AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಇಂದಿನ ಟಿ20 ಪಂದ್ಯಕ್ಕೂ ಮಳೆಯ ಭೀತಿ; ಇಲ್ಲಿದೆ ಹವಾಮಾನ ವರದಿ

ಒಂದೊಮ್ಮೆ ಮಳೆಯ ತೀವ್ರತೆ ಹೆಚ್ಚಿದ್ದರೆ ಎರಡನೇ ಪಂದ್ಯವೂ ರದ್ದಾಗಲಿದೆ. ಕೊನೆಯ ಪಂದ್ಯ ಗುರುವಾರ (ಡಿಸೆಂಬರ್ 14) ಜೊಹಾನ್ಸ್​ಬರ್ಗ್​ನಲ್ಲಿ ನಡೆಯಲಿದೆ. ಆ ಬಳಿಕ ಡಿಸೆಂಬರ್ 17ರಿಂದ ಏಕದಿನ ಸರಣಿ ಆರಂಭ ಆಗಲಿದೆ.

IND vs SA: ಇಂದಿನ ಟಿ20 ಪಂದ್ಯಕ್ಕೂ ಮಳೆಯ ಭೀತಿ; ಇಲ್ಲಿದೆ ಹವಾಮಾನ ವರದಿ
ಸೂರ್ಯಕುಮಾರ್ ಯಾದವ್
ರಾಜೇಶ್ ದುಗ್ಗುಮನೆ
|

Updated on:Dec 12, 2023 | 8:31 AM

Share

ಸೌತ್ ಆಫ್ರಿಕಾ Vs ಭಾರತ ನಡುವಿನ ಎರಡನೇ ಟಿ 20 ಪಂದ್ಯ ಇಂದು (ಡಿಸೆಂಬರ್ 12) ದಕ್ಷಿಣ ಆಫ್ರಿಕಾದ (South Africa) ಗೆಬರ್ಹದಲ್ಲಿ ನಡೆಯಲಿದೆ. ಮೂರು ಪಂದ್ಯಗಳ ಈ ಸರಣಿಯಲ್ಲಿ ಮೊದಲ ಮ್ಯಾಚ್​ ಮಳೆಗೆ ಆಹುತಿಯಾಗಿದೆ. ಸರಣಿ ಗೆಲ್ಲಲು ಎರಡು ಹಾಗೂ ಮೂರನೇ ಪಂದ್ಯ ಗೆಲ್ಲಲೇಬೇಕಾದ ಅನಿವಾರ್ಯತೆ ಟೀಮ್ ಇಂಡಿಯಾಗೆ ಇದೆ. ಹವಾಮಾನ ವರದಿಗಳ ಪ್ರಕಾರ ಈ ಪಂದ್ಯವೂ ಮಳೆಗೆ ಆಹುತಿ ಆಗಲಿದೆ. ಈ ವಿಚಾರ ಕೇಳಿ ಕ್ರಿಕೆಟ್ ಪ್ರಿಯರು ಬೇಸರ ಮಾಡಿಕೊಂಡಿದ್ದಾರೆ.

ಸೋಮವಾರ (ಡಿಸೆಂಬರ್ 11) ಗೆಬರ್ಹದಲ್ಲಿ ಮಳೆ ಆಗಿದೆ. ಇಂದು ಕೂಡ ಈ ಭಾಗದಲ್ಲಿ ತೀವ್ರ ಮಳೆ ಆಗುವ ಸಾಧ್ಯತೆ ಇದೆ. ಹಗಲಿನಲ್ಲಿ ಮಳೆ ಆಗುವ ಸಾಧ್ಯತೆ ಶೇ.84 ಇದ್ದು, ರಾತ್ರಿ ವೇಳೆ ಮಳೆ ಆಗುವ ಸಾಧ್ಯತೆ ಶೇ.6 ಇದೆ. ಈ ಭಾಗದಲ್ಲಿ ಈಗಾಗಲೇ ಮೋಡ ಕವಿದ ವಾತಾವರಣ ಇದೆ. ಒಂದೊಮ್ಮೆ ಮಳೆಯ ತೀವ್ರತೆ ಹೆಚ್ಚಿದ್ದರೆ ಎರಡನೇ ಪಂದ್ಯವೂ ರದ್ದಾಗಲಿದೆ. ಕೊನೆಯ ಪಂದ್ಯ ಗುರುವಾರ (ಡಿಸೆಂಬರ್ 14) ಜೊಹಾನ್ಸ್​ಬರ್ಗ್​ನಲ್ಲಿ ನಡೆಯಲಿದೆ. ಆ ಬಳಿಕ ಡಿಸೆಂಬರ್ 17ರಿಂದ ಏಕದಿನ ಸರಣಿ ಆರಂಭ ಆಗಲಿದೆ.

ಇನ್ನು ತಂಡದ ಆಯ್ಕೆಯು ಕೋಚ್ ರಾಹುಲ್ ದ್ರಾವಿಡ್​ಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಟೀಂ ಇಂಡಿಯಾದಲ್ಲಿ ಯುವ ಆಟಗಾರರ ದಂಡೇ ಇದೆ. ಎಲ್ಲರೂ ಹೊಡಿಬಡಿ ಆಟಗಾರರೇ. ಹೀಗಾಗಿ ಯಾರಿಗೆ ಅವಕಾಶ ನೀಡಬೇಕು ಎನ್ನುವ ಬಗ್ಗೆ ರಾಹುಲ್ ದ್ರಾವಿಡ್ ನಿರ್ಧಾರ ಮಾಡಬೇಕಿದೆ. ಓಪನರ್​​ ಸ್ಥಾನಕ್ಕೆ ಇಶಾನ್ ಕಿಶನ್, ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್ ಹಾಗೂ ಯಶಸ್ವಿ ಜೈಸ್ವಾಲ್ ಇದ್ದಾರೆ. 2024ರಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ದೃಷ್ಟಿಯಿಂದ ಈ ಪಂದ್ಯಗಳು ತುಂಬಾನೇ ಮುಖ್ಯ ಎನಿಸಿಕೊಂಡಿದೆ.

ಇದನ್ನೂ ಓದಿ: IND vs SA: ಬಲಿಷ್ಠ ಭಾರತ: ಟೀಮ್ ಇಂಡಿಯಾ ಪರ ಕಣಕ್ಕಿಳಿಯುವವರು ಯಾರು?

ಭಾರತ ಟಿ20 ತಂಡ: ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ಶ್ರೇಯಸ್ ಅಯ್ಯರ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರಿಂಕು ಸಿಂಗ್, ದೀಪಕ್ ಚಹರ್, ರವೀಂದ್ರ ಜಡೇಜಾ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್ , ತಿಲಕ್ ವರ್ಮಾ, ರುತುರಾಜ್ ಗಾಯಕ್ವಾಡ್, ಕುಲ್ದೀಪ್ ಯಾದವ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:27 am, Tue, 12 December 23

Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?