AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Sri lanka: ಇಂದು ಲಂಕಾ ವಿರುದ್ಧ ಮೊದಲ ಏಕದಿನ: ಭಾರತ ಪರ ಪದಾರ್ಪಣೆ ಮಾಡಲಿದ್ದಾರೆ ಈ ಆಟಗಾರ?

India Predicted XI: ಭಾರತದ ಪ್ರಮುಖ ಉದ್ದೇಶ ಸರಣಿ ಗೆಲುವು ಆಗಿದೆ. ಹೀಗಾಗಿ ಹೆಚ್ಚು ಕ್ರಿಕೆಟ್ ಆಡಿದ ಅನುಭವ ಇರುವ ಪ್ಲೇಯರ್​ ಮೊದಲ ಆಯ್ಕೆಯಲ್ಲಿ ಸಿಗಲಿದ್ದಾರೆ.

India vs Sri lanka: ಇಂದು ಲಂಕಾ ವಿರುದ್ಧ ಮೊದಲ ಏಕದಿನ: ಭಾರತ ಪರ ಪದಾರ್ಪಣೆ ಮಾಡಲಿದ್ದಾರೆ ಈ ಆಟಗಾರ?
ಟೀಂ ಇಂಡಿಯಾ
TV9 Web
| Edited By: |

Updated on: Jul 18, 2021 | 7:27 AM

Share

ಭಾರತ ಹಾಗೂ ಶ್ರೀಲಂಕಾ (India vs Sri lanka) ನಡುವಣ ಮೊದಲ ಏಕದಿನ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಪಂದ್ಯ ಆರಂಭವಾಗಲಿದ್ದು, ಉಭಯ ತಂಡಗಳಲ್ಲಿ ಬಹುತೇಕ ಹೊಸ ಆಟಗಾರರೇ ತುಂಬಿರುವುದರಿಂದ ಸಾಕಷ್ಟು ಕುತೂಹಲ ಕೆರಳಿಸಿದೆ. ಟೀಮ್ ಇಂಡಿಯಾವನ್ನು ಶಿಖರ್ ಧವನ್ (Shikhar Dhawan) ಮುನ್ನಡೆಸುತ್ತಿದ್ದು, ದ್ರಾವಿಡ್ (Rahul Dravid) ಮಾರ್ಗದರ್ಶನದಲ್ಲಿರುವ ಭಾರತೀಯ ಯುವ ತಂಡದ ಮೇಲೆ ಸಾಕಷ್ಟು ನಿರೀಕ್ಷೆ ಇಡಲಾಗಿದೆ.

ಈ ಸರಣಿಯಲ್ಲಿ ಭಾರತ ಪರ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡಲು ಸಾಕಷ್ಟು ಆಟಗಾರರು ತುದಿಗಾಲಿನಲ್ಲಿ ನಿಂತಿದ್ದಾರೆ. ಇದರಲ್ಲಿ ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ದೇವದತ್ ಪಡಿಕ್ಕಲ್, ರುತುರಾಜ್ ಗಾಯಕ್ವಾಡ್, ನಿತೀಶ್ ರಾಣ, ವರುಣ್ ಚಕ್ರವರ್ತಿ, ಕೃಷ್ಣಪ್ಪ ಗೌತಮ್ ಮತ್ತು ಚೇತನ್ ಸಕರಿಯ ಪ್ರಮುಖರು. ಇವರಲ್ಲಿ ಯಾರಿಗೆ ಸ್ಥಾನ ಎಂಬುದು ಕಾದುನೋಡಬೇಕಿದೆ.

ಮೂಲಗಳ ಪ್ರಕಾರ ಮೊದಲ ಏಕದಿನ ಪಂದ್ಯಕ್ಕೆ ಹೆಚ್ಚಿನ ಹೊಸ ಆಟಗಾರರನ್ನು ಕಣಕ್ಕಿಳಿಸುವುದು ಅನುಮಾನ ಎಂದು ಹೇಳಲಾಗುತ್ತಿದೆ. ಭಾರತದ ಪ್ರಮುಖ ಉದ್ದೇಶ ಸರಣಿ ಗೆಲುವು ಆಗಿದೆ. ಹೀಗಾಗಿ ಹೆಚ್ಚು ಕ್ರಿಕೆಟ್ ಆಡಿದ ಅನುಭವ ಇರುವ ಪ್ಲೇಯರ್​ ಮೊದಲ ಆಯ್ಕೆಯಲ್ಲಿ ಸಿಗಲಿದ್ದಾರೆ.

ಟೀಮ್ ಇಂಡಿಯಾ ಪರ ಆರಂಭಿಕರಾಗಿ ನಾಯಕ ಶಿಖರ್ ಧವನ್ ಕಣಕ್ಕಿಳಿದರೆ ಇವರ ಜೊತೆಗೆ ಪೃಥ್ವಿ ಶಾ ಇನ್ನಿಂಗ್ಸ್ ಆರಂಭಿಸುವುದು ಖಚಿತವಾಗಿದೆ. ಅಭ್ಯಾಸ ಪಂದ್ಯದಲ್ಲಿ ಶಾ ಆಟ ಎಲ್ಲರ ಹುಬ್ಬೇರಿವಂತೆ ಮಾಡಿತ್ತು. ಹೀಗಾಗಿ ಶಾ ಧವನ್ ಜೊತೆ ಓಪನರ್ ಆಗಿ ಆಡುವುದು ನಿಶ್ಚಯ. ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಅವಕಾಶ ಸಿಗುವುದು ಅನುಮಾನ.

ಮೂರನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್​ಗೆ ಅವಕಾಶ ನೀಡಬಹುದು. ಈ ಮೂಲಕ ಇವರು ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡಲಿದ್ದಾರೆ. ಸಾಕಷ್ಟು ಕುತೂಹಲ ಕೆರಳಿಸಿರುವ ವಿಕೆಟ್ ಕೀಪರ್ ಸ್ಥಾನಕ್ಕೆ ಸಂಜು ಸ್ಯಾಮ್ಸನ್​ರನ್ನು ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ. ಅನುಭದ ಆಧಾರದ ಮೇಲೆ ಇವರಿಗೆ ಸ್ಥಾನ ನೀಡಬಹುದು.

5ನೇ ಕ್ರಮಾಂಕದಲ್ಲಿ ಮನೀಶ್ ಪಾಂಡೆಗೆ ಅವಕಾಶ ನೀಡಬಹುದು. ಹಾಗಾದಲ್ಲಿ ವರ್ಷಗಳ ಬಳಿಕ ಪಾಂಡೆ ಟೀಮ್ ಇಂಡಿಯಾಕ್ಕೆ ಕಮ್​ಬ್ಯಾಕ್ ಮಾಡಲಿದ್ದಾರೆ. ಅಲ್ಲದೆ ಇದು ಅವರಿಗೆ ಕೊನೇಯ ಅವಕಾಶ ಎಂದರೆ ತಪ್ಪಾಗಲಾರದು. ಇನ್ನೂ ಆಲ್ರೌಂಡರ್ ಪಟ್ಟ ಪಾಂಡ್ಯ ಬ್ರದರ್ಸ್​ಗೆ ಸಿಗುವುದರಲ್ಲಿ ಅನುಮಾನವಿಲ್ಲ.

ಉಪ ನಾಯಕ ಭುವನೇಶ್ವರ್ ಕುಮಾರ್ ಬೌಲಿಂಗ್ ವಿಭಾಗವನ್ನು ಮುನ್ನಡೆಸಿದರೆ ದೀಪಕ್ ಚಹಾರ್ ಇವರಿಗೆ ಸಾಥ್ ನೀಡಬಹುದು. ಸ್ಪಿನ್ ವಿಭಾಗದಲ್ಲಿ ಯಜುವೇಂದ್ರ ಚಹಾಲ್, ಕುಲ್ದೀಪ್ ಯಾದವ್ ಕಣಕ್ಕಿಳಿಯುವ ಸಾಧ್ಯತೆ ಇದೆ.

ಟೀಮ್ ಇಂಡಿಯಾದಲ್ಲಿ ಸೋಲರಿಯದ ದಿಟ್ಟತನವನ್ನು ಹುಟ್ಟಿಸಿದ್ದು ಸೌರವ್ ಗಂಗೂಲಿ: ಬ್ರಾಡ್ ಹಾಗ್

ಟೀಂ ಇಂಡಿಯಾದಲ್ಲಿ ಮರಿ ಸೆಹ್ವಾಗ್ ಹುಟ್ಟಿಕೊಂಡಿದ್ದಾನೆ; ಲಂಕಾ ತಂಡಕ್ಕೆ ಎಚ್ಚರಿಕೆ ನೀಡಿದ ಮುರಳೀಧರನ್

(India vs Sri Lanka 1st ODI India Predicted XI Sanju Samson Suryakumar yadav likely to debut)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ