Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟೆಂಬರ್ 2 ರಂದು ಟೀಮ್ ಇಂಡಿಯಾ ಆಟಗಾರರಿಗೆ ಅಗ್ನಿಪರೀಕ್ಷೆ

ಏಕದಿನ ವಿಶ್ವಕಪ್ ತಂಡಗಳನ್ನು ಘೋಷಿಸಲು ಈಗಾಗಲೇ ಐಸಿಸಿ ಗಡವು ವಿಧಿಸಿದೆ. ಅದರಂತೆ ಸೆಪ್ಟೆಂಬರ್ 5 ರೊಳಗೆ ಟೀಮ್ ಇಂಡಿಯಾವನ್ನು ಘೋಷಿಸಬೇಕು. ಅಂದರೆ ಪಾಕಿಸ್ತಾನ್ ವಿರುದ್ಧದ ಪಂದ್ಯದ ಬಳಿಕ ಭಾರತ ತಂಡದ ಆಯ್ಕೆ ನಡೆಯುವುದು ಖಚಿತ ಎನ್ನಬಹುದು. ಹೀಗಾಗಿಯೇ ಪಾಕ್​ ವಿರುದ್ಧದ ಪಂದ್ಯವು ಟೀಮ್ ಇಂಡಿಯಾ ಆಟಗಾರರ ಪಾಲಿಗೆ ಅಗ್ನಿಪರೀಕ್ಷೆಯಾಗಿ ಮಾರ್ಪಟ್ಟಿದೆ.

ಸೆಪ್ಟೆಂಬರ್ 2 ರಂದು ಟೀಮ್ ಇಂಡಿಯಾ ಆಟಗಾರರಿಗೆ ಅಗ್ನಿಪರೀಕ್ಷೆ
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 28, 2023 | 8:23 PM

ಬಹುನಿರೀಕ್ಷಿತ ಏಷ್ಯಾಕಪ್ ಆಗಸ್ಟ್ 30 ರಿಂದ ಶುರುವಾಗಲಿದೆ. ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಹಾಗೂ ನೇಪಾಳ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸುವುದು ಸೆಪ್ಟೆಂಬರ್ 2 ರಂದು. ಅದು ಕೂಡ ಪಾಕಿಸ್ತಾನ್ ವಿರುದ್ಧದ ಪಂದ್ಯದ ಮೂಲಕ ಎಂಬುದು ವಿಶೇಷ.

ಇದೀಗ ಅದೇ ಪಂದ್ಯವು ಟೀಮ್ ಇಂಡಿಯಾ ಆಟಗಾರರ ಪಾಲಿಗೆ ಅಗ್ನಿಪರೀಕ್ಷೆಯಾಗಿ ಮಾರ್ಪಟ್ಟಿದೆ. ಏಕೆಂದರೆ ಈ ಪಂದ್ಯದ ಬಳಿಕ ಏಕದಿನ ವಿಶ್ವಕಪ್ ತಂಡವನ್ನು ಆಯ್ಕೆ ಮಾಡಲು ಬಿಸಿಸಿಐ ಆಯ್ಕೆ ಸಮಿತಿ ನಿರ್ಧರಿಸಿದೆ. ಪಾಕಿಸ್ತಾನ್ ವಿರುದ್ಧದ ಪಂದ್ಯವು ಸೆಪ್ಟೆಂಬರ್ 2 ರಂದು ನಡೆದರೆ, ಭಾರತ ಏಕದಿನ ವಿಶ್ವಕಪ್ ತಂಡವನ್ನು ಸೆಪ್ಟೆಂಬರ್ 3 ರಂದು ಘೋಷಿಸಲಿದೆ ಎಂದು ವರದಿಯಾಗಿದೆ.

ತಂಡಗಳ ಘೋಷಣೆಗೆ ಗಡುವು:

ಏಕದಿನ ವಿಶ್ವಕಪ್ ತಂಡಗಳನ್ನು ಘೋಷಿಸಲು ಈಗಾಗಲೇ ಐಸಿಸಿ ಗಡವು ವಿಧಿಸಿದೆ. ಅದರಂತೆ ಸೆಪ್ಟೆಂಬರ್ 5 ರೊಳಗೆ 10 ತಂಡಗಳನ್ನು ಘೋಷಿಸಬೇಕು. ಅಂದರೆ ಪಾಕಿಸ್ತಾನ್ ವಿರುದ್ಧದ ಪಂದ್ಯದ ಬಳಿಕ ಭಾರತ ತಂಡದ ಆಯ್ಕೆ ನಡೆಯುವುದು ಖಚಿತ ಎನ್ನಬಹುದು. ಹೀಗಾಗಿಯೇ ಪಾಕ್​ ವಿರುದ್ಧದ ಪಂದ್ಯವು ಟೀಮ್ ಇಂಡಿಯಾ ಆಟಗಾರರ ಪಾಲಿಗೆ ಅಗ್ನಿಪರೀಕ್ಷೆಯಾಗಿ ಮಾರ್ಪಟ್ಟಿದೆ.

ಏಷ್ಯಾಕಪ್​ನಲ್ಲಿ ವಿಫಲರಾದರೆ?

ಒಂದು ವೇಳೆ ಏಕದಿನ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿ ಏಷ್ಯಾಕಪ್​ನಲ್ಲಿ ಸಂಪೂರ್ಣ ವಿಫಲರಾದರೆ ಮುಂದೇನು? ಎಂಬ ಪ್ರಶ್ನೆಯೊಂದು ಮೂಡುವುದು ಸಹಜ. ಇದಕ್ಕೆ ಉತ್ತರ ತಾತ್ಕಾಲಿಕ ತಂಡದ ಘೋಷಣೆ.

ಅಂದರೆ ಏಕದಿನ ವಿಶ್ವಕಪ್​ಗೆ ಸದ್ಯ ತಾತ್ಕಾಲಿಕ ತಂಡವನ್ನು ಘೋಷಿಸಲಾಗುತ್ತದೆ. ಇದಾದ ಬಳಿಕ ಆ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಇದಕ್ಕೂ ಕೂಡ ಗಡುವು ವಿಧಿಸಲಾಗಿದ್ದು, ಅದರಂತೆ ಏಕದಿನ ವಿಶ್ವಕಪ್ ಆರಂಭಕ್ಕೂ ಒಂದು ವಾರಗಳ ಮುಂಚಿತವಾಗಿ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಬಹುದು.

ಹಾಗೆಯೇ ಸೆಪ್ಟೆಂಬರ್ 28 ರ ಬಳಿಕ 15 ಸದಸ್ಯರ ತಂಡದಲ್ಲಿ ಯಾವುದೇ ಬದಲಾವಣೆ ಮಾಡುವಂತಿಲ್ಲ. ಒಂದು ವೇಳೆ ಗಾಯದ ಸಮಸ್ಯೆ ಅಥವಾ ಇನ್ನಿತರ ಮುಖ್ಯ ಕಾರಣಗಳಿಗಾಗಿ ಬದಲಿ ಆಟಗಾರನನ್ನು ಆಯ್ಕೆ ಮಾಡಬಹುದು. ಆದರೆ ಅದಕ್ಕೂ ಮುನ್ನ ಐಸಿಸಿಯ ಟೆಕ್ನಿಕಲ್ ಕಮಿಟಿಯ ಅನುಮತಿ ಪಡೆಯಬೇಕಾಗುತ್ತದೆ. ಹೀಗಾಗಿಯೇ ಏಷ್ಯಾಕಪ್​ನಲ್ಲಿ ಕಳಪೆ ಪ್ರದರ್ಶನ ನೀಡಿದ ಆಟಗಾರರಿಗೆ ಏಕದಿನ ವಿಶ್ವಕಪ್​ ತಂಡದಿಂದ ಗೇಟ್ ಪಾಸ್ ಸಿಗಬಹುದು.

ಇದನ್ನೂ ಓದಿ: Asia Cup 2023 Schedule: ಏಷ್ಯಾಕಪ್ ವೇಳಾಪಟ್ಟಿ ಪ್ರಕಟ

ಏಷ್ಯಾಕಪ್​ಗಾಗಿ​ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).

ಬ್ರಹ್ಮೋತ್ಸವದಲ್ಲಿ ಪಾಲ್ಗೊಳ್ಳುವ ಭಕ್ತಾರಿಗೆ ಮೊದಲಬಾರಿಗೆ ದಾಸೋಹ ವ್ಯವಸ್ಥೆ
ಬ್ರಹ್ಮೋತ್ಸವದಲ್ಲಿ ಪಾಲ್ಗೊಳ್ಳುವ ಭಕ್ತಾರಿಗೆ ಮೊದಲಬಾರಿಗೆ ದಾಸೋಹ ವ್ಯವಸ್ಥೆ
ರಚಿತಾ ರಾಮ್ ಹಾಡೋದನ್ನ ನೋಡಿದ್ದೀರಾ? ಇಲ್ಲಿದೆ ಅಪರೂಪದ ವಿಡಿಯೋ
ರಚಿತಾ ರಾಮ್ ಹಾಡೋದನ್ನ ನೋಡಿದ್ದೀರಾ? ಇಲ್ಲಿದೆ ಅಪರೂಪದ ವಿಡಿಯೋ
ಕೇಂದ್ರ ರೂಪಿಸುವ ಕಾನೂನನ್ನು ರಾಜ್ಯಗಳು ಜಾರಿಮಾಡಬೇಕು: ಪ್ರಲ್ಹಾದ್ ಜೋಶಿ
ಕೇಂದ್ರ ರೂಪಿಸುವ ಕಾನೂನನ್ನು ರಾಜ್ಯಗಳು ಜಾರಿಮಾಡಬೇಕು: ಪ್ರಲ್ಹಾದ್ ಜೋಶಿ
ಬ್ರೆಜಿಲ್​ನಲ್ಲಿ ಆಕಾಶದಿಂದ ನೇರವಾಗಿ ರಸ್ತೆಗೆ ಇಳಿದ ವಿಮಾನ
ಬ್ರೆಜಿಲ್​ನಲ್ಲಿ ಆಕಾಶದಿಂದ ನೇರವಾಗಿ ರಸ್ತೆಗೆ ಇಳಿದ ವಿಮಾನ
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್, ವಿಡಿಯೋ ವೈರಲ್
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್, ವಿಡಿಯೋ ವೈರಲ್
ಉತ್ತರಾಖಂಡ: ಹೊತ್ತಿ ಉರಿದ ರಾಸಾಯನಿಕ ಕಾರ್ಖಾನೆ, ಹಲವರು ಸಿಲುಕಿರುವ ಶಂಕೆ
ಉತ್ತರಾಖಂಡ: ಹೊತ್ತಿ ಉರಿದ ರಾಸಾಯನಿಕ ಕಾರ್ಖಾನೆ, ಹಲವರು ಸಿಲುಕಿರುವ ಶಂಕೆ
ಅಕ್ಷರಾಭ್ಯಾಸಕ್ಕೆ ಯಾವ ದಿನ ಶುಭ ಮತ್ತು ಹೇಗೆ ಮಾಡಿಸಬೇಕು?
ಅಕ್ಷರಾಭ್ಯಾಸಕ್ಕೆ ಯಾವ ದಿನ ಶುಭ ಮತ್ತು ಹೇಗೆ ಮಾಡಿಸಬೇಕು?
Daily Horoscope: ರಾಜಕೀಯ ವ್ಯಕ್ತಿಗಳಿಗೆ ಇಂದು ಉತ್ತಮ ದಿನ
Daily Horoscope: ರಾಜಕೀಯ ವ್ಯಕ್ತಿಗಳಿಗೆ ಇಂದು ಉತ್ತಮ ದಿನ
ಧ್ರುವ ಸರ್ಜಾ ಫ್ಯಾನ್ಸ್ ರೀತಿಯೇ ಪ್ರಥಮ್ ಅಭಿಮಾನಿಗಳಿಂದ ವಿಚಿತ್ರ ಹಾಡು
ಧ್ರುವ ಸರ್ಜಾ ಫ್ಯಾನ್ಸ್ ರೀತಿಯೇ ಪ್ರಥಮ್ ಅಭಿಮಾನಿಗಳಿಂದ ವಿಚಿತ್ರ ಹಾಡು
ಮೆಟ್ರೋ ಕಂಬಗಳು, ಐತಿಹಾಸಿಕ ಕಟ್ಟಡಗಳಿಗೂ ದೀಪಾಲಂಕಾರ: ಡಿಕೆ ಶಿವಕುಮಾರ್
ಮೆಟ್ರೋ ಕಂಬಗಳು, ಐತಿಹಾಸಿಕ ಕಟ್ಟಡಗಳಿಗೂ ದೀಪಾಲಂಕಾರ: ಡಿಕೆ ಶಿವಕುಮಾರ್