AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟೆಂಬರ್ 2 ರಂದು ಟೀಮ್ ಇಂಡಿಯಾ ಆಟಗಾರರಿಗೆ ಅಗ್ನಿಪರೀಕ್ಷೆ

ಏಕದಿನ ವಿಶ್ವಕಪ್ ತಂಡಗಳನ್ನು ಘೋಷಿಸಲು ಈಗಾಗಲೇ ಐಸಿಸಿ ಗಡವು ವಿಧಿಸಿದೆ. ಅದರಂತೆ ಸೆಪ್ಟೆಂಬರ್ 5 ರೊಳಗೆ ಟೀಮ್ ಇಂಡಿಯಾವನ್ನು ಘೋಷಿಸಬೇಕು. ಅಂದರೆ ಪಾಕಿಸ್ತಾನ್ ವಿರುದ್ಧದ ಪಂದ್ಯದ ಬಳಿಕ ಭಾರತ ತಂಡದ ಆಯ್ಕೆ ನಡೆಯುವುದು ಖಚಿತ ಎನ್ನಬಹುದು. ಹೀಗಾಗಿಯೇ ಪಾಕ್​ ವಿರುದ್ಧದ ಪಂದ್ಯವು ಟೀಮ್ ಇಂಡಿಯಾ ಆಟಗಾರರ ಪಾಲಿಗೆ ಅಗ್ನಿಪರೀಕ್ಷೆಯಾಗಿ ಮಾರ್ಪಟ್ಟಿದೆ.

ಸೆಪ್ಟೆಂಬರ್ 2 ರಂದು ಟೀಮ್ ಇಂಡಿಯಾ ಆಟಗಾರರಿಗೆ ಅಗ್ನಿಪರೀಕ್ಷೆ
Team India
TV9 Web
| Edited By: |

Updated on: Aug 28, 2023 | 8:23 PM

Share

ಬಹುನಿರೀಕ್ಷಿತ ಏಷ್ಯಾಕಪ್ ಆಗಸ್ಟ್ 30 ರಿಂದ ಶುರುವಾಗಲಿದೆ. ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಹಾಗೂ ನೇಪಾಳ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸುವುದು ಸೆಪ್ಟೆಂಬರ್ 2 ರಂದು. ಅದು ಕೂಡ ಪಾಕಿಸ್ತಾನ್ ವಿರುದ್ಧದ ಪಂದ್ಯದ ಮೂಲಕ ಎಂಬುದು ವಿಶೇಷ.

ಇದೀಗ ಅದೇ ಪಂದ್ಯವು ಟೀಮ್ ಇಂಡಿಯಾ ಆಟಗಾರರ ಪಾಲಿಗೆ ಅಗ್ನಿಪರೀಕ್ಷೆಯಾಗಿ ಮಾರ್ಪಟ್ಟಿದೆ. ಏಕೆಂದರೆ ಈ ಪಂದ್ಯದ ಬಳಿಕ ಏಕದಿನ ವಿಶ್ವಕಪ್ ತಂಡವನ್ನು ಆಯ್ಕೆ ಮಾಡಲು ಬಿಸಿಸಿಐ ಆಯ್ಕೆ ಸಮಿತಿ ನಿರ್ಧರಿಸಿದೆ. ಪಾಕಿಸ್ತಾನ್ ವಿರುದ್ಧದ ಪಂದ್ಯವು ಸೆಪ್ಟೆಂಬರ್ 2 ರಂದು ನಡೆದರೆ, ಭಾರತ ಏಕದಿನ ವಿಶ್ವಕಪ್ ತಂಡವನ್ನು ಸೆಪ್ಟೆಂಬರ್ 3 ರಂದು ಘೋಷಿಸಲಿದೆ ಎಂದು ವರದಿಯಾಗಿದೆ.

ತಂಡಗಳ ಘೋಷಣೆಗೆ ಗಡುವು:

ಏಕದಿನ ವಿಶ್ವಕಪ್ ತಂಡಗಳನ್ನು ಘೋಷಿಸಲು ಈಗಾಗಲೇ ಐಸಿಸಿ ಗಡವು ವಿಧಿಸಿದೆ. ಅದರಂತೆ ಸೆಪ್ಟೆಂಬರ್ 5 ರೊಳಗೆ 10 ತಂಡಗಳನ್ನು ಘೋಷಿಸಬೇಕು. ಅಂದರೆ ಪಾಕಿಸ್ತಾನ್ ವಿರುದ್ಧದ ಪಂದ್ಯದ ಬಳಿಕ ಭಾರತ ತಂಡದ ಆಯ್ಕೆ ನಡೆಯುವುದು ಖಚಿತ ಎನ್ನಬಹುದು. ಹೀಗಾಗಿಯೇ ಪಾಕ್​ ವಿರುದ್ಧದ ಪಂದ್ಯವು ಟೀಮ್ ಇಂಡಿಯಾ ಆಟಗಾರರ ಪಾಲಿಗೆ ಅಗ್ನಿಪರೀಕ್ಷೆಯಾಗಿ ಮಾರ್ಪಟ್ಟಿದೆ.

ಏಷ್ಯಾಕಪ್​ನಲ್ಲಿ ವಿಫಲರಾದರೆ?

ಒಂದು ವೇಳೆ ಏಕದಿನ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿ ಏಷ್ಯಾಕಪ್​ನಲ್ಲಿ ಸಂಪೂರ್ಣ ವಿಫಲರಾದರೆ ಮುಂದೇನು? ಎಂಬ ಪ್ರಶ್ನೆಯೊಂದು ಮೂಡುವುದು ಸಹಜ. ಇದಕ್ಕೆ ಉತ್ತರ ತಾತ್ಕಾಲಿಕ ತಂಡದ ಘೋಷಣೆ.

ಅಂದರೆ ಏಕದಿನ ವಿಶ್ವಕಪ್​ಗೆ ಸದ್ಯ ತಾತ್ಕಾಲಿಕ ತಂಡವನ್ನು ಘೋಷಿಸಲಾಗುತ್ತದೆ. ಇದಾದ ಬಳಿಕ ಆ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಇದಕ್ಕೂ ಕೂಡ ಗಡುವು ವಿಧಿಸಲಾಗಿದ್ದು, ಅದರಂತೆ ಏಕದಿನ ವಿಶ್ವಕಪ್ ಆರಂಭಕ್ಕೂ ಒಂದು ವಾರಗಳ ಮುಂಚಿತವಾಗಿ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಬಹುದು.

ಹಾಗೆಯೇ ಸೆಪ್ಟೆಂಬರ್ 28 ರ ಬಳಿಕ 15 ಸದಸ್ಯರ ತಂಡದಲ್ಲಿ ಯಾವುದೇ ಬದಲಾವಣೆ ಮಾಡುವಂತಿಲ್ಲ. ಒಂದು ವೇಳೆ ಗಾಯದ ಸಮಸ್ಯೆ ಅಥವಾ ಇನ್ನಿತರ ಮುಖ್ಯ ಕಾರಣಗಳಿಗಾಗಿ ಬದಲಿ ಆಟಗಾರನನ್ನು ಆಯ್ಕೆ ಮಾಡಬಹುದು. ಆದರೆ ಅದಕ್ಕೂ ಮುನ್ನ ಐಸಿಸಿಯ ಟೆಕ್ನಿಕಲ್ ಕಮಿಟಿಯ ಅನುಮತಿ ಪಡೆಯಬೇಕಾಗುತ್ತದೆ. ಹೀಗಾಗಿಯೇ ಏಷ್ಯಾಕಪ್​ನಲ್ಲಿ ಕಳಪೆ ಪ್ರದರ್ಶನ ನೀಡಿದ ಆಟಗಾರರಿಗೆ ಏಕದಿನ ವಿಶ್ವಕಪ್​ ತಂಡದಿಂದ ಗೇಟ್ ಪಾಸ್ ಸಿಗಬಹುದು.

ಇದನ್ನೂ ಓದಿ: Asia Cup 2023 Schedule: ಏಷ್ಯಾಕಪ್ ವೇಳಾಪಟ್ಟಿ ಪ್ರಕಟ

ಏಷ್ಯಾಕಪ್​ಗಾಗಿ​ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).

Follow Us
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ