AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2025: ಇಂಗ್ಲೆಂಡ್ ವಿರುದ್ಧ ಗೆದ್ದು ಟಿ20 ವಿಶ್ವಕಪ್ ಫೈನಲ್​ಗೇರಿದ ಟೀಂ ಇಂಡಿಯಾ

ICC U19 T20 World Cup 2025: 19 ವರ್ಷದೊಳಗಿನವರ ಮಹಿಳಾ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಟೀಂ ಇಂಡಿಯಾ 9 ವಿಕೆಟ್‌ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿದೆ.ಇದರೊಂದಿಗೆ ಭಾರತ ತಂಡ ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದ್ದು, ಈ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ.

T20 World Cup 2025: ಇಂಗ್ಲೆಂಡ್ ವಿರುದ್ಧ ಗೆದ್ದು ಟಿ20 ವಿಶ್ವಕಪ್ ಫೈನಲ್​ಗೇರಿದ ಟೀಂ ಇಂಡಿಯಾ
ಭಾರತ ವನಿತಾ ಪಡೆ
ಪೃಥ್ವಿಶಂಕರ
|

Updated on:Jan 31, 2025 | 3:29 PM

Share

ಮಲೇಷ್ಯಾದಲ್ಲಿ ನಡೆಯುತ್ತಿರುವ ಅಂಡರ್-19 ಮಹಿಳಾ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯಿತು. ಜನವರಿ 31ರ ಶುಕ್ರವಾರ ನಡೆದ ಈ ಪಂದ್ಯದಲ್ಲಿ ಭಾರತ ತಂಡ ಅದ್ಭುತ ಪ್ರದರ್ಶನ ನೀಡಿ ಇಂಗ್ಲೆಂಡ್ ತಂಡವನ್ನು 9 ವಿಕೆಟ್ ಗಳಿಂದ ಸೋಲಿಸಿತು. ಇದರೊಂದಿಗೆ ಸತತ ಎರಡನೇ ಬಾರಿಗೆ ಟೀಂ ಇಂಡಿಯಾ ಈ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿದೆ. ಇನ್ನು ಈ ಪಂದ್ಯಕ್ಕೂ ಮುನ್ನ ನಡೆದ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಆಸ್ಟ್ರೇಲಿಯಾವನ್ನು ಸೋಲಿಸಿತ್ತು. ಅಂದರೆ ಇದೀಗ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಫೆಬ್ರವರಿ 2 ರ ಭಾನುವಾರದಂದು ನಡೆಯಲಿದೆ.

ಟೂರ್ನಿಯಲ್ಲಿ ಭಾರತ ಅಜೇಯ

ಇಡೀ ಟೂರ್ನಿಯೂದ್ದಕ್ಕೂ ಪಾರುಪತ್ಯ ಮೆರೆದ ಭಾರತ ತಂಡ ಗ್ರೂಪ್ ಹಂತದಿಂದ ಹಿಡಿದು ಸೆಮಿಫೈನಲ್‌ವರೆಗೂ ಒಂದೇ ಒಂದು ಪಂದ್ಯವನ್ನು ಸೋತಿಲ್ಲ. ಅಂದರೆ ಇಲ್ಲಿಯವರೆಗೂ ಈ ಟೂರ್ನಿಯಲ್ಲಿ ಭಾರತವನ್ನು ಸೋಲಿಸಲು ಯಾವುದೇ ತಂಡಕ್ಕೆ ಸಾಧ್ಯವಾಗಿಲ್ಲ. ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್‌ ತಂಡ ಕೂಡ ಉತ್ತಮ ಆರಂಭ ಪಡೆದುಕೊಂಡು ಕೇವಲ 4 ಓವರ್‌ಗಳಲ್ಲಿ 37 ರನ್ ಗಳಿಸಿತು. ಆದರೆ ಇದಾದ ನಂತರ ತಮ್ಮ ಕರಾರುವಕ್ಕಾದ ದಾಳಿಯನ್ನು ಆರಂಭಿಸಿದ ಭಾರತದ ಬೌಲರ್‌ಗಳು ಆಂಗ್ಲ ತಂಡವನ್ನು ಕಾಡಲಾರಂಭಿಸಿದರು. ಅದರಲ್ಲೂ ಪರುಣಿಕಾ ಸಿಸೋಡಿಯಾ 5ನೇ ಓವರ್​ನಲ್ಲಿ ಪ್ರಮುಖ 2 ವಿಕೆಟ್ ಪಡೆದರು.

ತತ್ತರಿಸಿದ ಆಂಗ್ಲರ ಇನ್ನಿಂಗ್ಸ್

ಆದರೆ, ಮತ್ತೆ ಚೇತರಿಕೆಯತ್ತ ಸಾಗಿದ ಆಂಗ್ಲ ಪಡೆಗೆ 44 ರನ್​ಗಳ ಜತೆಯಾಟ ಸಿಕ್ಕಿತು. ಈ ವೇಳೆ ದಾಳಿಗಿಳಿದ ಆಯುಷಿ ಶುಕ್ಲಾ ಇಂಗ್ಲೆಂಡ್ ಸ್ಕೋರ್ 81 ರನ್​ಗಳಿದ್ದಾಗ ಮೂರನೇ ವಿಕೆಟ್ ಉರುಳಿಸುವಲ್ಲಿ ಯಶಸ್ವಿಯಾದರು. ಇಲ್ಲಿಂದ ಇಂಗ್ಲೆಂಡ್ ತಂಡದ ಪತನ ಆರಂಭವಾಯಿತು. ಮುಂದಿನ 12 ರನ್ ಗಳಿಸುವಷ್ಟರಲ್ಲಿ 5 ವಿಕೆಟ್‌ಗಳನ್ನು ಕಳೆದುಕೊಂಡಿತು. ಭಾರತದ ಪರ ವೈಷ್ಣವಿ ಶರ್ಮಾ 4 ಓವರ್‌ಗಳಲ್ಲಿ 23 ರನ್ ನೀಡಿ 3 ವಿಕೆಟ್ ಪಡೆದರೆ, ಪರುಣಿಕಾ 4 ಓವರ್‌ಗಳಲ್ಲಿ 21 ರನ್ ನೀಡಿ 3 ವಿಕೆಟ್, ಆಯುಷಿ 4 ಓವರ್‌ಗಳಲ್ಲಿ 21 ರನ್ ನೀಡಿ 2 ವಿಕೆಟ್ ಪಡೆದರು. ಅಂತಿಮವಾಗಿ ಇಂಗ್ಲೆಂಡ್ 113 ರನ್​ಗಳನ್ನು ಕಲೆಹಾಕಲಷ್ಟೇ ಶಕ್ತವಾಯಿತು.

ಜಿ ಕಮಲಿನಿ ಅದ್ಭುತ ಬ್ಯಾಟಿಂಗ್

114 ರನ್‌ಗಳ ಬೆನ್ನತ್ತಿದ್ದ ಭಾರತದ ಆರಂಭಿಕರಿಬ್ಬರೂ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದರು. ಜಿ ಕಮಲಿನಿ ಮತ್ತು ಜಿ ತ್ರಿಶಾ 9 ಓವರ್‌ಗಳಲ್ಲಿ 60 ರನ್ ಕಲೆಹಾಕಿದರು. ಆದರೆ 9ನೇ ಓವರ್​ನ ಕೊನೆಯ ಎಸೆತದಲ್ಲಿ ತ್ರಿಶಾ 29 ಎಸೆತಗಳಲ್ಲಿ 35 ರನ್ ಗಳಿಸಿ ಔಟಾದರು. ಆ ಬಳಿಕ ಜೊತೆಯಾದ ಸನಿಕಾ ಚಲ್ಕೆ ಹಾಗೂ ಕಮಲಿನಿ ಉಳಿದ ರನ್‌ಗಳನ್ನು ಸುಲಭವಾಗಿ ಬೆನ್ನಟ್ಟಿದರು. ಈ ಮಹತ್ವದ ಪಂದ್ಯದಲ್ಲಿ 50 ಎಸೆತಗಳಲ್ಲಿ 56 ರನ್‌ಗಳ ಇನಿಂಗ್ಸ್‌ ಆಡಿದ ಕಮಲಿನಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಅಂತಿಮವಾಗಿ ಭಾರತ 15 ಓವರ್‌ಗಳಲ್ಲಿ ಕೇವಲ 1 ವಿಕೆಟ್‌ ಕಳೆದುಕೊಂಡು ಜಯದ ನಗೆ ಬೀರಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:12 pm, Fri, 31 January 25

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ