AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ರಣ ರೋಚಕ ಪಂದ್ಯದಲ್ಲಿ ಗೆದ್ದು ಟಿ20 ಸರಣಿ ವಶಪಡಿಸಿಕೊಂಡ ಭಾರತ

IND vs ENG: ಪುಣೆಯಲ್ಲಿ ನಡೆದ ನಾಲ್ಕನೇ ಮತ್ತು ಅಂತಿಮ ಟಿ20 ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ 15 ರನ್‌ಗಳ ಗೆಲುವು ಸಾಧಿಸಿ ಸರಣಿಯನ್ನು ವಶಪಡಿಸಿಕೊಂಡಿದೆ. ಹಾರ್ದಿಕ್ ಪಾಂಡ್ಯ ಮತ್ತು ಶಿವಂ ದುಬೆ ಅವರ ಅದ್ಭುತ ಬ್ಯಾಟಿಂಗ್ ಮತ್ತು ವರುಣ್ ಚಕ್ರವರ್ತಿ ಹಾಗೂ ಹರ್ಷಿತ್ ರಾಣಾ ಅವರ ಅತ್ಯುತ್ತಮ ಬೌಲಿಂಗ್ ಗೆಲುವಿಗೆ ಕಾರಣವಾಯಿತು. ಇಂಗ್ಲೆಂಡ್‌ನ ಹ್ಯಾರಿ ಬ್ರೂಕ್ ಅವರ ಅರ್ಧಶತಕದ ಹೊರತಾಗಿಯೂ ಭಾರತ ತಂಡ ಗೆಲುವಿನತ್ತ ಸಾಗಿದೆ. ಈ ಗೆಲುವಿನೊಂದಿಗೆ ಭಾರತ 2019 ರಿಂದ ತವರಿನಲ್ಲಿ ನಡೆದ 17 ಟಿ20 ಸರಣಿಗಳನ್ನೂ ಗೆದ್ದಿದೆ.

IND vs ENG: ರಣ ರೋಚಕ ಪಂದ್ಯದಲ್ಲಿ ಗೆದ್ದು ಟಿ20 ಸರಣಿ ವಶಪಡಿಸಿಕೊಂಡ ಭಾರತ
ಭಾರತ-ಇಂಗ್ಲೆಂಡ್
ಪೃಥ್ವಿಶಂಕರ
|

Updated on:Jan 31, 2025 | 11:07 PM

Share

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ಟಿ20ಯಲ್ಲಿ ಭಾರತ ಅದ್ಭುತ ಜಯ ದಾಖಲಿಸುವ ಮೂಲಕ ಟಿ20 ಸರಣಿಯನ್ನು ವಶಪಡಿಸಿಕೊಂಡಿದೆ. ನಾಲ್ಕನೇ ಟಿ20ಯಲ್ಲಿ ಟೀಂ ಇಂಡಿಯಾ 15 ರನ್‌ಗಳ ಜಯ ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 181 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ 166 ರನ್ ಗಳಿಸಲಷ್ಟೇ ಶಕ್ತವಾಯಿತು. ಟೀಂ ಇಂಡಿಯಾ ಪರ ಬ್ಯಾಟಿಂಗ್​ನಲ್ಲಿ ಮಿಂಚಿದ ಹಾರ್ದಿಕ್ ಪಾಂಡ್ಯ ಮತ್ತು ಶಿವಂ ದುಬೆ ಹಾಗೂ ಬೌಲಿಂಗ್​ನಲ್ಲಿ ಮಿಂಚಿದ ವರುಣ್ ಚಕ್ರವರ್ತಿ ಮತ್ತು ಹರ್ಷಿತ್ ರಾಣಾ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಪುಣೆ ಟಿ20 ರೋಚಕತೆ

ಒಂದು ಹಂತದಲ್ಲಿ ಇಂಗ್ಲೆಂಡ್ ತಂಡ ಗೆಲುವಿನ ಹಾದಿಯಲ್ಲಿತ್ತು. ಹ್ಯಾರಿ ಬ್ರೂಕ್ ಕೇವಲ 26 ಎಸೆತಗಳಲ್ಲಿ 51 ರನ್ ಗಳಿಸುವ ಮೂಲಕ ಇಂಗ್ಲೆಂಡ್ ತಂಡವನ್ನು ಗೆಲುವಿನ ಹಾದಿಗೆ ತಂದರು. ಆದರೆ ವರುಣ್ ಚಕ್ರವರ್ತಿ ಒಂದೇ ಓವರ್‌ನಲ್ಲಿ ಹ್ಯಾರಿ ಬ್ರೂಕ್ ಮತ್ತು ಬ್ರೇಡನ್ ಕಾರ್ಸ್ ಅವರನ್ನು ಔಟ್ ಮಾಡುವ ಮೂಲಕ ಭಾರತದ ಕಡೆಗೆ ಪಂದ್ಯದ ದಿಕ್ಕನ್ನು ಬದಲಾಯಿಸಿದರು. ಇದಾದ ಬಳಿಕ ಹರ್ಷಿತ್ ರಾಣಾ 19ನೇ ಓವರ್‌ನಲ್ಲಿ ಕೇವಲ 6 ರನ್ ನೀಡಿ ಜೇಮಿ ಓವರ್​ಟನ್ ವಿಕೆಟ್ ಪಡೆದರು. ಕೊನೆಯ ಓವರ್‌ನಲ್ಲಿ ಅರ್ಷದೀಪ್ ಸಿಂಗ್ ಸಕೀಬ್ ಮಹಮೂದ್ ಅವರನ್ನು ಔಟ್ ಮಾಡಿ ಟೀಂ ಇಂಡಿಯಾಗೆ ಅಮೋಘ ಜಯ ತಂದುಕೊಟ್ಟರು.

ಭಾರತಕ್ಕೆ ಕಳಪೆ ಆರಂಭ

ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾದ ಆರಂಭ ತುಂಬಾ ಕೆಟ್ಟದಾಗಿತ್ತು. ಎರಡನೇ ಓವರ್‌ನಲ್ಲಿಯೇ ತಂಡದ ಮೂರು ವಿಕೆಟ್‌ಗಳು ಪತನಗೊಂಡವು. ಆರಂಭಿಕ ಸಂಜು ಸ್ಯಾಮ್ಸನ್, ತಿಲಕ್ ವರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಅವರನ್ನು ಒಂದೇ ಓವರ್‌ನಲ್ಲಿ ಔಟ್ ಮಾಡುವ ಮೂಲಕ ಸಾಕಿಬ್ ಮಹಮೂದ್ ಸಂಚಲನ ಮೂಡಿಸಿದರು. ಇದಾದ ಬಳಿಕ ರಿಂಕು ಸಿಂಗ್ 30 ರನ್ ಗಳಿಸಿ ತಂಡದ ಇನ್ನಿಂಗ್ಸ್​ಗೆ ಚೇತರಿಕೆ ನೀಡಿದರು. ರಿಂಕು ಔಟಾದ ನಂತರ ಹಾರ್ದಿಕ್ ಪಾಂಡ್ಯ ಮತ್ತು ಶಿವಂ ದುಬೆ ಇಡೀ ಪಂದ್ಯದ ದಿಕ್ಕನ್ನೇ ಬದಲಿಸಿದರು. ಇಬ್ಬರೂ ಆಟಗಾರರು ತಲಾ 53 ರನ್ ಕಲೆಹಾಕಿ ಟೀಂ ಇಂಡಿಯಾ 181 ರನ್‌ಗಳಿಗೆ ಕೊಂಡೊಯ್ದರು.

ದುಬೆ ಗಾಯ ಭಾರತಕ್ಕೆ ವರವಾಯ್ತು

ವಾಸ್ತವವಾಗಿ ಶಿವಂ ದುಬೆ ಬ್ಯಾಟಿಂಗ್ ಮಾಡುವಾಗ ಕೊನೆಯ ಓವರ್‌ನಲ್ಲಿ ಗಾಯಗೊಂಡರು. ಹೀಗಾಗಿ ಟೀಂ ಇಂಡಿಯಾ ಮ್ಯಾಚ್ ರೆಫರಿಯಿಂದ ಬದಲಿ ಆಟಗಾರನಿಗೆ ಲಿಖಿತ ಅರ್ಜಿ ಸಲ್ಲಿಸಿತ್ತು. ಈ ಮೂಲಕ ಆಡುವ ಅವಕಾಶ ಪಡೆದ ಹರ್ಷಿತ್ ರಾಣಾ 33 ರನ್ ನೀಡಿ 3 ವಿಕೆಟ್ ಕಬಳಿಸುವ ಮೂಲಕ ಇಂಗ್ಲೆಂಡ್ ತಂಡವನ್ನು ಮಂಡಿಯೂರುವಂತೆ ಮಾಡಿದರು. ರಾಣಾ ಅಲ್ಲದೆ ಚಕ್ರವರ್ತಿ 2 ಮತ್ತು ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್ ಕೂಡ 3 ವಿಕೆಟ್ ಪಡೆದರು.

17 ಟಿ20 ಸರಣಿಗಳಲ್ಲಿ ಅಜೇಯ

ಟಿ20 ಸರಣಿಯಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸುವ ಮೂಲಕ ಟೀಂ ಇಂಡಿಯಾ ತನ್ನ ಪ್ರಾಬಲ್ಯವನ್ನು ಮುಂದುವರೆಸಿದೆ. 2019ರಿಂದ ತವರಿನಲ್ಲಿ ನಡೆದ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಇದುವರೆಗೆ ಒಂದೇ ಒಂದು ಸೋಲು ಕಂಡಿಲ್ಲ. ಟೀಂ ಇಂಡಿಯಾ 2019 ರಿಂದ ಇದುವರೆಗೆ 17 ಟಿ20 ಸರಣಿಗಳನ್ನಾಡಿದ್ದು, ಎಲ್ಲಾ ಸರಣಿಗಳನ್ನು ಗೆದ್ದುಕೊಂಡಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:04 pm, Fri, 31 January 25

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ