AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND Vs SA: ಭಾರತ-ದಕ್ಷಿಣ ಆಫ್ರಿಕಾ ದ್ವಿತೀಯ ಟಿ20 ಪಂದ್ಯದ ಬಗ್ಗೆ ಇಲ್ಲಿದೆ ವಿವರ..

ಇಂದು (ಡಿಸೆಂಬರ್ 12) ಭಾರತ vs ದಕ್ಷಿಣ ಆಫ್ರಿಕಾ ಎರಡನೇ ಟಿ20 ಪಂದ್ಯ ನಡೆಯಲಿದೆ. ದಕ್ಷಿಣ ಆಫ್ರಿಕಾದ ಗೆಬರ್ಹದಲ್ಲಿರುವ ಸೇಂಟ್ ಜಾರ್ಜ್ ಪಾರ್ಕ್​ನಲ್ಲಿ ಈ ಪಂದ್ಯ ನಡೆಯಲಿದೆ.  

IND Vs SA: ಭಾರತ-ದಕ್ಷಿಣ ಆಫ್ರಿಕಾ ದ್ವಿತೀಯ ಟಿ20 ಪಂದ್ಯದ ಬಗ್ಗೆ ಇಲ್ಲಿದೆ ವಿವರ..
ಇಂಡಿಯಾ Vs ಆಫ್ರಿಕಾ
ರಾಜೇಶ್ ದುಗ್ಗುಮನೆ
| Edited By: |

Updated on:Dec 12, 2023 | 2:31 PM

Share

ಟೀಂ ಇಂಡಿಯಾ (Team India) ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟಿ20 ಪಂದ್ಯ ಮಳೆಗೆ ಆಹುತಿ ಆಯಿತು. ಮೊದಲ ಪಂದ್ಯ ಗೆದ್ದು ಶುಭಾರಂಭ ಮಾಡಬೇಕು ಎಂಬ ಟೀಂ ಇಂಡಿಯಾ ಕನಸು ಈಡೇರಿರಲಿಲ್ಲ. ಇಂದು (ಡಿಸೆಂಬರ್ 12) ಎರಡನೇ ಪಂದ್ಯ ನಡೆಯಲಿದೆ. ಮೂರು ಮ್ಯಾಚ್​ಗಳ ಸರಣಿ ಇದಾಗಿದ್ದು, ಟೀಂ ಇಂಡಿಯಾಗೆ ಇಂದಿನ ಪಂದ್ಯವನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಇಂಡೋ-ಆಫ್ರಿಕಾ ಎರಡನೇ ಟಿ20 ಪಂದ್ಯ ಯಾವಾಗ? ಎಲ್ಲಿ ನಡೆಯಲಿದೆ? ಎಂಬಿತ್ಯಾದಿ ಮಾಹಿತಿ ಇಲ್ಲಿದೆ.

ಎರಡನೇ ಪಂದ್ಯ ಎಲ್ಲಿ?

ಇಂದು (ಡಿಸೆಂಬರ್ 12) ಭಾರತ vs ದಕ್ಷಿಣ ಆಫ್ರಿಕಾ ಎರಡನೇ ಟಿ20 ಪಂದ್ಯ ನಡೆಯಲಿದೆ. ದಕ್ಷಿಣ ಆಫ್ರಿಕಾದ ಗೆಬರ್ಹದಲ್ಲಿರುವ ಸೇಂಟ್ ಜಾರ್ಜ್ ಪಾರ್ಕ್​ನಲ್ಲಿ ಈ ಪಂದ್ಯ ನಡೆಯಲಿದೆ.

ವೀಕ್ಷಿಸೋದು ಎಲ್ಲಿ?

ಭಾರತ vs ದಕ್ಷಿಣ ಆಫ್ರಿಕಾ ಸರಣಿಯ ಪ್ರಸಾರ ಹಕ್ಕನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ ಪಡೆದುಕೊಂಡಿದೆ.  ದ್ವಿತೀಯ ಟಿ20 ಪಂದ್ಯವನ್ನು ಸ್ಟಾರ್​ ಸ್ಪೋರ್ಟ್ಸ್ ವಾಹಿನಿ ಹಾಗೂ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್​ನಲ್ಲಿ ಪಂದ್ಯ ನೋಡಬಹುದಾಗಿದೆ.

ಸಮಯ

ಎರಡನೇ ಟಿ20 ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 8:30ಕ್ಕೆ ಪ್ರಾರಂಭ ಆಗಲಿದೆ. ಇಂದು ಕೂಡ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: IND vs SA: ಬಲಿಷ್ಠ ಭಾರತ: ಟೀಮ್ ಇಂಡಿಯಾ ಪರ ಕಣಕ್ಕಿಳಿಯುವವರು ಯಾರು?

ಭಾರತ ಟಿ20 ತಂಡ: ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರುತುರಾಜ್ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್ (ನಾಯಕ), ಶ್ರೇಯಸ್ ಅಯ್ಯರ್, ರಿಂಕು ಸಿಂಗ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ (ಉಪ ನಾಯಕ), ರವಿ ಬಿಷ್ಣೋಯಿ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ದೀಪಕ್ ಚಹರ್, ಮುಖೇಶ್ ಕುಮಾರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:44 am, Tue, 12 December 23

Follow Us
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?