AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ಶ್ರೀಲಂಕಾ ಏಷ್ಯಾಕಪ್ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿ?: ಇಲ್ಲಿದೆ ಹವಾಮಾನ ವರದಿ

IND vs SL, Asia Cup Final Weather Report: ಹವಾಮಾನ ಮುನ್ಸೂಚನೆಯ ಪ್ರಕಾರ, ಏಷ್ಯಾಕಪ್ 2023 ಭಾರತ ಮತ್ತು ಶ್ರೀಲಂಕಾ ಫೈನಲ್ ಪಂದ್ಯಕ್ಕೆ ಭಾನುವಾರವೂ ಮಳೆ ಅಡ್ಡಿ ಪಡಿಸುವ ನಿರೀಕ್ಷೆಯಿದೆ. ಕೊಲಂಬೊದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ತುಂತುರು ಮಳೆ ಮತ್ತು ಸೂರ್ಯನ ಬೆಳಕು ಕಣ್ಣಾಮುಚ್ಚಾಲೆ ಆಡುತ್ತಿದೆ.

ಭಾರತ-ಶ್ರೀಲಂಕಾ ಏಷ್ಯಾಕಪ್ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿ?: ಇಲ್ಲಿದೆ ಹವಾಮಾನ ವರದಿ
IND vs SL Asia Cup Final Weather
Vinay Bhat
|

Updated on: Sep 16, 2023 | 11:30 AM

Share

ಏಷ್ಯಾಕಪ್ 2023 ಟೂರ್ನಿ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಸೆಪ್ಟೆಂಬರ್ 17 ಭಾನುವಾರದಂದು ಭಾರತ ಹಾಗೂ ಶ್ರೀಲಂಕಾ ನಡುನೆ ಏಷ್ಯಾಕಪ್ ಫೈನಲ್ (Asia Cup 2023 Final) ಪಂದ್ಯ ನಡೆಯಲಿದೆ. ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ಈ ಹೈವೋಲ್ಟೇಜ್ ಮ್ಯಾಚ್ ಏರ್ಪಡಿಸಲಾಗಿದೆ. 2023 ರ ಏಷ್ಯಾಕಪ್‌ನ ಪ್ರತಿಯೊಂದು ಪಂದ್ಯದ ಮೇಲೆ ಮಳೆಯ ಕರಿ ನೆರಳು ಬಿದ್ದಿದೆ. ಕೆಲ ಪಂದ್ಯ ರದ್ದಾದರೆ, ಭಾರತ-ಪಾಕ್ ಪಂದ್ಯ ಮೀಸಲು ದಿನದಂದು ನಡೆಯಿತು. ಇದೀಗ ಹವಾಮಾನ ಮುನ್ಸೂಚನೆಯ ಪ್ರಕಾರ ಇಂಡೋ-ಲಂಕಾ ಫೈನಲ್ ಪಂದ್ಯಕ್ಕೆ ಭಾನುವಾರವೂ ಮಳೆ ಅಡ್ಡಿ ಪಡಿಸುವ ನಿರೀಕ್ಷೆಯಿದೆ.

ಕೊಲಂಬೊ ಹವಾಮಾನ ಮುನ್ಸೂಚನೆ

ಕೊಲಂಬೊದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ತುಂತುರು ಮಳೆ ಮತ್ತು ಸೂರ್ಯನ ಬೆಳಕು ಕಣ್ಣಾಮುಚ್ಚಾಲೆ ಆಡುತ್ತಿದೆ. ದುರದೃಷ್ಟವಶಾತ್, ಭಾರತ ಮತ್ತು ಶ್ರೀಲಂಕಾ ಏಷ್ಯಾಕಪ್ 2023 ರ ಫೈನಲ್ ಪಂದ್ಯದ ಮೇಲೆ ಮಳೆಯು ಪರಿಣಾಮ ಬೀರುವ ಸಾಧ್ಯತೆಯಿದೆ.

ಬಾಂಗ್ಲಾ ವಿರುದ್ಧದ ಸೋಲಿನ ಬಳಿಕ ರೋಹಿತ್ ಶರ್ಮಾ ಆಡಿದ ಮಾತುಗಳೇನು ನೋಡಿ

ಇದನ್ನೂ ಓದಿ
Image
ಕೊನೆಯ 10 ಓವರ್​ಗಳಲ್ಲಿ 173 ರನ್ ಚಚ್ಚಿ ವಿಶ್ವ ದಾಖಲೆ ಬರೆದ ಆಫ್ರಿಕಾ
Image
ಶೂನ್ಯ ಸುತ್ತುವುದರಲ್ಲಿ ವಿರಾಟ್ ಕೊಹ್ಲಿಯನ್ನು ಸರಿಗಟ್ಟಿದ ರೋಹಿತ್ ಶರ್ಮಾ..!
Image
ಭಾರತ-ಬಾಂಗ್ಲಾ ಪಂದ್ಯದ ನಡುವೆ ಬ್ಯಾಟಿಂಗ್ ಪ್ರ್ಯಾಕ್ಟೀಸ್​ಗೆ ಬಂದ ವಿರಾಟ್
Image
4 ಪಂದ್ಯಗಳಲ್ಲಿ 10 ಕ್ಯಾಚ್ ಕೈಚೆಲ್ಲಿದ ಟೀಂ ಇಂಡಿಯಾ!

ಪಂದ್ಯವು ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ. ಈ ಸಂದರ್ಭ ಮಳೆ ಬರುವ ಲಕ್ಷಣವಿಲ್ಲ. ಆದರೆ, ಸಂಜೆಯ ವೇಳೆಗೆ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ. ದಿನವಿಡೀ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ವೇಳೆಗೆ ಶೇ. 50ರಷ್ಟು ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಆದಾಗ್ಯೂ, ಆಟದ ಕೊನೆಯ ಭಾಗದಲ್ಲಿ ಮಳೆಯ ಪ್ರಮಾಣ ಶೇ. 68 ರಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಪಂದ್ಯದ ಮಧ್ಯೆ ಆಗಾಗ ಮಳೆ ಸುರಿಯಲಿದ್ದು, ಓವರ್‌ಗಳ ಕಡಿತಕ್ಕೆ ಕಾರಣವಾಗಬಹುದು. ದಿನವಿಡೀ ತಾಪಮಾನವು 24 ರಿಂದ 28 ಡಿಗ್ರಿಗಳವರೆಗೆ ಇರುತ್ತದೆ.

ಭಾರತ-ಶ್ರೀಲಂಕಾ ಫೈನಲ್ ಪಂದ್ಯ ಮಳೆಗೆ ರದ್ದಾದರೆ?

ಭಾರತ ಮತ್ತು ಶ್ರೀಲಂಕಾ ಏಷ್ಯಾಕಪ್ 2023 ಫೈನಲ್ ಹಣಾಹಣಿ ಭಾನುವಾರದಂದು ಮಳೆಯಿಂದ ರದ್ದಾದರೆ, ಮೀಸಲು ದಿನಕ್ಕೆ ಅವಕಾಶವಿದೆ. ಮಳೆ ಬಂದು ಪಂದ್ಯ ಅರ್ಧ ನಡೆದರೆ ಅಥವಾ ಪಂದ್ಯ ಆರಂಭವೇ ಆಗಿದಿದ್ದಲ್ಲಿ, ಮರುದಿನ (ಸೋಮವಾರ) ಮುಂದುವರೆಸುವ ಅವಕಾಶವಿದೆ. ಪಂದ್ಯ ಅರ್ಧಕ್ಕೆ ಮೊಟಕುಗೊಳಿಸಿದರೆ ಮುಂದಿನ ದಿನ ಅರ್ಧದಿಂದಲೇ ಮುಂದುವರೆಯಲಿದೆ.

ಸಾಮಾನ್ಯವಾಗಿ ಆಗಸ್ಟ್-ಸೆಪ್ಟೆಂಬರ್ ಅವಧಿಯಲ್ಲಿ ಶ್ರೀಲಂಕಾದಲ್ಲಿ ಭಾರೀ ಮಳೆಯಾಗುತ್ತದೆ. ಹೀಗಾಗಿ ಲಂಕಾ ಕ್ರಿಕೆಟ್ ಮಂಡಳಿ ಈ ತಿಂಗಳುಗಳಲ್ಲಿ ಇಲ್ಲಿ ಯಾವುದೇ ಪಂದ್ಯಗಳನ್ನು ನಿಗದಿಪಡಿಸುವುದಿಲ್ಲ. ಆದರೆ, ಪಾಕಿಸ್ತಾನಕ್ಕೆ ತೆರಳಲು ಭಾರತಕ್ಕೆ ಸರ್ಕಾರದ ಅನುಮತಿ ಇಲ್ಲದ ಕಾರಣ ಶ್ರೀಲಂಕಾಕ್ಕೆ ತನ್ನ ನಾಡಿನಲ್ಲಿ ಏಷ್ಯಾಕಪ್ 2023 ಅನ್ನು ಆಯೋಜಿಸುವುದು ಅನಿವಾರ್ಯವಾಗಿದ್ದವು. ಈ ಕಾರಣಕ್ಕಾಗಿ ಲಂಕಾದಲ್ಲೇ ಮಳೆಯ ನಡುವೆ ಪಂದ್ಯವನ್ನು ನಡೆಸಲಾಗುತ್ತಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ