AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Sri Lanka 2nd T20: ಟಿ20 ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಬರೆಯಲಿದ್ದಾರೆ ಚಾಹಲ್

India vs Sri Lanka 2nd T20I: ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ವೆಸ್ಟ್ ಇಂಡೀಸ್​ನ ಡ್ವೇನ್ ಬ್ರಾವೊ ಇದ್ದು, ಲಂಕಾ ವಿರುದ್ದದ 11 ಟಿ20 ಪಂದ್ಯಳಿಂದ 14 ವಿಕೆಟ್ ಪಡೆದಿದ್ದಾರೆ. ಹಾಗೆಯೇ 9 ಪಂದ್ಯಗಳಿಂದ 14 ವಿಕೆಟ್ ಉರುಳಿಸಿರುವ ದಕ್ಷಿಣ ಆಫ್ರಿಕಾ ಮಾಜಿ ಸ್ಪಿನ್ನರ್ ಇಮ್ರಾನ್ ತಾಹಿರ್ ನಾಲ್ಕನೇ ಸ್ಥಾನದಲ್ಲಿದ್ದಾರೆ.

India vs Sri Lanka 2nd T20: ಟಿ20 ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಬರೆಯಲಿದ್ದಾರೆ ಚಾಹಲ್
Yuzvendra Chahal
TV9 Web
| Edited By: |

Updated on: Jul 27, 2021 | 3:20 PM

Share

ಭಾರತ-ಶ್ರೀಲಂಕಾ ನಡುವಣ 2ನೇ ಟಿ20 ಪಂದ್ಯವು ಮಂಗಳವಾರ (ಜು.27) ನಡೆಯಲಿದೆ. ಆರ್​. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಸರಣಿ ಶಿಖರ್ ಧವನ್ ಪಡೆ ಪಾಲಾಗಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಬಲಿಷ್ಠ ಪಡೆಯೊಂದಿಗೆ ಕಣಕ್ಕಿಳಿದು ಸರಣಿ ವಶಪಡಿಸಿಕೊಳ್ಳುವ ಪ್ರಯತ್ನ ಮಾಡಲಿದೆ. ಇನ್ನು ಈ ಪಂದ್ಯದಲ್ಲಿ ಯುಜ್ವೇಂದ್ರ ಚಾಹಲ್ ಒಂದು ವಿಕೆಟ್ ಪಡೆದರೆ ವಿಶೇಷ ದಾಖಲೆಯೊಂದು ನಿರ್ಮಾಣವಾಗಲಿದೆ.

ಲಂಕಾ ವಿರುದ್ದ ಮೊದಲ ಟಿ20 ಪಂದ್ಯದಲ್ಲಿ 1 ವಿಕೆಟ್ ಕಬಳಿಸಿದ್ದ ಯುಜಿ, 2ನೇ ಟಿ20 ಯಲ್ಲಿ ಒಂದು ವಿಕೆಟ್ ಉರುಳಿಸಿದರೆ ಶ್ರೀಲಂಕಾ ವಿರುದ್ದ ಚುಟುಕು ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಳ್ಳಲಿದ್ದಾರೆ. ಈ ದಾಖಲೆ ಸದ್ಯ ಇಂಗ್ಲೆಂಡ್ ಬೌಲರ್ ಕ್ರಿಸ್ ಜೋರ್ಡನ್ ಹೆಸರಿನಲ್ಲಿದ್ದು, ಜೋರ್ಡನ್ 8 ಪಂದ್ಯಗಳಿಂದ ಒಟ್ಟು 15 ವಿಕೆಟ್ ಉರುಳಿಸಿದ್ದಾರೆ. ಇನ್ನು ಏಳು ಪಂದ್ಯಗಳಿಂದ 15 ವಿಕೆಟ್ ಪಡೆದಿರುವ ಯುಜ್ವೇಂದ್ರ ಚಾಹಲ್​ಗೆ ಜೋರ್ಡನ್ ದಾಖಲೆ ಮುರಿಯಲು ಕೇವಲ 1 ವಿಕೆಟ್​ನ ಅವಶ್ಯಕತೆಯಿದೆ.

ಶ್ರೀಲಂಕಾ ಸರಣಿಯಲ್ಲಿ ಸ್ಪಿನ್ ಮೋಡಿ ಮಾಡುತ್ತಿರುವ ಟೀಮ್ ಇಂಡಿಯಾ ಸ್ಪಿನ್ನರ್ 2ನೇ ಟಿ20ಯಲ್ಲೂ ವಿಕೆಟ್ ಉರುಳಿಸುವ ನಿರೀಕ್ಷೆಯಲ್ಲಿದ್ದು, ಹೀಗಾಗಿ ಮಂಗಳವಾರ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ಚಾಹಲ್ ಹೊಸ ಇತಿಹಾಸ ಬರೆಯುವ ವಿಶ್ವಾಸದಲ್ಲಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ವೆಸ್ಟ್ ಇಂಡೀಸ್​ನ ಡ್ವೇನ್ ಬ್ರಾವೊ ಇದ್ದು, ಲಂಕಾ ವಿರುದ್ದದ 11 ಟಿ20 ಪಂದ್ಯಳಿಂದ 14 ವಿಕೆಟ್ ಪಡೆದಿದ್ದಾರೆ. ಹಾಗೆಯೇ 9 ಪಂದ್ಯಗಳಿಂದ 14 ವಿಕೆಟ್ ಉರುಳಿಸಿರುವ ದಕ್ಷಿಣ ಆಫ್ರಿಕಾ ಮಾಜಿ ಸ್ಪಿನ್ನರ್ ಇಮ್ರಾನ್ ತಾಹಿರ್ ನಾಲ್ಕನೇ ಸ್ಥಾನದಲ್ಲಿದ್ದಾರೆ. ಐದನೇ ಸ್ಥಾನದಲ್ಲಿ ಪಾಕಿಸ್ತಾನದ ಮಾಜಿ ಸ್ಪಿನ್ನರ್ ಸಯೀದ್ ಅಜ್ಮಲ್ ಇದ್ದು, ಅಜ್ಮಲ್ 9 ಪಂದ್ಯಗಳಿಂದ 14 ವಿಕೆಟ್ ಉರುಳಿಸಿದ್ದಾರೆ.

ಶ್ರೀಲಂಕಾ ವಿರುದ್ದದ 3 ಪಂದ್ಯಗಳ ಸರಣಿಯಲ್ಲಿ ಮೊದಲ ಟಿ20 ಪಂದ್ಯವನ್ನು ಗೆದ್ದು 1-0 ಮುನ್ನಡೆ ಸಾಧಿಸಿರುವ ಟೀಮ್ ಇಂಡಿಯಾ 2ನೇ ಪಂದ್ಯದಲ್ಲೂ ಗೆಲ್ಲುವ ಫೇವರೇಟ್ ತಂಡ ಎನಿಸಿಕೊಂಡಿದೆ.

ಟೀಮ್ ಇಂಡಿಯಾ ಸಂಪೂರ್ಣ ತಂಡ: ಶಿಖರ್ ಧವನ್ (ನಾಯಕ) , ಪೃಥ್ವಿ ಶಾ , ಇಶಾನ್ ಕಿಶನ್ (ವಿಕೆಟ್ ಕೀಪರ್) , ಸೂರ್ಯಕುಮಾರ್ ಯಾದವ್ , ಸಂಜು ಸ್ಯಾಮ್ಸನ್ , ಹಾರ್ದಿಕ್ ಪಾಂಡ್ಯ , ಕ್ರುನಾಲ್ ಪಾಂಡ್ಯ , ದೀಪಕ್ ಚಹರ್ , ಭುವನೇಶ್ವರ್ ಕುಮಾರ್ , ಯುಜ್ವೇಂದ್ರ ಚಹಲ್ , ವರುಣ್ ಚಕ್ರವರ್ತಿ, ಮನೀಶ್ ಪಾಂಡೆ , ರಾಹುಲ್ ಚಹರ್ , ಕುಲದೀಪ್ ಯಾದವ್ , ಕೃಷ್ಣಪ್ಪ ಗೌತಮ್ , ನಿತೀಶ್ ರಾಣಾ , ನವದೀಪ್ ಸೈನಿ , ರುತುರಾಜ್ ಗಾಯಕ್ವಾಡ್ , ದೇವದತ್ ಪಡಿಕ್ಕಲ್ , ಚೇತನ್ ಸಕರಿಯಾ

ಇದನ್ನೂ ಓದಿ: Viral Story: ಟ್ರಾಫಿಕ್​ ಪೊಲೀಸ್​ ಮನೆಯಲ್ಲಿ ಚಿನ್ನದ ಟಾಯ್ಲೆಟ್

ಇದನ್ನೂ ಓದಿ: ಈವರೆಗೆ ಟೀಮ್ ಇಂಡಿಯಾ ಪರ ಎಷ್ಟು ಮಂದಿ ಆಡಿದ್ದಾರೆ ಗೊತ್ತಾ?

(India vs Sri Lanka 2nd T20I: Yuzvendra Chahal one wicket away from achieving a unique Record)

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ