India vs South Africa 1st Test: ದಕ್ಷಿಣ ಆಫ್ರಿಕಾ ವಿರುದ್ದ ಭಾರತಕ್ಕೆ ಭರ್ಜರಿ ಜಯ

ಮೊದಲ ಟೆಸ್ಟ್​ನಲ್ಲಿ ಕೆಎಲ್ ರಾಹುಲ್ ಒಟ್ಟು 146 ರನ್​ ಬಾರಿಸುವ ಮೂಲಕ ಬ್ಯಾಟಿಂಗ್​ನಲ್ಲಿ ಮಿಂಚಿದರೆ, ಮೊಹಮ್ಮದ್ ಶಮಿ 8 ವಿಕೆಟ್ ಉರುಳಿಸಿ ಗೆಲುವಿನ ರೂವಾರಿ ಎನಿಸಿಕೊಂಡರು.

India vs South Africa 1st Test: ದಕ್ಷಿಣ ಆಫ್ರಿಕಾ ವಿರುದ್ದ ಭಾರತಕ್ಕೆ ಭರ್ಜರಿ ಜಯ
India vs South Africa
Follow us
| Updated By: ಝಾಹಿರ್ ಯೂಸುಫ್

Updated on:Dec 30, 2021 | 4:48 PM

ದಕ್ಷಿಣ ಆಫ್ರಿಕಾ ವಿರುದ್ದ (India vs South Africa 1st Test) ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 113 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಕೊನೆಯ ದಿನದಾಟದಲ್ಲಿ 211 ರನ್​ಗಳ ಗುರಿ ಪಡೆದಿದ್ದ ದಕ್ಷಿಣ ಆಫ್ರಿಕಾ ತಂಡವನ್ನು ಟೀಮ್ ಇಂಡಿಯಾ 2ನೇ ಇನಿಂಗ್ಸ್​ನಲ್ಲಿ 191 ರನ್​ಗಳಿಗೆ ಆಲೌಟ್ ಮಾಡಿತು. ಈ ಮೂಲಕ 3 ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 1-0 ಮುನ್ನಡೆ ಸಾಧಿಸಿದೆ. ಸೆಂಚುರಿಯನ್​ನ ಸ್ಪೋರ್ಟ್​ಪಾರ್ಕ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ ಕೆಎಲ್ ರಾಹುಲ್ (123) ಅವರ ಭರ್ಜರಿ ಶತಕದ ನೆರವಿನಿಂದ ಭಾರತ 327 ರನ್​ಗಳಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡವು ಮೊಹಮ್ಮದ್ ಶಮಿ ಅವರ ಮಾರಕ ದಾಳಿಗೆ ತತ್ತರಿಸಿತು. ಅದರಂತೆ 5 ವಿಕೆಟ್ ಉರುಳಿಸಿದ ಶಮಿ ಸೌತ್ ಆಫ್ರಿಕಾ ತಂಡವನ್ನು ಕೇವಲ 197 ರನ್​ಗಳಿಗೆ ನಿಯಂತ್ರಿಸಿದರು.

ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ 174 ರನ್​ಗಳಿಗೆ ಆಲೌಟ್ ಆಯಿತು. ಅದರಂತೆ ಮೊದಲ ಇನಿಂಗ್ಸ್​ ಮುನ್ನಡೆಯೊಂದಿಗೆ ದಕ್ಷಿಣ ಆಫ್ರಿಕಾಗೆ 2ನೇ ಇನಿಂಗ್ಸ್​ನಲ್ಲಿ 305 ರನ್​ಗಳ ಟಾರ್ಗೆಟ್ ನೀಡಿತು.  ಕೊನೆಯ ದಿನದಾಟದ ವೇಳೆ ದಕ್ಷಿಣ ಆಫ್ರಿಕಾ ತಂಡವು 211 ರನ್​ಗಳ ಗುರಿ ಪಡೆದಿತ್ತು. ಆದರೆ ಅಂತಿಮ ದಿನದಾಟದಲ್ಲಿ ದಕ್ಷಿಣ ಆಫ್ರಿಕಾ ತಂಡದ 6 ವಿಕೆಟ್ ಉರುಳಿಸಿದ ಟೀಮ್ ಇಂಡಿಯಾ ಬೌಲರ್​ಗಳು ಭಾರತ ತಂಡಕ್ಕೆ 113 ರನ್​ಗಳ ಐತಿಹಾಸಿಕ ಗೆಲುವು ತಂದುಕೊಟ್ಟರು.

ಟೀಮ್ ಇಂಡಿಯಾ ಪರ ಜಸ್​ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಶಮಿ ತಲಾ 3 ವಿಕೆಟ್ ಪಡೆದರು. ಹಾಗೆಯೇ ಮೊಹಮ್ಮದ್ ಸಿರಾಜ್ ಹಾಗೂ ಅಶ್ವಿನ್ ತಲಾ 2 ವಿಕೆಟ್ ಕಬಳಿಸಿದರು.ಇನ್ನು ಮೊದಲ ಟೆಸ್ಟ್​ನಲ್ಲಿ ಕೆಎಲ್ ರಾಹುಲ್ ಒಟ್ಟು 146 ರನ್​ ಬಾರಿಸುವ ಮೂಲಕ ಬ್ಯಾಟಿಂಗ್​ನಲ್ಲಿ ಮಿಂಚಿದರೆ, ಮೊಹಮ್ಮದ್ ಶಮಿ 8 ವಿಕೆಟ್ ಉರುಳಿಸಿ ಗೆಲುವಿನ ರೂವಾರಿ ಎನಿಸಿಕೊಂಡರು.

ಸೆಂಚುರಿಯನ್ ಮೈದಾನದಲ್ಲಿ ಟೀಮ್​ ಇಂಡಿಯಾಗೆ ಇದು ಚೊಚ್ಚಲ ಗೆಲುವು. ಈ ಮೈದಾನದಲ್ಲಿ ಈ ಹಿಂದೆ ಎರಡು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲನ್ನು ಎದುರಿಸಬೇಕಾಗಿ ಬಂದಿತ್ತು. ಆದರೆ ಈ ಬಾರಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಅಷ್ಟೇ ಅಲ್ಲದೆ ಸೆಂಚುರಿಯನ್‌ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿದ ಏಷ್ಯಾದ ಮೊದಲ ತಂಡ ಎಂಬ ದಾಖಲೆಯನ್ನು ಕೂಡ ಭಾರತ ತಂಡ ಬರೆದಿದೆ.

ಇದುವರೆಗೆ ಭಾರತ, ಪಾಕಿಸ್ತಾನ, ಶ್ರೀಲಂಕಾ ತಂಡಗಳು ದಕ್ಷಿಣ ಆಫ್ರಿಕಾ ವಿರುದ್ದ ಸೆಂಚುರಿಯನ್‌ನಲ್ಲಿ ಆಡಿದೆ. ಆದರೆ ಭಾರತ ಹೊರತುಪಡಿಸಿ ಯಾವುದೇ ಏಷ್ಯಾದ ತಂಡ ಸೆಂಚುರಿಯನ್​ನಲ್ಲಿ ಗೆದ್ದಿಲ್ಲ. ಇದೀಗ ದಕ್ಷಿಣ ಆಫ್ರಿಕಾವನ್ನು ಬಗ್ಗು ಬಡಿಯುವ ಮೂಲಕ ಸೆಂಚುರಿಯನ್​ನಲ್ಲಿ ಗೆಲುವು ದಾಖಲಿಸಿದ ಏಷ್ಯಾದ ಮೊದಲ ನಾಯಕ ಎಂಬ ಹೆಗ್ಗಳಿಕೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಇನ್ನು ಎರಡು ಇನಿಂಗ್ಸ್​ ಸೇರಿ 146 ರನ್​ಗಳನ್ನು ಬಾರಿಸಿದ್ದ ಕೆಎಲ್ ರಾಹುಲ್ ಅವರು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

ಇದನ್ನೂ ಓದಿ:  ಭಾರತವನ್ನು ಗೇಲಿ ಮಾಡಿದ ಇಂಗ್ಲೆಂಡ್ ಕ್ರಿಕೆಟಿಗನ ಕಾಲೆಳೆದ ಆಸ್ಟ್ರೇಲಿಯಾ ಪತ್ರಕರ್ತೆ..!

ಇದನ್ನೂ ಓದಿ: IPL 2022: RCB ಮನೀಷ್ ಪಾಂಡೆಯನ್ನು ಯಾಕೆ ಖರೀದಿಸಬೇಕು ಅಂದರೆ…

ಇದನ್ನೂ ಓದಿ: IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

Published On - 4:23 pm, Thu, 30 December 21

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ