AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಟೀಮ್ ಇಂಡಿಯಾದ ಈ 9 ಆಟಗಾರರು ಮುಂದಿನ ಎರಡೂ ಟಿ-20ಯಲ್ಲಿ ಕಣಕ್ಕಿಳಿಯಲ್ಲ: ಯಾರೆಲ್ಲ ಗೊತ್ತೇ?

Krunal Pandya: ಕ್ರುನಾಲ್ ಪಾಂಡ್ಯ ಜೊತೆ ಸಂಪರ್ಕದಲ್ಲಿದ್ದ ಆಟಗಾರರ ಹೆಸರು ಹೊರಬಿದ್ದಿದೆ. ಅಲ್ಲದೆ ಇವರು ಬಾಕಿ ಉಳಿದಿರುವ ಎರಡು ಟಿ-20 ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ಹೇಳಲಾಗಿದೆ.

IND vs SL: ಟೀಮ್ ಇಂಡಿಯಾದ ಈ 9 ಆಟಗಾರರು ಮುಂದಿನ ಎರಡೂ ಟಿ-20ಯಲ್ಲಿ ಕಣಕ್ಕಿಳಿಯಲ್ಲ: ಯಾರೆಲ್ಲ ಗೊತ್ತೇ?
India vs Sri Lanka
TV9 Web
| Edited By: |

Updated on: Jul 28, 2021 | 10:30 AM

Share

ಟೀಮ್ ಇಂಡಿಯಾದ ಸ್ಟಾರ್ ಆಲ್ರೌಂಡರ್ ಕ್ರುನಾಲ್ ಪಾಂಡ್ಯ (Krunal Pandya) ಅವರಿಗೆ ಕೊರೋನಾ ಪಾಸಿಟಿವ್ ಬಂದ ಪರಿಣಾಮ ಭಾರತ ಹಾಗೂ ಶ್ರೀಲಂಕಾ (India vs Sri Lanka) ನಡುವೆ ಮಂಗಳವಾರ ನಡೆಯಬೇಕಿದ್ದ ಎರಡನೇ ಟಿ-20 ಪಂದ್ಯ ಇಂದು ಬುಧವಾರ ನಡೆಯಲಿದೆ. ಕ್ರುನಾಲ್ ಪಾಂಡ್ಯ ಲಂಕಾ ವಿರುದ್ಧದ ಸರಣಿಯಿಂದಲೇ ಹೊರಬಿದ್ದಿದ್ದಾರೆ. ಇತ್ತ ಇವರ ಜೊತೆ ಸಂಪರ್ಕದಲ್ಲಿದ್ದ 8 ಆಟಗಾರರ ಕೋವಿಡ್ (Corona virus) ವರದಿ ಬಂದಿದ್ದು ನೆಗೆಟಿವ್ ಇದೆ. ಆದರೂ ಭಾರತಕ್ಕೆ ದೊಡ್ಡ ಹೊಡೆತ ಬಿದ್ದಿದೆ.

ಕ್ರುನಾಲ್ ಪಾಂಡ್ಯ ಜೊತೆ ಸಂಪರ್ಕದಲ್ಲಿದ್ದ ಆಟಗಾರರ ಹೆಸರು ಹೊರಬಿದ್ದಿದೆ. ಅಲ್ಲದೆ ಇವರು ಬಾಕಿ ಉಳಿದಿರುವ ಎರಡು ಟಿ-20 ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ಇನ್​ಸೈಡ್ ಸ್ಟೋರ್ಟ್ಸ್ ವರದಿ ಮಾಡಿದೆ. ಇದರ ಪ್ರಕಾರ ಟೀಮ್ ಇಂಡಿಯಾದ ಪೃಥ್ವಿ ಶಾ, ಸೂರ್ಯಕುಮಾರ್, ಹಾರ್ದಿಕ್ ಪಾಂಡ್ಯ, ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಇಶಾನ್ ಕಿಶನ್, ದೇವದತ್ ಪಡಿಕ್ಕಲ್ ಮತ್ತು ಕೃಷ್ಣಪ್ಪ ಗೌತಮ್ ಸೇರಿದಂತೆ ಒಟ್ಟು 9 ಆಟಗಾರರನ್ನು ಸಂಪೂರ್ಣವಾಗಿ ಐಸೋಲೇಶನ್‌ ಮಾಡಲಾಗಿದೆ. ಇವರು ಎರಡನೇ ಹಾಗೂ ಮೂರನೇ ಟಿ-20 ಯಲ್ಲಿ ಆಡುವುದಿಲ್ಲ ಎಂದು ಹೇಳಲಾಗಿದೆ.

ಮಂಗಳವಾರ ಈ ಆಟಗಾರರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು ವರದಿ ನೆಗೆಟಿವ್ ಬಂದಿದೆ. ಇಂದು ಬುಧವಾರ ಮತ್ತೊಮ್ಮೆ ಕೊರೊನಾ ಪರೀಕ್ಷೆ ಮಾಡಲಾಗುತ್ತದೆಯಂತೆ. ಇನ್ನೂಕ್ರುನಾಲ್‌ ಅವರನ್ನು 7 ದಿನಗಳ ಕಾಲ ಅಗತ್ಯದ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಅವರು ಭಾರತಕ್ಕೂ ಮರಳಬಾರದು ಎಂದು ಸೂಚಿಸಲಾಗಿದೆ. ಭಾರತೀಯ ತಂಡ ಜುಲೈ 30ರಂದು ಭಾರತಕ್ಕೆ ಮರಳಲಿದ್ದರೂ ಪಾಂಡ್ಯ ಶ್ರೀಲಂಕಾದಲ್ಲಿದ್ದು ಕ್ವಾರಂಟೈನ್ ಪೂರೈಸಿದ ಬಳಿಕ ಭಾರತಕ್ಕೆ ಹಿಂದಿರುಗ ಬೇಕಾದ ಪರಿಸ್ಥಿತಿ ಎದುರಾಗಿದೆ.

“ಕ್ರುನಾಲ್ ಪಾಂಡ್ಯ ಅವರಿಗೆ ಗಂಟಲು ನೋವು ಮತ್ತು ಕೆಮ್ಮು ಕಾಣಿಸಿಕೊಂಡಿತ್ತು.ಹೀಗಾಗಿ ಸರಣಿಯಿಂದ ಅವರು ಸಂಪೂರ್ಣವಾಗಿ ಹೊರಬಿದ್ದಿದ್ದಾರೆ. ಅವರ ಸಂಪರ್ಕಕ್ಕೆ ಬಂದಿದ್ದ 8 ಆಟಗಾರರ ಕೋವಿಡ್‌-19 ವರದಿ ನೆಗೆಟಿವ್ ಬಂದಿದೆ” ಎಂದು ಬಿಸಿಸಿಐ ವೈದ್ಯಾಧಿಕಾರಿ ತಿಳಿಸಿದ್ದಾರೆ.

ಶಾ-ಸೂರ್ಯಕುಮಾರ್​ಗೆ ದೊಡ್ಡ ಸಂಕಷ್ಟ:

ಹೌದು, ಕ್ರುನಾಲ್ ಪಾಂಡ್ಯಗೆ ಕೊರೋನಾ ಕಾಣಿಸಿಕೊಂಡಿರುವುದರಿಂದ ಪೃಥ್ವಿ ಶಾ ಮತ್ತು ಸೂರ್ಯಕುಮಾರ್ ಯಾದವ್​​ಗೆ ದೊಡ್ಡ ಸಂಕಷ್ಟ ಎದುರಾಗಿದೆ. ಇವರಿಬ್ಬರೂ ಲಂಕಾ ಸರಣಿ ಮುಗಿದ ತಕ್ಷಣ ಇಂಗ್ಲೆಂಡ್ ಪ್ರವಾಸಕ್ಕೆ ತೆರಳಬೇಕಿತ್ತು. ಆದರೆ ಇವರಿಬ್ಬರು ಕಡ್ಡಾಯವಾಗಿ ಕ್ವಾರಂಟೈನ್​ನಲ್ಲಿ ಇರಬೇಕಾಗಿರುವುದರಿಂದ ಇಂಗ್ಲೆಂಡ್ ವಿಮಾನವೇರಲು ಸಾಧ‍್ಯವಿಲ್ಲದಂತಾಗಿದೆ.

Tokyo Olympics 2020: ಭಾರತ ಮಹಿಳಾ ಹಾಕಿ ತಂಡಕ್ಕೆ ಭಾರೀ ಮುಖಭಂಗ: ಸತತ ಮೂರನೇ ಸೋಲು

Tokyo Olympics: ರೋಚಕ ಪಂದ್ಯದಲ್ಲಿ ಪಿವಿ ಸಿಂಧೂಗೆ ಜಯ: ರೌಂಡ್ 16ಗೆ ಲಗ್ಗೆ

(India vs Sri Lanka Prithvi Shaw Suryakumar yadav Ishan Kishan among 9 Indian players not available for ind vs sl 2nd and 3rd T20 )

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?