AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Zimbabwe 2nd ODI: ಜಿಂಬಾಬ್ವೆಗೆ ಸೋಲುಣಿಸಿ ಸರಣಿ ವಶಪಡಿಸಿಕೊಂಡ ಟೀಮ್ ಇಂಡಿಯಾ

India vs Zimbabwe 2nd ODI: ಈ ವೇಳೆ ನಾಯಕ ಕೆಎಲ್ ರಾಹುಲ್ ಬೌಲಿಂಗ್​ನಲ್ಲಿ ಮಾಡಿದ ಬದಲಾವಣೆ ಫಲ ನೀಡಿತು. ಅದರಂತೆ ವಿಲಿಯಮ್ಸ್​ ಪಾರ್ಟ್​ ಟೈಮ್ ಬೌಲರ್ ದೀಪಕ್ ಹೂಡಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್​ ಕಡೆ ಮುಖ ಮಾಡಿದರು.

India vs Zimbabwe 2nd ODI: ಜಿಂಬಾಬ್ವೆಗೆ ಸೋಲುಣಿಸಿ ಸರಣಿ ವಶಪಡಿಸಿಕೊಂಡ ಟೀಮ್ ಇಂಡಿಯಾ
India vs Zimbabwe 2nd ODI
TV9 Web
| Edited By: |

Updated on: Aug 20, 2022 | 6:25 PM

Share

India vs Zimbabwe 2nd ODI: ಹರಾರೆಯ ಸ್ಪೋರ್ಟ್ಸ್​ ಕ್ಲಬ್​ ಮೈದಾನದಲ್ಲಿ ನಡೆದ ಜಿಂಬಾಬ್ವೆ ವಿರುದ್ದದ 2ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ 3 ಪಂದ್ಯಗಳ ಏಕದಿನ ಸರಣಿಯನ್ನು ಟೀಮ್ ಇಂಡಿಯಾ 2-0 ಅಂತರದಿಂದ ವಶಪಡಿಸಿಕೊಂಡಿದೆ. ಇದಕ್ಕೂ ಮುನ್ನ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಕೆಎಲ್ ರಾಹುಲ್ ಬೌಲಿಂಗ್ ಆಯ್ದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ  ಬೌಲಿಂಗ್ ದಾಳಿ ಸಂಘಟಿಸಿದ ಟೀಮ್ ಇಂಡಿಯಾ ಬೌಲರ್​ಗಳು ಆರಂಭದಲ್ಲೇ ಜಿಂಬಾಬ್ವೆ ಆರಂಭಿಕರ ಮೇಲೆ ಒತ್ತಡ ಹೇರಿದರು. ಪರಿಣಾಮ ಮೊದಲ 10 ಓವರ್​ಗಳಲ್ಲಿ ಜಿಂಬಾಬ್ವೆ ಕಲೆಹಾಕಿದ್ದು ಕೇವಲ 26 ರನ್​ ಮಾತ್ರ.

ಇದರ ನಡುವೆ ಕೈಟಾನೊ (7) ವಿಕೆಟ್ ಪಡೆಯುವ ಮೂಲಕ ಮೊಹಮ್ಮದ್ ಸಿರಾಜ್ ಟೀಮ್ ಇಂಡಿಯಾಗೆ ಮೊದಲ ಯಶಸ್ಸು ಕೂಡ ತಂದುಕೊಟ್ಟರು. ಇದರ ಬೆನ್ನಲ್ಲೇ ಇನ್ನೊಸೆಂಟ್ ಕೈಯಾ (16) ವಿಕೆಟ್ ಪಡೆಯುವ ಮೂಲಕ ಶಾರ್ದೂಲ್ ಠಾಕೂರ್ ಜಿಂಬಾಬ್ವೆಗೆ 2ನೇ ಆಘಾತ ನೀಡಿದರು. ಈ ಹಂತದಲ್ಲಿ ಕಣಕ್ಕಿಳಿದ ಜಿಂಬಾಬ್ವೆ ನಾಯಕ ಚಕಬ್ವಾ (2) ಠಾಕೂರ್ ಎಸೆತದಲ್ಲಿ ಶುಭ್​ಮನ್​ ಗಿಲ್​ಗೆ ಕ್ಯಾಚ್ ನೀಡಿದರು.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಈ ವೇಳೆ ದಾಳಿಗಿಳಿದ ಪ್ರಸಿದ್ದ್ ಕೃಷ್ಣ ಮಧುವರೆ (2) ವಿಕೆಟ್ ಕಬಳಿಸಿ ಟೀಮ್ ಇಂಡಿಯಾಗೆ 4ನೇ ಯಶಸ್ಸು ತಂದುಕೊಟ್ಟರು. ಕೇವಲ 31 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡ ಜಿಂಬಾಬ್ವೆಗೆ ಈ ಹಂತದಲ್ಲಿ ಸಿಕಂದರ್ ರಾಜಾ ಹಾಗೂ ಸೀನ್ ವಿಲಿಯಮ್ಸನ್ ಆಸರೆಯಾದರು. ಈ ಜೋಡಿ 30 ರನ್​ಗಳ ಜೊತೆಯಾಟವಾಡುವ ಮೂಲಕ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಲು ಶ್ರಮಿಸಿದರು. ಆದರೆ ಈ ವೇಳೆ ಸ್ಪಿನ್ ಮೋಡಿ ಮಾಡಿದ ಕುಲ್ದೀಪ್ ಯಾದವ್ ಸಿಕಂದರ್ ರಾಜಾ (16) ವಿಕೆಟ್ ಕಬಳಿಸಿ ಜೊತೆಯಾಟವನ್ನು ಮುರಿಯುವಲ್ಲಿ ಸಫಲರಾದರು.

ಆದರೆ ಮತ್ತೊಂದೆಡೆ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಸೀನ್ ವಿಲಿಯಮ್ಸ್ ಭಾರತೀಯ ಬೌಲರ್​ಗಳನ್ನು ಆತ್ಮ ವಿಶ್ವಾಸದಿಂದಲೇ ಎದುರಿಸಿದರು. ಅದರಂತೆ 42 ಎಸೆತಗಳಲ್ಲಿ 42 ರನ್ ಬಾರಿಸುವ ಮೂಲಕ ಅಪಾಯಕಾರಿಯಾಗುವ ಸೂಚನೆ ನೀಡಿದರು. ಅಲ್ಲದೆ ತಂಡದ ಮೊತ್ತವನ್ನು 100ರ ಗಡಿದಾಟಿಸಿದರು.

ಈ ವೇಳೆ ನಾಯಕ ಕೆಎಲ್ ರಾಹುಲ್ ಬೌಲಿಂಗ್​ನಲ್ಲಿ ಮಾಡಿದ ಬದಲಾವಣೆ ಫಲ ನೀಡಿತು. ಅದರಂತೆ ವಿಲಿಯಮ್ಸ್​ ಪಾರ್ಟ್​ ಟೈಮ್ ಬೌಲರ್ ದೀಪಕ್ ಹೂಡಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್​ ಕಡೆ ಮುಖ ಮಾಡಿದರು. ಅಂತಿಮವಾಗಿ ಜಿಂಬಾಬ್ವೆ ತಂಡವನ್ನು 38.1 ಓವರ್​ಗಳಲ್ಲಿ 161 ರನ್​ಗಳಿಗೆ ಆಲೌಟ್ ಮಾಡುವ ಮೂಲಕ ಟೀಮ್ ಇಂಡಿಯಾ ಬೌಲರ್​ಗಳು ಪರಾಕ್ರಮ ಮೆರೆದರು. ಭಾರತದ ಪರ ಶಾರ್ದೂಲ್ ಠಾಕೂರ್ 3 ವಿಕೆಟ್ ಕಬಳಿಸಿದರೆ, ಪ್ರಸಿದ್ದ್ ಕೃಷ್ಣ, ಸಿರಾಜ್, ದೀಪಕ್ ಹೂಡಾ, ಕುಲ್ದೀಪ್ ಯಾದವ್ ತಲಾ ಒಂದೊಂದು ವಿಕೆಟ್ ಪಡೆದರು.

162 ರನ್​ಗಳ ಸುಲಭ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕನಾಗಿ ಕಣಕ್ಕಿಳಿದ ನಾಯಕ ಕೆಎಲ್ ರಾಹುಲ್ ಕೇವಲ 1 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇದೇ ವೇಳೆ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶುಭ್​ಮನ್ ಗಿಲ್ ಆರಂಭಿಕ ಶಿಖರ್ ಧವನ್ ಜೊತೆಗೂಡಿ ಉತ್ತಮ ಪಾಲುದಾರಿಕೆ ನಿಭಾಯಿಸಿದರು. ಅದರಂತೆ ಈ ಜೋಡಿ 42 ರನ್​ ಕಲೆಹಾಕಿತು. ಇದೇ ವೇಳೆ ಬಿರುಸಿನ ಆಟಕ್ಕೆ ಮುಂದಾಗಿ ಶಿಖರ್ ಧವನ್ (33) ಚಿವಂಗಾಗೆ ವಿಕೆಟ್ ಒಪ್ಪಿಸಿದರು.

ಆ ಬಳಿಕ ಬಂದ ಇಶಾನ್ ಕಿಶನ್ ಕೂಡ ನಿರಾಸೆ ಮೂಡಿಸಿದರು. 13 ಎಸೆತಗಳನ್ನು ಎದುರಿಸಿದ ಕಿಶನ್ ಕೇವಲ 6 ರನ್​ಗಳಿಸಿ ಜಾಂಗ್ವೆ ಎಸೆತಕ್ಕೆ ಕ್ಲೀನ್ ಬೌಲ್ಡ್ ಆದರು. ಮತ್ತೊಂದೆಡೆ 34 ಎಸೆತಗಳಲ್ಲಿ 33 ರನ್​ಗಳಿಸಿ ಮತ್ತೊಂದು ಅರ್ಧಶತಕದತ್ತ ಮುನ್ನುಗ್ಗಿದ ಶುಭ್​ಮನ್ ಗಿಲ್ ಅವರನ್ನು ಔಟ್ ಮಾಡುವಲ್ಲಿ ಕೊನೆಗೂ ಜಾಂಗ್ವೆ ಯಶಸ್ವಿಯಾದರು.

ಅದರಂತೆ 14 ಓವರ್​ಗಳ ಮುಕ್ತಾಯದ ವೇಳೆ 97 ರನ್​ಗೆ 4 ವಿಕೆಟ್​ ಕಳೆದುಕೊಂಡ ಟೀಮ್ ಇಂಡಿಯಾ ಪರ ಈ ಹಂತದಲ್ಲಿ ದೀಪಕ್ ಹೂಡಾ ಹಾಗೂ ಸಂಜು ಸ್ಯಾಮ್ಸನ್ ಆಸರೆಯಾದರು. ಅಲ್ಲದೆ ಅರ್ಧಶತಕದ ಜೊತೆಯಾಟವಾಡಿದರು. ಗೆಲ್ಲಲು ಕೇವಲ 9 ರನ್​ಗಳ ಅವಶ್ಯಕತೆಯಿದ್ದಾಗ  ಸಿಕಂದರ್ ರಾಜಾ ಎಸೆತವನ್ನು ಗುರುತಿಸುವಲ್ಲಿ ಎಡವಿ ದೀಪಕ್ ಹೂಡಾ (25) ಕ್ಲೀನ್ ಬೌಲ್ಡ್ ಆದರು. ಮತ್ತೊಂದೆಡೆ  35 ಎಸೆತಗಳಲ್ಲಿ  37 ರನ್​ ಬಾರಿಸುವ ಮೂಲಕ ಸಂಜು ಸ್ಯಾಮ್ಸನ್ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಅಂತಿಮವಾಗಿ 1 ರನ್​ ಬೇಕಿದ್ದ ವೇಳೆ ಅಕ್ಷರ್ ಪಟೇಲ್ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ 25.4 ಓವರ್​ಗಳಲ್ಲಿ 167 ರನ್​ಗಳೊಂದಿಗೆ ಗುರಿಮುಟ್ಟಿಸಿದರು. ಈ ಗೆಲುವಿನೊಂದಿಗೆ 3 ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 2 ಜಯ ಸಾಧಿಸಿ ಸರಣಿ ವಶಪಡಿಸಿಕೊಂಡಿದೆ. ಇನ್ನು ಸರಣಿಯ ಕೊನೆಯ ಪಂದ್ಯವು ಆಗಸ್ಟ್ 22 ರಂದು ನಡೆಯಲಿದೆ.

ಜಿಂಬಾಬ್ವೆ (ಪ್ಲೇಯಿಂಗ್ XI): ಇನೋಸೆಂಟ್ ಕೈಯಾ, ತಕುದ್ಜ್ವಾನಾಶೆ ಕೈಟಾನೊ, ವೆಸ್ಲಿ ಮಾಧೆವೆರೆ, ಸೀನ್ ವಿಲಿಯಮ್ಸ್, ಸಿಕಂದರ್ ರಾಜಾ, ರೆಗಿಸ್ ಚಕಬ್ವಾ(ನಾಯಕ), ರಿಯಾನ್ ಬರ್ಲ್, ಲ್ಯೂಕ್ ಜೊಂಗ್ವೆ, ಬ್ರಾಡ್ ಇವಾನ್ಸ್, ವಿಕ್ಟರ್ ನ್ಯೌಚಿ, ತನಕಾ ಚಿವಾಂಗಾ

ಭಾರತ (ಪ್ಲೇಯಿಂಗ್ XI): ಶಿಖರ್ ಧವನ್, ಶುಭಮನ್ ಗಿಲ್, ಇಶಾನ್ ಕಿಶನ್, ಕೆಎಲ್ ರಾಹುಲ್(ನಾಯಕ), ದೀಪಕ್ ಹೂಡಾ, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ