AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Sri Lanka T20: ಲಂಕನ್ನರ ಮಿಂಚಿನ ಬೌಲಿಂಗ್: ಸಾಧಾರಣ ಸವಾಲು ನೀಡಿದ ಟೀಮ್ ಇಂಡಿಯಾ

ಶಿಖರ್ ಧವನ್ (ನಾಯಕ), ದೇವದತ್ ಪಡಿಕ್ಕಲ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ನಿತೀಶ್ ರಾಣಾ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಭುವನೇಶ್ವರ್ ಕುಮಾರ್, ನವದೀಪ್ ಸೈನಿ, ಚೇತನ್ ಸಕಾರಿಯಾ, ರಾಹುಲ್ ಚಹರ್

India vs Sri Lanka T20: ಲಂಕನ್ನರ ಮಿಂಚಿನ ಬೌಲಿಂಗ್: ಸಾಧಾರಣ ಸವಾಲು ನೀಡಿದ ಟೀಮ್ ಇಂಡಿಯಾ
India vs Sri Lanka T20
TV9 Web
| Edited By: |

Updated on:Jul 28, 2021 | 9:37 PM

Share

ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2ನೇ ಟಿ20 ಪಂದ್ಯದಲ್ಲಿ ಭಾರತ ಶ್ರೀಲಂಕಾಗೆ 133 ರನ್​ಗಳ ಟಾರ್ಗೆಟ್ ನೀಡಿದೆ. ಪ್ರಮುಖ ಆಟಗಾರರ ಅಲಭ್ಯತೆಯೊಂದಿಗೆ ಕಣಕ್ಕಿಳಿದ ಟೀಮ್ ಇಂಡಿಯಾ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆಯಿತು. ಅದರಂತೆ ಇನಿಂಗ್ಸ್​ ಆರಂಭಿಸಿದ ಶಿಖರ್ ಧವನ್-ರುತುರಾಜ್ ಗಾಯಕ್ವಾಡ್ ಭಾರತಕ್ಕೆ ಉತ್ತಮ ಭಾರತ ಒದಗಿಸಿದರು. ಎಚ್ಚರಿಕೆಯೊಂದಿಗೆ ಬ್ಯಾಟ್ ಬೀಸಿದ ಈ ಜೋಡಿ ಮೊದಲ ವಿಕೆಟ್​ಗೆ 49 ರನ್​ ಕಲೆಹಾಕಿತು. ಈ ವೇಳೆ ಶನಕಾ ಎಸೆತದಲ್ಲಿ ಮಿನೋದ್​ಗೆ ಕ್ಯಾಚ್ ನೀಡಿ ರುತುರಾಜ್ (21) ನಿರ್ಗಮಿಸಿದರು.

ಆ ಬಳಿಕ ಕಣಕ್ಕಿಳಿದ ಕನ್ನಡಿಗ ದೇವದತ್ ಪಡಿಕ್ಕಲ್ ನಾಯಕನಿಗೆ ಉತ್ತಮ ಸಾಥ್ ನೀಡಿದರು. ಆದರೆ ತಂಡದ ಮೊತ್ತ 81 ಆಗಿದ್ದ ವೇಳೆ ಧನಂಜಯ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆಗಿ ಶಿಖರ್ ಧವನ್ (40) ನಿರ್ಗಮಿಸಿದರು. ಇನ್ನು 1 ಸಿಕ್ಸ್ ಹಾಗೂ 1 ಬೌಂಡರಿ ಬಾರಿಸಿ ಭರವಸೆ ಮೂಡಿಸಿದ್ದ ಪಡಿಕ್ಕಲ್ ದೊಡ್ಡ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. 23 ಎಸೆತಗಳಲ್ಲಿ 29 ರನ್ ಬಾರಿಸಿ ಹಸರಂಗ ಎಸೆತದಲ್ಲಿ ಕ್ಲೀನ್ ಬೌಲ್ಡ್ ನಿರಾಸೆ ಮೂಡಿಸಿದರು. ಇದರ ಬೆನ್ನಲ್ಲೇ 7 ರನ್​ಗಳಿಸಿ ಸಂಜು ಸ್ಯಾಮ್ಸನ್ ಕೂಡ ಧನಂಜಯ ಬೌಲ್ಡ್ ಆಗಿ ಹೊರನಡೆದರು.

ಈ ಹಂತದಲ್ಲಿ ಜೊತೆಗೂಡಿದ ನಿತೀಶ್ ರಾಣಾ ಹಾಗೂ ಭುವನೇಶ್ವರ್ ಕುಮಾರ್ ತಂಡದ ಮೊತ್ತವನ್ನು 100ರ ಗಡಿದಾಟಿಸಿದರು. ಇನ್ನು ಕೊನೆಯ ಓವರ್​ನಲ್ಲಿ 9 ರನ್​ಗಳಿಸಿದ್ದ ನಿತೀಶ್ ರಾಣಾ ವಿಕೆಟ್ ಒಪ್ಪಿಸಿದರೆ, ಅನುಭವಕ್ಕೆ ತಕ್ಕಂತೆ ಬ್ಯಾಟಿಂಗ್ ಮಾಡಿದ ಭುವನೇಶ್ವರ್ ಕುಮಾರ್ 13 ರನ್​ ಕಲೆಹಾಕಿ ನಿಗದಿತ 20 ಓವರ್​ನಲ್ಲಿ ತಂಡದ ಮೊತ್ತವನ್ನು 5 ವಿಕೆಟ್​ ನಷ್ಟಕ್ಕೆ 132 ಕ್ಕೆ ತಂದು ನಿಲ್ಲಿಸಿದರು.

ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ 1-0 ಮುನ್ನಡೆ ಸಾಧಿಸಿದ್ದು, ಈ ಪಂದ್ಯದಲ್ಲಿ ಗೆದ್ದರೆ ಸರಣಿ ವಶವಾಗಲಿದೆ. ಅತ್ತ ಈ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸುವ ತವಕದಲ್ಲಿದೆ ಶ್ರೀಲಂಕಾ.

2ನೇ ಟಿ20 ಪಂದ್ಯದ ವೇಳೆ ಕಣಕ್ಕಿಳಿದ ಟೀಮ್ ಇಂಡಿಯಾ ಹೀಗಿದೆ: ಶಿಖರ್ ಧವನ್ (ನಾಯಕ), ದೇವದತ್ ಪಡಿಕ್ಕಲ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ನಿತೀಶ್ ರಾಣಾ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಭುವನೇಶ್ವರ್ ಕುಮಾರ್, ನವದೀಪ್ ಸೈನಿ, ಚೇತನ್ ಸಕಾರಿಯಾ, ರಾಹುಲ್ ಚಹರ್

ಇದನ್ನೂ ಓದಿ: ಮದ್ಯಪಾನ ಮಾಡಿ ಶತಕ ಸಿಡಿಸಿದ್ದ ಗ್ಯಾರಿ ಸೋಬರ್ಸ್​..!

ಇದನ್ನೂ ಓದಿ: ಸೂರ್ಯಕುಮಾರ್ ಯಾದವ್​ಗೆ ಅವಕಾಶ ಕೈತಪ್ಪುವ ಆತಂಕ

Published On - 9:37 pm, Wed, 28 July 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ