AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI 2nd ODI: ರೋಹಿತ್, ವಿರಾಟ್​ಗೆ ವಿಶ್ರಾಂತಿ: ಹೀಗಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11

India vs West Indies 2nd ODI: ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಸರಣಿ ಭಾರತದ ಪಾಲಾಗಲಿದೆ.

IND vs WI 2nd ODI: ರೋಹಿತ್, ವಿರಾಟ್​ಗೆ ವಿಶ್ರಾಂತಿ: ಹೀಗಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jul 29, 2023 | 6:46 PM

India vs West Indies 2nd ODI: ಭಾರತ-ವೆಸ್ಟ್ ಇಂಡೀಸ್ ನಡುವಣ 2ನೇ ಏಕದಿನ ಪಂದ್ಯ ಶುರುವಾಗಿದೆ. ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ವೆಸ್ಟ್ ಇಂಡೀಸ್​ ನಾಯಕ ಶಾಯ್​ ಹೋಪ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಮಾಡಲಾಗಿದೆ. ತಂಡದ ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಈ ಎರಡು ಸ್ಥಾನಗಳಲ್ಲಿ ಸಂಜು ಸ್ಯಾಮ್ಸನ್ ಹಾಗೂ ಅಕ್ಷರ್ ಪಟೇಲ್​ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾವನ್ನು ಉಪನಾಯಕ ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ.

ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 5 ವಿಕೆಟ್​ಗಳ ಜಯ ಸಾಧಿಸಿತ್ತು. ಹೀಗಾಗಿ ಈ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ ಸರಣಿ ವಶಪಡಿಸಿಕೊಳ್ಳಬಹುದು. ಅತ್ತ ವೆಸ್ಟ್ ಇಂಡೀಸ್​ ತಂಡಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯ.

ಕೆರಿಬಿಯನ್ ಪಡೆ ಪಂದ್ಯದಲ್ಲಿ ಗೆದ್ದರೆ ಮಾತ್ರ ಸರಣಿ ಆಸೆಯನ್ನು ಜೀವಂತವಿರಿಸಿಕೊಳ್ಳಬಹುದು. ಹೀಗಾಗಿ ಉಭಯ ತಂಡಗಳಿಂದ ಈ ಪಂದ್ಯದಲ್ಲಿ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದಾಗಿದೆ.

ವೆಸ್ಟ್ ಇಂಡೀಸ್ (ಪ್ಲೇಯಿಂಗ್ XI): ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಅಲಿಕ್ ಅಥಾನಾಝ್, ಶಾಯ್ ಹೋಪ್(ನಾಯಕ), ಶಿಮ್ರಾನ್ ಹೆಟ್ಮೆಯರ್, ಕೀಸಿ ಕಾರ್ಟಿ, ರೊಮಾರಿಯೋ ಶೆಫರ್ಡ್, ಯಾನಿಕ್ ಕ್ಯಾರಿಯಾ, ಗುಡಕೇಶ್ ಮೋಟಿ, ಅಲ್ಝಾರಿ ಜೋಸೆಫ್, ಜೇಡನ್ ಸೀಲ್ಸ್.

ಭಾರತ (ಪ್ಲೇಯಿಂಗ್ XI): ಶುಭ್​ಮನ್ ಗಿಲ್, ಇಶಾನ್ ಕಿಶನ್(ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ(ನಾಯಕ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.

ವೆಸ್ಟ್ ಇಂಡೀಸ್ ಏಕದಿನ ತಂಡ: ಶಾಯ್ ಹೋಪ್ (ನಾಯಕ) , ಬ್ರಾಂಡನ್ ಕಿಂಗ್ , ಕೈಲ್ ಮೇಯರ್ಸ್ , ಅಲಿಕ್ ಅಥಾನಾಝ್, ಶಿಮ್ರಾನ್ ಹೆಟ್ಮೆಯರ್ , ರೋವ್​ಮನ್ ಪೊವೆಲ್ , ರೊಮಾರಿಯೋ ಶೆಫರ್ಡ್ , ಡೊಮಿನಿಕ್ ಡ್ರೇಕ್ಸ್ , ಯಾನಿಕ್ ಕ್ಯಾರಿಯಾ , ಗುಡಕೇಶ್ ಮೋಟಿ , ಜೇಡನ್ ಸೀಲ್ಸ್ , ಕೀಸಿ ಕಾರ್ಟಿ, ಒಶಾನೆ ಥಾಮಸ್ , ಅಲ್ಝಾರಿ ಜೋಸೆಫ್, ಕೆವಿನ್ ಸಿಂಕ್ಲೇರ್.

ಇದನ್ನೂ ಓದಿ: ICC Test Rankings: ಅಗ್ರ ಹತ್ತರಲ್ಲಿ ಟೀಮ್ ಇಂಡಿಯಾದ ಏಕೈಕ ಆಟಗಾರನಿಗೆ ಸ್ಥಾನ

ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ) , ಇಶಾನ್ ಕಿಶನ್ (ವಿಕೆಟ್ ಕೀಪರ್) , ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಹಾರ್ದಿಕ್ ಪಾಂಡ್ಯ , ಸೂರ್ಯಕುಮಾರ್ ಯಾದವ್ , ರವೀಂದ್ರ ಜಡೇಜಾ , ಶಾರ್ದೂಲ್ ಠಾಕೂರ್ , ಕುಲ್ದೀಪ್ ಯಾದವ್ , ಉಮ್ರಾನ್ ಮಲಿಕ್ , ಮುಖೇಶ್ ಕುಮಾರ್ , ಯುಜ್ವೇಂದ್ರ ಚಾಹಲ್ , ಸಂಜು ಸ್ಯಾಮ್ಸನ್, ಜಯದೇವ್ ಉನಾದ್ಕಟ್, ರುತುರಾಜ್ ಗಾಯಕ್ವಾಡ್, ಅಕ್ಷರ್ ಪಟೇಲ್.

Published On - 6:44 pm, Sat, 29 July 23

horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್