AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಪಡಿಕ್ಕಲ್, ಜುರೇಲ್ ಶತಕ; ಬೃಹತ್ ಮೊತ್ತ ಪೇರಿಸಿ ಡಿಕ್ಲೇರ್ ಘೋಷಿಸಿದ ಭಾರತ

India vs Sri Lanka 2nd Test: ಕೊಲಂಬೊದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ 2ನೇ ಟೆಸ್ಟ್‌ನಲ್ಲಿ ಭಾರತ ಟಾಸ್ ಗೆದ್ದು 503/9ಕ್ಕೆ ಡಿಕ್ಲೇರ್ ಮಾಡಿದೆ. ದೇವದತ್ ಪಡಿಕ್ಕಲ್ ಮತ್ತು ಧ್ರುವ್ ಜುರೇಲ್ ಶತಕ ಸಿಡಿಸಿದರೆ, ಶುಭ್​ಮನ್ ಗಿಲ್ ಮತ್ತು ರಿಷಭ್ ಪಂತ್ ಅರ್ಧಶತಕ ಗಳಿಸಿದರು. ಲಂಕಾ ಪರ ಅಸಿತಾ ಫೆರ್ನಾಂಡೋ 4 ವಿಕೆಟ್ ಪಡೆದರು.

IND vs SL: ಪಡಿಕ್ಕಲ್, ಜುರೇಲ್ ಶತಕ; ಬೃಹತ್ ಮೊತ್ತ ಪೇರಿಸಿ ಡಿಕ್ಲೇರ್ ಘೋಷಿಸಿದ ಭಾರತ
Ind Vs Sl
ಪೃಥ್ವಿಶಂಕರ
|

Updated on:Aug 24, 2026 | 5:40 PM

Share

ಕೊಲಂಬೊದಲ್ಲಿ (Colombo Test) ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ (India vs Sri Lanka) 9 ವಿಕೆಟ್ ನಷ್ಟಕ್ಕೆ ಬರೋಬ್ಬರಿ 503 ರನ್ ಕಲೆಹಾಕಿ ತನ್ನ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದೆ. ತಂಡದ ಪರ ದೇವದತ್ ಪಡಿಕ್ಕಲ್ (Devdutt Padikkal) ಹಾಗೂ ಧ್ರುವ್ ಜುರೇಲ್ ( Dhruv Jurel) ಶತಕ ಬಾರಿಸಿದರೆ, ನಾಯಕ ಶುಭ್​ಮನ್ ಗಿಲ್ ಹಾಗೂ ರಿಷಭ್ ಪಂತ್ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಇತ್ತ ಲಂಕಾ ಪರ ಅಸಿತಾ ಫೆರ್ನಾಂಡೋ ಅತ್ಯಧಿಕ 4 ವಿಕೆಟ್ ಕಬಳಿಸಿದರೆ, ಕೇಶರ ನುವಂತ 2, ಲಹಿರು ಕುಮಾರ ಹಾಗೂ ಪ್ರಬಾತ್ ಜಯಸೂರ್ಯ ತಲಾ 1 ವಿಕೆಟ್ ಪಡೆದರು.

ಪಂತ್- ಜುರೇಲ್ ಜೊತೆಯಾಟ

ಮೊದಲ ದಿನದಂದು 5 ವಿಕೆಟ್‌ಗಳನ್ನು ಕಳೆದುಕೊಂಡು 300 ರನ್ ಕಲೆಹಾಕಿದ್ದ ಟೀಂ ಇಂಡಿಯಾ ಎರಡನೇ ದಿನದಂದು ಇಲ್ಲಿಂದ ತನ್ನ ಇನ್ನಿಂಗ್ಸ್ ಮುಂದುವರೆಸಿತು. ಆದರೆ ಎರಡನೇ ದಿನದಾಟದ ಮೊದಲ ಸೆಷನ್​ನ ಆರಂಭದಲ್ಲೇ ಯುವ ಆಟಗಾರ ಸರಾಂಶ್ ಜೈನ್ 6 ರನ್​ಗಳಿಗೆ ಔಟಾದರು. ಹೀಗಾಗಿ ಗಾಯದಿಂದಾಗಿ ಮೊದಲ ದಿನ ಅರ್ಧಕ್ಕೆ ಬ್ಯಾಟಿಂಗ್‌ ನಿಲ್ಲಿಸಿದ್ದ ರಿಷಭ್ ಪಂತ್ ಬ್ಯಾಟಿಂಗ್​ಗೆ ಬಂದರು. ಪಂತ್​ಗೆ ಸಾಥ್ ನೀಡಿದ ಜುರೇಲ್ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಇಬ್ಬರು ಅರ್ಧಶತಕ ಬಾರಿಸುವುದರೊಂದಿಗೆ ತಂಡವನ್ನು 400 ರನ್​ಗಳ ಗಡಿ ದಾಟಿಸಿದರು. ಹೀಗಾಗಿ ಭೋಜನ ವಿರಾಮದ ವೇಳೆಗೆ ಟೀಂ ಇಂಡಿಯಾ 6 ವಿಕೆಟ್‌ ಕಳೆದುಕೊಂಡು 419 ರನ್ ಕಲೆಹಾಕಿತು. ರಿಷಭ್ ಪಂತ್ 63 ರನ್‌ ಮತ್ತು ಧ್ರುವ್ ಜುರೆಲ್ 59 ರನ್‌ ಬಾರಿಸಿ ಅಜೇಯರಾಗಿ ಉಳಿದಿದ್ದಲ್ಲದೆ 112 ರನ್‌ಗಳ ಜೊತೆಯಾಟವನ್ನು ನಿರ್ಮಿಸಿದರು.

ಜುರೇಲ್ ಶತಕಕ್ಕೆ ಮಳೆ ಅಡ್ಡಿ

ಎರಡನೇ ಸೆಷನ್ ಆರಂಭದಲ್ಲೇ ತಂಡ ತನ್ನ 7ನೇ ವಿಕೆಟ್ ಕಳೆದುಕೊಂಡಿತು. ರಿಷಭ್ ಪಂತ್ ಮೊದಲ ಎಸೆತದಲ್ಲೇ ಔಟಾದರು. ಮಾನವ್ ಸುತಾರ್ ಕೂಡ 18 ರನ್​ಗಳ ಕಾಣಿಕೆ ನೀಡಿ ಪೆವಿಲಿಯನ್ ಸೇರಿಕೊಂಡರು. ಆದಾಗ್ಯೂ ಒಂದು ತುದಿಯಲ್ಲಿ ತಾಳ್ಮೆಯ ಇನ್ನಿಂಗ್ಸ್ ಕಟ್ಟುತ್ತಿದ್ದ ಜುರೇಲ್​ಗೆ ಸಿರಾಜ್ ಸಾಥ್ ನೀಡಿದರು. ಆದರೆ ಜುರೇಲ್ ಶತಕದ ಸಮೀಪದಲ್ಲಿದ್ದಾಗ ಮಳೆ ಆಟಕ್ಕೆ ಅಡ್ಡಿಪಡಿಸಿತು. ಇದರಿಂದ ಅಂಪೈರ್​ಗಳು ಚಹಾ ವಿರಾಮವನ್ನು ಘೋಷಿಸಿದರು. ಮಳೆ ನಿಂತ ಬಳಿಕ ಮೂರನೇ ಸೆಷನ್ ಆರಂಭವಾಯಿತು.

IND vs SL: ಯಶಸ್ವಿ ಜೈಸ್ವಾಲ್​ಗೆ ಡಬಲ್ ಶಾಕ್ ನೀಡಿದ ಐಸಿಸಿ; ಲಂಕಾ ವೇಗಿ ವಿರುದ್ಧವೂ ಕ್ರಮ

ಶತಕ ಪೂರೈಸಿದ ಜುರೇಲ್

ಮೂರನೇ ಸೆಷನ್​ನಲ್ಲಿ ತಮ್ಮ ಆಟ ಮುಂದುವರೆಸಿದ ಜುರೇಲ್ ಶತಕ ಬಾರಿಸಲು ಕೊಂಚ ಹೆಚ್ಚು ಸಮಯವನ್ನೇ ತೆಗೆದುಕೊಂಡರು. 99 ರನ್​ಗಳಿಂದ 100 ರನ್ ಪೂರೈಸಲು ಜುರೇಲ್ ಬರೋಬ್ಬರಿ 13 ಎಸೆತಗಳನ್ನು ತೆಗೆದುಕೊಂಡರು. ಜುರೇಲ್ ಶತಕದ ಬಳಿಕ ಸಿರಾಜ್ ವಿಕೆಟ್ ಪತನವಾಯಿತು. ನಂತರ ಬಂದ ಪ್ರಸಿದ್ಧ್ ಕೃಷ್ಣ ಬೌಂಡರಿ ಬಾರಿಸುವ ಮೂಲಕ ತಂಡವನ್ನು 500 ರನ್​ಗಳ ಗಡಿ ದಾಟಿಸಿದರು. ಕೂಡಲೇ ನಾಯಕ ಶುಭ್​ಮನ್ ಗಿಲ್ ಇನ್ನಿಂಗ್ಸ್ ಡಿಕ್ಲೇರ್ ಘೋಷಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:08 pm, Mon, 24 August 26

Follow Us
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ