AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NED, ICC World Cup 2023: ವಿಶ್ವಕಪ್​ನಲ್ಲಿಂದು ಲೀಗ್ ಸುತ್ತಿನ ಕೊನೆಯ ಪಂದ್ಯ: ಬೆಂಗಳೂರಿನಲ್ಲಿ ಭಾರತ-ನೆದರ್ಲೆಂಡ್ಸ್ ಮುಖಾಮುಖಿ

India vs Netherlands, ICC ODI World Cup 2023: ಭಾರತಕ್ಕೆ ನೆದರ್ಲೆಂಡ್ಸ್ ವಿರುದ್ಧದ ಇಂದಿನ ಪಂದ್ಯ ಲೆಕ್ಕಕ್ಕಿಲ್ಲದ ಕಾರಣ ಕೆಲ ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ. ನಾಯಕ ರೋಹಿತ್ ಶರ್ಮಾ, ಕುಲ್ದೀಪ್ ಯಾದವ್ ಹಾಗೂ ಜಸ್​ಪ್ರಿತ್ ಬುಮ್ರಾ ಹೊರಗುಳಿಯಬಹುದು. ಕೆಎಲ್ ರಾಹುಲ್ ನಾಯಕನಾಗಿ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ.

IND vs NED, ICC World Cup 2023: ವಿಶ್ವಕಪ್​ನಲ್ಲಿಂದು ಲೀಗ್ ಸುತ್ತಿನ ಕೊನೆಯ ಪಂದ್ಯ: ಬೆಂಗಳೂರಿನಲ್ಲಿ ಭಾರತ-ನೆದರ್ಲೆಂಡ್ಸ್ ಮುಖಾಮುಖಿ
IND vs NED
Follow us
Vinay Bhat
|

Updated on: Nov 12, 2023 | 7:01 AM

ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿಂದು ಲೀಗ್ ಸುತ್ತಿನ ಕೊನೆಯ ಪಂದ್ಯ ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಸ್ಕಾಟ್ ಎಡ್ವರ್ಡ್ಸ್ ನೇತೃತ್ವದ ನೆದರ್ಲೆಂಡ್ಸ್ (India vs Netherlands) ತಂಡಗಳು ಮುಖಾಮುಖಿ ಆಗಲಿದೆ. ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನ ಪಡೆದು ಈಗಾಗಲೇ ಸೆಮಿ ಫೈನಲ್​ಗೇರಿರುವ ಟೀಮ್ ಇಂಡಿಯಾಕ್ಕೆ ಇದೊಂದು ಔಪಚಾರಿಕ ಪಂದ್ಯ. ಇತ್ತ ನೆದರ್ಲೆಂಡ್ಸ್ ಟೂರ್ನಿಯಿಂದ ಹೊರಬಿದ್ದಾಗಿದೆ. ಹೀಗಿದ್ದರೂ ಈ ಪಂದ್ಯ ಕುತೂಹಲ ಕೆರಳಿಸಿದೆ.

ಭಾರತದಲ್ಲಿ ಬದಲಾವಣೆ?:

ಭಾರತಕ್ಕೆ ಇಂದಿನ ಪಂದ್ಯ ಲೆಕ್ಕಕ್ಕಿಲ್ಲದ ಕಾರಣ ಕೆಲ ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ. ನಾಯಕ ರೋಹಿತ್ ಶರ್ಮಾ, ಕುಲ್ದೀಪ್ ಯಾದವ್ ಹಾಗೂ ಜಸ್​ಪ್ರಿತ್ ಬುಮ್ರಾ ಹೊರಗುಳಿಯಬಹುದು. ಕೆಎಲ್ ರಾಹುಲ್ ನಾಯಕನಾಗಿ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ. ರೋಹಿತ್ ಜಾಗಕ್ಕೆ ಇಶಾನ್ ಕಿಶನ್ ಬರಬಹುದು. ಹಾಗೆಯೆ ಶಾರ್ದೂಲ್ ಥಾಕೂರ್ ಮತ್ತು ಆರ್. ಅಶ್ವಿನ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಂಡರೆ ಅಚ್ಚರಿ ಪಡಬೇಕಿಲ್ಲ. ಉಳಿದಂತೆ ತಂಡದಲ್ಲಿ ಬದಲಾವಣೆ ಅನುಮಾನ. ಫಾರ್ಮ್​ನಲ್ಲಿರುವ ವಿರಾಟ್ ಕೊಹ್ಲಿ ಬೆಂಗಳೂರಿನಲ್ಲಿ ಶತಕ ಸಿಡಿಸಿ ಸಚಿನ್ ದಾಖಲೆ ಮುರಿಯುತ್ತಾರ ನೋಡಬೇಕು.

ನೆದರ್ಲೆಂಡ್ಸ್ ತಂಡ:

ಟೂರ್ನಿಯಿಂದ ಹೊರಬಿದ್ದರೂ ಇಂದಿನ ಪಂದ್ಯ ನೆದರ್ಲೆಂಡ್ಸ್ ತಂಡಕ್ಕೆ ಮುಖ್ಯವಾಗಿದೆ. ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಸ್ಥಾನ ಪಡೆಯುವ ಡಚ್ಚರಿಗಿದೆ. ಮೂರನೇ ಜಯ ಸಾಧಿಸುವ ಮೂಲಕ ಮತ್ತು ವಿಶ್ವಕಪ್ ಪಾಯಿಂಟ್ ಪಟ್ಟಿಯಲ್ಲಿ ಅಗ್ರ 8 ರೊಳಗೆ ಸ್ಥಾನವನ್ನು ಪಡೆದುಕೊಳ್ಳುವ ಮೂಲಕ, ಚಾಂಪಿಯನ್ಸ್ ಟ್ರೋಫಿ 2025ಕ್ಕೆ ಪ್ರವೇಶ ಪಡೆಯಬಹುದು. ಡಚ್ ಪಡೆಯಲ್ಲಿ ಸಾಕಷ್ಟು ಕೌಶಲ್ಯ ಮತ್ತು ಅನುಭವಿ ಆಟಗಾರರಿದ್ದಾರೆ. ಆದರೆ, ಹೆಚ್ಚಿನವರು ಟಿ20 ಗಳಲ್ಲಿ ಆಡಿವ ಅನುಭವ ಇರುವವರು. ಏಕದಿನ ಸ್ವರೂಪದಲ್ಲಿ ಹೆಚ್ಚು ಕಣಕ್ಕಿಳಿಯಲಿಲ್ಲ. ಆದರೂ ವಿಕ್ರಂಜಿತ್ ಸಿಂಗ್, ಕಾಲಿನ್ ಅಕರ್ಮನ್, ಮ್ಯಾಕ್ಸ್, ಬಾಸ್ ಡಿ ಲೀಡೆ ಅಬ್ಬರಿಸಿದರೆ ತಂಡ ಮೊತ್ತ ಕಲೆಹಾಕಬಹುದು.

ಇದನ್ನೂ ಓದಿ
Image
ಏಕದಿನ ವಿಶ್ವಕಪ್ ಸೆಮಿಫೈನಲ್​ ವೇಳಾಪಟ್ಟಿ ಇಲ್ಲಿದೆ
Image
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಭಿಮಾನಿಗಳಿಗೆ ಆಟೋಗ್ರಾಫ್ ನೀಡಿದ ದ್ರಾವಿಡ್!
Image
6.4 ಓವರ್​ಗಳಲ್ಲಿ ವಿಶ್ವಕಪ್​ನಿಂದ ಹೊರಬಿದ್ದ ಪಾಕಿಸ್ತಾನ್..!
Image
ಕ್ರಿಸ್ ಗೇಲ್ ದಾಖಲೆ ಮುರಿದು ವಿಶ್ವ ದಾಖಲೆ ಸೃಷ್ಟಿಸುವ ಸನಿಹದಲ್ಲಿ ರೋಹಿತ್!

ತನ್ನ BMW ಕಾರಿಗೆ ಧೋನಿಯ ಆಟೋಗ್ರಾಫ್ ಹಾಕಿಸಿಕೊಂಡ ಅಭಿಮಾನಿ: ವಿಡಿಯೋ ವೈರಲ್

ಪಿಚ್ ವರದಿ

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಚಿಕ್ಕ ಕ್ರೀಡಾಂಗಣವಾಗಿದ್ದು ಬ್ಯಾಟಿಂಗ್ ಪಿಚ್​ಗೆ ಹೇಳಿಮಾಡಿಸಿದ್ದಾಗಿದೆ. ಇಲ್ಲಿ ಬೌಂಡರಿ, ಸಿಕ್ಸರ್​ಗಳ ಮಳೆಸುರಿಯುವುದು ಖಚಿತ. ಈ ಹಿಂದೆ ಈ ಮೈದಾನದಲ್ಲಿ ನಡೆದ ಪಂದ್ಯಗಳು ಸಹ ಇದಕ್ಕೆ ಸಾಕ್ಷಿಯಾಗಿವೆ. ಹೀಗಾಗಿ ಈ ಪಿಚ್ ಬ್ಯಾಟರ್‌ಗಳಿಗೆ ಉತ್ತಮ ಸ್ಕೋರ್ ಮಾಡಲು ಸಹಕಾರಿಯಾಗಿದೆ. ಸಾಮಾನ್ಯವಾಗಿ ಈ ಪಿಚ್​ನಲ್ಲಿ ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್ ಮಾಡುವುದಕ್ಕೆ ಹೆಚ್ಚು ಆಧ್ಯತೆ ನೀಡುವ ಸಾಧ್ಯತೆಗಳಿವೆ.

ಹವಾಮಾನ ವರದಿ

ಭಾನುವಾರದಂದು ಬೆಂಗಳೂರಿನಲ್ಲಿ ಭಾಗಶಃ ಬಿಸಿಲು ಮತ್ತು ಆಹ್ಲಾದಕರ ವಾತಾವರಣ ಇರುತ್ತದೆ ಎಂದು AccuWeather ಹೇಳಿದೆ. ಮಳೆಯ ಬೀಳುವ ಸಾಧ್ಯತೆಗಳು ಕೇವಲ ಮೂರು ಪ್ರತಿಶತ ಇರುವುದರಿಂದ ಮಳೆಯು ಆಟವನ್ನು ಹಾಳುಮಾಡುವ ಸಾಧ್ಯತೆಗಳಿಲ್ಲ. ತೇವಾಂಶವು ಶೇಕಡಾ 45 ರಷ್ಟಿದ್ದರೆ, ಮೋಡ ಕವಿದ ವಾತಾವರಣ ಶೇಕಡಾ 18 ರಷ್ಟಿರುತ್ತದೆ. ಇದಲ್ಲದೆ, ತಾಪಮಾನವು 16 ರಿಂದ 28 ಡಿಗ್ರಿ ಸೆಲ್ಸಿಯಸ್ ನಡುವೆ ಇರುತ್ತದೆ ಎಂದು ವರದಿಯಲ್ಲಿ ಹೇಳಿದೆ.

ಉಭಯ ತಂಡಗಳು

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್. , ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.

ನೆದರ್ಲೆಂಡ್ಸ್ ತಂಡ: ವಿಕ್ರಂಜಿತ್ ಸಿಂಗ್, ಮ್ಯಾಕ್ಸ್ ಓಡೌಡ್, ಕಾಲಿನ್ ಅಕರ್ಮನ್, ಬಾಸ್ ಡಿ ಲೀಡೆ, ತೇಜ ನಿಡಮನೂರು, ಸ್ಕಾಟ್ ಎಡ್ವರ್ಡ್ಸ್ (ನಾಯಕ), ಸೈಬ್ರಾಂಡ್ ಎಂಗೆಲ್ಬ್ರೆಕ್ಟ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ರಿಯಾನ್ ಕ್ಲೈನ್, ಆರ್ಯನ್ ದತ್, ಪಾಲ್ ವಾನ್ ಮೀಕೆರೆನ್, ವೆಸ್ಲಿ ಬೀಕ್, ಸಾಕಿಬ್ ಜುಲ್ಫಿಕರ್, ಶರೀಜ್ ಅಹ್ಮದ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ