AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಸೆಮಿಫೈನಲ್​ಗೆ ತಲುಪಲ್ಲ: ಪಾಕ್ ಕ್ರಿಕೆಟಿಗನ ಭವಿಷ್ಯ

T20 World Cup 2026: ಟಿ20 ವಿಶ್ವಕಪ್​ನ ದ್ವಿತೀಯ ಸುತ್ತಿನಲ್ಲಿ ಭಾರತ ತಂಡವು ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ಝಿಂಬಾಬ್ವೆ ತಂಡಗಳನ್ನು ಎದುರಿಸಲಿದೆ. ಈ ಪಂದ್ಯಗಳಲ್ಲಿ ಗೆದ್ದರೆ ಟೀಮ್ ಇಂಡಿಯಾ ಗ್ರೂಪ್-ಎ ಯಿಂದ ಸೆಮಿಫೈನಲ್​ಗೆ ಪ್ರವೇಶಿಸಬಹುದು. ಹೀಗಾಗಿ ದ್ವಿತೀಯ ಸುತ್ತಿನಲ್ಲಿ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದಾಗಿದೆ.

ಟೀಮ್ ಇಂಡಿಯಾ ಸೆಮಿಫೈನಲ್​ಗೆ ತಲುಪಲ್ಲ: ಪಾಕ್ ಕ್ರಿಕೆಟಿಗನ ಭವಿಷ್ಯ
Team India - Amir
ಝಾಹಿರ್ ಯೂಸುಫ್
|

Updated on: Feb 21, 2026 | 9:34 AM

Share

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನಲ್ಲಿ 4 ಪಂದ್ಯಗಳಲ್ಲೂ ಭರ್ಜರಿ ಜಯ ಸಾಧಿಸಿ ಟೀಮ್ ಇಂಡಿಯಾ ಸೂಪರ್-8 ಹಂತಕ್ಕೇರಿದೆ. ಸೂಪರ್-8 ಸುತ್ತಿನಲ್ಲಿ ಭಾರತ ತಂಡವು ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಹಾಗೂ ಝಿಂಬಾಬ್ವೆ ತಂಡಗಳನ್ನು ಎದುರಿಸಲಿದೆ. ಈ ಪಂದ್ಯಗಳಲ್ಲಿ ಗೆದ್ದರೆ ಟೀಮ್ ಇಂಡಿಯಾ ಸೆಮಿಫೈನಲ್​ಗೆ ಪ್ರವೇಶಿಸಲಿದೆ. ಆದರೆ ದ್ವಿತೀಯ ಸುತ್ತಿನಲ್ಲಿ ಗೆದ್ದು ಭಾರತ ತಂಡ ಸೆಮಿಫೈನಲ್​ಗೆ ಪ್ರವೇಶಿಸುವುದಿಲ್ಲ ಎಂದಿದ್ದಾರೆ ಪಾಕಿಸ್ತಾನ್ ತಂಡದ ಮಾಜಿ ವೇಗಿ ಮೊಹಮ್ಮದ್ ಅಮಿರ್.

ಭಾರತ ತಂಡ 2026ರ ಟಿ20 ವಿಶ್ವಕಪ್‌ನ ಸೆಮಿಫೈನಲ್‌ ತಲುಪುವುದಿಲ್ಲ ಎಂದು ಮೊಹಮ್ಮದ್ ಅಮಿರ್ ಭವಿಷ್ಯ ನುಡಿದಿದ್ದಾರೆ. ಭಾರತ ತಂಡ ಲೀಗ್ ಹಂತದಲ್ಲಿ ಅಜೇಯವಾಗಿ ಉಳಿದಿದ್ದರೂ, ಸೂಪರ್ 8 ಹಂತದಲ್ಲಿ ಹೊರಬೀಳಲಿದೆ. ಏಕೆಂದರೆ ಟೀಮ್ ಇಂಡಿಯಾ ಬ್ಯಾಟಿಂಗ್ ವೈಫಲ್ಯವನ್ನು ಅನುಭವಿಸುತ್ತಿದೆ. ಹೀಗಾಗಿ ಅವರು ಸೆಮಿಫೈನಲ್​ಗೆ ಪ್ರವೇಶಿಸುವುದಿಲ್ಲ ಎಂದಿದ್ದಾರೆ.

ಪಾಕಿಸ್ತಾನ್ ವಿರುದ್ಧದ ಪಂದ್ಯವನ್ನು ಹೊರತುಪಡಿಸಿ, ಉಳಿದೆಲ್ಲಾ ಪಂದ್ಯಗಳಲ್ಲಿ ಭಾರತದ ಬ್ಯಾಟಿಂಗ್ ಲೈನಪ್ ಕುಸಿದಿದೆ. ಅದರಲ್ಲೂ ಟೀಮ್ ಇಂಡಿಯಾ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಮೂರು ಪಂದ್ಯಗಳಲ್ಲೂ ಸೊನ್ನೆಗೆ ಔಟಾಗಿದ್ದಾರೆ. ಅಷ್ಟೇ ಅಲ್ಲದೆ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳಿಂದ ಕೂಡ ಸ್ಥಿರ ಪ್ರದರ್ಶನ ಮೂಡಿಬಂದಿಲ್ಲ.

ಇಂತಹ ಬ್ಯಾಟಿಂಗ್ ಲೈನಪ್ ಇಟ್ಟುಕೊಂಡು ಸೌತ್ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ಗೆಲ್ಲುವುದು ಅಷ್ಟು ಸುಲಭವಲ್ಲ. ಏಕೆಂದರೆ ಈ ಎರಡು ತಂಡಗಳು ಮೊದಲ ಸುತ್ತಿನಲ್ಲಿ ಸಾಂಘಿಕ ಪ್ರದರ್ಶನ ನೀಡಿದ್ದಾರೆ. ಇದೇ ಪ್ರದರ್ಶನವನ್ನು ಟೀಮ್ ಇಂಡಿಯಾ ವಿರುದ್ಧ ಕೂಡ ಮುಂದುವರೆಸಲಿದೆ ಎಂದು ಅಮಿರ್ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: T20 World Cup 2028: ಮುಂದಿನ ಟಿ20 ವಿಶ್ವಕಪ್​ಗೆ 12 ತಂಡಗಳು ಆಯ್ಕೆ

ನನ್ನ ಪ್ರಕಾರ, ಗ್ರೂಪ್-ಎ ಯಿಂದ ಸೌತ್ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್​ ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸಲಿದೆ. ಟೀಮ್ ಇಂಡಿಯಾದ ಟಿ20 ವಿಶ್ವಕಪ್ ಅಭಿಯಾನ ದ್ವಿತೀಯ ಸುತ್ತಿನಲ್ಲೇ ಮುಗಿಯಲಿದೆ ಎಂದು ಮೊಹಮ್ಮದ್ ಅಮಿರ್ ಭವಿಷ್ಯ ನುಡಿದಿದ್ದಾರೆ.

ಟಿ20 ವಿಶ್ವಕಪ್ ಟೀಮ್ ಇಂಡಿಯಾ ವೇಳಾಪಟ್ಟಿ:

ದಿನಾಂಕ ಪಂದ್ಯ ಸ್ಥಳ ಸಮಯ IST
ಫೆಬ್ರವರಿ 22 ಭಾರತ vs ಸೌತ್ ಆಫ್ರಿಕಾ ಅಹಮದಾಬಾದ್ ಸಂಜೆ 7:00 ಕ್ಕೆ
ಫೆಬ್ರವರಿ 26 ಭಾರತ vs ಝಿಂಬಾಬ್ವೆ ಚೆನ್ನೈ ಸಂಜೆ 7:00 ಕ್ಕೆ
ಮಾರ್ಚ್ 1 ಭಾರತ vs ವೆಸ್ಟ್ ಇಂಡೀಸ್ ಕೋಲ್ಕತ್ತಾ ಸಂಜೆ 7:00 ಕ್ಕೆ
Follow Us
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ