AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK Weather Report: ಭಾರತ-ಪಾಕಿಸ್ತಾನ ಹೈವೋಲ್ಟೇಜ್ ವಿಶ್ವಕಪ್ ಪಂದ್ಯಕ್ಕೆ ಮಳೆ ಅಡ್ಡಿ?: ಇಲ್ಲಿದೆ ಹವಾಮಾನ ವರದಿ

India vs Pakistan ODI World Cup 2023, Ahmedabad Weather Forecast: ಶನಿವಾರ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಐಸಿಸಿ ಪುರುಷರ ಏಕದಿನ ವಿಶ್ವಕಪ್ 2023 ರ ಭಾರತ ಮತ್ತು ಪಾಕಿಸ್ತಾನ ಪಂದ್ಯ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು, ಟಾಸ್ ಮಧ್ಯಾಹ್ನ 1:30 ಕ್ಕೆ ನಡೆಯಲಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಮಳೆಯ ಕಾಟ ಇದೆಯೇ?. ಇಲ್ಲಿದೆ ನೋಡಿ ಅಹ್ಮದಾಬಾದ್ ಹವಾಮಾನ ವರದಿ.

IND vs PAK Weather Report: ಭಾರತ-ಪಾಕಿಸ್ತಾನ ಹೈವೋಲ್ಟೇಜ್ ವಿಶ್ವಕಪ್ ಪಂದ್ಯಕ್ಕೆ ಮಳೆ ಅಡ್ಡಿ?: ಇಲ್ಲಿದೆ ಹವಾಮಾನ ವರದಿ
IND vs PAK World Cup Weather Report
Follow us
Vinay Bhat
|

Updated on: Oct 13, 2023 | 10:47 PM

ಭಾರತ ಮತ್ತು ಪಾಕಿಸ್ತಾನ (India vs Pakistan) ಶನಿವಾರ (ಅಕ್ಟೋಬರ್ 14) ಐಸಿಸಿ ಪುರುಷರ ಏಕದಿನ ವಿಶ್ವಕಪ್ 2023 ರ ತಮ್ಮ ಮೂರನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಭಾರತ ಮತ್ತು ಪಾಕಿಸ್ತಾನವು ಒಂದು ದಶಕಕ್ಕೂ ಹೆಚ್ಚು ಕಾಲ ಭಾರತದ ನೆಲದಲ್ಲಿ ಪರಸ್ಪರ ಏಕದಿನ ಪಂದ್ಯವನ್ನು ಆಡಿಲ್ಲ, ಆದ್ದರಿಂದ ಶನಿವಾರದ ಪಂದ್ಯದ ಮೇಲೆ ಎಲ್ಲರ ಕಣ್ಣಿದೆ. ಆದರೆ, ಈ ಪಂದ್ಯಕ್ಕೆ ಮಳೆಯ ಕಾಟ ಇದೆಯೇ?. ಇಲ್ಲಿದೆ ನೋಡಿ ಅಹ್ಮದಾಬಾದ್ ಹವಾಮಾನ ವರದಿ.

ಅಹ್ಮದಾಬಾದ್​ನಲ್ಲಿ ನಡೆಯಲಿರುವ ಪಂದ್ಯದ ಮೂಲಕ ಈ ವರ್ಷದಲ್ಲಿ ಭಾರತ-ಪಾಕ್ ತಂಡಗಳು ಏಕದಿನದಲ್ಲಿ ಮೂರನೇ ಬಾರಿ ಮುಖಾಮುಖಿಯಾಗುತ್ತಿದೆ. ಶ್ರೀಲಂಕಾದಲ್ಲಿ ನಡೆದ ಏಷ್ಯಾಕಪ್ 2023 ರ ಸಂದರ್ಭದಲ್ಲಿ ಎರಡು ಬಾರಿ ಸೆಣೆಸಾಟ ನಡೆಸಿದ್ದವು. ಆದರೆ ಈ ಎರಡೂ ಪಂದ್ಯಗಳಿಗೆ ಮಳೆ ಅಡ್ಡಿಯಾಯಿತು. ಆದಾಗ್ಯೂ, ಶನಿವಾರ (ಅಕ್ಟೋಬರ್ 14) ಅಹ್ಮದಾಬಾದ್​ನಲ್ಲಿ ಮಳೆಯಾಗುವ ಸಾಧ್ಯತೆಗಳು ಬಹುತೇಕ ಕಡಿಮೆ.

ಭಾರತ- ಪಾಕ್ ಪಂದ್ಯ ನಡೆಯುತ್ತಿರುವ ಮೋದಿ ಸ್ಟೇಡಿಯಂ ವಿಶೇಷತೆಗಳೇನು ಗೊತ್ತಾ?

ಇದನ್ನೂ ಓದಿ
Image
ಪಾಕ್ ವಿರುದ್ಧ ಗಿಲ್ ಆಡ್ತಾರಾ ಪ್ರಶ್ನೆಗೆ ಹಿಟ್​ಮ್ಯಾನ್ ಏನಂದ್ರು ನೋಡಿ
Image
ಗಿಲ್ ಆಡುವುದು ಅನುಮಾನ: ಪಾಕ್ ವಿರುದ್ಧದ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ XI
Image
ಪಾಕಿಸ್ತಾನ ವಿರುದ್ಧ ಹೈವೋಲ್ಟೇಜ್ ಪಂದ್ಯ: ಅಹ್ಮದಾಬಾದ್​ಗೆ ಬಂದ ಟೀಮ್ ಇಂಡಿಯಾ
Image
ನಾಳೆಯ ಪಂದ್ಯಕ್ಕೆ ಅಭಿಮಾನಿಗಳು ನಮಗೆ ಬೆಂಬಲ ನೀಡುತ್ತಾರೆ: ಬಾಬರ್ ಅಝಂ

ಅಕ್ಯುವೆದರ್ ವರದಿಯ ಪ್ರಕಾರ, ಅಹ್ಮದಾಬಾದ್​ನಲ್ಲಿ ಹಗಲಿನಲ್ಲಿ ಶೇ. 14 ರಷ್ಟು ಮೋಡ ಕವಿದ ವಾತಾವರಣವಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿ ಶೂನ್ಯ. ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು, ಟಾಸ್ ಮಧ್ಯಾಹ್ನ 1:30 ಕ್ಕೆ ನಡೆಯಲಿದೆ. ಇದಕ್ಕೂ ಒಂದು ಗಂಟೆ ಮೊದಲು ಅಂದರೆ 12.30ಕ್ಕೆ ಮನೋರಂಜನೆ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಗ್ಗೆ 10 ಗಂಟೆಯಿಂದ ಪ್ರೇಕ್ಷಕರಿಗಾಗಿ ಕ್ರೀಡಾಂಗಣದ ಗೇಟ್‌ಗಳು ತೆರೆಯಲಿದೆ.

ಅಹ್ಮದಾಬಾದ್​ನಲ್ಲಿ ಬೆಳಿಗ್ಗೆ 10 ರ ಸುಮಾರಿಗೆ ತಾಪಮಾನವು 32 ಡಿಗ್ರಿ ಸೆಲ್ಸಿಯಸ್ ಇರುತ್ತದೆ. 45ರಷ್ಟು ಆರ್ದ್ರತೆ ಇರಲಿದ್ದು, ಗಂಟೆಗೆ 5 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಪಂದ್ಯ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದ್ದು, ಈ ವೇಳೆ ತಾಪಮಾನ ಕೊಂಚ ಇಳಿಕೆಯಾಗಲಿದ್ದು, ಆರ್ದ್ರತೆ ಶೇ. 58ರಷ್ಟಿರುವುದು ಅಭಿಮಾನಿಗಳಿಗೆ ಸಂತಸದ ಸುದ್ದಿ. ಹವಾಮಾನವು ನಂತರದಲ್ಲಿ ತಂಪಾಗಿರುತ್ತದೆ. ಮೋಡ ಕವಿದ ವಾತಾವರಣವಿದ್ದರೂ ಮಳೆಯ ಸಾಧ್ಯತೆ ಇಲ್ಲ ಎನ್ನಲಾಗಿದೆ.

ನರೇಂದ್ರ ಮೋದಿ ಸ್ಟೇಡಿಯಂ ಪಿಚ್ ವರದಿ:

ಅತಿ ದೊಡ್ಡ ಕ್ರೀಡಾಂಗಣ ಎಂಬ ಹೆಸರು ಪಡೆದುಕೊಂಡಿರುವ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್‌ ಸ್ಟೇಡಿಯಂ ಪಿಚ್‌ ಬ್ಯಾಟಿಂಗ್‌ ಸ್ನೇಹಿಯಾಗಿದೆ. ಪಂದ್ಯದ ಆರಂಭದಲ್ಲಿ ಬ್ಯಾಟಿಂಗ್‌ಗೆ ಯೋಗ್ಯವಾಗಿದ್ದರೆ, ಪಂದ್ಯ ಸಾಗುತ್ತಿದ್ದಂತೆ ಇಲ್ಲಿನ ವಿಕೆಟ್‌ ಸ್ಪಿನ್ನರ್‌ಗಳು ಪರಿಣಾಮಕಾರಿಯಾಗಲಿದ್ದಾರೆ. ಇಲ್ಲಿರುವ ಕಪ್ಪು ಮಣ್ಣಿನ ಪಿಚ್‌ಗಳು ಉತ್ತಮ ಬೌನ್ಸ್‌ನೊಂದಿಗೆ ಬೌಲರ್‌ಗಳಿಗೆ ಯೋಗ್ಯವಾಗಿದೆ. ಬ್ಯಾಟರ್‌ಗಳಿಗೆ ಆರಂಭಿಕ ಓವರ್‌ಗಳು ಸವಾಲಾಗಿರಬಹುದು. ಆಟಗಾರರು ಪರಿಸ್ಥಿತಿಗಳಿಗೆ ಹೊಂದಿಕೊಳ್ಳುವುದರಿಂದ, ಪಿಚ್ ಸ್ವಲ್ಪಮಟ್ಟಿಗೆ ಬ್ಯಾಟಿಂಗ್ ಸ್ವರ್ಗವಾಗಿ ಬದಲಾಗುತ್ತದೆ. ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಪರಿಸ್ಥಿತಿಗಳನ್ನು ಹೆಚ್ಚಿಸಲು ಇಬ್ಬನಿ ಅಂಶವು ಸಹ ಸಹಾಯ ಮಾಡುತ್ತದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು