AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Netherlands: ಭಾರತ-ನೆದರ್​ಲೆಂಡ್ಸ್ ಪಂದ್ಯಕ್ಕೆ ಮಳೆಯ ಕಾಟ?: ಸಿಡ್ನಿ ಹವಾಮಾನ ವರದಿ ಇಲ್ಲಿದೆ ನೋಡಿ

Sydney Weather Report, IND vs NED: ಟಿ20 ವಿಶ್ವಕಪ್​ನಲ್ಲಿ ಮಧ್ಯಾಹ್ನ 12:30ಕ್ಕೆ ಆರಂಭವಾಗಲಿರುವ ಪಂದ್ಯದಲ್ಲಿ ಭಾರತ ಹಾಗೂ ನೆದರ್​ಲೆಂಡ್ಸ್ ತಂಡ ಮುಖಾಮುಖಿ ಆಗುತ್ತಿದೆ. ಹಾಗಾದರೆ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವ ಸಾಧ್ಯತೆ ಇದೆಯೇ?, ಸಿಡ್ನಿ ಹವಾಮಾನ ಹೇಗಿದೆ? ಎಂಬುದನ್ನು ನೋಡೋಣ.

India vs Netherlands: ಭಾರತ-ನೆದರ್​ಲೆಂಡ್ಸ್ ಪಂದ್ಯಕ್ಕೆ ಮಳೆಯ ಕಾಟ?: ಸಿಡ್ನಿ ಹವಾಮಾನ ವರದಿ ಇಲ್ಲಿದೆ ನೋಡಿ
sydney cricket ground weather
TV9 Web
| Edited By: |

Updated on:Oct 27, 2022 | 8:38 AM

Share

ಐಸಿಸಿ ಟಿ20 ವಿಶ್ವಕಪ್​ನಲ್ಲಿಂದು (T20 Word Cup) ಮತ್ತೊಂದು ರೋಚಕ ಕದನ ನಡೆಯಲದೆ. ಮಧ್ಯಾಹ್ನ 12:30ಕ್ಕೆ ಆರಂಭವಾಗಲಿರುವ ಪಂದ್ಯದಲ್ಲಿ ಭಾರತ ಹಾಗೂ ನೆದರ್​ಲೆಂಡ್ಸ್ (India vs Netherlands) ತಂಡ ಮುಖಾಮುಖಿ ಆಗುತ್ತಿದೆ. ಈಗಾಗಲೇ ಪಾಕಿಸ್ತಾನ ವಿರುದ್ಧ ಗೆದ್ದು ಆತ್ಮವಿಶ್ವಾಸದಲ್ಲಿರುವ ಟೀಮ್ ಇಂಡಿಯಾ ಮತ್ತೊಂದು ಜಯ ಸಾಧಿಸಿ ಟೇಬಲ್ ಟಾಪರ್ ಮೇಲೆ ಕಣ್ಣಿಟ್ಟಿದ್ದರೆ, ಅತ್ತ ಬಾಂಗ್ಲಾ ಎದುರು ಸೋತ ನೆದರ್​ಲೆಂಡ್ಸ್ ಚೊಚ್ಚಲ ಗೆಲುವನ್ನು ಎದುರು ನೋಡುತ್ತಿದೆ. ರೋಹಿತ್ ಪಡೆ ನೆದರ್​ಲೆಂಡ್ಸ್ ತಂಡವನ್ನು ಹಗುರವಾಗಿ ಪರಿಗಣಿಸದೆ ಗೇಮ್ ಪ್ಲಾನ್ ರೂಪಿಸುತ್ತಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಸಿಡ್ನಿ ಕ್ರಿಕೆಟ್ ಗ್ರೌಂಡ್ (Sydney Cricket Ground) ಸಾಕ್ಷಿಯಾಗಲಿದೆ. ಹಾಗಾದರೆ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವ ಸಾಧ್ಯತೆ ಇದೆಯೇ?, ಸಿಡ್ನಿ ಹವಾಮಾನ ಹೇಗಿದೆ? ಎಂಬುದನ್ನು ನೋಡೋಣ.

ಕಳೆದ ಭಾರತ- ಪಾಕಿಸ್ತಾನ ಪಂದ್ಯಕ್ಕೆ ಮೆಲ್ಬೋರ್ನ್​ನಲ್ಲಿ ವರುಣನ ಕಾಟ ಇರಲಿದೆ ಎಂದು ಹೇಳಲಾಗಿತ್ತು. ಆದರೆ, ಪಂದ್ಯ ಸರಾಗವಾಗಿ ಸಾಗಿತು. ಇಂದು ಕೂಡ ಇಂಡೋ- ನೆದರ್​ಲೆಂಡ್ಸ್ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಲಿದೆ ಎನ್ನಲಾಗಿದೆ. ಗುರುವಾರ ಸಿಡ್ನಿ ಸುತ್ತಮುತ್ತ ಮಳೆಯಾಗುವ ಸಾಧ್ಯತೆಯಿರುವ ಕಾರಣ ಪಂದ್ಯಕ್ಕೂ ಸಣ್ಣ ಪ್ರಮಾಣದಲ್ಲಿ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೆಲ್ಬೋರ್ನ್​ಗೆ ಹೋಲಿಸಿದರೆ ಸಿಡ್ನಿ ಪಿಚ್ ವಿಶೇಷವಾಗಿದೆ. ಸಿಡ್ನಿ ಕ್ರಿಕೆಟ್ ಮೈದಾನ ಬ್ಯಾಟಿಂಗ್‌ಗೆ ಉತ್ತಮವಾಗಿರುವ ಪಿಚ್ ಹೊಂದಿದೆ. ಚೆಂಡು ಬ್ಯಾಟ್‌ಗೆ ಚೆನ್ನಾಗಿ ಬರುವ ಕಾರಣ ಆರಂಭದಿಂದಲೇ ಬ್ಯಾಟರ್‌ಗಳು ಯಶಸ್ಸು ಸಾಧಿಸುತ್ತಾರೆ. ಇದುಕೂಡ ದೊಡ್ಡ ಮೈದಾನ ಆಗಿರುವುದರಿಂದ 160+ ರನ್ ಕಲೆಹಾಕುವುದು ಸುಲಭವಲ್ಲ. ಹೀಗಾಗಿ ಇಂದಿನ ಮ್ಯಾಚ್ ಕೂಡ ಹೈವೋಲ್ಟೇಜ್ ಆಗುವ ನಿರೀಕ್ಷೆಯಿದೆ. ಭಾರತ- ನೆದರ್​ಲೆಂಡ್ಸ್ ಪಂದ್ಯಕ್ಕೂ ಮುನ್ನ ಇದೇ ಮೈದಾನದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಬಾಂಗ್ಲಾದೇಶ ಸೆಣೆಸಾಟ ನಡೆಸಲಿದೆ.

ಇದನ್ನೂ ಓದಿ
Image
IND vs NED: ಟಿ20 ವಿಶ್ವಕಪ್​ನಲ್ಲಿಂದು ಭಾರತ-ನೆದರ್​ಲೆಂಡ್ಸ್ ಮುಖಾಮುಖಿ: ರೋಹಿತ್ ಪಡೆಯಲ್ಲಿ ಏನು ಬದಲಾವಣೆ?
Image
ರೋಹಿತ್ ಬಳಿಕ ಟೀಂ ಇಂಡಿಯಾದ ನಾಯಕ ಯಾರು? ಪಾಕ್ ಮಾಜಿ ಕ್ರಿಕೆಟಿಗರ ಆಯ್ಕೆ ಯಾರು ಗೊತ್ತಾ?
Image
T20 World Cup 2022: ಸೆಮಿಫೈನಲ್ ಆಡುವ 4 ತಂಡಗಳನ್ನು ಹೆಸರಿಸಿದ ರಾಬಿನ್ ಉತ್ತಪ್ಪ
Image
India vs Netherlands: ನೆದರ್​ಲ್ಯಾಂಡ್ಸ್​ ವಿರುದ್ಧದ ಪಂದ್ಯ ಟೀಮ್ ಇಂಡಿಯಾಗೆ ಏಕೆ ಬಹಳ ಮುಖ್ಯ? ಇಲ್ಲಿದೆ 4 ಕಾರಣಗಳು

ಟೀಮ್ ಇಂಡಿಯಾ ಮೊದಲ ಪಂದ್ಯ ಗೆದ್ದರೂ ಬ್ಯಾಟಿಂಗ್ – ಬೌಲಿಂಗ್ ಎರಡೂ ವಿಭಾಗದಲ್ಲಿ ಸುಧಾರಣೆ ಕಾಣಬೇಕಿದೆ. ಓಪನರ್​ಗಳಾದ ಕೆಎಲ್ ರಾಹುಲ್ ಹಾಗೂ ನಾಯಕ ರೋಹಿತ್ ಶರ್ಮಾ ತಂಡಕ್ಕೆ ಉತ್ತಮ ಆರಂಭ ಒದಗಿಸಬೇಕಿದೆ. ಸೂರ್ಯಕುಮಾರ್ ಯಾದವ್ ಕೂಡ ಎಚ್ಚರಿಕೆಯಿಂದ ಬ್ಯಾಟ್ ಬೀಸಬೇಕಿದೆ. ಕೊಹ್ಲಿ ಹಾರ್ದಿಕ್ ಉತ್ತಮ ಫಾರ್ಮ್​ನಲ್ಲಿದ್ದಾರೆ. ದಿನೇಶ್ ಕಾರ್ತಿಕ್ ಕೊಡುಗೆ ತಂಡಕ್ಕೆ ಇನ್ನೂ ಬೇಕಾಗಿದೆ. ಅಕ್ಷರ್ ಪಟೇಲ್ ಕಡೆಯಿಂದ ಕೂಡ ಬ್ಯಾಟಿಂಗ್ ವಿಭಾಗದಲ್ಲಿ ಇನ್ನಷ್ಟು ಆಕ್ರಮಣಕಾರಿ ಆಟ ನಿರೀಕ್ಷಿಸಲಾಗಿದೆ.

ಇನ್ನು ಬೌಲಿಂಗ್ ವಿಭಾಗದಲ್ಲಿ ಕೂಡ ಭಾರತ ಬಿಗಿಯಾಗಬೇಕಿದೆ. ಕಳೆದ ಪಾಕ್ ವಿರುದ್ಧ ಮೊದಲ 10 ಓವರ್​ಗಳಲ್ಲಿ ಭಾರತೀಯ ಬೌಲರ್​ಗಳು ನೀಡಿದ್ದು ಕೇವಲ 60 ರನ್​ಗಳನ್ನು ಮಾತ್ರ. ಆದರೆ, ನಂತರದ 10 ಓವರ್​ಗಳಲ್ಲಿ 99 ರನ್ ನೀಡಿದ್ದರು. ಅದರಲ್ಲೂ ಡೆತ್​ ಓವರ್​ಗಳಲ್ಲಿ ರನ್ ಬಿಟ್ಟು ಕೊಟ್ಟ ಪರಿಣಾಮ ಪಾಕಿಸ್ತಾನ ತಂಡವು ಸ್ಪರ್ಧಾತ್ಮಕ ಮೊತ್ತ ಪೇರಿಸಲು ಸಾಧ್ಯವಾಯಿತು. ಹೀಗಾಗಿ ಕಳೆದ ಒಂದು ವರ್ಷದಿಂದ ರೋಹಿತ್ ಪಡೆಯಲ್ಲಿ ಕಾಡುತ್ತಿರುವ ಡೆತ್ ಓವರ್​ಗಳ ಸಮಸ್ಯೆ ಸುಧಾರಿಸಬೇಕಿದೆ.

ಭಾರತ ಮತ್ತು ನೆದರ್ಲೆಂಡ್ಸ್ ನಡುವಿನ ಪಂದ್ಯ ಮಧ್ಯಾಹ್ನ 12:30ಕ್ಕೆ ಆರಂಭವಾಗಲಿದೆ. 12 ಗಂಟೆಗೆ ಟಾಸ್ ನಡೆಯಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಚಾನೆಲ್‌ಗಳಲ್ಲಿ ಭಾರತ ಮತ್ತು ನೆದರ್ಲೆಂಡ್ಸ್ ನಡುವಿನ ಪಂದ್ಯದ ನೇರ ಪ್ರಸಾರವಾಗಲಿದೆ. ಲೈವ್ ಸ್ಟ್ರೀಮಿಂಗ್ ಅನ್ನು ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬಹುದು. ಹಾಗೆಯೇ TV9Kannada.com ನಲ್ಲಿ ಈ ಪಂದ್ಯದ ಲೈವ್ ನವೀಕರಣಗಳನ್ನು ಸಹ ಓದಬಹುದು.

Published On - 8:37 am, Thu, 27 October 22

Follow Us
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ