ಇಂದು ಭಾರತ-ವೆಸ್ಟ್ ಇಂಡೀಸ್ ದ್ವಿತೀಯ ಟಿ20: ಗೆಲ್ಲಲು ಹಾರ್ದಿಕ್ ಪಡೆಯ ಮಾಸ್ಟರ್ ಪ್ಲಾನ್ ಏನು?

IND vs WI 2nd T20I: ಟೀಮ್ ಇಂಡಿಯಾ ಪರ ಇಶಾನ್ ಕಿಶನ್ ಹಾಗೂ ಶುಭ್​ಮನ್ ಗಿಲ್ ಉತ್ತಮ ಆರಂಭ ಒದಗಿಸುತ್ತಿಲ್ಲ. ಇವರ ಕಡೆಯಿಂದ ಒಂದೊಳ್ಳೆ ಆಟ ಬರಬೇಕಿದೆ. ಸತತವಾಗಿ ಕಳಪೆ ಪ್ರದರ್ಶನ ತೋರುತ್ತಿರುವ ಸೂರ್ಯಕುಮಾರ್ ಯಾದವ್​ಗೆ ಇದೊಂದು ಅಗ್ನಿಪರೀಕ್ಷೆಯಾಗಿದೆ.

ಇಂದು ಭಾರತ-ವೆಸ್ಟ್ ಇಂಡೀಸ್ ದ್ವಿತೀಯ ಟಿ20: ಗೆಲ್ಲಲು ಹಾರ್ದಿಕ್ ಪಡೆಯ ಮಾಸ್ಟರ್ ಪ್ಲಾನ್ ಏನು?
IND vs WI 2nd T20I
Follow us
|

Updated on: Aug 06, 2023 | 7:30 AM

ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯನ್ನು ಸೋಲಿನೊಂದಿಗೆ ಆರಂಭಿಸಿರುವ ಭಾರತ (India vs West Indies) ಇಂದು ಎರಡನೇ ಟಿ20 ಪಂದ್ಯಕ್ಕೆ ಸಜ್ಜಾಗಿದೆ. ಗಯಾನದ ಪ್ರೊವಿಡೆನ್ಸ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದ್ದು, ಹಾರ್ದಿಕ್ (Hardik Pandya) ಪಡೆಗೆ ಬಹುಮುಖ್ಯವಾಗಿದೆ. ಮೊದಲ ಪಂದ್ಯದಲ್ಲಿ ಭಾರತೀಯರ ಬ್ಯಾಟಿಂಗ್ – ಬೌಲಿಂಗ್ ನಿರೀಕ್ಷೆಯ ಮಟ್ಟ ತಲುಪಲಿಲ್ಲ. ಯುವ ಪಡೆ ಎಡವಿತ್ತು, ಇದನ್ನು ನಾಯಕ ಹಾರ್ದಿಕ್ ಪಾಂಡ್ಯ ಕೂಡ ಹೇಳಿದ್ದರು. ಇದೀಗ ಆ ತಪ್ಪುಗಳನ್ನು ತಿದ್ದಿ ಬೌನ್ಸ್ ಬ್ಯಾಕ್ ಮಾಡಬೇಕಿದೆ. ಇದಕ್ಕಾಗಿ ಟೀಮ್ ಇಂಡಿಯಾದಲ್ಲಿ (Team India) ಕೆಲ ಬದಲಾವಣೆ ಮಾಡಬಹುದು.

ಟೀಮ್ ಇಂಡಿಯಾ ಪರ ಇಶಾನ್ ಕಿಶನ್ ಹಾಗೂ ಶುಭ್​ಮನ್ ಗಿಲ್ ಉತ್ತಮ ಆರಂಭ ಒದಗಿಸುತ್ತಿಲ್ಲ. ಇವರ ಕಡೆಯಿಂದ ಒಂದೊಳ್ಳೆ ಆಟ ಬರಬೇಕಿದೆ. ಸತತವಾಗಿ ಕಳಪೆ ಪ್ರದರ್ಶನ ತೋರುತ್ತಿರುವ ಸೂರ್ಯಕುಮಾರ್ ಯಾದವ್​ಗೆ ಇದೊಂದು ಅಗ್ನಿಪರೀಕ್ಷೆಯಾಗಿದೆ. ಸೂರ್ಯ ಜೊತೆ ಸಂಜು ಸ್ಯಾಮ್ಸನ್ ಭವಿಷ್ಯ ಕೂಡ ಇದೇ ಸರಣಿ ಮೇಲೆ ನಿಂತಿದೆ. ಮೊದಲ ಟಿ20 ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ ತಿಲಕ್ ವರ್ಮಾ ಭರವಸೆ ಮೂಡಿಸಿದ್ದಾರೆ.

ಇಂಡೊ-ವಿಂಡೀಸ್ 2ನೇ ಟಿ20: ಎಷ್ಟು ಗಂಟೆಗೆ ಶುರು? ಇಲ್ಲಿದೆ ಸಂಪೂರ್ಣ ಮಾಹಿತಿ

ಇದನ್ನೂ ಓದಿ
Image
ಯುವ ಆಟಗಾರರಿಗೆ ಮತ್ತೊಂದು ಅವಕಾಶ: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11
Image
ಏಕದಿನ ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡದ ಮತ್ತೊಂದು ಪಂದ್ಯದ ದಿನಾಂಕ ಬದಲು?
Image
ಏಕದಿನ ವಿಶ್ವಕಪ್​ ಸೆಮಿಫೈನಲ್ ಆಡಲಿರುವ 4 ತಂಡಗಳನ್ನು ಹೆಸರಿಸಿದ ಗ್ಲೆನ್ ಮೆಕ್​ಗ್ರಾಥ್
Image
ಸ್ಪರ್ಧೆ ವೇಳೆ ಚೆನ್ನೈ ಟ್ರ್ಯಾಕ್‌ನಲ್ಲಿ ಅಪಘಾತ; ಬೆಂಗಳೂರಿನ ಕಿರಿಯ ರೈಡರ್ ಶ್ರೇಯಸ್ ಹರೀಶ್ ದುರ್ಮರಣ

ನಾಯಕ ಹಾರ್ದಿಕ್ ಪಾಂಡ್ಯ ಕಡೆಯಿಂದ ಆಲ್ರೌಂಡ್ ಆಟ ಬರಬೇಕಿದೆ. ಅಕ್ಷರ್ ಪಟೇಲ್ ಕೂಡ ಸದ್ದು ಮಾಡಬೇಕಿದೆ. ಹಿಂದಿನ ಪಂದ್ಯದಲ್ಲಿ ಅಕ್ಷರ್ ಜೊತೆ ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್ ಹೀಗೆ ಮೂವರು ಸ್ಪಿನ್ನರ್​ಗಳು ಕಣಕ್ಕಿಳಿದಿದ್ದರು. ಇಂದು ಓರ್ವ ಸ್ಪಿನ್ನರ್ ಅನ್ನು ಕೈಬಿಡುವ ಸಾಧ್ಯತೆ ಇದೆ. ಅರ್ಶ್​ದೀಪ್ ಸಿಂಗ್ ಮತ್ತು ಮುಖೇಶ್ ಕುಮಾರ್ ಪ್ರಮುಖ ವೇಗಿಗಳಾಗಿದ್ದು, ಇವರ ಜೊತೆಗೆ ಉಮ್ರಾನ್ ಮಲಿಕ್ ಅಥವಾ ಆವೇಶ್ ಖಾನ್ ಕಣಕ್ಕಿಳಿಯುವ ಸಂಭವವಿದೆ.

ಇತ್ತ ವೆಸ್ಟ್ ಇಂಡೀಸ್ ತಂಡ ಬಲಿಷ್ಠವಾಗಿದೆ. ನಾಯಕ ರೋವ್ಮನ್ ಪೊವೆಲ್, ಬ್ರಾಂಡನ್ ಕಿಂಗ್ ಮತ್ತು ಅನುಭವಿ ನಿಕೋಲಸ್ ಪೂರನ್ ಭರ್ಜರಿ ಫಾರ್ಮ್​ನಲ್ಲಿದ್ದು, ಸ್ಫೋಟಕ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಇವರೊಂದಿಗೆ ಖೈಲ್ ಮೇಯರ್ಸ್, ಚಾರ್ಲೆಸ್ ಮತ್ತು ಹೆಟ್ಮೇರ್ ಅಬ್ಬರಿಸಿದರೆ ವಿಂಡೀಸ್ ದೊಡ್ಡ ಮೊತ್ತ ಕಲೆಹಾಕುವುದು ಖಚಿತ. ಬೌಲಿಂಗ್​ನಲ್ಲಿ ಒಬೆಡ್ ಮೆಕಾಯ್, ರೊಮಾರಿಯೋ ಶೆಫೆರನ್ ಮತ್ತು ಜೇಸನ್ ಹೋಲ್ಡರ್ ಮಾರಕವಾಗಿದ್ದಾರೆ. ಕೆರಿಬಿಯನ್ ಪಡೆಯಲ್ಲಿ ಇಂದಿನ ಪಂದ್ಯಕ್ಕೆ ಬದಲಾವಣೆ ಅನುಮಾನ.

ಭಾರತ-ವೆಸ್ಟ್ ಇಂಡೀಸ್ ನಡುವಣ ಪ್ರಥಮ ಟಿ20 ಪಂದ್ಯವು ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 8 ಗಂಟೆಗೆ ಶುರುವಾಗಲಿದೆ. ದೂರದರ್ಶನ ಸ್ಪೋರ್ಟ್ಸ್ (ಡಿಡಿ ಸ್ಪೋರ್ಟ್ಸ್) ಚಾನೆಲ್‌ನಲ್ಲಿ ನೇರ ಪ್ರಸಾರವಾಗಲಿದೆ. ಜೊತೆಗೆ ಲೈವ್ ಸ್ಟ್ರೀಮಿಂಗ್ FanCode ಮತ್ತು JioCinema ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ.

ಭಾರತ ಟಿ20 ತಂಡ: ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್​​ಮನ್ ಗಿಲ್, ಸೂರ್ಯ ಕುಮಾರ್ ಯಾದವ್ (ಉಪನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ ( ನಾಯಕ), ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಯಶಸ್ವಿ ಜೈಸ್ವಾಲ್, ಅವೇಶ್ ಖಾನ್, ಮುಖೇಶ್ ಕುಮಾರ್, ರವಿ ಬಿಷ್ಣೋಯ್.

ವೆಸ್ಟ್ ಇಂಡೀಸ್ ಟಿ20 ತಂಡ: ರೋವ್ಮನ್ ಪೊವೆಲ್ (ನಾಯಕ), ಕೈಲ್ ಮೇಯರ್ಸ್ (ಉಪ ನಾಯಕ), ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ನಿಕೋಲಸ್ ಪೂರನ್, ಶಾಯ್ ಹೋಪ್, ಶಿಮ್ರೋನ್ ಹೆಟ್ಮೆರ್, ಜೇಸನ್ ಹೋಲ್ಡರ್, ಅಲ್ಜಾರಿ ಜೋಸೆಫ್, ಅಕೆಲ್ ಹೊಸೈನ್, ರೊಮಾರಿಯೋ ಶೆಫೆರನ್ ಓಡಿಯನ್ ಸ್ಮಿತ್, ಬ್ರಾಂಡನ್ ಕಿಂಗ್, ಒಬೆಡ್ ಮೆಕಾಯ್, ಒಶಾನೆ ಥೋಮಸ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ