AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐವರಿಲ್ಲ… ಈಗ ಭಾರತವನ್ನು ಸೋಲಿಸುವುದು ತುಂಬಾ ಸುಲಭ ಎಂದ ಪಾಕ್ ಕ್ರಿಕೆಟಿಗ

Asia Cup 2025: ಏಷ್ಯಾಕಪ್ ಟಿ20 ಟೂರ್ನಿಯು ಸೆಪ್ಟೆಂಬರ್ 9 ರಿಂದ ಶುರುವಾಗಲಿದೆ. ಭಾರತ ತಂಡವು ಸೆಪ್ಟೆಂಬರ್ 10 ರಂದು ಯುಎಇ ವಿರುದ್ಧ ಕಣಕ್ಕಿಳಿಯುವ ಮೂಲಕ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ. ಅಲ್ಲದೆ ಸೆಪ್ಟೆಂಬರ್ 14 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ತಂಡವನ್ನು ಎದುರಿಸಲಿದೆ.

ಐವರಿಲ್ಲ... ಈಗ ಭಾರತವನ್ನು ಸೋಲಿಸುವುದು ತುಂಬಾ ಸುಲಭ ಎಂದ ಪಾಕ್ ಕ್ರಿಕೆಟಿಗ
Team India - Ahmed Shezad
ಝಾಹಿರ್ ಯೂಸುಫ್
|

Updated on: Sep 06, 2025 | 10:04 AM

Share

ಈ ಬಾರಿಯ ಏಷ್ಯಾಕಪ್​ನಲ್ಲಿ ಟೀಮ್ ಇಂಡಿಯಾವನ್ನು ಪಾಕಿಸ್ತಾನ್ ಸುಲಭವಾಗಿ ಸೋಲಿಸಬಹುದು. ಏಕೆಂದರೆ ಭಾರತ ತಂಡದಲ್ಲಿ ಐವರು ಪ್ರಮುಖ ಆಟಗಾರರಿಲ್ಲ. ಹೀಗಾಗಿ ಇನ್ಮುಂದೆ ಟೀಮ್ ಇಂಡಿಯಾ ಸೋಲಿಸುವುದು ತುಂಬಾ ಸುಲಭ… ಹೀಗಂದಿರುವುದು ಮತ್ಯಾರೂ ಅಲ್ಲ, ಪಾಕಿಸ್ತಾನ್ ಕ್ರಿಕೆಟಿಗ ಅಹ್ಮದ್ ಶೆಹ್​ಝಾದ್.

ಭಾರತ ತಂಡದ ದಿಗ್ಗಜ ಕ್ರಿಕೆಟಿಗರು ಈಗಾಗಲೇ ನಿವೃತ್ತಿ ಘೋಷಿಸಿದ್ದಾರೆ. ಮಹೇಂದ್ರ ಸಿಂಗ್ ಧೋನಿ, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಪ್ರಸ್ತುತ ತಂಡದಲ್ಲಿಲ್ಲ. ಇತ್ತ ಪ್ರಮುಖ ಆಟಗಾರರು ಇಲ್ಲದ ಕಾರಣ ಭಾರತ ತಂಡವನ್ನು ಸೋಲಿಸುವುದು ತುಂಬಾ ಸುಲಭ ಎಂದು ಅಹ್ಮದ್ ಶೆಹ್​ಝಾದ್ ಹೇಳಿದ್ದಾರೆ.

ಅಹ್ಮದ್ ಶೆಹ್​ಝಾದ್ ಪ್ರಕಾರ, ಪಾಕಿಸ್ತಾನ್ ವಿರುದ್ಧ ಟೀಮ್ ಇಂಡಿಯಾ ಗೆಲ್ಲುವಲ್ಲಿ ಧೋನಿ, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಅಶ್ವಿನ್ ಹಾಗೂ ಜಡೇಜಾ ಪ್ರಮುಖ ಪಾತ್ರವಹಿಸುತ್ತಿದ್ದರು. ಇದೀಗ ಈ ಆಟಗಾರರೆಲ್ಲರೂ ತಂಡದಿಂದ ಹೊರಗುಳಿದಿದ್ದಾರೆ.

ಇಲ್ಲಿ ಧೋನಿ ಹಾಗೂ ಅಶ್ವಿನ್ ನಿವೃತ್ತಿ ಘೋಷಿಸಿದರೆ, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ರವೀಂದ್ರ ಜಡೇಜಾ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಹೀಗಾಗಿ ಈ ಐವರು ಪ್ರಮುಖ ಆಟಗಾರರು ಏಷ್ಯಾಕಪ್​ ಟೂರ್ನಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ.

ಇದೀಗ ಯುವ ಪಡೆಯನ್ನು ಒಳಗೊಂಡಿರುವ ಟೀಮ್ ಇಂಡಿಯಾವನ್ನು ಸೋಲಿಸುವುದು ನನ್ನ ಪ್ರಕಾರ ತುಂಬಾ ಸುಲಭ. ಅದರಂತೆ ಮುಂದಿನ ಏಷ್ಯಾಕಪ್​ನಲ್ಲಿ ಪಾಕಿಸ್ತಾನ್ ತಂಡ ಟೀಮ್ ಇಂಡಿಯಾವನ್ನು ಬಗ್ಗು ಬಡಿಯಲಿದೆ ಎಂದು ಅಹ್ಮದ್ ಶೆಹ್​ಝಾದ್ ಅಭಿಪ್ರಾಯಪಟ್ಟಿದ್ದಾರೆ.

ಭಾರತ-ಪಾಕ್ ಪಂದ್ಯ ಯಾವಾಗ?

ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವು ಸೆಪ್ಟೆಂಬರ್ 14 ರಂದು ನಡೆಯಲಿದೆ. ದುಬೈನಲ್ಲಿ ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯಕ್ಕಾಗಿ ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದೆ. ಇದೀಗ ಈ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಸುಲಭವಾಗಿ ಜಯಗಳಿಸಲಿದೆ ಎಂದು ಅಹ್ಮದ್ ಶೆಹ್​ಝಾದ್ ಭವಿಷ್ಯ ನುಡಿದಿದ್ದಾರೆ.

ಏಷ್ಯಾಕಪ್​ಗೆ ಭಾರತ-ಪಾಕಿಸ್ತಾನ್ ತಂಡಗಳು:

ಭಾರತ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್.

ಇದನ್ನೂ ಓದಿಬರೋಬ್ಬರಿ 463 ರನ್​ಗಳು… ವಿಶ್ವ ದಾಖಲೆ ನಿರ್ಮಿಸಿದ ಮ್ಯಾಥ್ಯೂ ಬ್ರೀಟ್ಝ್​ಕೆ

ಪಾಕಿಸ್ತಾನ್ ತಂಡ: ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಫಹೀಮ್ ಅಶ್ರಫ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಹಸನ್ ಅಲಿ, ಹಸನ್ ನವಾಝ್, ಹುಸೇನ್ ತಲತ್, ಖುಷ್ದಿಲ್ ಶಾ, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ಸಾಹಿಬ್ಝಾದ್ ಫರ್ಹಾನ್, ಶಾಹೀನ್ ಅಫ್ರಿದಿ, ಸಲ್ಮಾನ್ ಮಿರ್ಝಾ, ಸೈಮ್ ಅಯ್ಯೂಬ್ ಮತ್ತು ಸುಫಿಯಾನ್ ಮುಖಿಮ್.

Follow Us
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!