AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ZIM: ಕೊನೆ ಪಂದ್ಯದಲ್ಲಿ ಟಾಸ್ ಗೆದ್ದ ಜಿಂಬಾಬ್ವೆ; ಭಾರತ ತಂಡದಲ್ಲಿ 2 ಬದಲಾವಣೆ

IND vs ZIM: ಭಾರತ ಮತ್ತು ಜಿಂಬಾಬ್ವೆ ನಡುವಿನ 5 ಪಂದ್ಯಗಳ ಟಿ20 ಸರಣಿಯ ಐದನೇ ಅಂದರೆ ಸರಣಿಯ ಕೊನೆಯ ಪಂದ್ಯ ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಆತಿಥೇಯ ತಂಡದ ನಾಯಕ ಸಿಕಂದರ್ ರಾಝಾ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಇದು ಸರಣಿಯ ಕೊನೆಯ ಪಂದ್ಯವಾಗಿರುವುದರಿಂದ ಟೀಂ ಇಂಡಿಯಾದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ.

IND vs ZIM: ಕೊನೆ ಪಂದ್ಯದಲ್ಲಿ ಟಾಸ್ ಗೆದ್ದ ಜಿಂಬಾಬ್ವೆ; ಭಾರತ ತಂಡದಲ್ಲಿ 2 ಬದಲಾವಣೆ
ಭಾರತ- ಜಿಂಬಾಬ್ವೆ
ಪೃಥ್ವಿಶಂಕರ
|

Updated on:Jul 14, 2024 | 4:43 PM

Share

ಭಾರತ ಮತ್ತು ಜಿಂಬಾಬ್ವೆ ನಡುವಿನ 5 ಪಂದ್ಯಗಳ ಟಿ20 ಸರಣಿಯ ಐದನೇ ಅಂದರೆ ಸರಣಿಯ ಕೊನೆಯ ಪಂದ್ಯ ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಆತಿಥೇಯ ತಂಡದ ನಾಯಕ ಸಿಕಂದರ್ ರಾಝಾ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಇದು ಸರಣಿಯ ಕೊನೆಯ ಪಂದ್ಯವಾಗಿರುವುದರಿಂದ ಟೀಂ ಇಂಡಿಯಾದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಸರಣಿಯಲ್ಲಿ ಅವಕಾಶ ಸಿಗದ ಆಟಗಾರರು ಈ ಕೊನೆಯ ಪಂದ್ಯದಲ್ಲಿ ಕಣಕ್ಕಿಳಿಯುತ್ತಿದ್ದಾರೆ. ಇತ್ತ ಆತಿಥೇಯ ಜಿಂಬಾಬ್ವೆ ತಂಡದಲ್ಲೂ ಬದಲಾವಣೆಗಳಾಗಿವೆ.

ಉಭಯ ತಂಡಗಳಲ್ಲೂ ಬದಲಾವಣೆ

ಎರಡೂ ತಂಡಗಳು ಸರಣಿಯ ಕೊನೆಯ ಪಂದ್ಯಕ್ಕಾಗಿ ಆಡುವ ಹನ್ನೊಂದರಲ್ಲಿ ಬದಲಾವಣೆ ಮಾಡಿಕೊಂಡಿವೆ. ಕ್ಯಾಪ್ಟನ್ ಸಿಕಂದರ್ ರಝಾ ತೆಂಡೈ ಚಟಾರಾ ಬದಲಿಗೆ ಬ್ರಾಂಡನ್ ಮಾವುತಾ ಅವರನ್ನುತಂಡಕ್ಕೆ ಆಯ್ಕೆ ಮಾಡಿದ್ದಾರೆ. ಇತ್ತ ಟೀಂ ಇಂಡಿಯಾದಲ್ಲಿ 2 ಬದಲಾವಣೆ ಮಾಡಲಾಗಿದೆ. ರುತುರಾಜ್ ಗಾಯಕ್ವಾಡ್ ಮತ್ತು ಖಲೀಲ್ ಅಹ್ಮದ್ ಅವರನ್ನು ಈ ಪಂದ್ಯದಿಂದ ಹೊರಗಿಡಲಾಗಿದೆ. ಅವರ ಸ್ಥಾನದಲ್ಲಿ ರಿಯಾನ್ ಪರಾಗ್ ಮತ್ತು ಮುಖೇಶ್ ಕುಮಾರ್ ಅವರನ್ನು ಪ್ಲೇಯಿಂಗ್ ಇಲೆವೆನ್‌ನಲ್ಲಿ ಸೇರಿಸಲಾಗಿದೆ.

ಉಭಯ ತಂಡಗಳು

ಭಾರತ ತಂಡ: ಶುಭ್​ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಯಾನ್ ಪರಾಗ್, ರಿಂಕು ಸಿಂಗ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ತುಷಾರ್ ದೇಶಪಾಂಡೆ, ಮುಖೇಶ್ ಕುಮಾರ್.

ಜಿಂಬಾಬ್ವೆ ತಂಡ: ವೆಸ್ಲಿ ಮಾಧವೆರೆ, ತಡಿವಾನಾಶೆ ಮರುಮಣಿ, ಬ್ರಿಯಾನ್ ಬೆನೆಟ್, ಡಿಯೋನ್ ಮೈಯರ್ಸ್, ಸಿಕಂದರ್ ರಾಝಾ (ನಾಯಕ), ಜೊನಾಥನ್ ಕ್ಯಾಂಪ್‌ಬೆಲ್, ಫರಾಜ್ ಅಕ್ರಂ, ಕ್ಲೈವ್ ಮದಂಡೆ (ವಿಕೆಟ್ ಕೀಪರ್), ಬ್ರಾಂಡನ್ ಮಾವುತಾ, ರಿಚರ್ಡ್ ನಾಗರವಾ, ಬ್ಲೆಸ್ಸಿಂಗ್ ಮುಜರಬಾನಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:14 pm, Sun, 14 July 24

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ