AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Bangladesh Women: ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಭಾರತ ಕಳಪೆ ಬ್ಯಾಟಿಂಗ್: ಬಾಂಗ್ಲಾಕ್ಕೆ 230 ರನ್​ಗಳ ಟಾರ್ಗೆಟ್

ಹ್ಯಾಮಿಲ್ಟನ್‌ನ ಸೆಡ್ಡಾನ್ ಪಾರ್ಕ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಶುರುಮಾಡಿರುವ ಭಾರತ ಭರ್ಜರಿ ಆರಂಭ ಪಡೆದುಕೊಂಡಿತು. ಓಪನರ್​ಗಳಾದ ಸ್ಮೃತಿ ಮಂದಾನ ಹಾಗೂ ಶಫಾಲಿ ವರ್ಮಾ 74 ರನ್​ಗಳ ಜೊತೆಯಾಟ ಆಡಿದರು.

India vs Bangladesh Women: ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಭಾರತ ಕಳಪೆ ಬ್ಯಾಟಿಂಗ್: ಬಾಂಗ್ಲಾಕ್ಕೆ 230 ರನ್​ಗಳ ಟಾರ್ಗೆಟ್
India vs Bangladesh Women
TV9 Web
| Edited By: |

Updated on: Mar 22, 2022 | 9:57 AM

Share

ನ್ಯೂಜಿಲೆಂಡ್​ನಲ್ಲಿ ನಡೆಯುತ್ತಿರುವ ಐಸಿಸಿ ಮಹಿಳಾ ಏಕದಿನ ವಿಶ್ವಕಪ್​ನ (Womens World Cup 2022) 22ನೇ ಪಂದ್ಯದಲ್ಲಿಂದು ಭಾರತ ಹಾಗೂ ಬಾಂಗ್ಲಾದೇಶ (India vs Bangladesh) ತಂಡ ಮುಖಾಮುಖಿ ಆಗುತ್ತಿದೆ. ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮಹಿಳಾ ತಂಡ ಬ್ಯಾಟಿಂಗ್ ಆಯ್ಕೆ ಮಾಡಿ ಸಾಧಾರಣ ರನ್ ಕಲೆಹಾಕಿದೆಯಷ್ಟೆ. ಬಾಂಗ್ಲಾಕ್ಕೆ ಗೆಲ್ಲಲು 230 ರನ್​ಗಳ ಟಾರ್ಗೆಟ್ ಅನ್ನಷ್ಟೆ ನೀಡಿದೆ. ಈ ಬಾರಿ ಕೂಡ ಮಿಥಾಲಿ ಪಡೆ ಮತ್ತೆ ಬ್ಯಾಟಿಂಗ್​ನಲ್ಲಿ ಎಡವಿತು. ಮಧ್ಯಮ ಕ್ರಮಾಂಕ ಮತ್ತೊಮ್ಮೆ ಸಂಪೂರ್ಣ ವೈಫಲ್ಯ ಕಂಡಿತು. ಭಾರತೀಯ ವನಿತೆಯರು ಆಡಿದ 5 ಪಂದ್ಯಗಳಲ್ಲಿ2 ಗೆಲುವು ಸಾಧಿಸಿ 3 ಪಂದ್ಯಗಳಲ್ಲಿ ಸೋತಿದ್ದು, 4 ಅಂಕಗಳೊಂದಿಗೆ +0.456 ರನ್ ರೇಟ್ ಹೊಂದಿ ಅಂಕ ಪಟ್ಟಿಯಲ್ಲಿ 4 ನೇ ಸ್ಥಾನದಲ್ಲಿದೆ. ಇಂದಿನ ನಿರ್ಣಾಯಕ ಪಂದ್ಯದಲ್ಲಿ ಮಿಥಾಲಿ ರಾಜ್ (Mithali Raj) ಬಳಗ ಭರ್ಜರಿ ಗೆಲುವು ಸಾಧಿಸಲೇ ಬೇಕಾದ ಒತ್ತಡದಲ್ಲಿದೆ. ಇಲ್ಲವಾದರೆ ಸೆಮಿಫೈನಲ್ ಹಂತಕ್ಕೇರುವ ಕನಸು ನುಚ್ಚುನೂರಾಗಲಿದೆ.

ಹ್ಯಾಮಿಲ್ಟನ್‌ನ ಸೆಡ್ಡಾನ್ ಪಾರ್ಕ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಶುರುಮಾಡಿರುವ ಭಾರತ ಭರ್ಜರಿ ಆರಂಭ ಪಡೆದುಕೊಂಡಿತು. ಓಪನರ್​ಗಳಾದ ಸ್ಮೃತಿ ಮಂದಾನ ಹಾಗೂ ಶಫಾಲಿ ವರ್ಮಾ 74 ರನ್​ಗಳ ಜೊತೆಯಾಟ ಆಡಿದರು. ಬಿರುಸಿನ ಆಟದ ಮೊರೆ ಹೋದ ಶಫಾಲಿ 42 ಎಸೆತಗಳಲ್ಲಿ 6 ಫೋರ್, 1 ಸಿಕ್ಸರ್​ನೊಂದಿಗೆ 42 ರನ್ ಗಳಿಸಿದರೆ, ಇದರ ಬೆನ್ನಲ್ಲೇ 30 ರನ್​ಗಳಿಸಿದ್ದ ಸ್ಮೃತಿ ಮಂದಾನ ಔಟಾದರು. ಇದೇ ಹೊತ್ತಿಗೆ ಬಂದ ಬೆನ್ನಲ್ಲೇ ಮೊದಲ ಎಸೆತದಲ್ಲಿ ನಾಯಕಿ ಮಿಥಾಲಿ ರಾಜ್ ಔಟಾಗಿದ್ದು ತಂಡಕ್ಕೆ ಹೊಡೆತ ಬಿದ್ದಿತು. 73 ರನ್​ಗೆ ಒಂದೂ ವಿಕೆಟ್ ಕಳೆದುಕೊಳ್ಳದ ಭಾರತ 74 ರನ್ ಆಗುವ ಹೊತ್ತಿಗೆ 3 ಪ್ರಮುಖ ವಿಕೆಟ್ ಕೈಚೆಲ್ಲಿತು.

ನಂತರ ಜೊತೆಯಾದ ಯಸ್ತಿಕಾ ಭಾಟಿಯಾ ಹಾಗೂ ಹರ್ಮನ್​ಪ್ರೀತ್ ಕೌರ್ ಕೂಡ ದೊಡ್ಡ ಜೊತೆಯಾಟ ಆಡಲು ಸಾಧ್ಯವಾಗಿಲ್ಲ. ಹರ್ಮನ್ 33 ಎಸೆತಗಳಲ್ಲಿ 14 ರನ್​ಗೆ ಔಟಾದರು. ರಿಚ್ಚಾ ಘೋಷ್ ಜೊತೆಗೂಡಿ ಯಸ್ತಿಕಾ 54 ರನ್​ಗಳ ಜೊತೆಯಾಟ ಆಡಿದ್ದು ತಂಡದ ಮೊತ್ತ 150ರ ಗಡಿ ದಾಟಿತು. ರಿಚ್ಚಾ 36 ಎಸೆತಗಳಲ್ಲಿ 26 ರನ್​ಗೆ ನಿರ್ಗಮಿಸಿದರೆ, ಯಸ್ತಿಕಾ 80 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಇನ್ನಿಂಗ್ಸ್ ಮುಗಿಸಿದರು.

ಕೊನೇ ಹಂತದಲ್ಲಿ ತಂಡಕ್ಕೆ ಪೂಜಾ ವಸ್ತ್ರಾಕರ್ ಹಾಗೂ ಸ್ನೇಹ್ ರಾಣ ಆಸರೆಯಾದರು. ತಂಡದ ಮೊತ್ತವನ್ನು 200ರ ಗಡಿದಾಟಿಸಲು ಇವರು ಪ್ರಮುಖ ಪಾತ್ರವಹಿಸಿದರು. ಸ್ನೇಹ್ 23 ಎಸೆತಗಳಲ್ಲಿ 27 ರನ್​ಗೆ ಕೊನೇಯ ಓವರ್​ನಲ್ಲಿ ಔಟಾದರೆ ಪೂಜಾ 33 ಎಸೆತಗಳಲ್ಲಿ 30 ರನ್ ಬಾರಿಸಿ ಅಜೇಯರಾಗಿ ಉಳಿದರು. ಭಾರತ ಅಂತಿಮವಾಗಿ 50 ಓವರ್​​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 229 ರನ್ ಗಳಿಸಿತು. ಬಾಂಗ್ಲಾ ಪರರಿತು ಮೋನಿ 3 ಹಾಗೂ ನಹಿದಾ ಅಖ್ತರ್ 2 ವಿಕೆಟ್ ಕಿತ್ತು ಮಿಂಚಿದರು.

ಇಂದಿನ ಪಂದ್ಯಕ್ಕೆ ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಮೆಗ್ನಾ ಸಿಂಗ್ ಅವರನ್ನು ಕೈಬಿಟ್ಟು ಪೂನಮ್ ಯಾದವ್​ಗೆ ಅವಕಾಶ ನೀಡಲಾಗಿದೆ.

ಭಾರತ ಪ್ಲೇಯಿಂಗ್ XI: ಶಫಾಲಿ ವರ್ಮಾ, ಸ್ಮೃತಿ ಮಂಧಾನ, ಯಾಸ್ತಿಕಾ ಭಾಟಿಯಾ, ಮಿಥಾಲಿ ರಾಜ್ (ನಾಯಕಿ), ಹರ್ಮನ್‌ಪ್ರೀತ್ ಕೌರ್, ರಿಚಾ ಘೋಷ್ (ವಿಕೆಟ್ ಕೀಪರ್), ಸ್ನೇಹ್ ರಾಣಾ, ಪೂಜಾ ವಸ್ತ್ರಾಕರ್, ಜೂಲನ್ ಗೋಸ್ವಾಮಿ, ರಾಜೇಶ್ವರಿ ಗಾಯಕ್ವಾಡ್, ಪೂನಮ್ ಯಾದವ್.

ಬಾಂಗ್ಲಾದೇಶ ಪ್ಲೇಯಿಂಗ್ XI: ಶರ್ಮಿನ್ ಅಖ್ತರ್, ಮುರ್ಶಿದಾ ಖಾತುನ್, ಫರ್ಗಾನಾ ಹೊಕ್, ರುಮಾನಾ ಅಹ್ಮದ್, ನಿಗರ್ ಸುಲ್ತಾನಾ (ನಾಯಕಿ/ ವಿಕೆಟ್ ಕೀಪರ್), ಸಲ್ಮಾ ಖಾತುನ್, ರಿತು ಮೋನಿ, ಲತಾ ಮೊಂಡಲ್, ಫಾಹಿಮಾ ಖಾತುನ್, ನಹಿದಾ ಅಖ್ತರ್, ಜಹಾನಾರಾ ಆಲಂ.

Virat Kohli: ಎದುರಾಳಿಗರಲ್ಲಿ ಭಯ ಶುರು: ಹೊಸದಾಗಿ ಆರ್​ಸಿಬಿ ತಂಡ ಸೇರಿಕೊಂಡಿದ್ದು ಯಾರು ನೋಡಿ

IPL 2022: ಈ ಬಾರಿ ಆಟಗಾರರ ಜೊತೆ ಐಪಿಎಲ್​ನಲ್ಲಿ ಮಿಂಚಲು ಸಜ್ಜಾದ ಲೇಡಿ ಆ್ಯಂಕರ್ಸ್ ಇವರೇ ನೋಡಿ

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ