್ ಪಡೆದರೂ ಭುವಿಗೆ ಸರಣಿ ಶ್ರೇಷ್ಠ ಪ್ರಶಸ್ತಿ: ಕಾರಣವೇನು?

India vs south africa: ಭುವಿ 4 ಪಂದ್ಯಗಳಿಂದ ಒಟ್ಟು 6 ವಿಕೆಟ್ ಕಬಳಿಸಿ ಮಿಂಚಿದ್ದರು. ವಿಶೇಷ ಎಂದರೆ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಪಟ್ಟಿಯಲ್ಲಿ ಹರ್ಷಲ್ ಪಟೇಲ್ ಮುಂಚೂಣಿಯಲ್ಲಿದ್ದರು.

ಹರ್ಷಲ್ ಪಟೇಲ್​ಗಿಂತ ಕಡಿಮೆ ವಿಕೆಟ್ ಪಡೆದರೂ ಭುವಿಗೆ ಸರಣಿ ಶ್ರೇಷ್ಠ ಪ್ರಶಸ್ತಿ: ಕಾರಣವೇನು?
bhuvneshwar kumar-harshal patel
TV9 Web
| Edited By: |

Updated on: Jun 20, 2022 | 1:54 PM

Share

ಭಾರತ-ಸೌತ್ ಆಫ್ರಿಕಾ (IND vs SA) ನಡುವಣ 5 ಪಂದ್ಯಗಳ ಸರಣಿಯು 2-2 ಅಂತರದ ಸಮಬಲದೊಂದಿಗೆ ಅಂತ್ಯವಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ನಿರ್ಣಾಯಕ ಪಂದ್ಯವು ಮಳೆಗೆ ಅಹುತಿಯಾದ ಕಾರಣ ಉಭಯ ತಂಡಗಳನ್ನು ಜಂಟಿ ವಿಜೇತರೆಂದು ಘೋಷಿಸಲಾಯಿತು. ಇನ್ನು ಈ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಭುವನೇಶ್ವರ್​ ಕುಮಾರ್​ಗೆ (Bhuvneshwar kumar) ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ನೀಡಲಾಯಿತು. ಭುವಿ 4 ಪಂದ್ಯಗಳಿಂದ ಒಟ್ಟು 6 ವಿಕೆಟ್ ಕಬಳಿಸಿ ಮಿಂಚಿದ್ದರು. ವಿಶೇಷ ಎಂದರೆ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಪಟ್ಟಿಯಲ್ಲಿ ಹರ್ಷಲ್ ಪಟೇಲ್ (Harshal Patel) ಮುಂಚೂಣಿಯಲ್ಲಿದ್ದರು. ಭುವನೇಶ್ವರ್ ಕುಮಾರ್ 6 ವಿಕೆಟ್ ಪಡೆದಿದ್ದರೆ, ಹರ್ಷಲ್ ಪಟೇಲ್ 7 ವಿಕೆಟ್ ಕಬಳಿಸಿದ್ದರು. ಇದಾಗ್ಯೂ ಭುವನೇಶ್ವರ್ ಕುಮಾರ್​ಗೆ ಸರಣಿ ಶ್ರೇಷ್ಠ ಪ್ರಶಸ್ತಿ ನೀಡಿದ್ದು ಹೊಸ ಚರ್ಚೆಗೆ ಕಾರಣವಾಗಿತ್ತು. ಇದಾಗ್ಯೂ ಭುವಿಯನ್ನು ಮ್ಯಾನ್ ಆಫ್ ದಿ ಸಿರೀಸ್​ಗೆ ಆಯ್ಕೆ ಮಾಡಲು ಕಾರಣವೇನು ಎಂದು ನೋಡುವುದಾದರೆ…

ಈ ಸರಣಿಯಲ್ಲಿ ಹರ್ಷಲ್ ಪಟೇಲ್ 4 ಪಂದ್ಯಗಳಲ್ಲಿ ಒಟ್ಟು 88 ರನ್ ನೀಡಿ 7 ವಿಕೆಟ್ ಪಡೆದಿದ್ದರು. ಅಲ್ಲದೆ ಇನ್ನಿಂಗ್ಸ್‌ವೊಂದರಲ್ಲಿ 25 ರನ್‌ಗಳಿಗೆ 4 ವಿಕೆಟ್ ಪಡೆದು ಮಿಂಚಿದ್ದರು. ಇದೇ ವೇಳೆ ಭುವನೇಶ್ವರ್ ಕುಮಾರ್​ 4 ಪಂದ್ಯಗಳಲ್ಲಿ 85 ರನ್ ನೀಡಿ 6 ವಿಕೆಟ್ ಕಬಳಿಸಿ ಮಿಂಚಿದ್ದರು. ಇನ್ನು ಪಂದ್ಯವೊಂದರಲ್ಲಿ 13 ರನ್‌ಗಳಿಗೆ 4 ವಿಕೆಟ್ ಉರುಳಿಸಿದ್ದರು. ಇಲ್ಲಿ ವಿಕೆಟ್ ಪಡೆಯುವ ವಿಷಯದಲ್ಲಿ ಹರ್ಷಲ್ ಭುವಿಗಿಂತ ಮುಂದಿರಬಹುದು. ಆದರೆ ಎಕಾನಮಿ ವಿಷಯದಲ್ಲಿ ಭುವನೇಶ್ವರ್ ಕುಮಾರ್ ಮುಂದಿದ್ದಾರೆ.

ಹರ್ಷಲ್ ಅವರು 7.23 ಎಕಾನಮಿಯಲ್ಲಿ ರನ್​ ನೀಡಿದ್ದರೆ, ಭುವನೇಶ್ವರ್ ಕುಮಾರ್ 6.07 ಸರಾಸರಿಯಲ್ಲಿ ರನ್ ಬಿಟ್ಟುಕೊಟ್ಟಿದ್ದರು. ಇನ್ನು ಯುಜ್ವೇಂದ್ರ ಚಹಾಲ್ ಕೂಡ ಭುವನೇಶ್ವರ್ ಕುಮಾರ್ ಅವರಂತೆಯೇ 4 ಇನ್ನಿಂಗ್ಸ್‌ಗಳಲ್ಲಿ 6 ವಿಕೆಟ್‌ಗಳನ್ನು ಪಡೆದಿದ್ದರು. ಆದರೆ ಅವರು 8.18 ಸರಾಸರಿಯಂತೆ ಪ್ರತಿ ಓವರ್​ಗೆ ರನ್ ಬಿಟ್ಟುಕೊಟ್ಟಿದ್ದರು. ಹೀಗಾಗಿಯೇ ಇಡೀ ಟೂರ್ನಿಯಲ್ಲಿ ಕಡಿಮೆ ರನ್​ ಬಿಟ್ಟುಕೊಟ್ಟಿದ್ದ ಭುವನೇಶ್ವರ್​ ಕುಮಾರ್ ಅವರನ್ನು ಸರಣಿ ಶ್ರೇಷ್ಠ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ
Image
On This Day: ಏಕದಿನ ವಿಶ್ವಕಪ್​: ಕೇವಲ 45 ರನ್​ಗೆ ಆಲೌಟ್..!
Image
Heinrich Klaasen: ಬಡವರ ಧೋನಿ, RCB ಆಟಗಾರ…ಯಾರು ಈ ಹೆನ್ರಿಕ್ ಕ್ಲಾಸೆನ್..?
Image
Hardik Pandya: ದಿನೇಶ್ ಕಾರ್ತಿಕ್ ವಿರುದ್ದ ಸೇಡು ತೀರಿಸಿಕೊಂಡ್ರಾ ಹಾರ್ದಿಕ್ ಪಾಂಡ್ಯ?
Image
Dinesh Karthik: ಟೀಮ್ ಇಂಡಿಯಾ ಪರ ಯಾರೂ ಮಾಡದ ದಾಖಲೆ ಬರೆದ ದಿನೇಶ್ ಕಾರ್ತಿಕ್

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ