AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಇಂದಿನಿಂದ ಭಾರತ-ಶ್ರೀಲಂಕಾ ದ್ವಿತೀಯ ಟೆಸ್ಟ್: ಪಿಂಕ್ ಬಾಲ್ ಕದನಕ್ಕೆ ಸಜ್ಜಾದ ಚಿನ್ನಸ್ವಾಮಿ

India vs Sri Lanka 2nd Test: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದಿನಿಂದ ಪಿಂಕ್ ಬಾಲ್ ಟೆಸ್ಟ್ (Pink Ball Test) ಪ್ರಾರಂಭವಾಗಲಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಆಸನ ಸಾಮರ್ಥ್ಯವನ್ನು ಶೇ. 50 ರಿಂದ 100ರಷ್ಟು ವೀಕ್ಷಕರಿಗೆ ಅನುಮತಿ ನೀಡಿದೆ. ಹೀಗಾಗಿ ಹೌಸ್​ಫುಲ್ ಕ್ರೀಡಾಂಗಣದಲ್ಲಿ ಹಗಲು – ರಾತ್ರಿ ಕದನ ನಡೆಯಲಿದೆ.

IND vs SL: ಇಂದಿನಿಂದ ಭಾರತ-ಶ್ರೀಲಂಕಾ ದ್ವಿತೀಯ ಟೆಸ್ಟ್: ಪಿಂಕ್ ಬಾಲ್ ಕದನಕ್ಕೆ ಸಜ್ಜಾದ ಚಿನ್ನಸ್ವಾಮಿ
IND vs SL
Follow us
TV9 Web
| Updated By: Vinay Bhat

Updated on: Mar 12, 2022 | 8:32 AM

ಮೊಹಾಲಿಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಮತ್ತು 222 ರನ್​ಗಳ ಅಮೋಘ ಗೆಲುವು ಸಾಧಿಸಿ 1-0 ಮುನ್ನಡೆ ಪಡೆದುಕೊಂಡಿರುವ ಭಾರತ (India vs Sri Lanka 2nd Test) ತಂಡ ಇದೀಗ ದ್ವಿತೀಯ ಕದನಕ್ಕೆ ಸಜ್ಜಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದಿನಿಂದ ಪಿಂಕ್ ಬಾಲ್ ಟೆಸ್ಟ್ (Pink Ball Test) ಪ್ರಾರಂಭವಾಗಲಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಆಸನ ಸಾಮರ್ಥ್ಯವನ್ನು ಶೇ. 50 ರಿಂದ 100ರಷ್ಟು ವೀಕ್ಷಕರಿಗೆ ಅನುಮತಿ ನೀಡಿದೆ. ಹೀಗಾಗಿ ಹೌಸ್​ಫುಲ್ ಕ್ರೀಡಾಂಗಣದಲ್ಲಿ ಹಗಲು – ರಾತ್ರಿ ಕದನ ನಡೆಯಲಿದೆ. ನಾಯಕನಾದ ಬಳಿಕ ಗೆಲುವಿನ ಸರಮಾಲೆಯನ್ನೆ ಹೊತ್ತಿರುವ ರೋಹಿತ್ ಶರ್ಮಾ (Rohit Sharma) ಈ ಪಂದ್ಯವನ್ನೂ ಗೆದ್ದು ತಮ್ಮ ಖಾತೆಗೆ ಮತ್ತೊಂದು ದಾಖಲೆ ಸೇರ್ಪಡೆಗೊಳಿಸುತ್ತಾರ ಎಂಬ ಕುತೂಹಲ ಮೂಡಿಸಿದೆ. ಇತ್ತ ಶ್ರೀಲಂಕಾ ತಂಡ ಈ ಪಂದ್ಯವನ್ನಾದರೂ ಗೆದ್ದು ಮಾನ ಉಳಿಸಿಕೊಳ್ಳುವ ಪ್ಲಾನ್​ನಲ್ಲಿದೆ.

ಇಂದಿನ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಕೆಲ ಬದಲಾವಣೆ ನಿರೀಕ್ಷಿಸಲಾಗಿದೆ. ಓಪನರ್ ಆಗಿ ರೋಹಿತ್ ಶರ್ಮಾ ಜೊತೆ ಇನ್ನಿಂಗ್ಸ್ ಆರಂಭಿಸುವುದು ಯಾರು ಎಂಬುದು ಇನ್ನೂ ಖಚಿತ ಮಾಹಿತಿ ಇಲ್ಲ. ಯಾಕೆಂದರೆ ಮಯಾಂಕ್ ಅಗರ್ವಾಲ್ ಮೊದಲ ಟೆಸ್ಟ್​ನಲ್ಲಿ ನಿರೀಕ್ಷೆಗೆ ತಕ್ಕ ಪ್ರದರ್ಶನ ನೀಡಿಲ್ಲ. ಇತ್ತ ಶುಭ್ಮನ್ ಗಿಲ್​ಗೆ ಅವಕಾಶ ನೀಡಿರಲಿಲ್ಲ. ಹೀಗಾಗಿ ಮಯಾಂಕ್ ಕೈಬಿಟ್ಟು ಗಿಲ್ ಆರಂಭಿಕನಾಗಿ ಆಡ್ತಾರ ಎಂಬುದು ಕುತೂಹಲ ಕೆರಳಿಸಿದೆ. ಮೂರನೇ ಕ್ರಮಾಂಕದಲ್ಲಿ ಮೋಡಿ ಮಾಡಿರುವ ಹನುಮಾ ವಿಹಾರಿ ಸ್ಥಾನ ಭದ್ರವಾಗಿದೆ. ವಿರಾಟ್ ಕೊಹ್ಲಿ 4ನೇ ಸ್ಥಾನದಲ್ಲಿ ಆಡಲಿದ್ದಾರೆ.

ನಂತರದ ಸ್ಥಾನದಲ್ಲಿ ಶ್ರೇಯಸ್ ಅಯ್ಯರ್ ಆಡಲಿದ್ದು ಭರವಸೆ ಮೂಡಿಸಿದ್ದಾರೆ. ಶತಕ ವಂಚಿತ ರಿಷಭ್ ಪಂತ್ 7ನೇ ಸ್ಥಾನದಲ್ಲಿ ಕಣಕ್ಕಿಳಿಯಲಿದ್ದಾರೆ. ಆಲ್ರೌಂಡರ್​ಗಳಾದ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆಯುವುದು ಖಚಿತ. 9ನೇ ಸ್ಥಾನದಲ್ಲಿ ಜಯಂತ್ ಯಾದವ್ ತಂಡದಿಂದ ಹೊರಗುಳಿಲಿದ್ದು ಅಕ್ಷರ್ ಪಟೇಲ್ ಅಥವಾ ಮೊಹಮ್ಮದ್ ಸಿರಾಜ್ ಕಾಣಿಸಿಕೊಳ್ಳಲಿದ್ದಾರೆ. ಉಳಿದಂತೆ ಜಸ್​ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ ಎಂದಿನಂತೆ ತಂಡದಲ್ಲಿರಲಿದ್ದಾರೆ.

ಬೆಂಗಳೂರಿನಲ್ಲಿ 2 ವರ್ಷಗಳ ಬಳಿಕ ಅಂತರರಾಷ್ಟ್ರೀಯ ಪಂದ್ಯ ನಡೆಯುತ್ತಿದ್ದು, ಅದರಲ್ಲೂ 4 ವರ್ಷಗಳ ಬಳಿಕ ಟೆಸ್ಟ್‌ ಪಂದ್ಯದ ಆತಿಥ್ಯ ಲಭಿಸಿರುವುದರಿಂದ ಕ್ರಿಕೆಟ್‌ ಫ್ಯಾನ್ಸ್‌ ಫುಲ್ ಜೋಶ್‌ನಲ್ಲಿದ್ದಾರೆ. ಕೊರೊನಾ ಹಾವಳಿ ಹತೋಟಿಗೆ ಬಂದಿರುವುದರಿಂದ ಸ್ಟೇಡಿಯಂ ಪೂರ್ಣ ಪ್ರಮಾಣದಲ್ಲಿ ವೀಕ್ಷಕರಿಗೆ ತೆರೆಯಲ್ಪಡುವುದು ಈ ಸಂತಸವನ್ನು ಇನ್ನಷ್ಟು ಹೆಚ್ಚಿಸಿದೆ. ಈ ಹಿನ್ನೆಲೆ ಒಂದು ವಾರದಿಂದ ಭದ್ರತೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಮೈದಾನದ ಹಲವು ಕಡೆ ಗೋಪುರಗಳನ್ನು ನಿರ್ಮಿಸಲಾಗಿದೆ. ಪಂದ್ಯದ 5 ದಿನ ಭದ್ರತೆಗೆ 700 ಸಿಬ್ಬಂದಿಯನ್ನ ನಿಯೋಜಿಸಲಾಗಿದೆ,. ಅಹಿತಕರ ಘಟನೆ ನಡೆಯದಂತೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವಿನ ದ್ವಿತೀಯ ಟೆಸ್ಟ್ ಪಂದ್ಯ ನಡೆಯಲಿರುವ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚು ಅನುಕೂಲಕರವಾಗಿ ಇರಲಿದ್ದು, ಸ್ಪಿನ್ ಬೌಲರ್‌ಗಳಿಗೆ ಚೂರು ಸಹಕರಿಸಲಿದೆ. ಹೊನಲು ಬೆಳಕಿನ ಟೆಸ್ಟ್‌ ಪಂದ್ಯ ಎಂಬುದನ್ನು ಹೊರತು ಪಡಿಸಿ ಹೇಳುವುದಾದರೆ ಇಲ್ಲಿಯೂ ಭಾರತವೇ ನೆಚ್ಚಿನ ತಂಡವಾಗಿ ಗುರುತಿಸಲ್ಪಟ್ಟಿದೆ. ಮೊಹಾಲಿಯಲ್ಲಿ ಮೂರೇ ದಿನದಲ್ಲಿ ಇನ್ನಿಂಗ್ಸ್‌ ಸೋಲುಂಡ ಲಂಕೆಯ ಮೇಲೆ ಯಾವುದೇ ನಂಬಿಕೆ ಇಡಲಾಗದು. ಅದು ಪಂದ್ಯವನ್ನು ಎಷ್ಟು ದಿನಕ್ಕೆ ವಿಸ್ತರಿಸೀತು ಎಂಬುದನ್ನು ನೋಡಬೇಕಿದೆ.

IND vs WI: ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತೀಯ ವನಿತೆಯರು: ಎರಡು ವಿಕೆಟ್ ಪತನ

ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ