AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಕೊಹ್ಲಿ, ರೋಹಿತ್ ಇಲ್ಲದ ಲಂಕಾ ಪ್ರವಾಸಕ್ಕೆ ಧವನ್ ಅಲ್ಲ ಈ ಆಟಗಾರ ಕ್ಯಾಪ್ಟನ್ ಆಗಬೇಕಿತ್ತಂತೆ

ಲಂಕಾ ಪ್ರವಾಸಕ್ಕೆ ಶಿಖರ್ ಧವನ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿದಾಗ ಒಂದಿಷ್ಟು ಮಾತುಗಳು ಕೇಳಿಬಂದಿದ್ದವು. ಇತ್ತ ಬಿಸಿಸಿಐ ಕೂಡ ಧವನ್​ರನ್ನು ಕ್ಯಾಪ್ಟನ್ ಆಗಿ ಆಯ್ಕೆ ಮಾಡಿದ್ದಕ್ಕೆ ಯಾವುದೇ ಕಾರಣವನ್ನೂ ತಿಳಿಸಿಲ್ಲ.

IND vs SL: ಕೊಹ್ಲಿ, ರೋಹಿತ್ ಇಲ್ಲದ ಲಂಕಾ ಪ್ರವಾಸಕ್ಕೆ ಧವನ್ ಅಲ್ಲ ಈ ಆಟಗಾರ ಕ್ಯಾಪ್ಟನ್ ಆಗಬೇಕಿತ್ತಂತೆ
Shikhar Dhawan
TV9 Web
| Edited By: |

Updated on: Jul 14, 2021 | 1:52 PM

Share

ಭಾರತ ಕ್ರಿಕೆಟ್ ತಂಡ (Indian Crcket Team) ಶ್ರೀಲಂಕಾ ವಿರುದ್ಧ ಏಕದಿನ ಮತ್ತು ಟಿ-20 ಸರಣಿಯನ್ನು ಆಡಲು ಲಂಕಾನ್ನರ ನಾಡಿಗೆ ತೆರಳಿದೆ. ಇದೇ ಜುಲೈ 18 ರಂದು ಮೊದಲ ಏಕದಿನ ಪಂದ್ಯ ನಡೆಯಲಿದೆ. ಟೀಮ್ ಇಂಡಿಯಾದ ಖಾಯಂ ನಾಯಕ ವಿರಾಟ್ ಕೊಹ್ಲಿ (Virat Kohli), ಉಪ ನಾಯಕ ರೋಹಿತ್ ಶರ್ಮಾ ಸೇರಿದಂತೆ ಪ್ರಮುಖ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿ ಭಾರತದ ಯುವ ಪಡೆ ಶಿಖರ್ ಧವನ್ (Shikhar Dhawan) ನೇತೃತ್ವದಲ್ಲಿ ಸೆಣೆಸಾಟ ನಡೆಸಲಿದೆ.

ಲಂಕಾ ಪ್ರವಾಸಕ್ಕೆ ಶಿಖರ್ ಧವನ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿದಾಗ ಒಂದಿಷ್ಟು ಮಾತುಗಳು ಕೇಳಿಬಂದಿದ್ದವು. ಇತ್ತ ಬಿಸಿಸಿಐ ಕೂಡ ಧವನ್​ರನ್ನು ಕ್ಯಾಪ್ಟನ್ ಆಗಿ ಆಯ್ಕೆ ಮಾಡಿದ್ದಕ್ಕೆ ಯಾವುದೇ ಕಾರಣವನ್ನೂ ತಿಳಿಸಿಲ್ಲ. ಸದ್ಯ ಇದೇ ವಿಚಾರ ಮತ್ತೆ ಸದ್ದು ಮಾಡುತ್ತಿದ್ದು, ಲಂಕಾ ಪ್ರವಾಸಕ್ಕೆ ಧವನ್ ಬದಲು ಹಾರ್ದಿಕ್ ಪಾಂಡ್ಯ ಭಾರತ ತಂಡದ ನಾಯಕನಾಗಬೇಕಿತ್ತು ಎಂದು ಪಾಂಡ್ಯ ಅವರ ಬಾಲ್ಯದ ಕೋಚ್ ಜಿತೇಂದ್ರ ಸಿಂಗ್ ಹೇಳಿದ್ದಾರೆ.

“ಹಾರ್ದಿಕ್ ಪಾಂಡ್ಯರನ್ನು ಶ್ರೀಲಂಕಾ ಪ್ರವಾಸಕ್ಕೆ ನಾಯಕನಾಗಿ ಆಯ್ಕೆ ಮಾಡದಿರುವುದು ನಿಜಕ್ಕೂ ಆಶ್ಚರ್ಯ ಮೂಡಿಸಿತು. ಮುಂದಿನ 5-6 ವರ್ಷಗಳ ವರೆಗೆ ಹಾರ್ದಿಕ ಕ್ರಿಕೆಟ್ ಆಡುವ ಸಾಮರ್ಥ್ಯ ಹೊಂದಿದ್ದಾರೆ. ಹೀಗಾಗಿ ನಾಯಕನ ಸ್ಥಾನಕ್ಕೆ ಅವರು ಉತ್ತಮ ಆಯ್ಕೆ. ಅವರಲ್ಲಿ ಹೊಸ ಹೊಸ ಆಲೋಚನೆಗಳಿವೆ, ಸಾಕಷ್ಟು ಎನರ್ಜಿಯಿದೆ. ವೈಟ್ ಬಾಲ್ ಕ್ರಿಕೆಟ್​ಗೆ ಅವರನ್ನು ನಾಯಕನನ್ನಾಗಿ ಮಾಡುವುದು ಉತ್ತಮ ನಿರ್ಧಾರ” ಎಂದು ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಆಲ್​ರೌಂಡರ್ ಹಾರ್ದಿಕ್ ಭಾರತ ಪರ 11 ಟೆಸ್ಟ್​, 60 ಏಕದಿನ ಮತ್ತು 48 ಟಿ-20 ಪಂದ್ಯಗಳನ್ನು ಆಡಿದ್ದಾರೆ. ಆದರೆ, ಕಳೆದ ಎರಡು ಐಪಿಎಲ್ ಆವೃತ್ತಿಯಿಂದ ಪಾಂಡ್ಯ ಸಿಂಗಲ್ ಓವರ್ ಬೌಲಿಂಗ್ ಮಾಡಲಿಲ್ಲ. ಭಾರತ ಪರವೂ ಖಾಯಂ ಬೌಲರ್​ ಆಗಿ ಆಟವಾಡಿಲ್ಲ.

ಸದ್ಯದ ಶ್ರೀಲಂಕಾ ಪ್ರವಾಸದಲ್ಲಿ ಧವನ್, ಭುವನೇಶ್ವರ್ ಕುಮಾರ್ ಮತ್ತು ಹಾರ್ದಿಕ್ ಪಾಂಡ್ಯ ಅತಿ ಹೆಚ್ಚು ಅನುಭವವುಳ್ಳ ಆಟಗಾರರಾಗಿದ್ದಾರೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಇಂಗ್ಲೆಂಡ್ ವಿರುದ್ಧದ ಟೆಸ್ಟ್​ ಸರಣಿಗಾಗಿ ಆಂಗ್ಲರ ನಾಡಿಗೆ ತೆರಳಿದ್ದಾರೆ.

ಧವನ್ ನೇತೃತ್ವದ ಟೀಮ್ ಇಂಡಿಯಾ ಜುಲೈ 18 ರಿಂದ ಮೂರು ಪಂದ್ಯಗಳ ಏಕದಿನ ಸರಣಿಯೊಂದಿಗೆ ತಮ್ಮ ಶ್ರೀಲಂಕಾ ಪ್ರವಾಸವನ್ನು ಆರಂಭಿಸಲಿದೆ. ನಂತರ ಜುಲೈ 25 ರಿಂದ ಜುಲೈ 29 ರವರೆಗೆ ಮೂರು ಪಂದ್ಯಗಳ ಟಿ 20 ಸರಣಿಯನ್ನು ಆಡಲಿದೆ. ಏಕದಿನ ಮತ್ತು ಟಿ 20 ಐ ಸರಣಿಯ ಎಲ್ಲಾ ಪಂದ್ಯಗಳು ಪ್ರಸಿದ್ಧ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ICC World Test Championship ಮುಂದಿನ ಆವೃತ್ತಿ ವೇಳಾಪಟ್ಟಿ ಪ್ರಕಟ: ಭಾರತದ ಮೊದಲ ಎದುರಾಳಿ ಈ ತಂಡ

Tokyo Olympic: ಒಲಿಂಪಿಕ್ಸ್​ನಿಂದ ಮರಳಿದ ಬಳಿಕ ನಾವು ಒಟ್ಟಿಗೆ ಐಸ್​ಕ್ರೀಂ ತಿನ್ನೊಣ: ಪಿವಿ ಸಿಂಧು ಜೊತೆ ಮೋದಿ ಮಾತುಕತೆ

Follow Us
Web contact
Web contact

TV9 Kannada

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು