AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Zimbabwe: ಟೀಮ್ ಇಂಡಿಯಾದಲ್ಲಿ RCB ಆಟಗಾರನಿಗೆ ಸಿಕ್ತು ಚೊಚ್ಚಲ ಅವಕಾಶ

India vs Zimbabwe: ಜಿಂಬಾಬ್ವೆ ಸರಣಿಗೆ ಭಾರತ ತಂಡ (India Squad): ಕೆಎಲ್ ರಾಹುಲ್ (ನಾಯಕ) ಶಿಖರ್ ಧವನ್ (ಉಪ ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್.

India vs Zimbabwe: ಟೀಮ್ ಇಂಡಿಯಾದಲ್ಲಿ RCB ಆಟಗಾರನಿಗೆ ಸಿಕ್ತು ಚೊಚ್ಚಲ ಅವಕಾಶ
RCB
TV9 Web
| Edited By: |

Updated on: Aug 16, 2022 | 1:54 PM

Share

ಭಾರತ-ಜಿಂಬಾಬ್ವೆ (India vs Zimbabwe) ನಡುವಣ ಏಕದಿನ ಸರಣಿಯು ಆಗಸ್ಟ್ 18 ರಿಂದ ಶುರುವಾಗಲಿದೆ. 3 ಪಂದ್ಯಗಳ ಏಕದಿನ ಸರಣಿ ಆರಂಭಕ್ಕೂ ಮುನ್ನ ಗಾಯಗೊಂಡಿರುವ ವಾಷಿಂಗ್ಟನ್ ಸುಂದರ್ (Washington Sudar)​ ತಂಡದಿಂದ ಹೊರಗುಳಿದಿದ್ದಾರೆ. ಇದೀಗ ಸುಂದರ್​ ಬದಲಿಗೆ ಮತ್ತೋರ್ವ ಯುವ ಆಲ್​ರೌಂಡರ್ ಶಹಬಾಜ್ ಅಹ್ಮದ್​ಗೆ (Shahbaz Ahmed) ಸ್ಥಾನ ನೀಡಲಾಗಿದೆ. ಬಂಗಾಳ ಮೂಲದ ಶಹಬಾಜ್ ಐಪಿಎಲ್​ನಲ್ಲಿ ಆರ್​ಸಿಬಿ (RCB) ಪರ ಆಡುತ್ತಿದ್ದಾರೆ. ಇದೀಗ ಭುಜದ ಗಾಯದ ಕಾರಣ ತಂಡದಿಂದ ಹೊರಗುಳಿದಿರುವ ವಾಷಿಂಗ್ಟನ್ ಸುಂದರ್​ ಬದಲಿಗೆ ಯುವ ಆಟಗಾರನಿಗೆ ಆಯ್ಕೆ ಸಮಿತಿ ಮಣೆಹಾಕಿದೆ.

ಇಂಗ್ಲೆಂಡ್ ​ನಲ್ಲಿ ರಾಯಲ್ ಲಂಡನ್ ಒನ್ ಡೇ ಚಾಂಪಿಯನ್​ಶಿಪ್​ ಪಂದ್ಯದಲ್ಲಿ ಆಡುತ್ತಿದ್ದ ಸುಂದರ್ ಫೀಲ್ಡಿಂಗ್ ವೇಳೆ ಭುಜಕ್ಕೆ ಗಾಯ ಮಾಡಿಕೊಂಡಿದ್ದರು. ಹೀಗಾಗಿ ಅರ್ಧದಲ್ಲೇ ಮೈದಾನವನ್ನು ತೊರೆದಿದ್ದರು. ಇದೀಗ ಅವರಿಗೆ ದೀರ್ಘ ವಿಶ್ರಾಂತಿಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. ಹೀಗಾಗಿ ಸುಂದರ್ ಬದಲಿಗೆ ಬೇರೊಬ್ಬ ಆಟಗಾರನನ್ನು ಜಿಂಬಾಬ್ವೆಗೆ ಕಳುಹಿಸಲು ಬಿಸಿಸಿಐ ನಿರ್ಧರಿಸಿದೆ.

ಅದರಂತೆ ಐಪಿಎಲ್​ನಲ್ಲಿ ಆರ್​ಸಿಬಿ ಪರ ಉತ್ತಮ ಪ್ರದರ್ಶನ ನೀಡಿದ್ದ ಸ್ಪಿನ್ ಆಲ್​ರೌಂಡರ್ ಶಹಬಾಜ್ ಅಹ್ಮದ್ ಅವರನ್ನು ಬಿಸಿಸಿಐ ಆಯ್ಕೆ ಮಾಡಿದೆ. ಈ ಬಾರಿಯ ರಣಜಿ ಟೂರ್ನಿಯಲ್ಲೂ ಶಹಬಾಜ್ ಉತ್ತಮ ಪ್ರದರ್ಶನ ನೀಡಿದ್ದರು. ಸ್ಪಿನ್ ಬೌಲಿಂಗ್ ಮೂಲಕ ಗಮನ ಸೆಳೆದಿದ್ದ ಯುವ ಆಟಗಾರ ಇದೀಗ ಚೊಚ್ಚಲ ಬಾರಿಗೆ ಟೀಮ್ ಇಂಡಿಯಾದಲ್ಲಿ ಅವಕಾಶ ಪಡೆದಿದ್ದಾರೆ.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ರಾಯಲ್ ಚಾಲೆಂಜರ್ಸ್​ ಬೆಂಗಳೂರು ಪರ 29 ಪಂದ್ಯಗಳನ್ನಾಡಿರುವ ಶಹಬಾಜ್ 13 ವಿಕೆಟ್ ಹಾಗೂ 279 ರನ್ ಕಲೆಹಾಕಿದ್ದಾರೆ. ವಿಶೇಷ ಎಂದರೆ ಶಹಬಾಜ್ ಅವರನ್ನು ಯಾವುದೇ ಕ್ರಮಾಂಕದಲ್ಲೂ ಬ್ಯಾಟಿಂಗ್​ಗೆ ಬಳಸಿಕೊಳ್ಳಬಹುದು. ಹೀಗಾಗಿ ವಾಷಿಂಗ್ಟನ್ ಸುಂದರ್​ ಸ್ಥಾನದಲ್ಲಿ ಸ್ಪಿನ್ ಆಲ್​ರೌಂಡರ್​ಗೆ ಚಾನ್ಸ್​ ನೀಡಲಾಗಿದೆ.

ಭಾರತ ಮತ್ತು ಜಿಂಬಾಬ್ವೆ ನಡುವಿನ ಏಕದಿನ ಸರಣಿ ಆಗಸ್ಟ್ 18 ರಿಂದ ಆರಂಭವಾಗಲಿದ್ದು, ಎರಡನೇ ಪಂದ್ಯ ಆಗಸ್ಟ್ 20ರಂದು ನಡೆಯಲಿದೆ. ಮೂರನೇ ಏಕದಿನ ಪಂದ್ಯ ಆಗಸ್ಟ್ 22 ರಂದು ಜರುಗಲಿದೆ. ಈ ಮೂರು ಪಂದ್ಯಗಳು ಹರಾರೆಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದ್ದು, ಈ ಪಂದ್ಯಗಳ ಮೂಲಕ ಟೀಮ್ ಇಂಡಿಯಾ ಪರ ಪದಾರ್ಪಣೆ ಮಾಡುವ ಅವಕಾಶ ಆರ್​ಸಿಬಿ ಆಟಗಾರನಿಗೆ ಸಿಗಲಿದೆಯಾ ಕಾದು ನೋಡಬೇಕಿದೆ.

ಜಿಂಬಾಬ್ವೆ ಸರಣಿಗೆ ಭಾರತ ತಂಡ (India Squad): ಕೆಎಲ್ ರಾಹುಲ್ (ನಾಯಕ) ಶಿಖರ್ ಧವನ್ (ಉಪ ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್ , ದೀಪಕ್ ಚಹಾರ್, ಶಹಬಾಜ್ ಅಹ್ಮದ್.

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ