AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಇಂದಿನ ಟಿ20 ಪಂದ್ಯಕ್ಕೂ ಮಳೆಯ ಭೀತಿ; ಇಲ್ಲಿದೆ ಹವಾಮಾನ ವರದಿ

ಒಂದೊಮ್ಮೆ ಮಳೆಯ ತೀವ್ರತೆ ಹೆಚ್ಚಿದ್ದರೆ ಎರಡನೇ ಪಂದ್ಯವೂ ರದ್ದಾಗಲಿದೆ. ಕೊನೆಯ ಪಂದ್ಯ ಗುರುವಾರ (ಡಿಸೆಂಬರ್ 14) ಜೊಹಾನ್ಸ್​ಬರ್ಗ್​ನಲ್ಲಿ ನಡೆಯಲಿದೆ. ಆ ಬಳಿಕ ಡಿಸೆಂಬರ್ 17ರಿಂದ ಏಕದಿನ ಸರಣಿ ಆರಂಭ ಆಗಲಿದೆ.

IND vs SA: ಇಂದಿನ ಟಿ20 ಪಂದ್ಯಕ್ಕೂ ಮಳೆಯ ಭೀತಿ; ಇಲ್ಲಿದೆ ಹವಾಮಾನ ವರದಿ
ಸೂರ್ಯಕುಮಾರ್ ಯಾದವ್
ರಾಜೇಶ್ ದುಗ್ಗುಮನೆ
|

Updated on:Dec 12, 2023 | 8:31 AM

Share

ಸೌತ್ ಆಫ್ರಿಕಾ Vs ಭಾರತ ನಡುವಿನ ಎರಡನೇ ಟಿ 20 ಪಂದ್ಯ ಇಂದು (ಡಿಸೆಂಬರ್ 12) ದಕ್ಷಿಣ ಆಫ್ರಿಕಾದ (South Africa) ಗೆಬರ್ಹದಲ್ಲಿ ನಡೆಯಲಿದೆ. ಮೂರು ಪಂದ್ಯಗಳ ಈ ಸರಣಿಯಲ್ಲಿ ಮೊದಲ ಮ್ಯಾಚ್​ ಮಳೆಗೆ ಆಹುತಿಯಾಗಿದೆ. ಸರಣಿ ಗೆಲ್ಲಲು ಎರಡು ಹಾಗೂ ಮೂರನೇ ಪಂದ್ಯ ಗೆಲ್ಲಲೇಬೇಕಾದ ಅನಿವಾರ್ಯತೆ ಟೀಮ್ ಇಂಡಿಯಾಗೆ ಇದೆ. ಹವಾಮಾನ ವರದಿಗಳ ಪ್ರಕಾರ ಈ ಪಂದ್ಯವೂ ಮಳೆಗೆ ಆಹುತಿ ಆಗಲಿದೆ. ಈ ವಿಚಾರ ಕೇಳಿ ಕ್ರಿಕೆಟ್ ಪ್ರಿಯರು ಬೇಸರ ಮಾಡಿಕೊಂಡಿದ್ದಾರೆ.

ಸೋಮವಾರ (ಡಿಸೆಂಬರ್ 11) ಗೆಬರ್ಹದಲ್ಲಿ ಮಳೆ ಆಗಿದೆ. ಇಂದು ಕೂಡ ಈ ಭಾಗದಲ್ಲಿ ತೀವ್ರ ಮಳೆ ಆಗುವ ಸಾಧ್ಯತೆ ಇದೆ. ಹಗಲಿನಲ್ಲಿ ಮಳೆ ಆಗುವ ಸಾಧ್ಯತೆ ಶೇ.84 ಇದ್ದು, ರಾತ್ರಿ ವೇಳೆ ಮಳೆ ಆಗುವ ಸಾಧ್ಯತೆ ಶೇ.6 ಇದೆ. ಈ ಭಾಗದಲ್ಲಿ ಈಗಾಗಲೇ ಮೋಡ ಕವಿದ ವಾತಾವರಣ ಇದೆ. ಒಂದೊಮ್ಮೆ ಮಳೆಯ ತೀವ್ರತೆ ಹೆಚ್ಚಿದ್ದರೆ ಎರಡನೇ ಪಂದ್ಯವೂ ರದ್ದಾಗಲಿದೆ. ಕೊನೆಯ ಪಂದ್ಯ ಗುರುವಾರ (ಡಿಸೆಂಬರ್ 14) ಜೊಹಾನ್ಸ್​ಬರ್ಗ್​ನಲ್ಲಿ ನಡೆಯಲಿದೆ. ಆ ಬಳಿಕ ಡಿಸೆಂಬರ್ 17ರಿಂದ ಏಕದಿನ ಸರಣಿ ಆರಂಭ ಆಗಲಿದೆ.

ಇನ್ನು ತಂಡದ ಆಯ್ಕೆಯು ಕೋಚ್ ರಾಹುಲ್ ದ್ರಾವಿಡ್​ಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಟೀಂ ಇಂಡಿಯಾದಲ್ಲಿ ಯುವ ಆಟಗಾರರ ದಂಡೇ ಇದೆ. ಎಲ್ಲರೂ ಹೊಡಿಬಡಿ ಆಟಗಾರರೇ. ಹೀಗಾಗಿ ಯಾರಿಗೆ ಅವಕಾಶ ನೀಡಬೇಕು ಎನ್ನುವ ಬಗ್ಗೆ ರಾಹುಲ್ ದ್ರಾವಿಡ್ ನಿರ್ಧಾರ ಮಾಡಬೇಕಿದೆ. ಓಪನರ್​​ ಸ್ಥಾನಕ್ಕೆ ಇಶಾನ್ ಕಿಶನ್, ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್ ಹಾಗೂ ಯಶಸ್ವಿ ಜೈಸ್ವಾಲ್ ಇದ್ದಾರೆ. 2024ರಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ದೃಷ್ಟಿಯಿಂದ ಈ ಪಂದ್ಯಗಳು ತುಂಬಾನೇ ಮುಖ್ಯ ಎನಿಸಿಕೊಂಡಿದೆ.

ಇದನ್ನೂ ಓದಿ: IND vs SA: ಬಲಿಷ್ಠ ಭಾರತ: ಟೀಮ್ ಇಂಡಿಯಾ ಪರ ಕಣಕ್ಕಿಳಿಯುವವರು ಯಾರು?

ಭಾರತ ಟಿ20 ತಂಡ: ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ಶ್ರೇಯಸ್ ಅಯ್ಯರ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರಿಂಕು ಸಿಂಗ್, ದೀಪಕ್ ಚಹರ್, ರವೀಂದ್ರ ಜಡೇಜಾ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್ , ತಿಲಕ್ ವರ್ಮಾ, ರುತುರಾಜ್ ಗಾಯಕ್ವಾಡ್, ಕುಲ್ದೀಪ್ ಯಾದವ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:27 am, Tue, 12 December 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ