AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ZIM: 0,7,2,0.. ಭಾರತ ಪೆವಿಲಿಯನ್ ಪರೇಡ್; ಕೇವಲ 22 ರನ್​ಗಳಿಗೆ 4 ವಿಕೆಟ್ ಪತನ

IND vs ZIM: ಹರಾರೆಯಲ್ಲಿ ನಡೆಯುತ್ತಿರುವ ಜಿಂಬಾಬ್ವೆ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತದ ಯುವ ಪಡೆ ಆತಿಥೇಯ ತಂಡದ ಬೌಲಿಂಗ್ ದಾಳಿಗೆ ನಲುಗಿ ಹೋಗಿದೆ. ಜಿಂಬಾಬ್ವೆ ನೀಡಿರುವ 116 ರನ್​ಗಳ ಗುರಿ ಬೆನ್ನಟ್ಟಿರುವ ಟೀಂ ಇಂಡಿಯಾ ಕೇವಲ 22 ರನ್​ಗಳಿಗೆ ಪ್ರಮುಖ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

IND vs ZIM: 0,7,2,0.. ಭಾರತ ಪೆವಿಲಿಯನ್ ಪರೇಡ್; ಕೇವಲ 22 ರನ್​ಗಳಿಗೆ 4 ವಿಕೆಟ್ ಪತನ
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on:Jul 06, 2024 | 7:32 PM

Share

ಹರಾರೆಯಲ್ಲಿ ನಡೆಯುತ್ತಿರುವ ಜಿಂಬಾಬ್ವೆ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತದ ಯುವ ಪಡೆ ಆತಿಥೇಯ ತಂಡದ ಬೌಲಿಂಗ್ ದಾಳಿಗೆ ನಲುಗಿ ಹೋಗಿದೆ. ಜಿಂಬಾಬ್ವೆ ನೀಡಿರುವ 116 ರನ್​ಗಳ ಗುರಿ ಬೆನ್ನಟ್ಟಿರುವ ಟೀಂ ಇಂಡಿಯಾ ಕೇವಲ 22 ರನ್​ಗಳಿಗೆ ಪ್ರಮುಖ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಅದರಲ್ಲೂ ತಂಡದ ಇಬ್ಬರು ಬ್ಯಾಟರ್​ಗಳು ಶೂನ್ಯಕ್ಕೆ ವಿಕೆಟ್ ಒಪ್ಪಿಸಿರುವುದು ಜಿಂಬಾಬ್ವೆಯ ಶಿಸ್ತುಬದ್ಧ ದಾಳಿಗೆ ಹಿಡಿದ ಕೈಗನ್ನಡಿಯಾಗಿದೆ. ಉಳಿದಂತೆ ಇನ್ನಿಬ್ಬರು ಬ್ಯಾಟರ್​ಗಳು ಕೇವಲ ಒಂದಂಕಿಗೆ ಸುಸ್ತಾಗಿ ಪೆವಿಲಿಯನ್ ಸೇರಿಕೊಂಡಿದ್ದಾರೆ.

ಶೂನ್ಯಕ್ಕೆ ಅಭಿ ಔಟ್

116 ರನ್​​ಗಳ ಗುರಿ ಬೆನ್ನಟ್ಟಿದ ಭಾರತದ ಪರ ಚೊಚ್ಚಲ ಪಂದ್ಯವನ್ನಾಡುತ್ತಿರುವ ಅಭಿಷೇಕ್ ಶರ್ಮಾ ಹಾಗೂ ನಾಯಕ ಶುಭ್​ಮನ್ ಗಿಲ್ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಈ ವೇಳೆ ಇನ್ನಿಂಗ್ಸ್ ಆರಂಭಿಸಿದ ಅಭೀಷೇಕ್ ಶರ್ಮಾ 4 ಎಸೆತಗಳನ್ನು ಎದುರಿಸಿ ಯಾವುದೇ ರನ್ ಕಲೆಹಾಕದೆ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡರು. ಇದರೊಂದಿಗೆ ಚೊಚ್ಚಲ ಅಂತರಾಷ್ಟ್ರೀಯ ಪಂದ್ಯದಲ್ಲಿ ಕಳಪೆ ಆರಂಭ ಮಾಡಿದರು. ಆ ನಂತರ ಬಂದ ರುತುರಾಜ್ ಗಾಯಕ್ವಾಡ್ ಕೂಡ 7 ರನ್ ಬಾರಿಸಲಷ್ಟೇ ಶಕ್ತರಾದರು.

22 ರನ್​ಗಳಿಗೆ ಪ್ರಮುಖ 4 ವಿಕೆಟ್

ನಂತರ 4ನೇ ಕ್ರಮಾಂಕದಲ್ಲಿ ಬಂದ ರಿಯಾನ್ ಪರಾಗ್ ಕೂಡ ಹೆಚ್ಚು ಹೊತ್ತು ನಿಲ್ಲದೆ ಬಿಗ್ ಶಾಟ್ ಆಡುವ ಯತ್ನದಲ್ಲಿ 2 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿದರು. ವಾಸ್ತವವಾಗಿ ರಿಯಾನ್ ಪರಾಗ್​ಗೂ ಇದು ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯವಾಗಿತ್ತು. ಚೊಚ್ಚಲ ಪಂದ್ಯವನ್ನು ಸ್ಮರಣೀಯವಾಗಿಸುವ ಅವಕಾಶ ಪಡೆದಿದ್ದ ರಿಯಾನ್ ಬೇಡದ ಶಾಟ್ ಆಡಿ ವಿಕೆಟ್ ಕೈಚೆಲ್ಲಿದರು. ಗೇಮ್ ಫಿನಿಶರ್ ಖ್ಯಾತಿಯ ರಿಂಕು ಸಿಂಗ್ ಕೂಡ ಕಳಪೆ ಶಾಟ್​ಗೆ ಬೆಲೆ ತೆರಬೇಕಾಯಿತು. ಅಚ್ಚರಿಯಿಂದರೆ ವಿಕೆಟ್​ಗಳ ಪತನದ ನಡುವೆ ಜವಬ್ದಾರಿಯುತ ಬ್ಯಾಟಿಂಗ್ ಮಾಡಬೇಕಿದ್ದ ರಿಂಕು ಸಿಕ್ಸರ್ ಬಾರಿಸುವ ಯತ್ನದಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಹೀಗಾಗಿ ಟೀಂ ಇಂಡಿಯಾ ಕೇವಲ 22 ರನ್​ಗಳಿಗೆ ಪ್ರಮುಖ 4 ವಿಕೆಟ್ ಕಳೆದುಕೊಂಡಿತು.

ಸೋಲಿನ ಸುಳಿಯಲ್ಲಿ ಭಾರತ

ಈ ಸುದ್ದಿ ಬರೆಯುವ ಹೊತ್ತಿಗೆ ಸೋಲಿನ ದವಡೆಗೆ ಸಿಲುಕಿರುವ ಟೀಂ ಇಂಡಿಯಾ ಕೇವಲ 50 ರನ್​ಗಳಿಗೆ ಪ್ರಮುಖ 6 ವಿಕೆಟ್ ಕಳೆದುಕೊಂಡಿದೆ. ಆರಂಭದಿಂದಲೂ ಜವಬ್ದಾರಿಯುತ ಬ್ಯಾಟಿಂಗ್ ಮಾಡುತ್ತಿದ್ದ ನಾಯಕ ಶುಭ್​ಮನ್ ಗಿಲ್ ಕೂಡ 31 ರನ್​​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದ್ದಾರೆ. ವಿಕೆಟ್ ಕೀಪರ್ ಧೃವ್ ಜುರೇಲ್ ಕೂಡ 6 ರನ್​​​ಗಳಿಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಪರ ಬಾಲಂಗೋಚಿಗಳು ಬ್ಯಾಟಿಂಗ್ ಮಾಡುತ್ತಿದ್ದು, ತಂಡಕ್ಕೆ ಸೋಲಿನ ಭಯ ಶುರುವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:10 pm, Sat, 6 July 24

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ