AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭ್ಯಾಸ ಪಂದ್ಯದಲ್ಲಿ ಹಾರ್ದಿಕ್ ಆರ್ಭಟ: ಧವನ್ ತಂಡದ ವಿರುದ್ಧ ಸಿಕ್ಸರ್​ಗಳ ಸುರಿಮಳೆ: ವಿಡಿಯೋ

ನಿನ್ನೆ ಗುರುವಾರದಂದು ಶ್ರೀಲಂಕಾದಲ್ಲಿ ನಡೆದ ಅಭ್ಯಾಸ ಪಂದ್ಯದಲ್ಲಿ ಶಿಖರ್ ಧವನ್ XI ತಂಡದ ವಿರುದ್ಧ ಭುವನೇಶ್ವರ್ ಕುಮಾರ್ XI ಟೀಮ್ ಭರ್ಜರಿ ಗೆಲುವು ಸಾಧಿಸಿದೆ.

ಅಭ್ಯಾಸ ಪಂದ್ಯದಲ್ಲಿ ಹಾರ್ದಿಕ್ ಆರ್ಭಟ: ಧವನ್ ತಂಡದ ವಿರುದ್ಧ ಸಿಕ್ಸರ್​ಗಳ ಸುರಿಮಳೆ: ವಿಡಿಯೋ
ಹಾರ್ದಿಕ್ ಪಾಂಡ್ಯ (ಫೈಲ್ ಚಿತ್ರ)
TV9 Web
| Updated By: shivaprasad.hs|

Updated on:Jul 09, 2021 | 12:49 PM

Share

ಏಕದಿನ ಹಾಗೂ ಟಿ-20 ಸರಣಿಗಾಗಿ ಲಂಕಾನ್ನರ ನಾಡಿನಲ್ಲಿ ಬೀಡುಬಿಟ್ಟಿರುವ ಭಾರತ ಕ್ರಿಕೆಟ್ ತಂಡ ಭರ್ಜರಿ ಅಭ್ಯಾಸದಲ್ಲಿ ನಿರತವಾಗಿದೆ. ಇದೇ ಜುಲೈ 13 ರಿಂದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಅರ್ಧಕ್ಕೆ ನಿಂತ ಐಪಿಎಲ್ ಬಳಿಕ ಯಾವುದೇ ಪಂದ್ಯವನ್ನು ಆಡದ ಶಿಖರ್ ಧವನ್ ನೇತೃತ್ವದ ಈ ತಂಡಕ್ಕೆ ಅಭ್ಯಾಸ ಪಂದ್ಯ ಆಯೋಜಿಸಿಲ್ಲ. ಇದಕ್ಕಾಗಿ ತಮ್ಮದೇ ತಂಡವನ್ನು ಎರಡು ಭಾಗಗಳನ್ನಾಗಿ ಮಾಡಿ ಪ್ರ್ಯಾಕ್ಟೀಸ್ ಮ್ಯಾಚ್ ಆಡುತ್ತಿದೆ.

ನಿನ್ನೆ ಗುರುವಾರದಂದು ನಡೆದ ಅಭ್ಯಾಸ ಪಂದ್ಯದಲ್ಲಿ ಶಿಖರ್ ಧವನ್ XI ತಂಡದ ವಿರುದ್ಧ ಭುವನೇಶ್ವರ್ ಕುಮಾರ್ XI ಟೀಮ್ ಭರ್ಜರಿ ಗೆಲುವು ಸಾಧಿಸಿದೆ. ಭುವಿ ತಂಡದ ಸದಸ್ಯರಾಗಿದ್ದ ಹಾರ್ದಿಕ್ ಪಾಂಡ್ಯ, ಪೃಥ್ವಿ ಶಾ, ಸೂರ್ಯ ಕುಮಾರ್ ಯಾದವ್ ಮೈದಾನದ ಮೂಲೆಮೂಲೆಗೆ ಚೆಂಡನ್ನು ಅಟ್ಟಿ ಪರಾಕ್ರಮ ಮೆರೆದಿದ್ದಾರೆ. ಅದರಲ್ಲೂ ಹಾರ್ದಿಕ್ ಬ್ಯಾಟ್​ನಿಂದ ಸಿಕ್ಸರ್​ಗಳ ಆರ್ಭಟ ಜೋರಾಗಿಯೇ ಇತ್ತು.

ಭುವಿ ಹಾಗೂ ಧವನ್ ತಂಡದ ನಡುವಣ ಅಭ್ಯಾಸ ಪಂದ್ಯದ ವಿಡಿಯೋವನ್ನು ಶ್ರೀಲಂಕಾ ಕ್ರಿಕೆಟ್ ತನ್ನ ಯೂಟ್ಯೂಬ್ ಚಾನೆಲ್​ನಲ್ಲಿ ಹಂಚಿಕೊಂಡಿದೆ. ಎರಡು ನಿಮಿಷ ಮೂವತ್ತು ಸೆಕೆಂಡ್​ನಷ್ಟಿರುವ ಈ ವಿಡಿಯೋದಲ್ಲಿ ಪಾಂಡ್ಯ, ಶಾ ಸಿಕ್ಸರ್​ಗಳ ಮಳೆ ಸುರಿಸಿದ್ದಾರೆ. ಸದ್ಯ ಈ ವಿಡಿಯೋ ಭರ್ಜರಿ ವೈರಲ್ ಆಗುತ್ತಿದೆ.

ಇದರ ಜೊತೆಗೆ ಭಾರತೀಯ ಬೌಲರ್​ಗಳ ದಾಳಿಯ ವಿಡಿಯೋವನ್ನು ಲಂಕಾ ಕ್ರಿಕೆಟ್ ಶೇರ್ ಮಾಡಿದೆ. ಇದರಲ್ಲಿ ಕಳಪೆ ಫಾರ್ಮ್​ನಲ್ಲಿದ್ದ ಕುಲ್ದೀಪ್ ಯಾದವ್ 3 ವಿಕೆಟ್ ಕಿತ್ತು ಮಿಂಚಿದ್ದಾರೆ. ಜೊತೆಗೆ ನವ್​ದೀಪ್ ಸೈನಿ ಹಾಗೂ ಯಜುವೇಂದ್ರ ಚಹಾಲ್ ಎರಡು ವಿಕೆಟ್ ಪಡೆದಿದ್ದಾರೆ. ಚೇತನ್ ಸಕರಿಯ ಮತ್ತು ದೀಪಕ್ ಚಹಾರ್ ತಲಾ 1 ವಿಕೆಟ್ ತಮ್ಮದಾಗಿಸಿದ್ದಾರೆ. ಸೈನಿ ಅವರು ದೇವದತ್ ಪಡಿಕ್ಕಲ್ ಹಾಗೂ ಹಾರ್ದಿಕ್ ಪಾಂಡ್ಯ ಅವರ ಎರಡು ಪ್ರಮುಖ ವಿಕೆಟ್ ಕಿತ್ತರು.

ಶ್ರೀಲಂಕಾ ವಿರುದ್ಧ ಭಾರತ ತಂಡ ಒಟ್ಟು 6 ಪಂದ್ಯಗಳನ್ನು ಆಡಲಿದೆ. ಇದರಲ್ಲಿ ಮೂರು ಏಕದಿನ ಹಾಗೂ ಮೂರು ಟಿ-20 ಪಂದ್ಯಗಳು ಸೇರಿವೆ. ಮೊದಲ ಏಕದಿನ ಪಂದ್ಯ ಜುಲೈ 13 ರಂದು ನಡೆಯಲಿದೆ. ಎರಡನೇ ಪಂದ್ಯ ಜುಲೈ 16 ಹಾಗೂ ಅಂತಿಮ ಮೂರನೇ ಏಕದಿನ ಜುಲೈ 18ಕ್ಕೆ ನಿಗದಿ ಮಾಡಲಾಗಿದೆ. ಭಾರತೀಯ ಕಾಲಮಾನದ ಪ್ರಕಾರ ಏಕದಿನ ಪಂದ್ಯ ಮಧ್ಯಾಹ್ನ 2:30ಕ್ಕೆ ಆರಂಭವಾಗಲಿದೆ.

ಇನ್ನೂ ಜುಲೈ 21 ರಂದು ಮೊದಲ ಟಿ-20 ಪಂದ್ಯ ನಡೆಯಲಿದ್ದು, ಜುಲೈ 23ಕ್ಕೆ ಎರಡನೇ ಹಾಗೂ ಜುಲೈ 25 ರಂದು ಮೂರನೇ ಟಿ-20 ಪಂದ್ಯ ಆಯೋಜಿಸಲಾಗಿದೆ. ಇದು ಸಂಜೆ 7 ಗಂಟೆಗೆ ಶುರುವಾಗಲಿದೆ. ಎಲ್ಲಾ ಏಕದಿನ ಹಾಗೂ ಟಿ-20 ಪಂದ್ಯ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ಏರ್ಪಡಿಸಲಾಗಿದೆ.

ಭಾರತ ತಂಡ: ಶಿಖರ್ ಧವನ್ (ನಾಯಕ), ಪೃಥ್ವಿ ಶಾ, ದೇವದತ್ ಪಡಿಕ್ಕಲ್, ರುತುರಾಜ್ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ನಿತೀಶ್ ರಾಣ, ಇಶಾನ್ ಕಿಶನ್ (ವಿಕೆಟ್ ಕೀಪರ್). ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಯಜುವೇಂದ್ರ ಚಹಾಲ್, ರಾಹುಲ್ ಚಹಾರ್, ಕೆ. ಗೌತಮ್, ಕ್ರುನಾಲ್ ಪಾಂಡ್ಯ, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ, ಭುವನೇಶ್ವರ್ ಕುಮಾರ್ (ಉಪ- ನಾಯಕ), ದೀಪಕ್ ಚಹಾರ್, ನವ್​ದೀಪ್ ಸೈನಿ, ಚೇತನ್ ಸಕರಿಯ.

( India vs Srilanka Hardik Pandya smash sixes Indias intra-squad match here is the video)

Published On - 12:47 pm, Fri, 9 July 21

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?