AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐವರಿಲ್ಲ… ಈಗ ಭಾರತವನ್ನು ಸೋಲಿಸುವುದು ತುಂಬಾ ಸುಲಭ ಎಂದ ಪಾಕ್ ಕ್ರಿಕೆಟಿಗ

Asia Cup 2025: ಏಷ್ಯಾಕಪ್ ಟಿ20 ಟೂರ್ನಿಯು ಸೆಪ್ಟೆಂಬರ್ 9 ರಿಂದ ಶುರುವಾಗಲಿದೆ. ಭಾರತ ತಂಡವು ಸೆಪ್ಟೆಂಬರ್ 10 ರಂದು ಯುಎಇ ವಿರುದ್ಧ ಕಣಕ್ಕಿಳಿಯುವ ಮೂಲಕ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ. ಅಲ್ಲದೆ ಸೆಪ್ಟೆಂಬರ್ 14 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ತಂಡವನ್ನು ಎದುರಿಸಲಿದೆ.

ಐವರಿಲ್ಲ... ಈಗ ಭಾರತವನ್ನು ಸೋಲಿಸುವುದು ತುಂಬಾ ಸುಲಭ ಎಂದ ಪಾಕ್ ಕ್ರಿಕೆಟಿಗ
Team India - Ahmed Shezad
ಝಾಹಿರ್ ಯೂಸುಫ್
|

Updated on: Sep 06, 2025 | 10:04 AM

Share

ಈ ಬಾರಿಯ ಏಷ್ಯಾಕಪ್​ನಲ್ಲಿ ಟೀಮ್ ಇಂಡಿಯಾವನ್ನು ಪಾಕಿಸ್ತಾನ್ ಸುಲಭವಾಗಿ ಸೋಲಿಸಬಹುದು. ಏಕೆಂದರೆ ಭಾರತ ತಂಡದಲ್ಲಿ ಐವರು ಪ್ರಮುಖ ಆಟಗಾರರಿಲ್ಲ. ಹೀಗಾಗಿ ಇನ್ಮುಂದೆ ಟೀಮ್ ಇಂಡಿಯಾ ಸೋಲಿಸುವುದು ತುಂಬಾ ಸುಲಭ… ಹೀಗಂದಿರುವುದು ಮತ್ಯಾರೂ ಅಲ್ಲ, ಪಾಕಿಸ್ತಾನ್ ಕ್ರಿಕೆಟಿಗ ಅಹ್ಮದ್ ಶೆಹ್​ಝಾದ್.

ಭಾರತ ತಂಡದ ದಿಗ್ಗಜ ಕ್ರಿಕೆಟಿಗರು ಈಗಾಗಲೇ ನಿವೃತ್ತಿ ಘೋಷಿಸಿದ್ದಾರೆ. ಮಹೇಂದ್ರ ಸಿಂಗ್ ಧೋನಿ, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಪ್ರಸ್ತುತ ತಂಡದಲ್ಲಿಲ್ಲ. ಇತ್ತ ಪ್ರಮುಖ ಆಟಗಾರರು ಇಲ್ಲದ ಕಾರಣ ಭಾರತ ತಂಡವನ್ನು ಸೋಲಿಸುವುದು ತುಂಬಾ ಸುಲಭ ಎಂದು ಅಹ್ಮದ್ ಶೆಹ್​ಝಾದ್ ಹೇಳಿದ್ದಾರೆ.

ಅಹ್ಮದ್ ಶೆಹ್​ಝಾದ್ ಪ್ರಕಾರ, ಪಾಕಿಸ್ತಾನ್ ವಿರುದ್ಧ ಟೀಮ್ ಇಂಡಿಯಾ ಗೆಲ್ಲುವಲ್ಲಿ ಧೋನಿ, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಅಶ್ವಿನ್ ಹಾಗೂ ಜಡೇಜಾ ಪ್ರಮುಖ ಪಾತ್ರವಹಿಸುತ್ತಿದ್ದರು. ಇದೀಗ ಈ ಆಟಗಾರರೆಲ್ಲರೂ ತಂಡದಿಂದ ಹೊರಗುಳಿದಿದ್ದಾರೆ.

ಇಲ್ಲಿ ಧೋನಿ ಹಾಗೂ ಅಶ್ವಿನ್ ನಿವೃತ್ತಿ ಘೋಷಿಸಿದರೆ, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ರವೀಂದ್ರ ಜಡೇಜಾ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಹೀಗಾಗಿ ಈ ಐವರು ಪ್ರಮುಖ ಆಟಗಾರರು ಏಷ್ಯಾಕಪ್​ ಟೂರ್ನಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ.

ಇದೀಗ ಯುವ ಪಡೆಯನ್ನು ಒಳಗೊಂಡಿರುವ ಟೀಮ್ ಇಂಡಿಯಾವನ್ನು ಸೋಲಿಸುವುದು ನನ್ನ ಪ್ರಕಾರ ತುಂಬಾ ಸುಲಭ. ಅದರಂತೆ ಮುಂದಿನ ಏಷ್ಯಾಕಪ್​ನಲ್ಲಿ ಪಾಕಿಸ್ತಾನ್ ತಂಡ ಟೀಮ್ ಇಂಡಿಯಾವನ್ನು ಬಗ್ಗು ಬಡಿಯಲಿದೆ ಎಂದು ಅಹ್ಮದ್ ಶೆಹ್​ಝಾದ್ ಅಭಿಪ್ರಾಯಪಟ್ಟಿದ್ದಾರೆ.

ಭಾರತ-ಪಾಕ್ ಪಂದ್ಯ ಯಾವಾಗ?

ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವು ಸೆಪ್ಟೆಂಬರ್ 14 ರಂದು ನಡೆಯಲಿದೆ. ದುಬೈನಲ್ಲಿ ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯಕ್ಕಾಗಿ ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದೆ. ಇದೀಗ ಈ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಸುಲಭವಾಗಿ ಜಯಗಳಿಸಲಿದೆ ಎಂದು ಅಹ್ಮದ್ ಶೆಹ್​ಝಾದ್ ಭವಿಷ್ಯ ನುಡಿದಿದ್ದಾರೆ.

ಏಷ್ಯಾಕಪ್​ಗೆ ಭಾರತ-ಪಾಕಿಸ್ತಾನ್ ತಂಡಗಳು:

ಭಾರತ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್.

ಇದನ್ನೂ ಓದಿಬರೋಬ್ಬರಿ 463 ರನ್​ಗಳು… ವಿಶ್ವ ದಾಖಲೆ ನಿರ್ಮಿಸಿದ ಮ್ಯಾಥ್ಯೂ ಬ್ರೀಟ್ಝ್​ಕೆ

ಪಾಕಿಸ್ತಾನ್ ತಂಡ: ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಫಹೀಮ್ ಅಶ್ರಫ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಹಸನ್ ಅಲಿ, ಹಸನ್ ನವಾಝ್, ಹುಸೇನ್ ತಲತ್, ಖುಷ್ದಿಲ್ ಶಾ, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ಸಾಹಿಬ್ಝಾದ್ ಫರ್ಹಾನ್, ಶಾಹೀನ್ ಅಫ್ರಿದಿ, ಸಲ್ಮಾನ್ ಮಿರ್ಝಾ, ಸೈಮ್ ಅಯ್ಯೂಬ್ ಮತ್ತು ಸುಫಿಯಾನ್ ಮುಖಿಮ್.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ