AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2.5 ಓವರ್​​ಗಳಲ್ಲಿ ಮುಗಿದ ಪಂದ್ಯ: ಭಾರತಕ್ಕೆ ಭರ್ಜರಿ ಜಯ

ICC Under 19 Womens T20 World Cup 2025: ಮಲೇಷ್ಯಾದಲ್ಲಿ ನಡೆಯುತ್ತಿರುವ ಮಹಿಳಾ ಅಂಡರ್-19 ಟಿ20 ವಿಶ್ವಕಪ್​ ಪಂದ್ಯದಲ್ಲಿ ಟೀಮ್ ಇಂಡಿಯಾದ ವೈಷ್ಣವಿ ಶರ್ಮಾ 4 ಓವರ್​ಗಳಲ್ಲಿ ಕೇವಲ 5 ರನ್ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಭರ್ಜರಿ ಬೌಲಿಂಗ್​ನೊಂದಿಗೆ ಈ ಪಂದ್ಯದಲ್ಲಿ ಭಾರತ ತಂಡ ಅಮೋಘ ಗೆಲುವು ದಾಖಲಿಸಿದೆ.

2.5 ಓವರ್​​ಗಳಲ್ಲಿ ಮುಗಿದ ಪಂದ್ಯ: ಭಾರತಕ್ಕೆ ಭರ್ಜರಿ ಜಯ
Team India
ಝಾಹಿರ್ ಯೂಸುಫ್
|

Updated on: Jan 21, 2025 | 2:39 PM

Share

ಕೌಲಾಲಂಪುರ್​ನ ಬೇಯುಮಾಸ್ ಓವಲ್ ಮೈದಾನದಲ್ಲಿ ನಡೆದ ಅಂಡರ್ 19 ಮಹಿಳಾ ಟಿ20 ವಿಶ್ವಕಪ್​ನ 16ನೇ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಮಲೇಷ್ಯಾ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕಿ ನಿಕಿ ಪ್ರಸಾದ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಮಲೇಷ್ಯಾ ತಂಡ ಉತ್ತಮ ಆರಂಭ ಪಡೆದಿರಲಿಲ್ಲ.

ಭಾರತೀಯ ಬೌಲರ್​ಗಳ ಕರಾರುವಾಕ್ ದಾಳಿ ಮುಂದೆ ರನ್​ಗಳಿಸುವುದಿರಲಿ, ಕ್ರೀಸ್ ಕಚ್ಚಿ ನಿಲ್ಲಲು ಕೂಡ ಮಲೇಷ್ಯಾ ಬ್ಯಾಟರ್​ಗಳು ಪರದಾಡಿದರು. ಪರಿಣಾಮ ಪವರ್​ಪ್ಲೇ ಮುಗಿಯುವ ಮುನ್ನವೇ ಕೇವಲ 22 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡಿತು.

ಆ ಬಳಿಕ ಬಂದ ಬ್ಯಾಟರ್​​ಗಳನ್ನು ಬಂದ ವೇಗದಲ್ಲೇ ಪೆವಿಲಿಯನ್​ಗೆ ಕಳುಹಿಸುವಲ್ಲಿ ಟೀಮ್ ಇಂಡಿಯಾ ಬೌಲರ್​ಗಳು ಯಶಸ್ವಿಯಾದರು. ಪರಿಣಾಮ 14.3 ಓವರ್​​ಗಳಲ್ಲಿ ಮಲೇಷ್ಯಾ ತಂಡವು ಕೇವಲ 31 ರನ್​ಗಳಿಸಿ ಆಲೌಟ್ ಆಯಿತು.

ಟೀಮ್ ಇಂಡಿಯಾ ಪರ ವೈಷ್ಣವಿ ಶರ್ಮಾ 4 ಓವರ್​ಗಳಲ್ಲಿ ಕೇವಲ 5 ರನ್ ನೀಡಿ 5 ವಿಕೆಟ್ ಕಬಳಿಸಿದರೆ, ಆಯುಷಿ ಶುಕ್ಲಾ 3.3 ಓವರ್​ಗಳಲ್ಲಿ 8 ರನ್ ನೀಡಿ 3 ವಿಕೆಟ್ ಉರುಳಿಸಿದರು. ಇನ್ನು ಜೋಶಿತಾ ಒಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

17 ಎಸೆತಗಳಲ್ಲಿ ಮುಗಿದ ಪಂದ್ಯ:

32 ರನ್​ಗಳ ಸುಲಭ ಗುರಿ ಪಡೆದ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿದ ಗೊಂಗಡಿ ತ್ರಿಷಾ 12 ಎಸೆತಗಳಲ್ಲಿ 5 ಫೋರ್​​ಗಳೊಂದಿಗೆ 27 ರನ್ ಬಾರಿಸಿದರೆ, ಕಮಿಲಿನಿ 4 ರನ್ ಕಲೆಹಾಕಿದರು. ಈ ಮೂಲಕ ಭಾರತ ತಂಡವು 2.5 ಓವರ್​ಗಳಲ್ಲಿ 32 ರನ್ ಕಲೆಹಾಕಿ 10 ವಿಕೆಟ್​ಗಳ ಅಮೋಘ ಜಯ ಸಾಧಿಸಿದೆ.

ಭಾರತ ಮಹಿಳಾ U19 ಪ್ಲೇಯಿಂಗ್ 11: ಗೊಂಗಡಿ ತ್ರಿಷಾ , ಜಿ ಕಮಲಿನಿ (ವಿಕೆಟ್ ಕೀಪರ್) , ಸಾನಿಕಾ ಚಲ್ಕೆ , ನಿಕಿ ಪ್ರಸಾದ್ ( ನಾಯಕಿ ) , ಭಾವಿಕಾ ಅಹಿರೆ , ಮಿಥಿಲಾ ವಿನೋದ್ , ಆಯುಷಿ ಶುಕ್ಲಾ , ಜೋಶಿತಾ ವಿಜೆ , ಶಬ್ನಮ್ ಶಕಿಲ್ , ಪರುಣಿಕಾ ಸಿಸೋಡಿಯಾ , ವೈಷ್ಣವಿ ಶರ್ಮಾ.

ಇದನ್ನೂ ಓದಿ: 26 ಸಿಕ್ಸ್, 17 ಫೋರ್​: RCBಯಿಂದ ಹೊರಬಿದ್ದ ಬಳಿಕ ಗ್ಲೆನ್ ಮ್ಯಾಕ್ಸ್​ವೆಲ್ ಸಿಡಿಲಬ್ಬರ

ಮಲೇಷ್ಯಾ ಮಹಿಳಾ U19 ಪ್ಲೇಯಿಂಗ್ 11: ನೂರ್ ಅಲಿಯಾ ಹೈರುನ್ (ವಿಕೆಟ್ ಕೀಪರ್) , ನುನಿ ಫರಿನಿ ಸಫ್ರಿ , ಹುಸ್ನಾ , ನೂರ್ ದಾನಿಯಾ ಸ್ಯುಹದಾ (ನಾಯಕಿ) , ನೂರ್ ಇಜ್ಜತುಲ್ ಸೈಫಿಕಾ , ನೂರಿಮಾನ್ ಹಿದಾಯ , ಸುಬಿಕಾ ಮಣಿವಣ್ಣನ್ , ನೂರ್ ಐನ್ ಬಿಂಟಿ ರೋಸ್ಲಾನ್ , ನೂರ್ ಇಸ್ಮಾ ದನಿಯಾ , ಸಿತಿ ಮರ್ಸಿಯಾ ಕ್ವಿಸ್ಟ್.

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ