AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಹೈದರಾಬಾದ್​ನಲ್ಲಿಂದು ಭಾರತ-ಆಸ್ಟ್ರೇಲಿಯಾ ನಿರ್ಣಾಯಕ ಕದನ: ಭಾರತಕ್ಕೆ ಡೆತ್ ಬೌಲಿಂಗ್​ನದ್ದೇ ಚಿಂತೆ

India vs Australia: ಟಿ20 ವಿಶ್ವಕಪ್​ಗೂ ಮುನ್ನ ಭಾರತಕ್ಕೆ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಕಟ್ಟಲು ಆಸ್ಟ್ರೇಲಿಯಾ ವಿರುದ್ಧದ ಇಂದಿನ ಮೂರನೇ ಟಿ20 ಪಂದ್ಯ ಮಹತ್ವದ್ದಾಗಿದೆ. ಹೀಗಾಗಿ ಭಾರತ ಬೌಲಿಂಗ್ ವಿಭಾಗದಲ್ಲಿ ಒಂದು ಬದಲಾವಣೆ ನಿರೀಕ್ಷಿಸಲಾಗಿದೆ.

IND vs AUS: ಹೈದರಾಬಾದ್​ನಲ್ಲಿಂದು ಭಾರತ-ಆಸ್ಟ್ರೇಲಿಯಾ ನಿರ್ಣಾಯಕ ಕದನ: ಭಾರತಕ್ಕೆ ಡೆತ್ ಬೌಲಿಂಗ್​ನದ್ದೇ ಚಿಂತೆ
IND vs AUS 3rd T20I
TV9 Web
| Edited By: |

Updated on:Sep 25, 2022 | 8:09 AM

Share

ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಅಂತಿಮ ನಿರ್ಣಾಯಕ ಮೂರನೇ ಟಿ20 ಪಂದ್ಯ ಇಂದು ಹೈದರಾಬಾದ್​ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆದ್ದಿದ್ದರೆ, ದ್ವಿತೀಯ ಸೆಣೆಸಾಟದಲ್ಲಿ ಭಾರತ 6 ವಿಕೆಟ್​ಗಳ ಜಯ ಸಾಧಿಸಿತ್ತು. ಹೀಗಾಗಿ ಕೊನೆಯ ಟಿ20 ಮೇಲೆ ಎಲ್ಲರ ಕಣ್ಣಿದೆ. ಹಿಂದಿನ ಎರಡೂ ಪಂದ್ಯಗಳಲ್ಲಿ ರೋಹಿತ್ (Rohit Sharma) ಪಡೆ ವೈಫಲ್ಯ ಅನುಭವಿಸಿದ್ದು ಬೌಲಿಂಗ್​ನಲ್ಲಿ. ಅದರಲ್ಲೂ ಮುಖ್ಯವಾಗಿ ವೇಗಿಗಳು. ಪದೇ ಪದೇ ದುಬಾರಿಯಾಗುತ್ತಿರುವ ಟೀಮ್ ಇಂಡಿಯಾ (Team India) ವೇಗಿಗಳು ಆದಷ್ಟು ಬೇಗ ಲಯಕಂಡುಕೊಳ್ಳಬೇಕಿದೆ. ಟಿ20 ವಿಶ್ವಕಪ್​ಗೂ ಮುನ್ನ ಭಾರತಕ್ಕೆ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಕಟ್ಟಲು ಇಂದಿನ ಪಂದ್ಯ ಮಹತ್ವದ್ದಾಗಿದೆ. ಹೀಗಾಗಿ ಭಾರತ ಬೌಲಿಂಗ್ ವಿಭಾಗದಲ್ಲಿ ಒಂದು ಬದಲಾವಣೆ ನಿರೀಕ್ಷಿಸಲಾಗಿದೆ.

ಮೊದಲ ಟಿ20 ಪಂದ್ಯದಲ್ಲಿ ದುಬಾರಿಯಾದ ಉಮೇಶ್ ಯಾದವ್ ಎರಡನೇ ಕದನದಿಂದ ಹೊರಗುಳಿದು ಜಸ್​ಪ್ರೀತ್ ಬುಮ್ರಾ ಸ್ಥಾನ ಪಡೆದು ಮಾರಕವಾಗಿ ಪರಿಣಮಿಸಿದರು. ಆದರೆ, ಎರಡನೇ ಟಿ20 ಯಲ್ಲಿ ಹರ್ಷಲ್ ಪಟೇಲ್ ದುಬಾರಿ ಆದರು. ಮುಖ್ಯವಾಗಿ ಭಾರತದ ಡೆತ್ ಬೌಲಿಂಗ್ ಕಳೆದ ಕೆಲವು ಪಂದ್ಯಗಳಿಂದ ತೀರಾ ಕಳಪೆ ಆಗುತ್ತಿದೆ. ಇದಕ್ಕೆ ಉತ್ತರ ಹುಡುಕುವ ಕೆಲಸ ನಡೆಯಬೇಕಿದೆ. ಹೀಗಾಗಿ ಹರ್ಷಲ್ ಪಟೇಲ್ ಜಾಗಕ್ಕೆ ದೀಪಕ್ ಚಹರ್ ಬರುವ ಸಾಧ್ಯತೆ ಇದೆ.

ಅಂತೆಯೆ ಯುಜ್ವೇಂದ್ರ ಚಹಲ್ ಸ್ಥಾನ ಕೂಡ ತುಗುಯ್ಯಾಲೆಯಲ್ಲಿದೆ. ಕಳೆದ ಏಷ್ಯಾಕಪ್​ನಿಂದಲೂ ಚಹಲ್ ಸ್ನಿನ್ ಮೋಡಿ ನಡೆಯುತ್ತಿಲ್ಲ. ವಿಕೆಟ್ ಕೀಳಲು ಪರದಾಡುತ್ತಿದ್ದಾರೆ. ಪ್ರಮುಖ ಸ್ಪಿನ್ನರ್​ ಎಂದೇ ಗುರುತಿಸಿಕೊಂಡ ಚಹಲ್​ ಮೇಲೆ ಭಾರೀ ಒತ್ತಡವಿದೆ. ಇವರ ಜಾಗದಲ್ಲಿ ರವಿಚಂದ್ರನ್ ಅಶ್ವಿನ್ ಕಣಕ್ಕಿಳಿದರೆ ಅಚ್ಚರಿ ಪಡಬೇಕಿಲ್ಲ. ಅತ್ತ ಅಕ್ಷರ್ ಪಟೇಲ್ ಬೊಂಬಾಟ್ ಬೌಲಿಂಗ್ ಪ್ರದರ್ಶನ ನೀಡುತ್ತಿದ್ದಾರೆ.

ಇದನ್ನೂ ಓದಿ
Image
IND vs ENG: ಜೂಲನ್ ಗೋಸ್ವಾಮಿಗೆ ಸರಣಿ ಗೆಲುವಿನ ಬೀಳ್ಕೊಟ್ಟ ಟೀಂ ಇಂಡಿಯಾ ವನಿತಾ ಬಳಗ..!
Image
MS Dhoni: ಐಪಿಎಲ್​ಗೂ ಧೋನಿ ವಿದಾಯ? ಕುತೂಹಲ ಹೆಚ್ಚಿಸಿದ ಕ್ಯಾಪ್ಟನ್ ಕೂಲ್ ಫೇಸ್​ಬುಕ್ ಪೋಸ್ಟ್..!
Image
Duleep Trophy: ಸತತ ಎರಡನೇ ಫೈನಲ್​ನಲ್ಲಿ ಶತಕ ಸಿಡಿಸಿದ ಸರ್ಫರಾಜ್ ಖಾನ್..! ಗೆಲುವಿನ ಸನಿಹದಲ್ಲಿ ಪಶ್ಚಿಮ ವಲಯ
Image
Jhulan Goswam: ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿರುವ ಸ್ಟ್ಯಾಂಡ್‌ಗೆ ಜೂಲನ್ ಗೋಸ್ವಾಮಿ ಹೆಸರು..!

ಭಾರತದ ಬ್ಯಾಟರ್​ಗಳು ತಂಡಕ್ಕೆ ಉತ್ತಮ ಕೊಡುಗೆ ನೀಡುತ್ತಿದ್ದಾರೆ. ಒಬ್ಬರು ವೈಫಲ್ಯ ಅನುಭವಿಸಿದರೂ ಮತ್ತೊಬ್ಬರು ಜವಾಬ್ದಾರಿ ವಹಿಸಿ ರನ್ ವೇಗವನ್ನು ಹೆಚ್ಚಿಸುತ್ತಿದ್ದಾರೆ. ಸೂರ್ಯಕುಮಾರ್ ಯಾದವ್, ವಿರಾಟ್​ ಕೊಹ್ಲಿ ಫೇಲ್​ ಆದರೂ, ರೋಹಿತ್​ ಶರ್ಮಾ, ಕೆ ಎಲ್​ ರಾಹುಲ್​, ಹಾರ್ದಿಕ್​ ಪಾಂಡ್ಯಾ ರನ್ ಗಳಿಸುತ್ತಾರೆ. ದಿನೇಶ್ ಕಾರ್ತಿಕ್ ಫಿನಿಶಿಂಗ್ ಕೆಲಸವನ್ನು ಅದ್ಭುತವಾಗಿ ನಿರ್ವಹಿಸುತ್ತಿದ್ದಾರೆ. ರಿಷಭ್ ಪಂತ್​ಗೆ ಇನ್ನೂ ಮಿಂಚಲು ಅವಕಾಶ ಸಿಗಲಿಲ್ಲ.

ಇತ್ತ ಆಸ್ಟ್ರೇಲಿಯಾ ಕೂಡ ಭಾರತದ ರೀತಿಯಲ್ಲೇ ಇದೆ. ಬ್ಯಾಟರ್​ಗಳು ರನ್ ಕಲೆಹಾಕಿದಂತೆ ಬೌಲರ್​ಗಳು ರನ್ ಬಿಟ್ಟುಕೊಡುತ್ತಿದ್ದಾರೆ. ಕ್ಯಾಮರೂನ್​ ಗ್ರೀನ್​, ನಾಯಕ್​ ಆರೋನ್​ ಫಿಂಚ್​, ಮ್ಯೂಥ್ಯೂ ವೇಡ್​ ಬ್ಯಾಟಿಂಗ್​ನಲ್ಲಿ ಯಶಸ್ವಿಯಾಗಿರುವುದು ನೆಮ್ಮದಿಯ ವಿಚಾರ. 2 ಪಂದ್ಯಗಳಲ್ಲಿ ವಿಫಲವಾಗಿರುವ ತಂಡದ ಪ್ರಮುಖ ಅಸ್ತ್ರವಾದ ಆಲ್​ರೌಂಡರ್​ ಗ್ಲೆನ್​ ಮ್ಯಾಕ್ಸ್​ವೆಲ್​ ವೈಫಲ್ಯ ತಂಡಕ್ಕೆ ತಲೆನೋವಾಗಿದೆ. ಮ್ಯಾಕ್ಸಿ 2 ಪಂದ್ಯಗಳಲ್ಲಿ 1 ರನ್​ ಮಾತ್ರ ಗಳಿಸಿದ್ದಾರೆ. ಬೌಲಿಂಗ್​ನಲ್ಲಿ ಆ್ಯಡಂ ಝಂಪಾ ಬಿಟ್ಟರೆ ಮತ್ಯಾರು ಪರಿಣಾಮಕಾರಿಯಾಗಿ ಗೋಚರಿಸುತ್ತಿಲ್ಲ.

ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ XI:

ಭಾರತ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ರಿಷಭ್ ಪಂತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಾಲ್/ ಆರ್. ಅಶ್ವಿನ್, ದೀಪಕ್ ಚಹರ್, ಜಸ್ಪ್ರೀತ್ ಬುಮ್ರಾ.

ಆಸ್ಟ್ರೇಲಿಯಾ: ಆರೋನ್ ಫಿಂಚ್ (ನಾಯಕ), ಕ್ಯಾಮರೂನ್​ ಗ್ರೀನ್, ಸ್ಟೀವ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಡೇನಿಯಲ್​ ಸ್ಯಾಮ್ಸ್, ಪ್ಯಾಟ್ ಕಮಿನ್ಸ್, ಸೀನ್ ಅಬಾಟ್, ಆ್ಯಡಂ ಝಂಪಾ, ಜೋಶ್ ಹ್ಯಾಜ್ಲೆವುಡ್.

Published On - 8:09 am, Sun, 25 September 22

ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!