AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಇಂದಿನ ಟಿ20 ಪಂದ್ಯಕ್ಕೂ ಮಳೆಯ ಭೀತಿ; ಇಲ್ಲಿದೆ ಹವಾಮಾನ ವರದಿ

ಒಂದೊಮ್ಮೆ ಮಳೆಯ ತೀವ್ರತೆ ಹೆಚ್ಚಿದ್ದರೆ ಎರಡನೇ ಪಂದ್ಯವೂ ರದ್ದಾಗಲಿದೆ. ಕೊನೆಯ ಪಂದ್ಯ ಗುರುವಾರ (ಡಿಸೆಂಬರ್ 14) ಜೊಹಾನ್ಸ್​ಬರ್ಗ್​ನಲ್ಲಿ ನಡೆಯಲಿದೆ. ಆ ಬಳಿಕ ಡಿಸೆಂಬರ್ 17ರಿಂದ ಏಕದಿನ ಸರಣಿ ಆರಂಭ ಆಗಲಿದೆ.

IND vs SA: ಇಂದಿನ ಟಿ20 ಪಂದ್ಯಕ್ಕೂ ಮಳೆಯ ಭೀತಿ; ಇಲ್ಲಿದೆ ಹವಾಮಾನ ವರದಿ
ಸೂರ್ಯಕುಮಾರ್ ಯಾದವ್
Follow us
ರಾಜೇಶ್ ದುಗ್ಗುಮನೆ
|

Updated on:Dec 12, 2023 | 8:31 AM

ಸೌತ್ ಆಫ್ರಿಕಾ Vs ಭಾರತ ನಡುವಿನ ಎರಡನೇ ಟಿ 20 ಪಂದ್ಯ ಇಂದು (ಡಿಸೆಂಬರ್ 12) ದಕ್ಷಿಣ ಆಫ್ರಿಕಾದ (South Africa) ಗೆಬರ್ಹದಲ್ಲಿ ನಡೆಯಲಿದೆ. ಮೂರು ಪಂದ್ಯಗಳ ಈ ಸರಣಿಯಲ್ಲಿ ಮೊದಲ ಮ್ಯಾಚ್​ ಮಳೆಗೆ ಆಹುತಿಯಾಗಿದೆ. ಸರಣಿ ಗೆಲ್ಲಲು ಎರಡು ಹಾಗೂ ಮೂರನೇ ಪಂದ್ಯ ಗೆಲ್ಲಲೇಬೇಕಾದ ಅನಿವಾರ್ಯತೆ ಟೀಮ್ ಇಂಡಿಯಾಗೆ ಇದೆ. ಹವಾಮಾನ ವರದಿಗಳ ಪ್ರಕಾರ ಈ ಪಂದ್ಯವೂ ಮಳೆಗೆ ಆಹುತಿ ಆಗಲಿದೆ. ಈ ವಿಚಾರ ಕೇಳಿ ಕ್ರಿಕೆಟ್ ಪ್ರಿಯರು ಬೇಸರ ಮಾಡಿಕೊಂಡಿದ್ದಾರೆ.

ಸೋಮವಾರ (ಡಿಸೆಂಬರ್ 11) ಗೆಬರ್ಹದಲ್ಲಿ ಮಳೆ ಆಗಿದೆ. ಇಂದು ಕೂಡ ಈ ಭಾಗದಲ್ಲಿ ತೀವ್ರ ಮಳೆ ಆಗುವ ಸಾಧ್ಯತೆ ಇದೆ. ಹಗಲಿನಲ್ಲಿ ಮಳೆ ಆಗುವ ಸಾಧ್ಯತೆ ಶೇ.84 ಇದ್ದು, ರಾತ್ರಿ ವೇಳೆ ಮಳೆ ಆಗುವ ಸಾಧ್ಯತೆ ಶೇ.6 ಇದೆ. ಈ ಭಾಗದಲ್ಲಿ ಈಗಾಗಲೇ ಮೋಡ ಕವಿದ ವಾತಾವರಣ ಇದೆ. ಒಂದೊಮ್ಮೆ ಮಳೆಯ ತೀವ್ರತೆ ಹೆಚ್ಚಿದ್ದರೆ ಎರಡನೇ ಪಂದ್ಯವೂ ರದ್ದಾಗಲಿದೆ. ಕೊನೆಯ ಪಂದ್ಯ ಗುರುವಾರ (ಡಿಸೆಂಬರ್ 14) ಜೊಹಾನ್ಸ್​ಬರ್ಗ್​ನಲ್ಲಿ ನಡೆಯಲಿದೆ. ಆ ಬಳಿಕ ಡಿಸೆಂಬರ್ 17ರಿಂದ ಏಕದಿನ ಸರಣಿ ಆರಂಭ ಆಗಲಿದೆ.

ಇನ್ನು ತಂಡದ ಆಯ್ಕೆಯು ಕೋಚ್ ರಾಹುಲ್ ದ್ರಾವಿಡ್​ಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಟೀಂ ಇಂಡಿಯಾದಲ್ಲಿ ಯುವ ಆಟಗಾರರ ದಂಡೇ ಇದೆ. ಎಲ್ಲರೂ ಹೊಡಿಬಡಿ ಆಟಗಾರರೇ. ಹೀಗಾಗಿ ಯಾರಿಗೆ ಅವಕಾಶ ನೀಡಬೇಕು ಎನ್ನುವ ಬಗ್ಗೆ ರಾಹುಲ್ ದ್ರಾವಿಡ್ ನಿರ್ಧಾರ ಮಾಡಬೇಕಿದೆ. ಓಪನರ್​​ ಸ್ಥಾನಕ್ಕೆ ಇಶಾನ್ ಕಿಶನ್, ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್ ಹಾಗೂ ಯಶಸ್ವಿ ಜೈಸ್ವಾಲ್ ಇದ್ದಾರೆ. 2024ರಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ದೃಷ್ಟಿಯಿಂದ ಈ ಪಂದ್ಯಗಳು ತುಂಬಾನೇ ಮುಖ್ಯ ಎನಿಸಿಕೊಂಡಿದೆ.

ಇದನ್ನೂ ಓದಿ: IND vs SA: ಬಲಿಷ್ಠ ಭಾರತ: ಟೀಮ್ ಇಂಡಿಯಾ ಪರ ಕಣಕ್ಕಿಳಿಯುವವರು ಯಾರು?

ಭಾರತ ಟಿ20 ತಂಡ: ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ಶ್ರೇಯಸ್ ಅಯ್ಯರ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರಿಂಕು ಸಿಂಗ್, ದೀಪಕ್ ಚಹರ್, ರವೀಂದ್ರ ಜಡೇಜಾ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್ , ತಿಲಕ್ ವರ್ಮಾ, ರುತುರಾಜ್ ಗಾಯಕ್ವಾಡ್, ಕುಲ್ದೀಪ್ ಯಾದವ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:27 am, Tue, 12 December 23

ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ