AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಏಕದಿನ ಸರಣಿ ಆರಂಭಕ್ಕೂ ಮುನ್ನ ದ್ರಾವಿಡ್​ಗೆ ಅಗ್ನಿಪರೀಕ್ಷೆ! ಈ 3 ಸವಾಲುಗಳೇ ರಾಹುಲ್​ಗೆ ತಲೆನೋವಾಗಿವೆ?

IND vs SA: ಏಕದಿನ ಸರಣಿಗಾಗಿ ಟೀಂ ಇಂಡಿಯಾ ಯುವ ಆಟಗಾರರು ಹಾಗೂ ಅನುಭವಿ ಆಟಗಾರರನ್ನು ತಂಡದಲ್ಲಿ ಸೇರಿಸಿಕೊಂಡಿದ್ದು, ಇಲ್ಲಿಂದ ರಾಹುಲ್ ದ್ರಾವಿಡ್ ಸಮಸ್ಯೆ ಶುರುವಾಗಿದೆ.

IND vs SA: ಏಕದಿನ ಸರಣಿ ಆರಂಭಕ್ಕೂ ಮುನ್ನ ದ್ರಾವಿಡ್​ಗೆ ಅಗ್ನಿಪರೀಕ್ಷೆ! ಈ 3 ಸವಾಲುಗಳೇ ರಾಹುಲ್​ಗೆ ತಲೆನೋವಾಗಿವೆ?
ಕೋಚ್ ದ್ರಾವಿಡ್
TV9 Web
| Edited By: |

Updated on:Jan 17, 2022 | 8:25 PM

Share

ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಸೋತಿರುವ ಟೀಂ ಇಂಡಿಯಾದ ಗುರಿ ಇದೀಗ ಏಕದಿನ ಸರಣಿಯನ್ನು ಹೇಗಾದರೂ ಗೆಲ್ಲುವುದು. ಜನವರಿ 19 ರಿಂದ ಪಾರ್ಲ್‌ನಲ್ಲಿ ಆರಂಭವಾಗಲಿರುವ ಸರಣಿಗೆ ಟೀಂ ಇಂಡಿಯಾ ಸಿದ್ಧತೆ ಆರಂಭಿಸಿದೆ. ಸೋಮವಾರ ಬೋಲ್ಯಾಂಡ್ ಪಾರ್ಕ್​ನಲ್ಲಿ ಟೀಂ ಇಂಡಿಯಾ ಅಭ್ಯಾಸ ನಡೆಸಿತು. ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಸ್ವತಃ ತಂಡದೊಂದಿಗೆ ಮಾತನಾಡುತ್ತಿರುವುದು ಕಂಡುಬಂದಿತು ಮತ್ತು ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ODI ತಂಡದ ಮುಖ್ಯಸ್ಥರಾಗಿದ್ದ KL ರಾಹುಲ್ ಅವರೊಂದಿಗೆ ಕಾರ್ಯತಂತ್ರ ರೂಪಿಸಿದರು. ಏಕದಿನ ಸರಣಿಗಾಗಿ ಟೀಂ ಇಂಡಿಯಾ ಯುವ ಆಟಗಾರರು ಹಾಗೂ ಅನುಭವಿ ಆಟಗಾರರನ್ನು ತಂಡದಲ್ಲಿ ಸೇರಿಸಿಕೊಂಡಿದ್ದು, ಇಲ್ಲಿಂದ ರಾಹುಲ್ ದ್ರಾವಿಡ್ ಸಮಸ್ಯೆ ಶುರುವಾಗಿದೆ.

ರಾಹುಲ್ ದ್ರಾವಿಡ್ ಅವರ ಮುಂದೆ 3 ಪ್ರಶ್ನೆಗಳಿವೆ, ಅದನ್ನು ಟೀಮ್ ಇಂಡಿಯಾದ ಪ್ರತಿಯೊಬ್ಬ ಅಭಿಮಾನಿಗಳು ತಿಳಿದುಕೊಳ್ಳಲು ಬಯಸುತ್ತಾರೆ. ಮೊದಲ ಪ್ರಶ್ನೆ, ಕೆಎಲ್ ರಾಹುಲ್ ಜೊತೆ ಯಾರು ಓಪನ್ ಮಾಡುತ್ತಾರೆ? ಎರಡನೇ ಪ್ರಶ್ನೆ- ಯಾರು 4ನೇ ಸ್ಥಾನದಲ್ಲಿ ಆಡುತ್ತಾರೆ? ಪ್ರಶ್ನೆ 3: ಬೌಲಿಂಗ್ ಸಂಯೋಜನೆ ಹೇಗಿರುತ್ತದೆ?

1. ಕೆಎಲ್ ರಾಹುಲ್ ಜೊತೆ ಓಪನಿಂಗ್ ಮಾಡುವವರು ಯಾರು? ಕೆಎಲ್ ರಾಹುಲ್ ಅವರ ಓಪನಿಂಗ್ ನಿಶ್ಚಿತ ಎಂದು ನಂಬಲಾಗಿದೆ, ಆದರೆ ಅವರ ಜೊತೆಗಾರ ಯಾರು ಎಂಬುದು ಪ್ರಮುಖ ಪ್ರಶ್ನೆಯಾಗಿದೆ. ತಂಡದಲ್ಲಿ ಶಿಖರ್ ಧವನ್ ಹೊರತುಪಡಿಸಿ, ರಿತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ ರೂಪದಲ್ಲಿ ಇನ್ನಿಬ್ಬರು ಆರಂಭಿಕರಿದ್ದಾರೆ. ಟಿ 20 ವಿಶ್ವಕಪ್‌ನಲ್ಲಿ, ಟೀಮ್ ಇಂಡಿಯಾದ ಆಯ್ಕೆಗಾರರು ಧವನ್‌ಗಿಂತ ಇಶಾನ್ ಕಿಶನ್‌ಗೆ ಆದ್ಯತೆ ನೀಡಿದ್ದರು, ಆದರೆ ರಿತುರಾಜ್ ಗಾಯಕ್ವಾಡ್ ಪ್ರಸ್ತುತ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ರಾಹುಲ್ ದ್ರಾವಿಡ್ ಯಾರಿಗೆ ಅವಕಾಶ ನೀಡಲಿದ್ದಾರೆ ಎಂಬುದು ಈಗ ಕುತೂಹಲ ಮೂಡಿಸಿದೆ.

2. ನಾಲ್ಕನೇ ಸ್ಥಾನದಲ್ಲಿ ಸೂರ್ಯಕುಮಾರ್ ಅಥವಾ ಶ್ರೇಯಸ್ ಅಯ್ಯರ್? ಶ್ರೇಯಸ್ ಅಯ್ಯರ್ ತಂಡಕ್ಕೆ ವಾಪಸಾಗಿರುವುದರಿಂದ ನಾಲ್ಕನೇ ಕ್ರಮಾಂಕದ ಬ್ಯಾಟ್ಸ್​ಮನ್​ಗೂ ಸಂದಿಗ್ಧತೆ ಎದುರಾಗಿದೆ. ಭುಜದ ನೋವಿನಿಂದಾಗಿ ಅಯ್ಯರ್ ತಂಡದಿಂದ ಹೊರಗುಳಿದಿದ್ದರು, ಈ ಸಂದರ್ಭದಲ್ಲಿ ಸೂರ್ಯಕುಮಾರ್ ಯಾದವ್ ಅವರಿಗೆ ಅವಕಾಶ ನೀಡಲಾಯಿತು ಮತ್ತು ಅವರು ಉತ್ತಮ ಪ್ರದರ್ಶನ ನೀಡಿದರು. ಆದಾಗ್ಯೂ, ಅಯ್ಯರ್ ಗಾಯಗೊಳ್ಳುವ ಮೊದಲು ಉತ್ತಮ ಪ್ರದರ್ಶನ ನೀಡಿದರು. ಅಯ್ಯರ್ ಅವರು ತಮ್ಮ ಇತ್ತೀಚಿನ ಟೆಸ್ಟ್‌ನಲ್ಲಿ ಶತಕ ಬಾರಿಸುವ ಮೂಲಕ ತಮ್ಮ ಫಾರ್ಮ್‌ನಲ್ಲಿರುವ ಸುಳಿವು ನೀಡಿದ್ದಾರೆ. ಇನ್ನು ರಾಹುಲ್ ದ್ರಾವಿಡ್ ನಾಲ್ಕನೇ ಸ್ಥಾನದಲ್ಲಿ ಯಾರನ್ನು ಕಣಕ್ಕಿಳಿಸಲಿದ್ದಾರೆ ಎಂಬುದು ಪ್ರಮುಖ ಪ್ರಶ್ನೆಯಾಗಿದೆ.

3. ಬೌಲಿಂಗ್ ದಾಳಿ ಹೇಗಿರುತ್ತದೆ? ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ ಯಾವ ಬೌಲಿಂಗ್ ದಾಳಿ ಜೊತೆ ಕಣಕ್ಕಿಳಿಯಲಿದೆ ಎಂಬುದು ಕೂಡ ಕಾದು ನೋಡಬೇಕಿದೆ. 3 ವೇಗದ ಬೌಲರ್‌ಗಳು ಮತ್ತು 2 ಸ್ಪಿನ್ನರ್‌ಗಳೊಂದಿಗೆ ಟೀಂ ಇಂಡಿಯಾ ಮೈದಾನಕ್ಕೆ ಇಳಿಯುವುದೇ? ಅಥವಾ 4 ವೇಗದ ಬೌಲರ್‌ಗಳು ಮತ್ತು ಒಬ್ಬ ಸ್ಪಿನ್ನರ್‌ಗೆ ಅವಕಾಶ ನೀಡಲಾಗುವುದೇ?. ಅಂದಹಾಗೆ, ವೆಂಕಟೇಶ್ ಅಯ್ಯರ್ ಕೂಡ ಉತ್ತಮ ಮಧ್ಯಮ ವೇಗದ ಆಲ್ ರೌಂಡರ್ ಆಗಿ ತಂಡದಲ್ಲಿ ಆಡುತ್ತಿದ್ದಾರೆ. ಸ್ಪಿನ್ನರ್‌ಗಳಲ್ಲಿ ಯುಜುವೇಂದ್ರ ಚಹಾಲ್ 2018 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಈಗ ದ್ರಾವಿಡ್ ಚಹಾಲ್‌ಗೆ ಅವಕಾಶ ನೀಡುತ್ತಾರಾ ಅಥವಾ ಅಶ್ವಿನ್ ಏಕದಿನ ತಂಡಕ್ಕೆ ಮರಳುತ್ತಾರಾ ಎಂಬ ಪ್ರಶ್ನೆ ಉದ್ಭವಿಸಿದೆ.

Published On - 8:00 pm, Mon, 17 January 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ