AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಇಂದು ಭಾರತ- ವೆಸ್ಟ್ ಇಂಡೀಸ್ ಅಂತಿಮ ಏಕದಿನ: ಸರಣಿ ಕ್ಲೀನ್​ಸ್ವೀಪ್ ಮಾಡುತ್ತಾ ರೋಹಿತ್ ಪಡೆ?

India vs West Indies, 3rd ODI: ಎರಡೂ ಪಂದ್ಯದಲ್ಲಿ ರೋಹಿತ್ ಪಡೆ ಗೆದ್ದು ಬೀಗಿದ್ದು ಬಲಿಷ್ಠವಾಗಿದೆ. ಕಳೆದ ಪಂದ್ಯದಲ್ಲಿ ಬೌಲರ್​ಗಳ ಅದ್ಭುತ ಪ್ರದರ್ಶನದಿಂದ ಜಯ ಸಾಧಿಸಿತ್ತು. ಬ್ಯಾಟಿಂಗ್​ನಲ್ಲಿ ನಿರೀಕ್ಷೆಗೆ ತಕ್ಕಂತೆ ಆಟವಾಡಿಲ್ಲ. ಹೀಗಾಗಿ ಈ ಕದನದ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ.

IND vs WI: ಇಂದು ಭಾರತ- ವೆಸ್ಟ್ ಇಂಡೀಸ್ ಅಂತಿಮ ಏಕದಿನ: ಸರಣಿ ಕ್ಲೀನ್​ಸ್ವೀಪ್ ಮಾಡುತ್ತಾ ರೋಹಿತ್ ಪಡೆ?
IND vs WI 3rd ODI
TV9 Web
| Edited By: |

Updated on: Feb 11, 2022 | 7:26 AM

Share

ಭಾರತ ಹಾಗೂ ವೆಸ್ಟ್ ಇಂಡೀಸ್ (India vs West Indies) ನಡುವಣ ಅಂತಿಮ ಮೂರನೇ ಏಕದಿನ ಪಂದ್ಯ ಇಂದು ನಡೆಯಲಿದೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣ ಈ ರೋಚಕ ಕದನಕ್ಕೆ ಸಾಕ್ಷಿಯಾಗಲಿದ್ದು, ಟೀಮ್ ಇಂಡಿಯಾ ಸರಣಿ ಕ್ಲೀನ್​ಸ್ವೀಪ್ ಮಾಡುವತ್ತ ಚಿತ್ತ ನೆಟ್ಟಿದೆ. ಇತ್ತ ಪ್ರವಾಸಿ ಕೆರಿಬಿಯನ್ನರು ಕನಿಷ್ಠ ಒಂದು ಪಂದ್ಯವನ್ನಾದರೂ ಗೆದ್ದು ಮಾನ ಉಳಿಸಿಕೊಳ್ಳುವ ಪ್ಲಾನ್​ನಲ್ಲಿದೆ. ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) 6 ವಿಕೆಟ್​ಗಳಿಂದ ಗೆದ್ದರೆ, ಬುಧವಾರ ಮುಕ್ತಾಯಗೊಂಡ ಎರಡನೇ ಕದನಲ್ಲಿ 44 ರನ್​ಗಳಿಂದ ಜಯಿಸಿತು. ಹೀಗೆ ಎರಡೂ ಪಂದ್ಯದಲ್ಲಿ ರೋಹಿತ್ (Rohit Sharma) ಪಡೆ ಗೆದ್ದು ಬೀಗಿದ್ದು ಬಲಿಷ್ಠವಾಗಿದೆ. ಕಳೆದ ಪಂದ್ಯದಲ್ಲಿ ಬೌಲರ್​ಗಳ ಅದ್ಭುತ ಪ್ರದರ್ಶನದಿಂದ ಜಯ ಸಾಧಿಸಿತ್ತು. ಬ್ಯಾಟಿಂಗ್​ನಲ್ಲಿ ನಿರೀಕ್ಷೆಗೆ ತಕ್ಕಂತೆ ಆಟವಾಡಿಲ್ಲ. ಹೀಗಾಗಿ ಈ ಕದನದ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ.

ನಾಯಕ ರೋಹಿತ್ ಶರ್ಮಾ ಮೊದಲ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದರೆ ಎರಡನೇ ಕದನದಲ್ಲಿ ಬೇಗನೆ ನಿರ್ಗಮಿಸಿದ್ದರು. ಹೀಗಾಗಿ ಇವರಿಂದ ತಾಳ್ಮೆಯ ಆಟವನ್ನು ನಿರೀಕ್ಷಿಸಲಾಗಿದೆ. ರಿಷಭ್ ಪಂತ್ ಓಪನರ್ ಆಗಿ ವಿಫಲರಾಗಿದ್ದಾರೆ. ಅವರನ್ನು ಫಿನಿಶರ್ ಆಗಿ ಕಣಕ್ಕಿಳಿಸುತ್ತಾರ ಎಂಬುದು ನೋಡಬೇಕಿದೆ. ವಿರಾಟ್ ಕೊಹ್ಲಿ ಬ್ಯಾಟ್​ನಿಂದ ರನ್ ಬರುತ್ತಿಲ್ಲ ಎಂಬುದು ಬೇಸರದ ಸಂಗತಿ. ಕೆಎಲ್ ರಾಹುಲ್ ತಂಡಕ್ಕೆ ಕಮ್​ಬ್ಯಾಕ್ ಮಾಡಿರುವುದು ಬಲ ಹೆಚ್ಚಿದೆ. ಸೂರ್ಯಕುಮಾರ್ ಯಾದವ್ ಕೂಡ ಬೊಂಬಾಟ್ ಫಾರ್ಮ್​​ನಲ್ಲಿದ್ದಾರೆ.

ಆಲ್ರೌಂಡರ್ ದೀಪಕ್ ಹೂಡ ಕಡೆಯಿಂದ ಸಾಧಾರಣ ಪ್ರದರ್ಶನ ಬರುತ್ತಿದೆ. ತಂಡದಲ್ಲಿ ಸ್ಥಾನ ಉಳಿಸಿಕೊಳ್ಳಬೇಕಾದರೆ ಇಂದು ಒಂದು ದೊಡ್ಡ ಇನ್ನಿಂಗ್ಸ್ ಆಡಬೇಕಿದೆ. ವಾಷಿಂಗ್ಟನ್ ಸುಂದರ್ ಬೌಲಿಂಗ್​ನಲ್ಲಿ ಉತ್ತಮ ಕೊಡುಗೆ ನೀಡುತ್ತಿದ್ದಾರೆ. ಶಾರ್ದುಲ್ ಠಾಕೂರ್ ಆಟ ಬ್ಯಾಟಿಂಗ್ – ಬೌಲಿಂಗ್​ನಲ್ಲಿ ನಡೆಯುತ್ತಿಲ್ಲ. ಪ್ರಸಿದ್ಧ್ ಕೃಷ್ಣ ಬಿಟ್ಟರೆ ವೇಗಿಗಳು ವಿಕೆಟ್ ಕೀಳುತ್ತಿಲ್ಲ. ಹೀಗಾಗಿ ಬೌಲಿಂಗ್ ವಿಭಾಗದಲ್ಲಿ ಇಂದಿನ ಪಂದ್ಯಕ್ಕೆ ಮುಖ್ಯ ಬದಲಾವಣೆ ಖಚಿತ.

ಇತ್ತ ವೆಸ್ಟ್ ಇಂಡೀಸ್ ತಂಡದ ನಾಯಕ ಕೀರೊನ್ ಪೊಲಾರ್ಡ್ ಗಾಯದಿಂದ ಸಂಪೂರ್ಣ ಗುಣಮುಖರಾಗಿದ್ದಾರ ಎಂಬ ಬಗ್ಗೆ ಖಚಿತ ಮಾಹಿತಿಯಿಲ್ಲ. ಹೀಗಾಗಿ ತಂಡವನ್ನು ನಿಕೋಲಸ್ ಪೂರನ್ ಮುನ್ನಡೆಸಲಿದ್ದಾರೆ. ಓಡೆನ್ ಸ್ಮಿತ್​​ಗೆ ಮತ್ತೊಂದು ಅವಕಾಶ ಸಿಗಲಿದೆ. ಸ್ಟಾರ್ ಬ್ಯಾಟರ್​ಗಳಾದ ಬ್ರೆಂಡನ್ ಕಿಂಗ್, ಶಾಯ್ ಹೋಪ್, ಡ್ಯಾರೆನ್ ಬ್ರಾವೋ ಪದೇ ಪದೇ ವೈಫಲ್ಯ ಅನುಭವಿಸುತ್ತಿರುವುದು ತಂಡಕ್ಕೆ ಹಿನ್ನಡೆಯಾಗುತ್ತಿದೆ. ಬೌಲಿಂಗ್​ನಲ್ಲೂ ಸಂಘಟಿತ ಪ್ರದರ್ಶನ ಬರುತ್ತಿಲ್ಲ.

ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಮಧ್ಯಾಹ್ನ 1:30ಕ್ಕೆ ಶುರುವಾಗಲಿದೆ. 1 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಸ್ಟಾರ್ ಸ್ಪೋರ್ಟ್ಸ್​ ನೆಟ್​ವರ್ಕ್​ನಲ್ಲಿ ನೇರಪ್ರಸಾರ ಕಾಣಲಿದೆ. ಆನ್​ಲೈನ್​ನಲ್ಲಾದರೆ ಡಿಸ್ನಿ+ ಹಾಟ್​ಸ್ಟಾರ್​ನಲ್ಲಿ ಲೈವ್ ಸ್ಟ್ರೀಮ್ ವೀಕ್ಷಿಸಬಹುದು.

ಭಾರತ ತಂಡ: ರೋಹಿತ್‌ ಶರ್ಮಾ(ನಾಯಕ), ಕೆಎಲ್ ರಾಹುಲ್, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್‌, ದೀಪಕ್‌ ಹೂಡ, ರಿಷಭ್‌ ಪಂತ್(ವಿ.ಕೀ), ದೀಪಕ್‌ ಚಹರ್‌, ಶಾರ್ದುಲ್‌ ಠಾಕೂರ್‌, ಯುಜ್ವೇಂದ್ರ ಚಹಲ್‌, ಕುಲ್ದೀಪ್ ಯಾದವ್‌, ವಾಷಿಂಗ್ಟನ್‌ ಸುಂದರ್‌, ರವಿ ಬಿಷ್ಣೋಯ್‌, ಮೊಹಮ್ಮದ್‌ ಸಿರಾಜ್‌, ಪ್ರಸಿಧ್‌ ಕೃಷ್ಣ, ಆವೇಶ್‌ ಖಾನ್‌, ಇಶಾನ್‌ ಕಿಶನ್‌, ಶಾರುಖ್‌ ಖಾನ್‌, ಮಯಾಂಕ್ ಅಗರ್ವಾಲ್.

ವೆಸ್ಟ್ ಇಂಡೀಸ್ ತಂಡ: ಕೀರೊನ್ ಪೊಲಾರ್ಡ್ (ನಾಯಕ), ಕೀಮರ್ ರೋಚ್, ಎನ್​​ಕ್ರುಮ್ ಬೊನ್ನೆರ್, ಬ್ರಾಂಡನ್ ಕಿಂಗ್, ಫಾಬಿನ್ ಅಲೆನ್, ಡ್ಯಾರೆನ್ ಬ್ರಾವೋ, ಶಮರ್ ಬ್ರೋಕ್ಸ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೆಲ್ ಹುಸೈನ್, ಅಲ್ಜಾರಿ ಜೋಸೆಫ್, ನಿಕೋಲಸ್ ಪೂರನ್, ರೊಮಾರಿಯೊ ಶೆಪರ್ಡ್, ಓಡೆನ್ ಸ್ಮಿತ್, ಹೇಡನ್ ವಾಲ್ಶ್.

IPL Auction 2022: ಈ ಐವರು ಆಲ್​ರೌಂಡರ್​ಗಳನ್ನು ಖರೀದಿಸಲು ಜಿದ್ದಿಗೆ ಬೀಳಲಿವೆ ಎಲ್ಲಾ ಫ್ರಾಂಚೈಸಿಗಳು

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!