AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Zimbabwe 2nd ODI: ಟೀಮ್ ಇಂಡಿಯಾಗೆ ಸುಲಭ ಸವಾಲು ನೀಡಿದ ಜಿಂಬಾಬ್ವೆ

India vs Zimbabwe 2nd ODI: ಈ ಹಂತದಲ್ಲಿ ಕಣಕ್ಕಿಳಿದ ಜಿಂಬಾಬ್ವೆ ನಾಯಕ ಚಕಬ್ವಾ (2) ಠಾಕೂರ್ ಎಸೆತದಲ್ಲಿ ಶುಭ್​ಮನ್​ ಗಿಲ್​ಗೆ ಕ್ಯಾಚ್ ನೀಡಿದರು. ಈ ವೇಳೆ ದಾಳಿಗಿಳಿದ ಪ್ರಸಿದ್ದ್ ಕೃಷ್ಣ ಮಧುವರೆ (2) ವಿಕೆಟ್ ಕಬಳಿಸಿ ಟೀಮ್ ಇಂಡಿಯಾಗೆ 4ನೇ ಯಶಸ್ಸು ತಂದುಕೊಟ್ಟರು.

India vs Zimbabwe 2nd ODI: ಟೀಮ್ ಇಂಡಿಯಾಗೆ ಸುಲಭ ಸವಾಲು ನೀಡಿದ ಜಿಂಬಾಬ್ವೆ
India vs Zimbabwe 2nd ODI
TV9 Web
| Edited By: |

Updated on:Aug 20, 2022 | 4:03 PM

Share

ಹರಾರೆಯ ಸ್ಪೋರ್ಟ್ಸ್​ ಕ್ಲಬ್​ ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ದದ 2ನೇ ಏಕದಿನ ಪಂದ್ಯದಲ್ಲಿ ಜಿಂಬಾಬ್ವೆ ತಂಡವು 161 ರನ್​ಳಿಗೆ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಕೆಎಲ್ ರಾಹುಲ್ ಬೌಲಿಂಗ್ ಆಯ್ದುಕೊಂಡರು. ನಾಯಕನ ನಿರ್ಧಾರವನ್ನು ಬೆಂಬಲಿಸಿದಂತೆ ಬೌಲಿಂಗ್ ದಾಳಿ ಸಂಘಟಿಸಿದ ಟೀಮ್ ಇಂಡಿಯಾ ಬೌಲರ್​ಗಳು ಆರಂಭದಲ್ಲೇ ಜಿಂಬಾಬ್ವೆ ಆರಂಭಿಕರ ಮೇಲೆ ಒತ್ತಡ ಹೇರಿದರು. ಪರಿಣಾಮ ಮೊದಲ 10 ಓವರ್​ಗಳಲ್ಲಿ ಜಿಂಬಾಬ್ವೆ ಕಲೆಹಾಕಿದ್ದು ಕೇವಲ 26 ರನ್​ ಮಾತ್ರ.

ಇದರ ನಡುವೆ ಕೈಟಾನೊ (7) ವಿಕೆಟ್ ಪಡೆಯುವ ಮೂಲಕ ಮೊಹಮ್ಮದ್ ಸಿರಾಜ್ ಟೀಮ್ ಇಂಡಿಯಾಗೆ ಮೊದಲ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ಇನ್ನೊಸೆಂಟ್ ಕೈಯಾ (16) ವಿಕೆಟ್ ಪಡೆಯುವ ಮೂಲಕ ಶಾರ್ದೂಲ್ ಠಾಕೂರ್ ಜಿಂಬಾಬ್ವೆಗೆ ಆಘಾತ ನೀಡಿದರು.

ಈ ಹಂತದಲ್ಲಿ ಕಣಕ್ಕಿಳಿದ ಜಿಂಬಾಬ್ವೆ ನಾಯಕ ಚಕಬ್ವಾ (2) ಠಾಕೂರ್ ಎಸೆತದಲ್ಲಿ ಶುಭ್​ಮನ್​ ಗಿಲ್​ಗೆ ಕ್ಯಾಚ್ ನೀಡಿದರು. ಈ ವೇಳೆ ದಾಳಿಗಿಳಿದ ಪ್ರಸಿದ್ದ್ ಕೃಷ್ಣ ಮಧುವರೆ (2) ವಿಕೆಟ್ ಕಬಳಿಸಿ ಟೀಮ್ ಇಂಡಿಯಾಗೆ 4ನೇ ಯಶಸ್ಸು ತಂದುಕೊಟ್ಟರು. ಕೇವಲ 31 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡ ಜಿಂಬಾಬ್ವೆಗೆ ಈ ಹಂತದಲ್ಲಿ ಸಿಕಂದರ್ ರಾಜಾ ಹಾಗೂ ಸೀನ್ ವಿಲಿಯಮ್ಸನ್ ಆಸರೆಯಾದರು. ಈ ಜೋಡಿ 30 ರನ್​ಗಳ ಜೊತೆಯಾಟವಾಡುವ ಮೂಲಕ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಲು ಶ್ರಮಿಸಿದರು. ಆದರೆ ಈ ವೇಳೆ ಸ್ಪಿನ್ ಮೋಡಿ ಮಾಡಿದ ಕುಲ್ದೀಪ್ ಯಾದವ್ ಸಿಕಂದರ್ ರಾಜಾ (16) ವಿಕೆಟ್ ಕಬಳಿಸಿ ಜೊತೆಯಾಟವನ್ನು ಮುರಿಯುವಲ್ಲಿ ಸಫಲರಾದರು.

ಆದರೆ ಮತ್ತೊಂದೆಡೆ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಸೀನ್ ವಿಲಿಯಮ್ಸ್ ಭಾರತೀಯ ಬೌಲರ್​ಗಳನ್ನು ಆತ್ಮ ವಿಶ್ವಾಸದಿಂದಲೇ ಎದುರಿಸಿದರು. ಅದರಂತೆ 42 ಎಸೆತಗಳಲ್ಲಿ 42 ರನ್ ಬಾರಿಸುವ ಮೂಲಕ ಅಪಾಯಕಾರಿಯಾಗುವ ಸೂಚನೆ ನೀಡಿದರು. ಅಲ್ಲದೆ ತಂಡದ ಮೊತ್ತವನ್ನು 100ರ ಗಡಿದಾಟಿಸಿದರು.

ಈ ವೇಳೆ ನಾಯಕ ಕೆಎಲ್ ರಾಹುಲ್ ಬೌಲಿಂಗ್​ನಲ್ಲಿ ಮಾಡಿದ ಬದಲಾವಣೆ ಫಲ ನೀಡಿತು. ಅದರಂತೆ ವಿಲಿಯಮ್ಸ್​ ಪಾರ್ಟ್​ ಟೈಮ್ ಬೌಲರ್ ದೀಪಕ್ ಹೂಡಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್​ ಕಡೆ ಮುಖ ಮಾಡಿದರು. ಅಂತಿಮವಾಗಿ ಜಿಂಬಾಬ್ವೆ ತಂಡವನ್ನು 38.1 ಓವರ್​ಗಳಲ್ಲಿ 161 ರನ್​ಗಳಿಗೆ ಆಲೌಟ್ ಮಾಡುವ ಮೂಲಕ ಟೀಮ್ ಇಂಡಿಯಾ ಬೌಲರ್​ಗಳು ಪರಾಕ್ರಮ ಮೆರೆದರು. ಭಾರತದ ಪರ ಶಾರ್ದೂಲ್ ಠಾಕೂರ್ 3 ವಿಕೆಟ್ ಕಬಳಿಸಿದರೆ, ಪ್ರಸಿದ್ದ್ ಕೃಷ್ಣ, ಸಿರಾಜ್, ದೀಪಕ್ ಹೂಡಾ, ಕುಲ್ದೀಪ್ ಯಾದವ್ ತಲಾ ಒಂದೊಂದು ವಿಕೆಟ್ ಪಡೆದರು.

ಜಿಂಬಾಬ್ವೆ (ಪ್ಲೇಯಿಂಗ್ XI): ಇನೋಸೆಂಟ್ ಕೈಯಾ, ತಕುದ್ಜ್ವಾನಾಶೆ ಕೈಟಾನೊ, ವೆಸ್ಲಿ ಮಾಧೆವೆರೆ, ಸೀನ್ ವಿಲಿಯಮ್ಸ್, ಸಿಕಂದರ್ ರಾಜಾ, ರೆಗಿಸ್ ಚಕಬ್ವಾ(ನಾಯಕ), ರಿಯಾನ್ ಬರ್ಲ್, ಲ್ಯೂಕ್ ಜೊಂಗ್ವೆ, ಬ್ರಾಡ್ ಇವಾನ್ಸ್, ವಿಕ್ಟರ್ ನ್ಯೌಚಿ, ತನಕಾ ಚಿವಾಂಗಾ

ಭಾರತ (ಪ್ಲೇಯಿಂಗ್ XI): ಶಿಖರ್ ಧವನ್, ಶುಭಮನ್ ಗಿಲ್, ಇಶಾನ್ ಕಿಶನ್, ಕೆಎಲ್ ರಾಹುಲ್(ನಾಯಕ), ದೀಪಕ್ ಹೂಡಾ, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್

Published On - 4:01 pm, Sat, 20 August 22

Follow Us
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ