AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಸೆಮಿಫೈನಲ್​ಗೆ ತಲುಪಲ್ಲ: ಪಾಕ್ ಕ್ರಿಕೆಟಿಗನ ಭವಿಷ್ಯ

T20 World Cup 2026: ಟಿ20 ವಿಶ್ವಕಪ್​ನ ದ್ವಿತೀಯ ಸುತ್ತಿನಲ್ಲಿ ಭಾರತ ತಂಡವು ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ಝಿಂಬಾಬ್ವೆ ತಂಡಗಳನ್ನು ಎದುರಿಸಲಿದೆ. ಈ ಪಂದ್ಯಗಳಲ್ಲಿ ಗೆದ್ದರೆ ಟೀಮ್ ಇಂಡಿಯಾ ಗ್ರೂಪ್-ಎ ಯಿಂದ ಸೆಮಿಫೈನಲ್​ಗೆ ಪ್ರವೇಶಿಸಬಹುದು. ಹೀಗಾಗಿ ದ್ವಿತೀಯ ಸುತ್ತಿನಲ್ಲಿ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದಾಗಿದೆ.

ಟೀಮ್ ಇಂಡಿಯಾ ಸೆಮಿಫೈನಲ್​ಗೆ ತಲುಪಲ್ಲ: ಪಾಕ್ ಕ್ರಿಕೆಟಿಗನ ಭವಿಷ್ಯ
Team India - Amir
ಝಾಹಿರ್ ಯೂಸುಫ್
|

Updated on: Feb 21, 2026 | 9:34 AM

Share

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನಲ್ಲಿ 4 ಪಂದ್ಯಗಳಲ್ಲೂ ಭರ್ಜರಿ ಜಯ ಸಾಧಿಸಿ ಟೀಮ್ ಇಂಡಿಯಾ ಸೂಪರ್-8 ಹಂತಕ್ಕೇರಿದೆ. ಸೂಪರ್-8 ಸುತ್ತಿನಲ್ಲಿ ಭಾರತ ತಂಡವು ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಹಾಗೂ ಝಿಂಬಾಬ್ವೆ ತಂಡಗಳನ್ನು ಎದುರಿಸಲಿದೆ. ಈ ಪಂದ್ಯಗಳಲ್ಲಿ ಗೆದ್ದರೆ ಟೀಮ್ ಇಂಡಿಯಾ ಸೆಮಿಫೈನಲ್​ಗೆ ಪ್ರವೇಶಿಸಲಿದೆ. ಆದರೆ ದ್ವಿತೀಯ ಸುತ್ತಿನಲ್ಲಿ ಗೆದ್ದು ಭಾರತ ತಂಡ ಸೆಮಿಫೈನಲ್​ಗೆ ಪ್ರವೇಶಿಸುವುದಿಲ್ಲ ಎಂದಿದ್ದಾರೆ ಪಾಕಿಸ್ತಾನ್ ತಂಡದ ಮಾಜಿ ವೇಗಿ ಮೊಹಮ್ಮದ್ ಅಮಿರ್.

ಭಾರತ ತಂಡ 2026ರ ಟಿ20 ವಿಶ್ವಕಪ್‌ನ ಸೆಮಿಫೈನಲ್‌ ತಲುಪುವುದಿಲ್ಲ ಎಂದು ಮೊಹಮ್ಮದ್ ಅಮಿರ್ ಭವಿಷ್ಯ ನುಡಿದಿದ್ದಾರೆ. ಭಾರತ ತಂಡ ಲೀಗ್ ಹಂತದಲ್ಲಿ ಅಜೇಯವಾಗಿ ಉಳಿದಿದ್ದರೂ, ಸೂಪರ್ 8 ಹಂತದಲ್ಲಿ ಹೊರಬೀಳಲಿದೆ. ಏಕೆಂದರೆ ಟೀಮ್ ಇಂಡಿಯಾ ಬ್ಯಾಟಿಂಗ್ ವೈಫಲ್ಯವನ್ನು ಅನುಭವಿಸುತ್ತಿದೆ. ಹೀಗಾಗಿ ಅವರು ಸೆಮಿಫೈನಲ್​ಗೆ ಪ್ರವೇಶಿಸುವುದಿಲ್ಲ ಎಂದಿದ್ದಾರೆ.

ಪಾಕಿಸ್ತಾನ್ ವಿರುದ್ಧದ ಪಂದ್ಯವನ್ನು ಹೊರತುಪಡಿಸಿ, ಉಳಿದೆಲ್ಲಾ ಪಂದ್ಯಗಳಲ್ಲಿ ಭಾರತದ ಬ್ಯಾಟಿಂಗ್ ಲೈನಪ್ ಕುಸಿದಿದೆ. ಅದರಲ್ಲೂ ಟೀಮ್ ಇಂಡಿಯಾ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಮೂರು ಪಂದ್ಯಗಳಲ್ಲೂ ಸೊನ್ನೆಗೆ ಔಟಾಗಿದ್ದಾರೆ. ಅಷ್ಟೇ ಅಲ್ಲದೆ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳಿಂದ ಕೂಡ ಸ್ಥಿರ ಪ್ರದರ್ಶನ ಮೂಡಿಬಂದಿಲ್ಲ.

ಇಂತಹ ಬ್ಯಾಟಿಂಗ್ ಲೈನಪ್ ಇಟ್ಟುಕೊಂಡು ಸೌತ್ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ಗೆಲ್ಲುವುದು ಅಷ್ಟು ಸುಲಭವಲ್ಲ. ಏಕೆಂದರೆ ಈ ಎರಡು ತಂಡಗಳು ಮೊದಲ ಸುತ್ತಿನಲ್ಲಿ ಸಾಂಘಿಕ ಪ್ರದರ್ಶನ ನೀಡಿದ್ದಾರೆ. ಇದೇ ಪ್ರದರ್ಶನವನ್ನು ಟೀಮ್ ಇಂಡಿಯಾ ವಿರುದ್ಧ ಕೂಡ ಮುಂದುವರೆಸಲಿದೆ ಎಂದು ಅಮಿರ್ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: T20 World Cup 2028: ಮುಂದಿನ ಟಿ20 ವಿಶ್ವಕಪ್​ಗೆ 12 ತಂಡಗಳು ಆಯ್ಕೆ

ನನ್ನ ಪ್ರಕಾರ, ಗ್ರೂಪ್-ಎ ಯಿಂದ ಸೌತ್ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್​ ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸಲಿದೆ. ಟೀಮ್ ಇಂಡಿಯಾದ ಟಿ20 ವಿಶ್ವಕಪ್ ಅಭಿಯಾನ ದ್ವಿತೀಯ ಸುತ್ತಿನಲ್ಲೇ ಮುಗಿಯಲಿದೆ ಎಂದು ಮೊಹಮ್ಮದ್ ಅಮಿರ್ ಭವಿಷ್ಯ ನುಡಿದಿದ್ದಾರೆ.

ಟಿ20 ವಿಶ್ವಕಪ್ ಟೀಮ್ ಇಂಡಿಯಾ ವೇಳಾಪಟ್ಟಿ:

ದಿನಾಂಕ ಪಂದ್ಯ ಸ್ಥಳ ಸಮಯ IST
ಫೆಬ್ರವರಿ 22 ಭಾರತ vs ಸೌತ್ ಆಫ್ರಿಕಾ ಅಹಮದಾಬಾದ್ ಸಂಜೆ 7:00 ಕ್ಕೆ
ಫೆಬ್ರವರಿ 26 ಭಾರತ vs ಝಿಂಬಾಬ್ವೆ ಚೆನ್ನೈ ಸಂಜೆ 7:00 ಕ್ಕೆ
ಮಾರ್ಚ್ 1 ಭಾರತ vs ವೆಸ್ಟ್ ಇಂಡೀಸ್ ಕೋಲ್ಕತ್ತಾ ಸಂಜೆ 7:00 ಕ್ಕೆ
Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ