AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಪಾಲಿಗೆ ಪೂರನ್ ವಿಕೆಟ್ ನಿರ್ಣಾಯಕ..!

India vs West Indies 3rd T20: ದ್ವಿತೀಯ ಟಿ20 ಪಂದ್ಯದಲ್ಲಿ ಪೂರನ್​ 67 ರನ್​ ಚಚ್ಚುವ ಮೂಲಕ ವೆಸ್ಟ್ ಇಂಡೀಸ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲಬೇಕಿದ್ದರೆ ನಿಕೋಲಸ್ ಪೂರನ್ ಅವರನ್ನು ಬೇಗನೆ ಔಟ್ ಮಾಡಲೇಬೇಕು.

ಟೀಮ್ ಇಂಡಿಯಾ ಪಾಲಿಗೆ ಪೂರನ್ ವಿಕೆಟ್ ನಿರ್ಣಾಯಕ..!
Nicholas Pooran
TV9 Web
| Updated By: ಝಾಹಿರ್ ಯೂಸುಫ್|

Updated on: Aug 08, 2023 | 4:53 PM

Share

India vs West Indies 3rd T20: ಭಾರತ-ವೆಸ್ಟ್ ಇಂಡೀಸ್ ನಡುವಣ 5 ಪಂದ್ಯಗಳ ಟಿ20 ಸರಣಿಯ 3ನೇ ಮ್ಯಾಚ್ ಇಂದು (ಆಗಸ್ಟ್ 8) ನಡೆಯಲಿದೆ. ಗಯಾನಾದ ಪ್ರೊವಿಡೆನ್ಸ್ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯವು ಟೀಮ್ ಇಂಡಿಯಾ (Team India) ಪಾಲಿಗೆ ನಿರ್ಣಾಯಕ. ಏಕೆಂದರೆ ಮೊದಲೆರಡು ಮ್ಯಾಚ್​ಗಳಲ್ಲಿ ಗೆದ್ದಿರುವ ವಿಂಡೀಸ್ ಈ ಪಂದ್ಯದಲ್ಲಿ ಜಯ ಸಾಧಿಸಿದರೆ 3-0 ಅಂತರದಿಂದ ಸರಣಿ ವಶಪಡಿಸಿಕೊಳ್ಳಬಹುದು.

ಇತ್ತ ಸರಣಿ ಗೆಲ್ಲುವ ಆಸೆಯನ್ನು ಜೀವಂತವಿರಿಸಿಕೊಳ್ಳಲು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲಲೇಬೇಕು. ಇದಕ್ಕಾಗಿ ಭಾರತೀಯ ಬೌಲರ್​ಗಳು ನಿಕೋಲಸ್ ಪೂರನ್​ಗಾಗಿ ವಿಶೇಷ ತಂತ್ರಗಳನ್ನು ಹೆಣೆಯಬೇಕಿದೆ. ಏಕೆಂದರೆ ಪ್ರೊವಿಡೆನ್ಸ್ ಸ್ಟೇಡಿಯಂನಲ್ಲಿ ಪೂರನ್ ಅದ್ಭುತ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಇದಕ್ಕೆ ಸಾಕ್ಷಿಯೇ 2ನೇ ಟಿ20 ಪಂದ್ಯ.

ಗಯಾನಾದಲ್ಲೇ ನಡೆದಿದ್ದ ಈ ಪಂದ್ಯದಲ್ಲಿ ಪೂರನ್ ಕೇವಲ 40 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 67 ರನ್​ ಸಿಡಿಸಿದ್ದರು. ಅಲ್ಲದೆ ಇದಕ್ಕೂ ಮುನ್ನ ಇದೇ ಮೈದಾನದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ದಾಖಲೆಯನ್ನೂ ಕೂಡ ಹೊಂದಿದ್ದಾರೆ.

  • 2021 ರಲ್ಲಿ ಇದೇ ಮೈದಾನದಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಟಿ20 ಪಂದ್ಯದಲ್ಲಿ ಪೂರನ್ ಕೇವಲ 33 ಎಸೆತಗಳಲ್ಲಿ ಅಜೇಯ 62 ರನ್ ಸಿಡಿಸಿದ್ದರು.
  • 2022 ರಲ್ಲಿ ಪ್ರೊವಿಡೆನ್ಸ್ ಮೈದಾನದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ 39 ಎಸೆತಗಳಲ್ಲಿ ಅಜೇಯ 74 ರನ್ ಚಚ್ಚಿದ್ದರು.
  • 2023 ರಲ್ಲಿ ನಡೆದ ಟೀಮ್ ಇಂಡಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲೂ 40 ಎಸೆತಗಳಲ್ಲಿ 67 ರನ್ ಸಿಡಿಸಿದ್ದಾರೆ. ಅಂದರೆ ಪೊವಿಡೆನ್ಸ್ ಮೈದಾನದಲ್ಲಿ ಬ್ಯಾಕ್ ಟು ಬ್ಯಾಕ್ ಮೂರು ಅರ್ಧಶತಕಗಳನ್ನು ಬಾರಿಸಿದ ವಿಶೇಷ ದಾಖಲೆಯೊಂದು ನಿಕೋಲಸ್ ಪೂರನ್ ಹೆಸರಿನಲ್ಲಿದೆ.

ಇದೀಗ ಇದೇ ಮೈದಾನದಲ್ಲಿ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ ನಿರ್ಣಾಯಕ ಪಂದ್ಯವಾಡುತ್ತಿದೆ. ಹೀಗಾಗಿ ಪೂರನ್ ವಿಕೆಟ್ ಭಾರತ ತಂಡದ ಪಾಲಿಗೆ ತುಂಬಾ ಮಹತ್ವದ್ದು.

ವಿಂಡೀಸ್ ಬ್ಯಾಟಿಂಗ್ ವೈಫಲ್ಯ: ವೆಸ್ಟ್ ಇಂಡೀಸ್ ತಂಡವು ಮೊದಲೆರಡು ಪಂದ್ಯಗಳಲ್ಲಿ ಉತ್ತಮ ಬ್ಯಾಟಿಂಗ್​ ಪ್ರದರ್ಶಿಸಿಲ್ಲ. ಇದಕ್ಕೆ ಸಾಕ್ಷಿಯೇ ಎರಡೂ ಪಂದ್ಯಗಳಲ್ಲೂ ವಿಂಡೀಸ್ ಪಡೆ ಕಲೆಹಾಕಿದ ಸ್ಕೋರ್.

ಮೊದಲ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಕೇವಲ 149 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇನ್ನು 2ನೇ ಟಿ20 ಪಂದ್ಯದಲ್ಲೂ 152 ರನ್​ ಚೇಸ್​ ಮಾಡಲು 8 ವಿಕೆಟ್ ಕಳೆದುಕೊಂಡಿತ್ತು. ಅಂದರೆ ಟೀಮ್ ಇಂಡಿಯಾ ಬೌಲರ್​ಗಳ ವಿರುದ್ಧ ಪರಾಕ್ರಮ ಮೆರೆಯಲು ವಿಂಡೀಸ್ ದಾಂಡಿಗರಿಗೆ ಸಾಧ್ಯವಾಗಿಲ್ಲ ಎಂದೇ ಹೇಳಬಹುದು.

ಪೂರನ್ ಪವರ್: ವೆಸ್ಟ್ ಇಂಡೀಸ್​ ತಂಡದ ಅಗ್ರ ಕ್ರಮಾಂಕದ ಬ್ಯಾಟರ್​ಗಳು ವಿಫಲರಾಗಿದ್ದರೂ ಮತ್ತೊಂದೆಡೆ ನಿಕೋಲಸ್ ಪೂರನ್ ಮಾತ್ರ ಅಬ್ಬರಿಸುತ್ತಿದ್ದಾರೆ. ಇದರಿಂದಾಗಿಯೇ ವಿಂಡೀಸ್​​ಗೆ 2 ಗೆಲುವು ದಕ್ಕಿದೆ ಎಂದರೆ ತಪ್ಪಾಗಲಾರದು. ಏಕೆಂದರೆ ಮೊದಲ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್​ನ ಬಹುತೇಕ ಬ್ಯಾಟರ್​​ಗಳು ವಿಫಲರಾದರೂ ನಿಕೋಲಸ್ ಪೂರನ್ 41 ರನ್​ ಬಾರಿಸಿದ್ದರು.

ಇದನ್ನೂ ಓದಿ: ಪೂರನ್ ಪವರ್​ಗೆ ಹಳೆಯ ದಾಖಲೆ ಉಡೀಸ್​: ಟೀಮ್ ಇಂಡಿಯಾ ವಿರುದ್ದ ಹೊಸ ರೆಕಾರ್ಡ್

ಇನ್ನು ದ್ವಿತೀಯ ಟಿ20 ಪಂದ್ಯದಲ್ಲಿ ಪೂರನ್​ 67 ರನ್​ ಚಚ್ಚುವ ಮೂಲಕ ವೆಸ್ಟ್ ಇಂಡೀಸ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲಬೇಕಿದ್ದರೆ ನಿಕೋಲಸ್ ಪೂರನ್ ಅವರನ್ನು ಬೇಗನೆ ಔಟ್ ಮಾಡಲೇಬೇಕು. ಒಂದು ವೇಳೆ ಪೂರನ್ ಕ್ರೀಸ್ ಕಚ್ಚಿ ನಿಂತರೆ ಪವರ್​ ತೋರಿಸುವುದರಲ್ಲಿ ಅನುಮಾನವೇ ಇಲ್ಲ. ಇದಕ್ಕೆ ಸಾಕ್ಷಿಯೇ ಮೊದಲೆರಡು ಪಂದ್ಯಗಳಲ್ಲಿ ಕಂಡು ಬಂದ ಬ್ಯಾಟಿಂಗ್ ಪರಾಕ್ರಮ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ